HomeDAKSHINA KANNADAಮಂಗಳೂರಿನಲ್ಲಿ ಮೇ ದಿನಾಚರಣೆ ಪ್ರಯುಕ್ತ ಕಾರ್ಮಿಕರ ಆಕರ್ಷಕ ಮೆರವಣಿಗೆ

ಮಂಗಳೂರಿನಲ್ಲಿ ಮೇ ದಿನಾಚರಣೆ ಪ್ರಯುಕ್ತ ಕಾರ್ಮಿಕರ ಆಕರ್ಷಕ ಮೆರವಣಿಗೆ

ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ. ಈ ಹಿನ್ನೆಲೆಯಲ್ಲಿ ಮೇ ದಿನಾಚರಣೆ ಸಮಿತಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕೋಮುವಾದ-ಕಾರ್ಪೋರೇಟ್‌ ಸಂಸ್ಥೆಗಳ ಅಕ್ರಮ ಕೂಟಗಳ ಹುನ್ನಾರ ಬಯಲಿಗೆಳೆಯಲು , ಕೆಲಸದ ಅವಧಿ 12 ಗಂಟೆಗಳ ಹೆಚ್ಚಳ ಮಾಡಿದ ರಾಜ್ಯ ಸರಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಕಾರ್ಮಿಕರ ಆಕರ್ಷಕ ಮೆರವಣಿಗೆ ಮಂಗಳೂರಿನಲ್ಲಿ ನಡೆಯಿತು.

ಮಂಗಳೂರು : ಇಂದು ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ. ಈ ಹಿನ್ನೆಲೆಯಲ್ಲಿ ಮೇ ದಿನಾಚರಣೆ ಸಮಿತಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕೋಮುವಾದ-ಕಾರ್ಪೋರೇಟ್‌ ಸಂಸ್ಥೆಗಳ ಅಕ್ರಮ ಕೂಟಗಳ ಹುನ್ನಾರ ಬಯಲಿಗೆಳೆಯಲು , ಕೆಲಸದ ಅವಧಿ 12 ಗಂಟೆಗಳ ಹೆಚ್ಚಳ ಮಾಡಿದ ರಾಜ್ಯ ಸರಕಾರದ ಕಾರ್ಮಿಕ ವಿರೋಧಿ ನೀತಿ ವಿರುದ್ಧ ಕಾರ್ಮಿಕರ ಆಕರ್ಷಕ ಮೆರವಣಿಗೆ ಮಂಗಳೂರಿನಲ್ಲಿ ನಡೆಯಿತು.


ನಗರದ ಸರ್ವೀಸ್ ಬಸ್ಸು ನಿಲ್ದಾಣದಿಂದ ಹೊರಟ ಮೆರವಣಿಗೆ ಬಳಿಕ ಡಾನ್ ಬೋಸ್ಕೋ ಹಾಲ್‌ನಲ್ಲಿ ಬಹಿರಂಗ ಸಭೆ ನಡೆಯಿತು.

2023ರ ಮೇ ದಿನಾಚರಣೆಯು ಕಾರ್ಮಿಕರ ಪಾಲಿಗೆ ಕೇವಲ ಉತ್ಸವ ಮಾತ್ರವಾಗದೇ, ಹೋರಾಟ- ಚಳುವಳಿಗಳನ್ನು ತೀಕ್ಷ್ಣಗೊಳಿಸಲು ಪ್ರತಿಜ್ಞೆಗೈಯ್ಯುವ ದಿನವಾಗಬೇಕಾಗಿದೆ ಎಂದು ಕಾರ್ಮಿಕ ನಾಯಕರು ಕರೆ ನೀಡಿದರು.


ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಇಂದು ಜಗತ್ತಿನಾದ್ಯಂತ ವಿಶ್ವಕಾರ್ಮಿಕ ದಿನಾಚರಣೆ ನಡೆಯುತ್ತಿದ್ದು, ಕಾರ್ಮಿಕರ ದಿನಾಚರಣೆ ಮಂಗಳೂರಿನಲ್ಲೂ ನಾವು ಆಯೋಜನೆ ಮಾಡಿದ್ದೆವೆ.

ಕಾರ್ಮಿಕರನ್ನು ಮತ್ತೆ ಜೀತದಾಳು, ಗುಲಾಮರನ್ನಾಗಿ ಮಾಡಿ ಮೇ ದಿನದ ಮಹತ್ವವನ್ನೇ ಅಲ್ಲಗಳೆಯುವ ಕುತಂತ್ರ ನಡೆಯುತ್ತಿದೆ.

ಕೆಲಸದ ಅವಧಿಯನ್ನು 12 ಗಂಠೆಗೆ ಹೆಚ್ಚಳ ಮಾಡಿರುವ ಸರಕಾರದ ನೀತಿಯನ್ನು ವಿರೋಧಿಸಿ ನಾವು ಇದನ್ನು ವಿರೋಧಿ ನೀತಿಯನ್ನಾಗಿ ಇಂದು ನಡೆಸುತ್ತಿದ್ದೇವೆ.

ಯಾವುದೇ ಕಾರ್ಮಿಕ ವರ್ಗ ಅದನ್ನು 12 ಗಂಟೆಯವರೆಗೆ ಮಾಡಲು ಬಿಡುವುದಿಲ್ಲ ಎಂದು ಸುನಿಲ್‌ ಆಕ್ರೋಶ ವ್ಯಕ್ತಪಡಿಸಿದರು.
ಭಾರತ ದೇಶದಲ್ಲೂ ದುಡಿಯುವ ವರ್ಗದ ಹೋರಾಟ ಮುಂದುವರಿದಿದೆ.

ಈ ಬಾರಿಯ ಕಾರ್ಮಿಕ ದಿನಾಚರಣೆ ಸವಾಲಿನ ದಿನವಾಗಿದೆ ಎಂದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಡಾ ಕೃಷ್ಣಪ್ಪ ಕೊಂಚಾಡಿ, ಕಾರ್ಯಾಧ್ಯಕ್ಷ ಜೆ ಬಾಲಕೃಷ್ಣ ಶೆಟ್ಟಿ, ಖಜಾಂಚಿ ಯೋಗೀಶ್ ಜಪ್ಪಿನಮೊಗರು ಸೇರಿದಂತೆ ವಸಂತ ಆಚಾರಿ, ಸುಕುಮಾರ್‌, ಪದ್ಮಾವತಿ ಶೆಟ್ಟಿ, ಜಯಂತಿ ಶೆಟ್ಟಿ, ಸದಾಶಿವದಾಸ್ ಮೊದಲಾದವರಿದ್ದರು. ಆಕರ್ಷಕ ಮೆರವಣಿಗೆ ನಡೆಯಿತು.

Latest articles

ಕಾಸರಗೋಡು: ಎಮರ್ಜೆನ್ಸಿಲೈಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ- ಓರ್ವನ ಬಂಧನ..!

ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ಪೊಲೀಸರು...

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ- ಐದು ಮಂದಿ ಸ್ಥಳದಲ್ಲೇ ಸಾವು…!

ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿಗೆ ಗಾಯಗಳಾಗಿರುವ ಘಟನೆ...

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...