DAKSHINA KANNADA
ಪುತ್ತೂರು ಕಂಬಳದಲ್ಲಿ ನಟಿಯೊಂದಿಗೆ ಅಸಭ್ಯ ವರ್ತನೆ ಆರೋಪಕ್ಕೆ ದೇವರ ಮೊರೆ ಹೋದ ಸಮಿತಿ – “ಮಹಾಲಿಂಗೇಶ್ವರನ ಮಣ್ಣಿನಲ್ಲಾದ ಘಟನೆ ದೇವರೇ ನೋಡಿಕೊಳ್ಳಲಿ”..!
ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.
ಬುಧವಾರ ಮಧ್ಯಾಹ್ನ ಮಹಾಪೂಜೆಗೆ ಮುನ್ನ ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ನಡೆಯಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿತು.
ಕಂಬಳ ಗದ್ದೆಯಲ್ಲಿ ನಟಿಯೊಬ್ಬಳ ಜತೆ ಯಾರೋ ವ್ಯಕ್ತಿ ಅಸಭ್ಯ ವರ್ತನೆ ಮಾಡಿದ್ದಾನೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿ ಫೋಟೋ, ವೀಡಿಯೋ ವೈರಲ್ ಮಾಡಲಾಗುತ್ತಿದೆ.
ಕಂಬಳ ಸಮಿತಿಯನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸುವ ಯತ್ನ ಮಾಡಲಾಗುತ್ತಿದೆ. ನಮಗೆ ಮಹಾಲಿಂಗೇಶ್ವರ ಸಾನಿಧ್ಯವೇ ನ್ಯಾಯಾಲಯ. ದೇವರು ನಮಗೆ ನ್ಯಾಯ ನೀಡಬೇಕು ಎಂದು ಪ್ರಾರ್ಥಿಸಿದರು.
ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪ್ರಾರ್ಥನೆ ಮಾಡಿ, ಅಹಿತಕರ ಘಟನೆ ನಡೆದಿದೆ ಎನ್ನುತ್ತಾ ಅಪಪ್ರಚಾರ ಮಾಡಲಾಗುತ್ತಿದೆ.
ಇದರ ಹಿಂದೆ ಯಾರ ಕುಮ್ಮಕ್ಕು ಇದೆ, ಯಾರು ಇದರ ಹಿಂದಿದ್ದಾರೆ ಎಂಬುದಕ್ಕೆ ದೇವರೇ ನಮಗೆ ನ್ಯಾಯ ಕೊಡಬೇಕು ಎಂದರು.
ಅರ್ಚಕ ವಸಂತ ಕೆದಿಲಾಯ ಪ್ರಾರ್ಥನೆ ಸಲ್ಲಿಸಿ, ಅನೇಕ ವರ್ಷಗಳಿಂದ ಕಂಬಳ ಒಳ್ಳೆ ರೀತಿಯಲ್ಲಿ ನಡೆಯುತ್ತಾ ಬಂದಿದೆ.
ಗೊತ್ತಿದ್ದೋ ಗೊತ್ತಿಲ್ಲದೆಯೋ ಅಹಿತಕರ ಘಟನೆ ನಡೆದಿದ್ದರೆ ಅದಕ್ಕೆ ಮಹಾಲಿಂಗೇಶ್ವರ ದೇವರು ನ್ಯಾಯ ನೀಡಲಿ, ಬುದ್ಧಿ ನೀಡಲಿ. ಭವಿಷ್ಯದಲ್ಲಿ ಪುತ್ತೂರು ಕಂಬಳ ಯಾವುದೇ ವಿಘ್ನಗಳಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದರು.
ಕಂಬಳ ಸಮಿತಿಯ ಪ್ರಮುಖರಾದ ದಿನೇಶ್ ಕುಲಾಲ್ ಪಿ.ವಿ., ಪಂಜಿಗುಡ್ಡೆ ಈಶ್ವರ ಭಟ್, ನಿರಂಜನ ರೈ ಮಠಂತಬೆಟ್ಟು, ಶಿವರಾಮ ಆಳ್ವಾ, ದುರ್ಗಾಪ್ರಸಾದ್ ರೈ ಕುಂಬ್ರ, ಶಶಿಕಿರಣ್ ರೈ, ನವೀನ್ ಚಂದ್ರ ನಾಯ್ಕ್, ಕಂಪ ಸುಧಾಕರ ನಾಯ್ಕ್, ಜಯಪ್ರಕಾಶ್ ಬದಿನಾರು, ಧೀರಜ್ ಗೌಡ ಕೊಡಿಪ್ಪಾಡಿ, ಯತೀಶ್ ಶೆಟ್ಟಿ ಕೋಡಿಂಬಾಡಿ, ಪ್ರೇಮಾನಂದ ನಾಯ್ಕ್, ವಿಕ್ರಂ ಶೆಟ್ಟಿ ಕೋಡಿಂಬಾಡಿ, ಗಣೇಶ್ರಾಜ್ ಬಿಳಿಯೂರು, ಭಾಗ್ಯೇಶ್ ರೈ, ಯೋಗೀಶ್ ಮಠಂತಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಾಧ್ಯಮಗಳ ಜತೆ ಮತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಹಿಳೆಗೆ ಅನ್ಯಾಯವಾದರೂ ಶಕುಂತಳಾ ಶೆಟ್ಟಿ ಮೌನವಾಗಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ.
ಅನ್ಯಾಯ ಆಗಿದೆ ಎಂದು ಮಹಿಳೆ ನನಗೆ ಹೇಳಬೇಕಲ್ಲವೇ? ಇಲ್ಲದಿದ್ದರೆ ನಾನೇನು ಮಾಡಲಿ? ನಾನು ರಾತ್ರಿ 11 ಗಂಟೆಗೆ ಕಂಬಳ ಗದ್ದೆಯಿಂದ ನಿರ್ಗಮಿಸಿದ್ದೇನೆ.
ನಸುಕಿನ ಜಾವ ನಟಿಯರು ಕಂಬಳ ಗದ್ದೆಗೆ ಮತ್ತೊಮ್ಮೆ ಬಂದಿದ್ದರಂತೆ, ಆಗ ಯಾರೋ ಅವರ ಜತೆ ಅಸಭ್ಯ ವರ್ತನೆ ತೋರಿದನಂತೆ ಎಂದೆಲ್ಲ ಹೇಳುತ್ತಿದ್ದಾರೆ.
ಮರುದಿನ ಕುತ್ತಾರು ಕೊರಗಜ್ಜ ಸಾನಿಧ್ಯದಲ್ಲಿ ಅದೇ ನಟಿಯರೆಲ್ಲ ನನಗೆ ಸಿಕ್ಕಿದ್ದು, ಎಲ್ಲರೂ ಪುತ್ತೂರು ಕಂಬಳದ ವ್ಯವಸ್ಥೆ ಬಗ್ಗೆ ಹಾಡಿ ಹೊಗಳಿದ್ದಾರೆ. ಯಾರೂ ನನಗೆ ಹಿಂದಿನ ರಾತ್ರಿ ಅಹಿತಕರ ಘಟನೆ ನಡೆದಿದೆ ಎಂದು ಹೇಳಲೇ ಇಲ್ಲ ಎಂದರು.
ಅನ್ಯಧರ್ಮೀಯ ಅನ್ಯಾಯ ಮಾಡಿದ್ದಾನೆ ಎಂದೆಲ್ಲ ವೈರಲ್ ಮಾಡಲಾಗುತ್ತಿದೆ. ಮಹಿಳೆ ಮೇಲೆ ಯಾರೇ ದುಷ್ಕøತ್ಯ ಎಸಗಿದ್ದರೂ ಅದು ತಪ್ಪೆ. ಆತ ಅನ್ಯಧರ್ಮೀಯನೇ ಆಗಿರಲಿ, ಸ್ವಧರ್ಮೀಯನೇ ಆಗಿರಲಿ.
ತಪ್ಪು ಮಾಡಿದವ ಆಧರ್ಮೀಯನೇ ಹೊರತು ಧರ್ಮೀಯನಲ್ಲ. ಘಟನೆ ಬಗ್ಗೆ ಸಂತ್ರಸ್ತರೆನೆಸಿಕೊಂಡವರು ದೂರು ನೀಡಿದರೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಿ. ಇದನ್ನೇ ನಾನು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮಾತನಾಡಿ, ದೇವಳದ ಗದ್ದೆಗೆ ನಾವು ಪೊಲೀಸರನ್ನು ಬರಲು ಹೇಳಲಾಗುವುದಿಲ್ಲ.
ನಮ್ಮ ಅತಿಥಿಗಳಾಗಿ ಬಂದಿದ್ದ ನಟ, ನಟಿಯರನ್ನು ಅತ್ಯುತ್ತಮವಾಗಿ ನೋಡಿಕೊಂಡು ಕಳಿಸಿಕೊಟ್ಟಿದ್ದೇವೆ. ಮುಂಜಾನೆ ಹೊತ್ತಿಗೆ ಅವರು ಮತ್ತೊಮ್ಮೆ ಕಂಬಳ ಗದ್ದೆಗೆ ಬಂದಿದ್ದರೆ, ಆಗೇನಾದರೂ ಅಹಿತಕರ ಘಟನೆ ನಡೆದಿದ್ದರೆ ಅದನ್ನವರು ಪೊಲೀಸ್ ದೂರು ನೀಡಲು ಅವಕಾಶವಿತ್ತು.
ಯಶಸ್ವಿಯಾಗಿ ನಡೆಯುತ್ತಿರುವ ಪುತ್ತೂರು ಕಂಬಳದ ಹೆಸರು ಹಾಳು ಮಾಡಲು, ನಮ್ಮ ತೇಜೋವಧೆ ಮಾಡಲು ಅಪಪ್ರಚಾರ ಮಾಡಲಾಗುತ್ತಿದೆ.
ಮಹಾಲಿಂಗೇಶ್ವರನ ಮಣ್ಣಿನಲ್ಲಿ ನಡೆದ ಘಟನೆ. ದೇವರೇ ನೋಡಿಕೊಳ್ಳಲಿ ಎಂದು ನಾವು ಪ್ರಾರ್ಥಿಸಿದ್ದೇವೆ ಎಂದರು.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ