Connect with us

    LATEST NEWS

    ಆಫ್ಘಾನಿಸ್ತಾನದಲ್ಲಿ ಸಿನಿಮಾ ಚಿತ್ರೀಕರಣದ ದಿನಗಳನ್ನ ನೆನಪಿಸಿಕೊಂಡ ಅಮಿತಾಭ್‌ ಬಚ್ಚನ್‌..!

    Published

    on

    ಮುಂಬೈ : ಬಾಲಿವುಡ್ ಚಲನಚಿತ್ರಗಳಿಗೆ ಜಗತಿನಾದ್ಯಂತ ಪ್ರೇಕ್ಷಕರಿದ್ದು, ಅನೇಕ ಚಿತ್ರಗಳು ಬೇರೆ ಬೇರೆ ದೇಶಗಳಿಗೆ ಹೋಗಿ ಅಲ್ಲಿಯೇ ಚಿತ್ರೀಕರಣ ಮಾಡುವುದು ತುಂಬಾ ಹಳೆಯ ವಾಡಿಕೆಯಾಗಿದೆ.

    ಆಫ್ಘಾನಿಸ್ತಾನದಲ್ಲಿಯೂ ಜನರು ಭಾರತದ ಅದರಲ್ಲೂ ಬಾಲಿವುಡ್ ಸಿನೆಮಾಗಳನ್ನು ತುಂಬಾ ಇಷ್ಟಪಡುತ್ತಾರೆ. ಆಫ್ಘಾನಿಸ್ತಾನದ ವಿವಿಧ ಭಾಗಗಳಲ್ಲಿ ಅನೇಕ ಚಲನ ಚಿತ್ರಗಳನ್ನು ಚಿತ್ರೀಕರಿಸಲಾಗಿದೆ.

    ಇಂತಹುದೇ ಸಾಲಿಗೆ ಸೇರಿದೆ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಮತ್ತು ಶ್ರೀದೇವಿ ಅಭಿನಯದ ‘ಖುದಾ ಗವಾ’.  ಇಂದು ಆಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ.

    ಆದರೂ ಅಲ್ಲಿನ ಜನರು ಅಲ್ಲಿ ಚಿತ್ರೀಕರಿಸಿದ ಚಲನಚಿತ್ರಗಳನ್ನು ಇಂದಿಗೂ ನೆನಪಿಸಿಕೊಳ್ಳುತ್ತಿದ್ದಾರೆ. ಮುಕುಲ್ ಆನಂದ್ ಅವರ ‘ಖುದಾ ಗವಾ’ ಚಿತ್ರವನ್ನು ಆಫ್ಘಾನಿಸ್ತಾನದಲ್ಲಿ ಚಿತ್ರೀಕರಿಸಿದಾಗ ಅಂದಿನ ಸರ್ಕಾರವು ಭದ್ರತಾ ವ್ಯವಸ್ಥೆಯನ್ನು ಚೆನ್ನಾಗಿ ಮಾಡಿದ್ದು, ಆಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ನಜೀಬುಲ್ಲಾ ಅಹ್ಮದ್‌ಝಾಹಿ ಅವರು ಹಿಂದಿ ಚಲನಚಿತ್ರಗಳ ದೊಡ್ಡ ಅಭಿಮಾನಿಯಾಗಿದ್ದರು.

    ಮಾಜಿ ಅಧ್ಯಕ್ಷ ನಜೀಬುಲ್ಲಾ ಅಹ್ಮದ್‌ಝಾಹಿ ಅಮಿತಾಭ್‌ ಬಚ್ಚನ್ ಅವರ ಭದ್ರತೆಗಾಗಿ ತಮ್ಮ ದೇಶದ ಅರ್ಧದಷ್ಟು ವಾಯುಸೇನೆಯನ್ನೇ ನಿಯೋಜಿಸಿದ್ದರಂತೆ. ಸುದ್ದಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ಅಮಿತಾಭ್‌ ಆಫ್ಘಾನಿಸ್ತಾನದಲ್ಲಿ ತಮ್ಮ ‘ಖುದಾ ಗವಾ’ ಚಿತ್ರದ ಚಿತ್ರೀಕರಣದ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

    ಅದು ತನ್ನ ಜೀವನದ ಅತ್ಯಂತ ಸ್ಮರಣೀಯ ಪ್ರವಾಸವಾಗಿತ್ತು ಎಂದು ಅಮಿತಾಭ್‌ ಉಲ್ಲೇಖಿಸಿದ್ದಾರೆ. ಒಂದು ಘಟನೆಯನ್ನು ಹಂಚಿಕೊಳ್ಳುತ್ತಾ, ಒಮ್ಮೆ ಅವರನ್ನು ಡ್ಯಾನಿ ಮತ್ತು ಮುಕುಲ್ ಜೊತೆಗೆ ಒಂದು ಸ್ಥಳಕ್ಕೆ ಹೆಲಿಕಾಪ್ಟರ್‌ನಲ್ಲಿ ಕರೆದುಕೊಂಡು ಹೊರಟಾಗ ಸುಮಾರು 5 ಹೆಲಿಕಾಪ್ಟರ್‌ಗಳು ತಮ್ಮ ಹೆಲಿಕಾಪ್ಟರ್‌ನೊಟ್ಟಿಗೆ ಹಾರುತ್ತಿದ್ದವು ಮತ್ತು ಇದು ಮರೆಯಲಾಗದ ಕ್ಷಣವಾಗಿತ್ತು ಎಂದು ಅಮಿತಾಭ್‌ ಹೇಳಿದ್ದಾರೆ.

    ವೈಮಾನಿಕ ನೋಟ ಅದ್ಭುತವಾಗಿತ್ತು. ಬೆಟ್ಟಗಳು ಕೆಲವೊಮ್ಮೆ ಗುಲಾಬಿ ಮತ್ತು ಕೆಲವೊಮ್ಮೆ ನೇರಳೆ ಬಣ್ಣದಲ್ಲಿ ಕಾಣುತ್ತಿದ್ದು, ಅದನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಬಿಗ್ ಬಿ ಹಳೇ ದಿನಗಳನ್ನು ಮೆಲುಕು ಹಾಕಿದ್ದಾರೆ.

    ಹೆಲಿಕಾಪ್ಟರ್ ಅನ್ನು ಕಣಿವೆಯಲ್ಲಿ ಇಳಿಸಿದಾಗ, ಸಮಯ ಒಂದು ಕ್ಷಣ ನಿಂತಂತೆ ಭಾಸವಾಯಿತು. ಅಲ್ಲಿನ ಸ್ಥಳೀಯ ಜನರು ಅವರನ್ನು ನೋಡಿದ ತಕ್ಷಣ ಅವರ ಪಾದಗಳನ್ನು ನೆಲಕ್ಕೆ ಸಹ ತಾಕಿಸದೆ ಅವರನ್ನು ತಮ್ಮ ಭುಜದ ಮೇಲೆ ಕೂರಿಸಿಕೊಂಡು ಕರೆದೊಯ್ದರಂತೆ. ಅರಮನೆಯಲ್ಲಿ ಶಾಪಿಂಗ್ ಮಾಡಿದ ನಂತರ ಅವರನ್ನು ಮೈದಾನಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗಾಗಿ ಸಾಂಪ್ರದಾಯಿಕ ಕ್ರೀಡೆಯಾದ ಬುಜ್ಕಾಶಿ ಪಂದ್ಯಾವಳಿ ಆಯೋಜಿಸಲಾಗಿತ್ತು ಎಂದು ಬಚ್ಚನ್ ವಿವರಿಸಿದ್ದಾರೆ.
    ತುಂಬಾ ಮೋಜು ಮಸ್ತಿ ಮಾಡಿದ ನಂತರ ನಾವೆಲ್ಲ ಆ ರಾತ್ರಿ ಅಲ್ಲೇ ಉಳಿದುಕೊಂಡೆವು. ಮರುದಿನ ಮನೆಗೆ ಹಿಂತಿರುಗುವಾಗ ಅವರಿಗೆ ಜನರಿಂದ ತುಂಬಾ ಉಡುಗೊರೆಗಳು ಬಂದಿದ್ದವಂತೆ.ಬಚ್ಚನ್ ಕಾಬೂಲ್‌ನಿಂದ ಭಾರತಕ್ಕೆ ಹಿಂತಿರುಗುತ್ತಿದ್ದಾಗ ಅವರನ್ನು ರಾಜಮನೆತನದ ಔತಣಕೂಟಕ್ಕಾಗಿ ಅಧ್ಯಕ್ಷರ ನಿವಾಸಕ್ಕೆ ಆಹ್ವಾನಿಸಲಾಯಿತು. ಆಫ್ಘಾನಿಸ್ತಾನದ ಜನರು ಅಮಿತಾಭ್‌ ಬಚ್ಚನ್ ಅವರನ್ನು ತುಂಬಾ ಪ್ರೀತಿಯಿಂದ ಮತ್ತು ಗೌರವದಿಂದ ಕಂಡಿದ್ದರಂತೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending