LATEST NEWS
ದೇವಸ್ಥಾನದ ಗೋಶಾಲೆಯಿಂದ ಗೋ ಕಳವಿಗೆ ಯತ್ನ..!
ಕುಂದಾಪುರ/ಮಂಗಳೂರು: ಕುಂದಾಪುರ ಕಮಲಶಿಲೆ ದೇವಸ್ಥಾನದಲ್ಲಿ ಕಳ್ಳರು ಗೋ ಕಳ್ಳತನಕ್ಕೆ ಯತ್ನಿಸಿದ್ದು,ಸೈನ್ ಇನ್ ಸಿಸಿಟಿವಿ ತಂಡ ಸಕಾಲದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಗೋ ಕಳ್ಳತನವನ್ನು ತಡೆಯಲಾಗಿದೆ.
ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ಶನವಾರ ರಾತ್ರಿ 2.46ರ ವೇಳೆಗೆ ಇಬ್ಬರು ಕಳ್ಳರು ಹಸುಗಳನ್ನು ಕದಿಯಲು ಯತ್ನಿಸಿದ್ದಾರೆ. ಗೋಶಾಲೆಯ ಎದುರಿನ ಬಾಗಿಲಿನ ಬೀಗ ಮುರಿದು ಬದಿಯ ಬಾಗಿಲಿನಿಂದ ಗೋಶಾಲೆಗೆ ಪ್ರವೇಶ ಮಾಡಿದ್ದಾರೆ. ಬಳಿಕ ಎರಡು ಹಸುಗಳನ್ನು ಕದ್ದೊಯ್ಯಲು ಸಂಚು ಹಾಕಿದ್ದು, ಹಸುಗಳನ್ನು ಕಟ್ಟಿ ಹಾಕಿದ್ದ ಹಗ್ಗವನ್ನು ತುಂಡರಿಸಿದ್ದಾರೆ. ಇನ್ನೇನು ಹಸುವನ್ನು ಸಾಗಿಸಲು ಯತ್ನಿಸುತ್ತಿದ್ದರು. ದೇವಸ್ಥಾನದಲ್ಲಿ ಸೈನ್ ಇನ್ ಸೆಕ್ಯುರಿಟಿ ಸಂಸ್ಥೆಯ ಲೈವ್ ಮಾನಿಟರಿಂಗ್ ಸಿಸಿಟಿ ಹಾಕಿಸಲಾಗಿದ್ದು ಈ ಸಂಸ್ಥೆ 24 ಗಂಟೆಗಳ ಕಾಲ ಸಿಸಿಟಿವಿ ಮೇಲೆ ನೇರಾ ನಿಗಾ ಇಟ್ಟಿದ್ದು ಪೊಲೀಸ್ ಇಲಾಖೆಗೆ ಕಳ್ಳತನ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿಯನ್ನು ರವಾನಿಸುತ್ತದೆ.
Read More..; ನಕಲಿ ವೈದ್ಯನಿಂದ ಭ್ರೂಣ ಹ*ತ್ಯೆ ..! ತನಿಖೆ ವೇಳೆ ವೈದ್ಯನ ಕರಾಳ ಮುಖ ಬಯಲು..!!
ಇದೇ ರೀತಿ ಕಳ್ಳರನ್ನು ಸಿಸಿಟಿವಿಯಲ್ಲಿ ಕಂಡ ಕುಂದಾಪುರ ಅಂಕದಕಟ್ಟೆಯಲ್ಲಿರುವ ಮಾನಿಟರಿಂಗ್ ಸೆಂಟರ್ನ ಸಿಬಂದಿ ಗೋಶಾಲೆಯಲ್ಲಿ ಹಸುವನ್ನು ಕದಿಯಲು ಯತ್ನಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಬೀಟ್ ಪೊಲೀಸ್, ಎಸ್ಐ, ದೇವಾಲಯದ ಭದ್ರತಾ ವಿಭಾಗದವರಿಗೆ ಮಾಹಿತಿ ನೀಡಿದ್ದಾರೆ. ಭದ್ರತಾ ಸಿಬಂದಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿದ್ದಾರೆ. ಆ ಕೂಡಲೇ ಶಂಕಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಹಾಗೂ ಎಸ್ಐ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕಾರಿನಲ್ಲಿ ಬಂದವರ ಮಾಹಿತಿ ಕಲೆ ಹಾಕಿದ್ದಾರೆ. ಶಂಕಿತರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
LATEST NEWS
ಸದನದಲ್ಲಿ ಪ್ಯಾಲೆಸ್ತೀನ್ ಪ್ರಸ್ತಾಪ..! ಓವೈಸಿ ವಿರುದ್ಧ ಎರಡು ದೂರು ದಾಖಲು..!
ನವದೆಹಲಿ : 18ನೇ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರದ ವೇಳೆ ಪ್ಯಾಲೆಸ್ತೀನ್ ಹೆಸರು ಪ್ರಸ್ತಾಪಿಸಿದ್ದಕ್ಕೆ ಅಸಾದುದ್ದಿನ್ ಓವೈಸಿ ಮೇಲೆ ಎರಡು ದೂರು ದಾಖಲಾಗಿದ್ದು, ಸದನದ ಕಡತದಿಂದಲೂ ಆ ಹೇಳಿಕೆಯನ್ನು ತೆಗೆದು ಹಾಕಲಾಗಿದೆ.
ಸಮರ್ಥಿಸಿಕೊಂಡಿದ್ದ ಓವೈಸಿ :
ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಐದನೇ ಭಾರಿಗೆ ಹೈದ್ರಾಬಾದ್ ಲೋಕಸಭಾ ಕ್ಷೇತ್ರದಿಂದ ಗೆದ್ದು ಲೋಕಸಭೆ ಪ್ರವೇಶ ಮಾಡಿದ್ದಾರೆ. ಜೂನ್ 25 ರಂದು ಸಂಸದರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಓವೈಸಿ ಆರಂಭದಲ್ಲಿ ದೇವರ ನಾಮ ಸ್ಮರಣೆ ಮಾಡಿ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನದ ಕೊನೆಯಲ್ಲಿ ಜೈ ಭೀಮ್ , ಜೈ ತೆಲಂಗಾಣ ಘೋಷಣೆಯೊಂದಿಗೆ ಪ್ಯಾಲೆಸ್ತೀನ್ ಹೆಸರನ್ನೂ ಬಳಕೆ ಮಾಡಿದ್ದಾರೆ. ಇದು ಟೀಕೆಗೆ ಕಾರಣವಾಗಿದ್ದು, ಸದನದ ಹೊರಗೆ ಈ ವಿಚಾರ ಚರ್ಚೆಗೆ ಬಂದಿತ್ತು.
ಸದನದ ಹೊರಗೆ ಈ ಬಗ್ಗೆ ಮಾತನಾಡಿದ ಓವೈಸಿ, “ಹೀಗೆ ಹೇಳುವುದರಲ್ಲಿ ಯಾವುದೇ ತಪ್ಪಿಲ್ಲ. ಎಲ್ಲಾ ಸದಸ್ಯರು ವಿಭಿನ್ನವಾಗಿ ಹೇಳಿದ್ದಾರೆ. ಹಾಗೇ ನಾನೂ ಕೂಡಾ ಹೇಳಿದ್ದೇನೆ. ಪ್ಯಾಲೆಸ್ತೀನಿಯರು ತುಳಿತಕ್ಕೆ ಒಳಗಾದ ಜನರು” ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಇದನ್ನೂ ಓದಿ : ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹ*ತ್ಯೆಗೆ ಯತ್ನಿಸಿದ ಮಹಿಳೆ
ದೂರು ದಾಖಲು :
ಓವೈಸಿ ಅವರ ಈ ಹೇಳಿಕೆ ವಿರುದ್ಧ ವಕೀಲ ಹರಿಶಂಕರ್ ಜೈನ್ ಹಾಗೂ ವಕೀಲ್ ವಿನೀತ್ ಜಿಂದಾಲ್ ಅವರು ರಾಷ್ಟ್ರಪತಿಗಳಿಗೆ ಪ್ರತ್ಯೇಕ ದೂರು ಸಲ್ಲಿಸಿದ್ದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜ್ ದೂರುಗಳು ಬಂದ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಈ ಬೆಳವಣಿಗೆಯ ಬಳಿಕ ಸಂಸತ್ನ ಕಡತದಲ್ಲಿ ಓವೈಸಿ ಹೇಳಿಕೆಯನ್ನು ತೆಗೆದು ಹಾಕಿದ್ದು, ಸಂಸತ್ ಟಿವಿಯಲ್ಲೂ ಓವೈಸಿ ಹೇಳಿಕೆಯ ಆ ಭಾಗವನ್ನು ತೆಗೆದು ಹಾಕಿದೆ.
DAKSHINA KANNADA
ಮುಳುಗಿದ ಪಡೀಲ್ ಅಂಡರ್ಪಾಸ್ – ಸಂಚಾರ ಸ್ಥಗಿತ
ಮಂಗಳೂರು: ಕರಾವಳಿಯಾದ್ಯಂತ ಸುರಿಯುತ್ತಿರುವ ಮಳೆ ಜನತೆಯನ್ನು ಚಂಡಿ ಹಿಡಿಸಿ ಬಿಟ್ಟಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಎರಡು ದಿನಗಳಿಂದ ಬಿರುಸು ಪಡೆದುಕೊಂಡಿದ್ದು ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ನಗರದ ಹಲವು ಕಡೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿದ್ದು, ಜನರು ಪರದಾಡುವಂತಾಗಿದೆ. ನಗರದ ಪಡೀಲ್ – ಬಜಾಲ್ ಸಂಪರ್ಕಿಸುವ ರಸ್ತೆಯ ಅಂಡರ್ಪಾಸ್ ನೀರಿನಿಂದ ತುಂಬಿ ಮುಳುಗಿ ಹೋಗಿದೆ. ಇಂದು ಬೆಳಿಗ್ಗೆ ಅಂಡರ್ಪಾಸ್ ಕೆಳಭಾಗದಲ್ಲಿ ನೀರು ತುಂಬಿಕೊಂಡಿದ್ದು ಜನ ಸಂಚರಿಸಲಾಗದೇ ತೊಂದರೆ ಅನುಭವಿಸಿದರು.
ಕಾರೊಂದು ನೀರಿನಲ್ಲಿ ಬರಲಾಗದ ಸ್ಥಿತಿಯಲ್ಲಿದ್ದು ಬಳಿಕ ಸ್ಥಳೀಯರು ವಾಹನವನ್ನು ದೂಡಿಕೊಂಡು ಬಂದು ಮೇಲೆ ತಂದಿದ್ದಾರೆ. ಪಡೀಲ್ – ಬಜಾಲ್ ಸಂಪರ್ಕಿಸುವ ಈ ಅಂಡರ್ಪಾಸ್ ಪ್ರತೀ ಮಳೆಗಾಲದ ಸಂದರ್ಭದಲ್ಲೂ ಜನ ಕಂಗೆಡುತ್ತಿದ್ದಾರೆ.
LATEST NEWS
ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹ*ತ್ಯೆಗೆ ಯತ್ನಿಸಿದ ಮಹಿಳೆ
ಮಂಗಳೂರು/ಶ್ರೀಕಾಕುಳಂ : ಮಹಿಳೆಯೊಬ್ಬರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹ*ತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕ್ಯಾಂಪ್ ಕಚೇರಿ ಬಳಿ ಮಹಿಳೆಯೊಬ್ಬರು ಜೀವಾಂತ್ಯಗೊಳಿಸಲು ನಿರ್ಧರಿಸಿದ್ದರು. ಈ ಸಂದರ್ಭ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ರಕ್ಷಿಸಿದ್ದಾರೆ.
ಶ್ರೀಕಾಕುಳಂ ಜಿಲ್ಲೆಯ ನಿವಾಸಿ, ದುರ್ಗಾದೇವಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಆಕೆ ಕ್ಯಾಂಪ್ ಆಫೀಸ್ ಬಳಿಯಿರುವ ಕಟ್ಟಡವನ್ನು ಏರಿ ಅಲ್ಲಿಂದ ಹಾರಿ ಪ್ರಾ*ಣ ಕಳೆದುಕೊಳ್ಳಲು ಯತ್ನಿಸಿದ್ದಳು.
ಕಾರಣ ಏನು ?
ಶ್ರೀಕಾಕುಳಂನಲ್ಲಿ ವೈಎಸ್ಆರ್ಸಿಪಿ ಪಕ್ಷದ ನಾಯಕರ ಒತ್ತುವರಿಯಿಂದ ತನ್ನ ಭೂಮಿಯನ್ನು ಕಳೆದುಕೊಂಡಿದ್ದೇನೆ ಎಂದು ಅವರು ಮಹಿಳೆ ಆರೋಪಿಸಿದ್ದಾರೆ. ಪದೇ ಪದೇ ಮನವಿ ಮಾಡಿದರೂ ಪಕ್ಷದ ಮುಖಂಡರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ವೈಎಸ್ಆರ್ಸಿಪಿ ನಾಯಕರ ವಿರುದ್ಧ ಭೂಕಬಳಿಕೆ ಪ್ರಕರಣಗಳ ಆರೋಪಗಳ ಕುರಿತ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಇದೀಗ ಈ ಘಟನೆ ನಡೆದಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ
ಇತ್ತೀಚೆಗೆ, ಗುಂಟೂರು ಜಿಲ್ಲೆಯಲ್ಲಿ ವೈಎಸ್ಆರ್ಸಿಪಿ ಪಕ್ಷದ ಕಚೇರಿಯನ್ನು ಕೆಡವಲಾಗಿತ್ತು. ವಿಶಾಖಪಟ್ಟಣಂನಲ್ಲಿ ಇನ್ನೂ ಎರಡು ಪಕ್ಷದ ಕಚೇರಿಗಳಿಗೆ ನೋಟಿಸ್ ನೀಡಲಾಗಿತ್ತು.
Pingback: ಅನಂತಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕೊಕ್ಕಡ ಸತ್ಯನಾರಾಯಣ ತೋಡ್ತಿಲ್ಲಾಯ - NAMMAKUDLA NEWS - ನಮ್ಮಕುಡ್ಲ ನ್ಯೂ
Pingback: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೊಟ್ಟಾರ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ - NAMMAKUDLA NEWS - ನಮ್ಮಕುಡ್ಲ ನ್ಯೂಸ್