Connect with us

DAKSHINA KANNADA

ವಿದ್ಯಾರ್ಥಿಗಳಿಗೆ ಆಳ್ವಾಸ್‌ನಿಂದ ಬಂಪರ್ ಕೊಡುಗೆ…! ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 10 ಕೋಟಿ ವಿದ್ಯಾರ್ಥಿ ವೇತನ

Published

on

ಮೂಡುಬಿದಿರೆ: ಕರ್ನಾಟಕದ ಹೆಮ್ಮೆಯ ಶಿಕ್ಷಣ ಸಂಸ್ಥೆಯಲ್ಲಿ ಒಂದಾಗಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯು ತನ್ನ ವಿಶಿಷ್ಟತೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಶಿಕ್ಷಣ ಕಾಶಿ ಎಂದೇ ಹೆಸರು ಪಡೆದಿದ್ದು ಶಿಕ್ಷಣದ ಜತೆ ಜತೆಗೆ ಸಾಂಸ್ಕೃತಿಕ, ಕ್ರೀಡೆ ಹಾಗೂ ಸಾಮಾಜಿಕ ಕ್ಷೇತ್ರಕ್ಕೂ ಆಳ್ವಾಸ್ ಶಿಕ್ಷಣ ಸಂಸ್ಥೆ ಒತ್ತು ನೀಡುತ್ತಿದೆ. ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಡಾ. ಮೋಹನ್ ಆಳ್ವಾ ಅವರು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೊಸತೊಂದು ಯೋಜನೆ ಜಾರಿ ಮಾಡಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಯ್ದ ವಿದ್ಯಾರ್ಥಿಗಳಿಗೆ 10 ಕೋಟಿ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ಬಡ ಹಾಗೂ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಮೂಲಕ ಆಳ್ವಾಸ್ ಶಿಕ್ಷಣ ಸಂಸ್ಥೆ ಶೈಕ್ಷಣಿಕವಾಗಿ ಸಾಕಷ್ಟು ವಿದ್ಯಾರ್ಥಿಗಳಿಗೆ ಆಶ್ರಯ ನೀಡಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕಲಿತಿರುವ ವಿದ್ಯಾರ್ಥಿಗಳಲ್ಲಿ ಹಲವರು ದೇಶದಲ್ಲೇ ಪ್ರಸಿದ್ಧಿಯನ್ನು ಪಡೆಯುವ ಮೂಲಕ ಆಳ್ವಾಸ್ ಶಿಕ್ಷಣ ಸಂಸ್ಥೆಯ ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಗೂ ಹೆಮ್ಮೆ ತಂದಿದ್ದಾರೆ. ಕೇವಲ ತಮ್ಮಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಇತರೇ ವಿದ್ಯಾ ಸಂಸ್ಥೆಗಳಲ್ಲಿ ಕಲಿಯುವ ಮಕ್ಕಳಿಗೂ ಸಹಾಯ ಮಾಡುವ ನಿಟ್ಟಿನಲ್ಲಿ ಇದೀಗ 10 ಕೋಟಿ ವಿದ್ಯಾರ್ಥಿ ವೇತನ ನೀಡಲು ಮುಂದಾಗಿದ್ದಾರೆ.


ಯಾರಿಗೆ ? ಹೇಗೆ ? ಸಿಗಲಿದೆ ವಿದ್ಯಾರ್ಥಿ ವೇತನ

ಹತ್ತನೇ ತರಗತಿಯ ಸಿಬಿಎಸ್‌ಇ, ಐಸಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಸಿಗಲಿದೆ. ಆದ್ರೆ, ಇದಕ್ಕಾಗಿ ನೂರು ನಿಮಿಷಗಳ ಪರೀಕ್ಷೆಯನ್ನು ನಡೆಸಲಿದ್ದು ಪರೀಕ್ಷೆಯಲ್ಲಿ ಗಳಿಸಿದ ಅಂಕವನ್ನು ಪರಿಗಣಿಸಿ ಈ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ವಿದ್ಯಾರ್ಥಿ ವೇತನಕ್ಕೆ ಅಹರ್ತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲಿ ಅತ್ಯುತ್ತಮ ಹಾಗೂ ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ.

ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯದ ಪರೀಕ್ಷೆ ಮಾರ್ಚ್‌ 31 ರಂದು ನಡೆಯಲಿದ್ದು, ಸಿಬಿಎಸ್‌ಇ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಎಪ್ರಿಲ್ 14 ರಂದು ಮೂಡುಬಿದಿರೆಯ ವಿದ್ಯಾಗಿರಿಯ ಆವರಣದಲ್ಲಿ ಪರೀಕ್ಷೆ ನಡೆಯಲಿದ್ದು, ಸಿಬಿಎಸ್ ಸಿ ಮತ್ತು ಐಸಿಎಸ್ ಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜ್ಜಿ ಸಲ್ಲಿಸಲು ಮಾರ್ಚ್‌ 28 ಕೊನೆಯ ದಿನಾಂಕವಾಗಿದ್ದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಎಪ್ರಿಲ್ ಹತ್ತರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆದ್ದು, ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಸಮಾಲೋಚನೆ ನಡೆಸಲ್ಲಿದ್ದಾರೆ.

ಶೈಕ್ಷಣಿಕ- ಬೋಧನ ಭಿನ್ನತೆ, ಸಾಮಾಜಿಕ ಅಸಮಾನತೆ, ಆರ್ಥಿಕತೆ ಅಜಗಜಾಂತರ, ಪ್ರಾದೇಶಿಕ ಭೇದಭಾವ, ಲಿಂಗ ತಾರತಮ್ಯ ಎಲ್ಲವನ್ನು ಮೀರಿ ಅರ್ಹ ಮಕ್ಕಳಿಗೆ ಅರ್ಹತೆಯ ಆಧಾರದಲ್ಲಿ ಅತ್ಯುನ್ನತ ಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಅವರ ಮಹತ್ವಾಕಾಂಕ್ಷೆ . ಈ ಆಶಯದಂತೆ ಸಂಪೂರ್ಣ ಪಾರದರ್ಶಕವಾಗಿ ಪ್ರವೇಶ ಪರೀಕ್ಷೆ ಯನ್ನು ಕೈಗೊಳ್ಳಲಾಗುತ್ತಿದ್ದು ಪ್ರವೇಶ ಪರೀಕ್ಷೆಗಳ ಅಂಕವೇ ಅಂತಿಮ ತಿರ್ಮಾನ ಎಂದು ಡಾ. ಮೋಹನ್ ಆಳ್ವಾ ತಿಳಿಸಿದ್ದಾರೆ.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending