LATEST NEWS
ಆರೋಪಗಳೆಲ್ಲ ಚುನಾವಣೆಯ ಸಂದರ್ಭದಲ್ಲಿ ಗಾಳಿಯಲ್ಲಿ ಹಾರಿಸುವ ಗುಂಡುಗಳು
ಉಡುಪಿ: ಯಾರು ದೂರನ್ನು ಕೊಡ್ತಾರೆ ಅದನ್ನು ಸಂಬಂಧಪಟ್ಟ ಇಲಾಖೆಗೆ ಅಥವಾ ಅಧಿಕಾರಿಗಳಿಗೆ ಕೊಡಬೇಕು. ಸಿಧ್ಧರಾಮಯ್ಯನವರಿಗೆ ದೂರು ಕೊಡ್ತಾರೆ. ಅವರು ಬಂದು ಮಾತಾಡ್ತಾರೆ ಅಂದ್ರೆ ಈ ದೂರಲ್ಲಿ ಏನು ಅಡಗಿದೆ.
ಸ್ವತಃ ಮುಖ್ಯಂತ್ರಿಗಳೇ ಲೋಕಾಯುಕ್ತಕ್ಕೆ ಕೊಡಿ ಅಂದಾಗ ಅದಕ್ಕೆ ಕೊಡ್ಲಿಕ್ಕೆ ತಯಾರಿಲ್ಲ. ಪೊಲೀಸ್ ಠಾಣೆಗೆ ಕೊಡಲು ಆಗೋದಿಲ್ಲ. ಬದಲಾಗಿ ಸಿದ್ಧರಾಮಯ್ಯನವರಿಗೆ ಕೊಡ್ತಾರೆ ಅಂತ ಹೇಳಿದ್ರೆ ಯಾವುದನ್ನು ಸಿದ್ರಾಮಯ್ಯ ಹೇಳ್ಬೇಕಿತ್ತೋ ಅದನ್ನು ಕೆಂಪಣ್ಣನವರ ಮುಖಾಂತರ ಹೇಳಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಇದು ಚುನಾವಣೆಯ ಸಂದರ್ಭದಲ್ಲಿ ಆಗುತ್ತಿರುವಂತಹ ಗಾಳಿಯ ಗುಂಡು ಅಂತ ನಾನು ಭಾವಿಸ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ವ್ಯಂಗ್ಯವಾಡಿದರು.
40 ಪರ್ಸೆಂಟ್ ಕಮಿಷನ್ ಆರೋಪಗಳ ಹಿನ್ನೆಲೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ಯಾವ ದೂರುಗಳಿವೆ, ಆರೋಪಗಳಿವೆ.
ಅದನ್ನು ಸಾಬೀತುಪಡಿಸಲು ಕಾನೂನಿನಲ್ಲಿ ಎಲ್ಲಾ ಅವಕಾಶಗಳಿವೆ. ಸಿದ್ದರಾಮಯ್ಯನವರ ಅಧಿಕಾರ ಇರುವಾಗ ಈ ರೀತಿ ಇರುವ ನೂರಾರು ದೂರುಗಳಿರುವಾಗ ಎವಿಡೆನ್ಸ್ ಎಲ್ಲಿದೆ, ಎವಿಡೆನ್ಸ್ ಎಲ್ಲಿದೆ ಅಂತ 100 ಬಾರಿ ಸದನದಲ್ಲಿ ಕೇಳ್ತಿದ್ರು.
ನಾವು ಇವತ್ತು ಹೇಳ್ತೇವೆ ಕೆಂಪಣ್ಣನವರು ಹೇಳಿದಕ್ಕೆ ಎವಿಡೆನ್ಸ್ ಎಲ್ಲಿದೆ. ಇದ್ರೆ ಕೊಡಿ. ಮುಖ್ಯಮಂತ್ರಿಗಳೇ ಸ್ವತಃ ಲೋಕಾಯುಕ್ತಕ್ಕೆ ದೂರನ್ನು ಕೊಡಿ ಅಂದಾಗ ಕೊಡೋದಿಲ್ಲ ಅಂತ ಹೇಳಿದ್ರೆ ಇದರಲ್ಲಿ ರಾಜಕೀಯ ಅಡಗಿದೆ ವಿನಃ ಯಾವುದೇ ಸತ್ಯ ಅಡಗಿದೆ ಅಂತ ಅನಿಸೋದಿಲ್ಲ. ಅವರು ಸಿದ್ರಾಮಯ್ಯನವರ ಬದಲು ಲೋಕಾಯುಕ್ತಕ್ಕೆ ಹೋಗ್ತಿದ್ರೆ ತನಿಖೆಯೂ ಆಗ್ತಿತ್ತು.
ಅಂತಹ ಆರೋಪಗಳಲ್ಲಿ ಸತ್ಯ ಇದ್ರೆ ಅದು ಕೂಡಾ ಬಯಲಾಗುತ್ತಿತ್ತು. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸಿದ್ರಾಮಯ್ಯನವರಿಂದ ನ್ಯಾಯ ಸಿಗ್ಲಿಕ್ಕೆ ಸಾಧ್ಯವಿಲ್ಲ. ಪತ್ರಿಕಾ ಹೇಳಿಕೆ ಕೊಟ್ರೆ ಅದರಿಂದ ಏನೂ ಪ್ರಯೋಜನವಿಲ್ಲ. ಇದಕ್ಕೆ ತಾರ್ಕಿಕ ಅಂತ್ಯ ಬೇಕಾದ್ರೆ ದೂರು ಕೊಡಿ. ತನಿಖೆ ಮಾಡಲು ನಾವು ಸಿದ್ಧರಿದ್ದೇವೆ.
ಹಿಂದೆ ಗೋವಿಂದರಾಜು ಅವರ ಡೈರಿಯಲ್ಲಿ ಯಾರಿಗೆ ದುಡ್ಡು ಕೊಟ್ಟಿದ್ದೇವೆ ಅಂತ ಇತ್ತು. ಅದೇ ಗೋವಿಂದರಾಜುವನ್ನು ಹಿಡ್ಕೊಂಡು ಇವತ್ತು ಸಿದ್ರಾಮಯ್ಯ ಓಡಾಡ್ತ ಇಲ್ವಾ? ಗೋವಿಂದರಾಜುನ ಡೈರಿಯಲ್ಲಿ ಸ್ವತಃ ಕಾಂಗ್ರೆಸ್ ಹೈಕಮಾಂಡ್ಗೆ ದೂರನ್ನು ಕೊಡ್ತಿದ್ದೇವೆ ಅಂತ ಇತ್ತು.
ಇಂದಿರಾ ಕ್ಯಾಂಟೀನ್ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಕಪ್ಪಕಾಣಿಕೆ ಕೊಟ್ಟಿದ್ದೇವೆ ಅಂತ ಕಾಂಗ್ರೆಸ್ನವರೇ ದೂರು ನೀಡಿದ್ರು. ನಾವು ಹರಿಪ್ರಸಾದ್ ಅವರ ಹೇಳಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲೇ ಇಲ್ಲ. ಕಾಂಗ್ರೆಸ್ನ ಆಡಳಿತ ಇದ್ದಾಗ ಇಂತಹ ಅನೇಕ ದೂರುಗಳು ಬಂದಿದ್ದಾಗ ಕಾಂಗ್ರೆಸ್ ಮೌನವಾಗಿತ್ತು.
ಡೈರಿ ಸಿಕ್ಕಾಗಲೂ ಮೌನವಾಗಿತ್ತು. ಡಿ ನೋಟಿಫಿಕೇಶನ್ ಹಗರಣದ ಬಗ್ಗೆ ಬಂದಾಗಲೂ ಮೌನವಾಗಿದ್ರು. ಜಯಮಾಲಾ ಅವರ ಪ್ರಕರಣದಲ್ಲಿ ಅವರೇ ಹೇಳಿದ್ರು ‘ನನಗೆ ಕಾಂಗ್ರೆಸ್ಗೆ ಹಣ ಕೊಡ್ಬೇಕು. ಅದಕಕ್ಎ ಹಣ ಸಂಗ್ರಹಿಸುತ್ತಿದ್ದೇನೆ ಅಂತ ಹೇಳಿದ ವೀಡಿಯೋಗಳೇ ಅಂದು ಪ್ರಕಟವಾಯ್ತು.
ಆವಾಗ ಸಿದ್ರಾಮಯ್ಯಂಗೂ, ಕಾಂಗ್ರೆಸ್ಗೂ ಜ್ಞಾನೋದಯ ಆಗಿಲ್ಲ. ಆದ್ರೆ ಇವತ್ತು ಎಲ್ಲೂ ಆರೋಪಗಳಿಲ್ಲ, ಸತ್ಯಾಂಶಗಳಿಲ್ಲ, ನೈಜ ಆಧಾರಗಳಿಲ್ಲ. ಈ ಆರೋಪಗಳೆಲ್ಲ ಕೇವಲ ಚುನಾವಣೆಗೆ ಹಾರಿಸುತ್ತಿರುವ ಗಾಳಿಯ ಗುಂಡು ಎಂದು ನಾನು ಮತ್ತೆ ಹೇಳುತ್ತೇನೆ’ ಎಂದು ವಾಗ್ದಾಳಿ ನಡೆಸಿದರು.
LATEST NEWS
ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!
ಮಂಗಳೂರು : ಜಗತ್ತು ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಕೊಳ್ಳುತ್ತದೆ. ಹೊಸ ಆವಿಷ್ಕಾರಗಳು ಜನರ ಹುಬ್ಬೇರಿಸುವಂತೆ ಮಾಡುತ್ತದೆ. ರೋಬೋಟ್ ತಂತ್ರಜ್ಞಾನವೇನೋ ಹಳತು. ಆದ್ರೆ, ಈಗ ಈ ರೊಬೋಟ್ ಬಗ್ಗೆ ನಾವು ಹೇಳುತ್ತಿರುವ ಸುದ್ದಿ ಹೊಸತು. ಹೌದು, ಇಲ್ಲೊಬ್ಬ ರೋಬೋಟ್ ಅನ್ನೇ ಮದುವೆಯಾಗುತ್ತಿದ್ದಾನೆ. ಇದು ಸಾಧ್ಯನಾ ಅನ್ಬೇಡಿ! ಇದು ಸಾಧ್ಯ ಎಂದು ಯುವಕ ಸಾರಲು ಹೊರಟಂತಿದೆ.
ಎಲ್ಲಿ ನಡೆಯಲಿದೆ ಈ ಅಚ್ಚರಿಯ ಘಟನೆ?
ರೋಬೋಟ್ ತಂತ್ರಜ್ಞಾನ ಆವಿಷ್ಕಾರ ಆದಂದಿನಿಂದಲೂ ಅಚ್ಚರಿ ಹುಟ್ಟು ಹಾಕುತ್ತಿರುವುದೇನೋ ಸರಿ. ಆದ್ರೆ ಮದುವೇನೂ ಆಗ್ಬೋದಾ!? ಈ ಹಿಂದೆ ಸಿನಿಮಾವೊಂದರಲ್ಲಿ ರೋಬೋಟ್ ನ್ನು ಮದುವೆಯಾಗಿದ್ದ ಕಥೆ ಹೆಣೆಯಲಾಗಿತ್ತು. ‘ತೇರೆ ಬಾತೋಮೆ ಅಯ್ಸಾ ಉಲ್ಜಾದಿಯಾ’ ಅನ್ನೋ ಈ ಹಿಂದಿ ಸಿನೆಮಾದಲ್ಲಿ ಹೀರೋ ರೋಬೋಟ್ ಅನ್ನು ಮದುವೆಯಾಗಿ, ಸಂಸಾರ ಮಾಡುವ ಕಥೆ ಇದೆ.
ಇದೀಗ ರಾಜಸ್ಥಾನದಲ್ಲಿ ಯುವಕನೊಬ್ಬ ರೋಬೋಟ್ ಜೊತೆ ಮದುವೆ ಆಗಲು ಮುಂದಾಗಿದ್ದಾನೆ. ಅಂದಹಾಗೆ, ಈ ಯುವಕ ಸಾಫ್ಟ್ ವೇರ್ ಇಂಜಿನಿಯರ್. ಆತನ ಹೆಸರು ಸೂರ್ಯಪ್ರಕಾಶ್ ಸುಮೋತಾ. ಸಿಕರ್ ಎಂಬ ಗ್ರಾಮವೊಂದರ ಸೂರ್ಯಪ್ರಕಾಶ್ ಸುಮೋತಾ ರೋಬೋಟ್ ಜೊತೆ ಮದುವೆಯಾಗಲು ಮುಂದಾಗಿದ್ದಾರೆ.
ಮದುವೆ ದಿನಾಂಕ ಫಿಕ್ಸ್ ಆಗಿಲ್ಲ :
ಮಾರ್ಚ್ 22 ರಂದು ರೋಬೋಟ್ ಜೊತೆ ಎಂಗೇಜ್ ಮೆಂಟ್ ಮುಗಿಸಿಕೊಂಡಿದ್ದು, ಮದುವೆಯ ದಿನಾಂಕ ಇನ್ನೂ ಫಿಕ್ಸ್ ಆಗಿಲ್ಲ. ರೋಬೋಟ್ ಜೊತೆ ಮದುವೆಗೆ ಮುಂದಾಗಿರುವ ಸೂರ್ಯಪ್ರಕಾಶ್ ಸುಮೋತಾ ಮೂಲತಃ ಬಡ ಕೃಷಿ ಕುಟುಂಬದಿಂದ ಬಂದವರು. ತಂದೆ – ತಾಯಿ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಮಗ ರೋಬೋಟ್ ಜೊತೆ ಸಂಸಾರ ಮಾಡುತ್ತೇನೆ ಅಂದ್ರೆ ತಂದೆ – ತಾಯಿ ಒಪ್ತಾರೆಯೇ ? ಸೂರ್ಯಪ್ರಕಾಶ ತಂದೆ – ತಾಯಿ ಈ ಮದುವೆಗೆ ಸಮ್ಮತಿ ಸೂಚಿಸಿಲ್ಲ. ಕುಟುಂಬದ ಸದಸ್ಯರು ಸೂರ್ಯಪ್ರಕಾಶ್ಗೆ ಓಕೆ ಅಂದಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ತಂದೆ ತಾಯಿ ಕೂಡಾ ಈ ರೋಬೋಟ್ ಜೊತೆಗಿನ ಮದುವೆಯನ್ನು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ : ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
ರೋಬೋ ತಯಾರಿಗೆ 19 ಲಕ್ಷ ಖರ್ಚು :
ಎನ್ಎಮ್ಎಸ್ 5.0 ಗಿಗಾ ಎಂದು ರೋಬೋಟ್ಗೆ ಹೆಸರಿಟ್ಟಿದ್ದು, ಈ ರೋಬೋಟ್ ತಯಾರು ಮಾಡಲು ಸೂರ್ಯಪ್ರಕಾಶ್ 19 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದಾರಂತೆ. ರೋಬೋಟನ್ನು ತಮಿಳನಾಡು ಹಾಗೂ ನೋಯ್ಡಾದ ಕಂಪೆನಿಗಳು ಜಂಟಿಯಾಗಿ ತಯಾರು ಮಾಡುತ್ತಿದೆ. ಇನ್ನು ರೋಬೋಟ್ಗೆ ಬೇಕಾದ ಸಾಫ್ಟ್ವೇರ್ ಹಾಗೂ ಅದರ ಕಮಾಂಡ್ಗಳನ್ನು ಖುದ್ದು ಸೂರ್ಯಪ್ರಕಾಶ್ ರೆಡಿ ಮಾಡುತ್ತಿದ್ದಾರೆ. ಕಳೆದ ಮೂರು ವರ್ಷದ ಹಿಂದೆ ರೋಬೋಟ್ಗಳನ್ನು ಕೃಷಿಯಲ್ಲಿ ಬಳಕೆ ಮಾಡಿ ಅವುಗಳ ವರ್ತನೆಯನ್ನು ಸೂರ್ಯಪ್ರಕಾಶ ಅಧ್ಯಯನ ಮಾಡಿದ್ದಾನೆ.
ಇದೇ ವೇಳೆ ಮನೆಯವರು ಮದುವೆಗೆ ಒತ್ತಾಯಿಸಿದಾಗ ಈ ರೀತಿ ರೋಬೋಟ್ ಜೊತೆ ಮದುವೆ ಆಗುವ ಇಚ್ಚೆ ವ್ಯಕ್ತಪಡಿಸಿದ್ದಾನೆ. ಹೀಗಾಗಿ ಕಳೆದ ಎರಡು ವರ್ಷದಿಂದ ಪರಿಪೂರ್ಣ ಮನುಷ್ಯರಂತೆ ವರ್ತಿಸೋ ರೋಬೋಟ್ ತಯಾರಿಯಲ್ಲಿ ಸೂರ್ಯಪ್ರಕಾಶ್ ತೊಡಗಿಸಿಕೊಂಡಿದ್ದರು.
LATEST NEWS
ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು
ಕಾರ್ಕಳ : ಭಾರೀ ಸೆಕೆಯಿಂದಾಗಿ ಮನೆಯೊಳಗಡೆ ಮಲಗಲಾಗದೇ ಮನೆ ಟೆರೇಸ್ ಮೇಲೆ ಮಲಗಲು ಹೋಗಿದ್ದ ಶಿಕ್ಷಕ ಗಾಢ ನಿದ್ದೆಯಲ್ಲಿ ಉರುಳಿ ಬಿದ್ದು ಸಾ*ವನ್ನಪ್ಪಿದ ಘಟನೆ ಅಜೆಕಾರು ಕುಮೇರಿಯಲ್ಲಿ ನಡೆದಿದೆ. ಸುಂದರ ನಾಯ್ಕ(55) ಇಹಲೋಕ ತ್ಯಜಿಸಿದ ಶಿಕ್ಷಕ.
ಸುಂದರ ಅವರು ಆಶ್ರಯ ನಗರದ ನಿವಾಸಿಯಾಗಿದ್ದು, ಕಾರ್ಕಳ ತಾಲೂಕಿನ ಎಣ್ಣೆಹೊಳೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದರು. ಸೆಕೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸ್ ಮೇಲೆ ಮಲಗಿದ್ದರು. ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದ ಇವರನ್ನು ಮನೆ ಮಂದಿ ಬೆಳಿಗ್ಗೆ 6:30ಕ್ಕೆ ಎಬ್ಬಿಸಲೆಂದು ಹೋದಾಗ ಇವರು ಟೆರೇಸ್ನಿಂದ ಕೆಳಕ್ಕೆ ಬಿದ್ದಿರುವುದು ಕಂಡು ಬಂದಿದೆ.
ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ
ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ. ಮೃತ ಶಿಕ್ಷಕ ಸುಂದರ್ ನಾಯ್ಕ್ ಪತ್ನಿ ಪುತ್ರಿಯರನ್ನು ಅಗಲಿದ್ದಾರೆ.
DAKSHINA KANNADA
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಸೇರಿದಂತೆ ಆಸುಪಾಸಿನ ಜನತೆಗೆ ಸರಕಾರಿ ಬಸ್ಸು ಸಿಬ್ಬಂದಿ ಹಗಲು ದರೋಡೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕುಕ್ಕೆ ಕೆಎಸ್ಆರ್ಟಿಸಿ ಡಿಪೋದಿಂದ ಹೊರಡುವ ಸರಕಾರಿ ಬಸ್ ಸಿಬ್ಬಂದಿ ಹಗಲು ದರೋಡೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಏಪ್ರಿಲ್ 28ರಂದು ಹುಬ್ಬಳ್ಳಿ ಕಡೆಯ ದಂಪತಿ ಕುಕ್ಕೆ ಸುಬ್ರಹ್ಮಣ್ಯದಿಂದ ಹುಬ್ಬಳ್ಳಿಗೆ ಹೋಗುವ ಸಲುವಾಗಿ ಬಿಎಂಟಿಸಿಯ KA 57 F 3463 ನಂಬರಿನ ಬಸ್ಸಿಗೆ ಹತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಬಸ್ ಹೋಗುತ್ತದೆ ಎಂದು ಬಸ್ಸಿನ ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ. ಈ ಭಾಗದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಮತ್ತು ಬಸ್ಸಿನ ಸಿಬ್ಬಂದಿ ಹೇಳಿದ್ದನ್ನೇ ನಂಬಿದ ಹುಬ್ಬಳ್ಳಿ ಈ ದಂಪತಿ ಬೆಂಗಳೂರು ಮಹಾನಗರ ಪಾಲಿಕೆಯ ಡಿಪೋ ನಂಬರ್2ರ ಈ ಸರಕಾರಿ ಬಸ್ ಹತ್ತಿದ್ದಾರೆ. ಬಸ್ಸಿನ ನಿರ್ವಾಹಕ ಮಹಿಳೆಗೆ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯ ಎಂಬುದಾಗಿ ಉಚಿತ ಟಿಕೆಟ್ ನೀಡಿದ್ದೂ, ಜೊತೆಯಲ್ಲಿ ಇದ್ದ ಪತಿ ಮತ್ತು ಮಕ್ಕಳಿಂದ 150 ರೂಪಾಯಿ ಹಣ ಪಡೆದು ಟಿಕೆಟ್ ನೀಡಿಲ್ಲ ಎನ್ನಲಾಗಿದೆ. ಇಷ್ಟು ಹಣ ಪಡೆದು ಇವರನ್ನು ಕುಕ್ಕೆ ಸುಬ್ರಹ್ಮಣ್ಯದಿಂದ ಸುಮಾರು ಮೂರು ಕಿಲೋ ಮೀಟರ್ ದೂರದ ಕೈಕಂಬ ಎಂಬಲ್ಲಿ ಬಸ್ಸಿಂದ ಇಳಿಸಿ ಹೋಗಿದ್ದಾರೆ. ನಂತರದಲ್ಲಿ ಈ ದಂಪತಿಗಳು ತಮ್ಮ ಮಕ್ಕಳೊಂದಿಗೆ ಸುಮಾರು ಆರು ಕಿಲೋ ಮೀಟರ್ ದೂರ ನಡೆದು ಕುಕ್ಕೆ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ರೈಲು ನಿಲ್ದಾಣ ತಲುಪಿದ್ದಾರೆ. ನಂತರದಲ್ಲಿ ಸ್ಥಳೀಯರಲ್ಲಿ ತಮಗಾದ ಅನ್ಯಾಯದ ಬಗ್ಗೆ ಕಣ್ಣೀರಿಟ್ಟು ಇಂತಹ ಬಸ್ಸ್ಗಳ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇಂತಹ ಘಟನೆಗಳು ಈ ಭಾಗದಲ್ಲಿ ಪದೇಪದೇ ಮರುಕಳಿಸುತ್ತಿದ್ದೂ,ಈ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ತಿಳಿಸಿದರೂ ಸಹಾ ಈ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.
ಮುಂದೆ ಓದಿ..;ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
ಆದುದರಿಂದ ಈ ಭಾಗದಲ್ಲಿ ನಡೆಯುವ ಈ ಹಗಲು ದರೋಡೆಗೆ ಅಧಿಕಾರಿಗಳೂ ಸಾಥ್ ನೀಡುತ್ತಿದ್ದಾರೆ ಎನ್ನಲಾಗಿದೆ. ಆದುದರಿಂದ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು ಎಂದು ರೈಲು ಬಳಕೆದಾರರ ವೇದಿಕೆ ನೆಟ್ಟಣ ಸಂಘವು ಆಗ್ರಹಿಸಿದೆ.
- FILM7 days ago
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
- FILM7 days ago
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- LATEST NEWS7 days ago
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!