Connect with us

    LATEST NEWS

    ಆರೋಪಗಳೆಲ್ಲ ಚುನಾವಣೆಯ ಸಂದರ್ಭದಲ್ಲಿ ಗಾಳಿಯಲ್ಲಿ ಹಾರಿಸುವ ಗುಂಡುಗಳು

    Published

    on

    ಉಡುಪಿ: ಯಾರು ದೂರನ್ನು ಕೊಡ್ತಾರೆ ಅದನ್ನು ಸಂಬಂಧಪಟ್ಟ ಇಲಾಖೆಗೆ ಅಥವಾ ಅಧಿಕಾರಿಗಳಿಗೆ ಕೊಡಬೇಕು. ಸಿಧ್ಧರಾಮಯ್ಯನವರಿಗೆ ದೂರು ಕೊಡ್ತಾರೆ. ಅವರು ಬಂದು ಮಾತಾಡ್ತಾರೆ ಅಂದ್ರೆ ಈ ದೂರಲ್ಲಿ ಏನು ಅಡಗಿದೆ.

    ಸ್ವತಃ ಮುಖ್ಯಂತ್ರಿಗಳೇ ಲೋಕಾಯುಕ್ತಕ್ಕೆ ಕೊಡಿ ಅಂದಾಗ ಅದಕ್ಕೆ ಕೊಡ್ಲಿಕ್ಕೆ ತಯಾರಿಲ್ಲ. ಪೊಲೀಸ್ ಠಾಣೆಗೆ ಕೊಡಲು ಆಗೋದಿಲ್ಲ. ಬದಲಾಗಿ ಸಿದ್ಧರಾಮಯ್ಯನವರಿಗೆ ಕೊಡ್ತಾರೆ ಅಂತ ಹೇಳಿದ್ರೆ ಯಾವುದನ್ನು ಸಿದ್ರಾಮಯ್ಯ ಹೇಳ್ಬೇಕಿತ್ತೋ ಅದನ್ನು ಕೆಂಪಣ್ಣನವರ ಮುಖಾಂತರ ಹೇಳಿಸುವ ಪ್ರಯತ್ನ ಮಾಡುತ್ತಿದ್ದಾರೆ.

    ಇದು ಚುನಾವಣೆಯ ಸಂದರ್ಭದಲ್ಲಿ ಆಗುತ್ತಿರುವಂತಹ ಗಾಳಿಯ ಗುಂಡು ಅಂತ ನಾನು ಭಾವಿಸ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ವ್ಯಂಗ್ಯವಾಡಿದರು.


    40 ಪರ್ಸೆಂಟ್ ಕಮಿಷನ್ ಆರೋಪಗಳ ಹಿನ್ನೆಲೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ಯಾವ ದೂರುಗಳಿವೆ, ಆರೋಪಗಳಿವೆ.

    ಅದನ್ನು ಸಾಬೀತುಪಡಿಸಲು ಕಾನೂನಿನಲ್ಲಿ ಎಲ್ಲಾ ಅವಕಾಶಗಳಿವೆ. ಸಿದ್ದರಾಮಯ್ಯನವರ ಅಧಿಕಾರ ಇರುವಾಗ ಈ ರೀತಿ ಇರುವ ನೂರಾರು ದೂರುಗಳಿರುವಾಗ ಎವಿಡೆನ್ಸ್ ಎಲ್ಲಿದೆ, ಎವಿಡೆನ್ಸ್ ಎಲ್ಲಿದೆ ಅಂತ 100 ಬಾರಿ ಸದನದಲ್ಲಿ ಕೇಳ್ತಿದ್ರು.

    ನಾವು ಇವತ್ತು ಹೇಳ್ತೇವೆ ಕೆಂಪಣ್ಣನವರು ಹೇಳಿದಕ್ಕೆ ಎವಿಡೆನ್ಸ್ ಎಲ್ಲಿದೆ. ಇದ್ರೆ ಕೊಡಿ. ಮುಖ್ಯಮಂತ್ರಿಗಳೇ ಸ್ವತಃ ಲೋಕಾಯುಕ್ತಕ್ಕೆ ದೂರನ್ನು ಕೊಡಿ ಅಂದಾಗ ಕೊಡೋದಿಲ್ಲ ಅಂತ ಹೇಳಿದ್ರೆ ಇದರಲ್ಲಿ ರಾಜಕೀಯ ಅಡಗಿದೆ ವಿನಃ ಯಾವುದೇ ಸತ್ಯ ಅಡಗಿದೆ ಅಂತ ಅನಿಸೋದಿಲ್ಲ. ಅವರು ಸಿದ್ರಾಮಯ್ಯನವರ ಬದಲು ಲೋಕಾಯುಕ್ತಕ್ಕೆ ಹೋಗ್ತಿದ್ರೆ ತನಿಖೆಯೂ ಆಗ್ತಿತ್ತು.

    ಅಂತಹ ಆರೋಪಗಳಲ್ಲಿ ಸತ್ಯ ಇದ್ರೆ ಅದು ಕೂಡಾ ಬಯಲಾಗುತ್ತಿತ್ತು. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸಿದ್ರಾಮಯ್ಯನವರಿಂದ ನ್ಯಾಯ ಸಿಗ್ಲಿಕ್ಕೆ ಸಾಧ್ಯವಿಲ್ಲ. ಪತ್ರಿಕಾ ಹೇಳಿಕೆ ಕೊಟ್ರೆ ಅದರಿಂದ ಏನೂ ಪ್ರಯೋಜನವಿಲ್ಲ. ಇದಕ್ಕೆ ತಾರ್ಕಿಕ ಅಂತ್ಯ ಬೇಕಾದ್ರೆ ದೂರು ಕೊಡಿ. ತನಿಖೆ ಮಾಡಲು ನಾವು ಸಿದ್ಧರಿದ್ದೇವೆ.

    ಹಿಂದೆ ಗೋವಿಂದರಾಜು ಅವರ ಡೈರಿಯಲ್ಲಿ ಯಾರಿಗೆ ದುಡ್ಡು ಕೊಟ್ಟಿದ್ದೇವೆ ಅಂತ ಇತ್ತು. ಅದೇ ಗೋವಿಂದರಾಜುವನ್ನು ಹಿಡ್ಕೊಂಡು ಇವತ್ತು ಸಿದ್ರಾಮಯ್ಯ ಓಡಾಡ್ತ ಇಲ್ವಾ? ಗೋವಿಂದರಾಜುನ ಡೈರಿಯಲ್ಲಿ ಸ್ವತಃ ಕಾಂಗ್ರೆಸ್ ಹೈಕಮಾಂಡ್‌ಗೆ ದೂರನ್ನು ಕೊಡ್ತಿದ್ದೇವೆ ಅಂತ ಇತ್ತು.

    ಇಂದಿರಾ ಕ್ಯಾಂಟೀನ್ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪಕಾಣಿಕೆ ಕೊಟ್ಟಿದ್ದೇವೆ ಅಂತ ಕಾಂಗ್ರೆಸ್‌ನವರೇ ದೂರು ನೀಡಿದ್ರು. ನಾವು ಹರಿಪ್ರಸಾದ್ ಅವರ ಹೇಳಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲೇ ಇಲ್ಲ. ಕಾಂಗ್ರೆಸ್‌ನ ಆಡಳಿತ ಇದ್ದಾಗ ಇಂತಹ ಅನೇಕ ದೂರುಗಳು ಬಂದಿದ್ದಾಗ ಕಾಂಗ್ರೆಸ್ ಮೌನವಾಗಿತ್ತು.

    ಡೈರಿ ಸಿಕ್ಕಾಗಲೂ ಮೌನವಾಗಿತ್ತು. ಡಿ ನೋಟಿಫಿಕೇಶನ್ ಹಗರಣದ ಬಗ್ಗೆ ಬಂದಾಗಲೂ ಮೌನವಾಗಿದ್ರು. ಜಯಮಾಲಾ ಅವರ ಪ್ರಕರಣದಲ್ಲಿ ಅವರೇ ಹೇಳಿದ್ರು ‘ನನಗೆ ಕಾಂಗ್ರೆಸ್‌ಗೆ ಹಣ ಕೊಡ್ಬೇಕು. ಅದಕಕ್ಎ ಹಣ ಸಂಗ್ರಹಿಸುತ್ತಿದ್ದೇನೆ ಅಂತ ಹೇಳಿದ ವೀಡಿಯೋಗಳೇ ಅಂದು ಪ್ರಕಟವಾಯ್ತು.

    ಆವಾಗ ಸಿದ್ರಾಮಯ್ಯಂಗೂ, ಕಾಂಗ್ರೆಸ್‌ಗೂ ಜ್ಞಾನೋದಯ ಆಗಿಲ್ಲ. ಆದ್ರೆ ಇವತ್ತು ಎಲ್ಲೂ ಆರೋಪಗಳಿಲ್ಲ, ಸತ್ಯಾಂಶಗಳಿಲ್ಲ, ನೈಜ ಆಧಾರಗಳಿಲ್ಲ. ಈ ಆರೋಪಗಳೆಲ್ಲ ಕೇವಲ ಚುನಾವಣೆಗೆ ಹಾರಿಸುತ್ತಿರುವ ಗಾಳಿಯ ಗುಂಡು ಎಂದು ನಾನು ಮತ್ತೆ ಹೇಳುತ್ತೇನೆ’ ಎಂದು ವಾಗ್ದಾಳಿ ನಡೆಸಿದರು.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending