ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಂಗಳೂರು ಪೊಲೀಸರಿಗೊಂದು ಭಾವನಾತ್ಮಕ ಪತ್ರ..!
ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮಂಗಳೂರು ಪೊಲೀಸರಿಗೊಂದು ಭಾವನಾತ್ಮಕ ಪತ್ರ..!
ಮಂಗಳೂರು: ದೇಶದಾದ್ಯಂತ ಪ್ರಳಯ ಸೃಷ್ಟಿ ಮಾಡಿರುವ ಕೊರೊನಾ ವಿರುದ್ಧ ವೈದ್ಯರು ಹಾಗೂ ಪೊಲೀಸರು ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡುತ್ತಿದ್ದಾರೆ.
ನಾಗರೀಕರ ಒಳಿತನ್ನು ಬಯಸುವ ಪೊಲೀಸರು ಸ್ವ-ರಕ್ಷಣೆ ಕೂಡ ಮಾಡಬೇಕಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಅಧೀಕ್ಷಕಕರು ಪತ್ರ ಬರೆಯುವ ಮೂಲಕ ಕಾಳಜಿ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಅಧೀಕ್ಷಕರು ಬರೆದ ಪತ್ರದ ಸಾರಾಂಶ ಹೀಗಿದೆ…
“ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ನಮಸ್ಕಾರ….
ವಿಶ್ವಾಧ್ಯಂತ ಅತೀ ವೇಗವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ನಿಂದ ಈಗಾಗಲೇ ಸಾವಿರಾರು ಜನ ಸಾವನ್ನಪ್ಪುತ್ತಿರುವುದು ನಿಮಗೆಲ್ಲಾ ತಿಳಿದಿದೆ.
ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ವೈದ್ಯಕೀಯ ಕ್ಷೇತ್ರದಷ್ಟೇ ಜವಾಬ್ದಾರಿ ಪೊಲೀಸ್ ಇಲಾಖೆಗೂ ಇರುತ್ತದೆ.
ಪ್ರತೀ ಸಲ ದೇಶದಲ್ಲಿ ನೈಸರ್ಗಿಕ ವಿಕೋಪ, ದೊಂಬಿ, ಗಲಾಟೆಗಳಾದಾಗ ಹೇಗೆ ಪೊಲೀಸ್ ಇಲಾಖೆ ಒಗ್ಗಟ್ಟಿನಿಂದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿತ್ತೋ, ಅದಕ್ಕಿಂತಲೂ ಹೆಚ್ಚಿನ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸುವ ಅಗತ್ಯತೆ ನಮ್ಮ ಮುಂದಿದೆ.
ಒಬ್ಬ ಜಿಲ್ಲಾ ಎಸ್.ಪಿ ಯಾಗಿ ನನ್ನ ವ್ಯಾಪ್ತಿಯ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಇಂತಹ ಅಪಾಯಕಾರಿ ಪರಿಸ್ಥಿಯಲ್ಲಿ ಅವರ ಕುಟುಂಬದಿಂದ ದೂರ ಇರಿಸಿ.
ಅವರ ಪ್ರಾಣಕ್ಕೆ ಅಪಾಯ ತಂದೊಡ್ಡಬಹುದಾದಂತಹ ಕರ್ತವ್ಯಕ್ಕೆ ನಿಯೋಜಿಸುವುದು ಅನಿವಾರ್ಯ.
ಯಾಕೆಂದರೆ ನಾವೆಲ್ಲರೂ ಇಲಾಖೆಗೆ ಸೇರುವಾಗ ಕರ್ತವ್ಯವನ್ನು ಸೇವೆಯಾಗಿ ನಿಭಾಯಿಸುತ್ತೆವೆಂದು ಪ್ರತಿಜ್ಞೆ ಮಾಡಿರುತ್ತೇವೆ.
ಈ ಸಮಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವುದರೊಂದಿಗೆ ತಮ್ಮ ಸುರಕ್ಷತೆಯತ್ತಲೂ ಗಮನ ಕೊಡುವುದು ಅತ್ಯಗತ್ಯವಾಗಿರುತ್ತದೆ.
ನಿಮಗೆ ಈಗಾಗಲೇ ನೀಡಲಾಗಿರುವ ಮಾಸ್ಕ್, ಹ್ಯಾಂಡ್ ಸ್ಯಾನಿಟರಿಗಳ ಬಳಕೆ ಸೇರಿದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿ ವಿನಂತಿ.
ನಿಮ್ಮೊಂದಿಗೆ ನಿಮ್ಮ ಕುಟುಂಬದ ಸುರಕ್ಷತೆಯೂ ಮುಖ್ಯವಾಗಿರುವುದರಿಂದ ನೀವುಗಳು ಕರ್ತವ್ಯದ ಅವಧಿ ಮುಗಿದ ನಂತರ ಬಿಸಿನೀರಿನಲ್ಲಿ ಸ್ನಾನಮಾಡಿ ಶುಚಿಯಾದ ಬಳಿಕವೇ ಕುಟುಂಬದೊಂದಿಗೆ ಬೆರೆಯಿರಿ.
ನಿಮಗೆ ಅಥವಾ ನಿಮ್ಮ ಕುಟುಂಬಕ್ಕೆ ಯಾವುದೇ ರೀತಿಯ ತೊಂದರೆಯಾದಲ್ಲಿ ದಯವಿಟ್ಟು ನೇರವಾಗಿ ಸಂಪರ್ಕಿಸಿ.
ಸಾರ್ವಜನಿಕರು ಜೀವನಾವಶ್ಯಕ ವಸ್ತುಗಳ ಖರೀದಿಗಾಗಿ ದಿನಸಿ ಅಂಗಡಿ, ಮೆಡಿಕಲ್ ಶಾಪ್ ಮತ್ತಿತ್ತರೆಡೆ ಗುಂಪಾಗಿ ಸೇರುವುದನ್ನು ತಡೆದು ಅವರೆಲ್ಲರೂ ಸಾಮಾಜಿಕ ಅಂತರ (ಕನಿಷ್ಟ 1 ಮೀಟರ್) ಕಾಯ್ದುಕೊಳ್ಳುವಂತೆ ನೋಡಿಕೊಳ್ಳುವುದು.
ಹಾಗೆಯೇ ಜೀವನಾವಶ್ಯಕ ವಸ್ತುಗಳ ಸಾಗಾಟ ಮತ್ತು ಪೂರೈಕೆಗೆ ಹೆಚ್ಚಿನ ಪ್ರಧಾನ್ಯತೆ ನೀಡಿ.
ಅಂತಹ ಸಾಗಾಣಿಕಾ ವಾಹನಗಳ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಯ ನಿಮಿತ್ತ ತೆರಳುವವರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿರುತ್ತದೆ.
ಉಳಿದಂತೆ ಮೆಡಿಕಲ್ ಸ್ಟೋರ್ ನ ಸಿಬ್ಬಂದಿಗಳು, ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವವರು, ಬ್ಯಾಂಕ್ ಸಿಬ್ಬಂದಿಗಳು ಹಾಗೂ ಇತರೆ ಸರ್ಕಾರಿ ಇಲಾಖೆಯ ಸಿಬ್ಬಂದಿಗಳ ಗುರುತು ಚೀಟಿ/ಪಾಸ್ ಅಥವಾ ಅವರ ಕರ್ತವ್ಯ ಸ್ಥಳದ ಯಾವುದೇ ಪತ್ರಗಳನ್ನು ಪರಿಶೀಲಿಸಿ ಅವರ ಪ್ರಯಾಣಕ್ಕೆ ಸಹಕರಿಸಿ.
ಇದರೊಂದಿಗೆ ವಿನಾಕಾರಣ ಲಾಕ್ ಡೌನ್ ಉದ್ದೇಶವನ್ನು ಉಲ್ಲಂಘಿಸಿ ಉದ್ಧಟತನದಿಂದ ವರ್ತಿಸುವವರಿಗೆ ಕಡಿವಾಣ ಹಾಕುವುದೂ ಅತ್ಯಗತ್ಯವಾಗಿರುತ್ತದೆ. ಇದನ್ನು ನ್ಯಾಯಬದ್ದವಾಗಿ ಮಾಡುವುದು ನಮ್ಮ ಕರ್ತವ್ಯವಾಗಿದೆ.
21 ದಿನಗಳ ಲಾಕ್ ಡೌನ್ ದೀರ್ಘ ಅವಧಿಯಾಗಿರುವುದರಿಂದ ಜನರ ಜೀವನ ಕ್ರಮದ ಬದಲಾವಣೆಯಿಂದ ಮನೋಸ್ಥಿತಿ ಬದಲಾಗಿ ನಮ್ಮೊಂದಿಗೆ ಕೋಪದಿಂದ ವರ್ತಿಸುವ ಬಹಳಷ್ಟು ಸಂಗತಿ ಮುಂದಿನ ದಿನಗಳಲ್ಲಿ ಬರಬಹುದು.
ಅಂತಹ ಸಮಯದಲ್ಲಿ ತಾಳ್ಮೆಕಳೆದುಕೊಳ್ಳದೆ ವಿವೇಕ ಹಾಗೂ ಸಂಯಮದಿಂದ ಸಮಯೋಚಿತ ನಿರ್ಧಾರ ತೆಗೆದುಕೊಂಡು ಕರ್ತವ್ಯ ನಿರ್ವಹಿಸುವುದು ಅತೀ ಮುಖ್ಯವಾಗಿದೆ.
ನೆನಪಿರಲಿ ಬಲಪ್ರಯೋಗ ನಮ್ಮ ಕೊನೇಯ ಅಸ್ತ್ರವಾಗಿರಬೇಕು. ಜನರ ಸಹಕಾರದೊಂದಿಗೆ ಕರ್ತವ್ಯ ನಿರ್ವಹಿಸುವುದು ನಮ್ಮ ಮೊದಲ ಯೋಜನೆಯಾಗಿರಬೇಕು.
ನಾವು ಕರ್ತವ್ಯ ನಿರ್ವಹಿಸುವ ವೇಳೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಸಹಕಾರ ಪಡೆಯುದರೊಂದಿಗೆ ಸ್ಥಳೀಯ ನಾಯಕರನ್ನು, ಧಾರ್ಮಿಕ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು,
ಅವರ ಮತ್ತು ಎಲ್ಲಾ ಜನರ ಸಹಕಾರದೊಂದಿಗೆ ಈ ಲಾಕ್ ಡೌನ್ ನ ಹಿಂದಿನ ಉದ್ದೇಶ ಸಫಲಗೊಳಿಸುವಲ್ಲಿ ಕಾರ್ಯನಿರ್ವಹಿಸಬೇಕಾಗಿರುತ್ತದೆ.
ಕೊನೆಯದಾಗಿ ಇಂತಹ ಕಠಿಣ ಪರಿಸ್ಥಿತಿಯಲ್ಲೂ ಕರ್ತವ್ಯ ನಿರ್ವಹಿಸುತ್ತಿರುವ ನನ್ನ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಕರ್ತವ್ಯನಿಷ್ಟೆಗೂ ಹಾಗೂ ತ್ಯಾಗವನ್ನು ಅಭಿನಂದಿಸುತ್ತಾ ನಿಮ್ಮೆಲ್ಲರಿಗೂ ನನ್ನ ಸೆಲ್ಯೂಟ್… ಜೈ ಹಿಂದ್ – ಜೈ ಕರ್ನಾಟಕ…”
ಪೊಲೀಸ್ ಅಧೀಕ್ಷಕರು, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು
ಸದ್ಯ ಪೊಲೀಸ್ ಅಧೀಕ್ಷಕರು ಬರೆದಿರುವ ಈ ಪತ್ರದಲ್ಲಿ ಕೊರೊನಾ ವೈರಸ್ ಬಗ್ಗೆ ಬಹಳ ಜಾಗೃತರಾಗಿರುವಂತೆ ಕೋರಿದ್ದಾರೆ.
LATEST NEWS
238 ಬಾರಿ ಸೋತ ಅಭ್ಯರ್ಥಿ ಮತ್ತೆ ಲೋಕಸಭಾ ಅಖಾಡಕ್ಕೆ!
ಮಂಗಳೂರು ( ಮೆಟ್ಟೂರು ) : ಚುನಾವಣೆ ಅಂದ ಮೇಲೆ ಅಭ್ಯರ್ಥಿ ಹೇಗಾದ್ರೂ ಗೆಲ್ಲಲೇ ಬೇಕು ಅಂತ ಪ್ರಯತ್ನ ಮಾಡ್ತಾನೆ. ಹಾಗಂತ ಎರಡು ಮೂರು ಸ್ಪರ್ಧೆ ಮಾಡಿ ಗೆಲುವು ಸಿಕ್ಕಿಲ್ಲಾ ಅಂದ್ರೆ ಸುಮ್ಮನೆ ಮನೇಲಿ ಕೂರ್ತಾನೆ. ಆದ್ರೆ ಅದೊಂದು ಅಭ್ಯರ್ಥಿ ಮಾತ್ರ ಚುನಾವಣೆಯಲ್ಲಿ ಬರೋಬ್ಬರಿ 238 ಬಾರಿ ಸ್ಪರ್ಧೆ ಮಾಡಿ ಸೋತರೂ ಮತ್ತೆ ಈ ಬಾರಿ ಲೋಕಸಭಾ ಚುನಾವಣ ಕಣಕ್ಕೆ ಇಳಿದಿದ್ದಾರೆ.
ಚುನಾವಣೆಗೆ ನಿಲ್ಲೋದೇ ಸೋಲೋದಿಕ್ಕೆ ಅನ್ನೋ ರೀತಿ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಮೂಲಕ 65 ವಯಸ್ಸಿನ ಪದ್ಮರಾಜನ್ ಎಂಬವರು ಈ ಭಾರಿ ಮತ್ತೆ ಕಣಕ್ಕಿಳಿದಿದ್ದಾರೆ.
ಚುನಾವಣೆಯಲ್ಲಿ ಭಾಗವಹಿಸುವುದು ಮುಖ್ಯ!
ತಮಿಳುನಾಡಿನ ಮೆಟ್ಟೂರು ವಿಧಾನಸಭಾ ಕ್ಷೇತ್ರದಿಂದ 1988 ರಲ್ಲಿ ಚುನಾವಣೆಯಲ್ಲಿ ಪದ್ಮರಾಜನ್ ತಮ್ಮ ಮೊದಲ ಸ್ಪರ್ಧೆ ಆರಂಭಿಸಿದ್ದಾರೆ. ಸಾಮಾನ್ಯ ಟೈರ್ ರಿಪೇರಿ ಅಂಗಡಿ ಮಾಲೀಕರಾಗಿರುವ ಕೆ. ಪದ್ಮರಾಜನ್ ಅಂದಿನಿಂದ ಇಂದಿನವರೆಗೆ ಸರಿ ಸುಮಾರು 238 ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಚುನಾವಣೆಯ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಕಟ್ಟಿದ ಲಕ್ಷಾಂತರ ರೂಪಾಯಿ ಠೇವಣಿಯನ್ನೇ ಇವರು ಕಳೆದುಕೊಂಡಿದ್ದಾರೆ. ಆದರೆ ಅದೆಷ್ಟೇ ಸಲ ಸೋತರು.. ಠೇವಣಿ ಕಳೆದುಕೊಂಡರು ಕೂಡ ಇವರ ತಲೆ ಕೆಡಿಸಿಕೊಂಡಿಲ್ಲ.
ಎಲ್ಲಾ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವನ್ನು ಬಯಸುತ್ತಾರೆ. ಆದರೆ ನಾನು ಹಾಗೆ ಅಲ್ಲ ನನಗೆ ಚುನಾವಣೆಯಲ್ಲಿ ಭಾಗವಹಿಸುವುದೇ ಮುಖ್ಯ ಅಂತಾರೆ ಪದ್ಮರಾಜನ್. ಏಪ್ರಿಲ್ 19 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಸಂಸದೀಯ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.
ಕಿಂಗ್ ಆಫ್ ದಿ ಎಲೆಕ್ಷನ್ ಬಿರುದು :
ಸ್ಥಳೀಯಾಡಳಿತದ ಚುನಾವಣೆಯಿಂದ ಹಿಡಿದು ರಾಷ್ಟ್ರಪತಿ ಚುನಾವಣೆಗೂ ಇವರು ಸ್ಪರ್ಧೆ ಮಾಡಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಘಟಾನುಘಟಿ ನಾಯಕರುಗಳಾದ ಅಟಲ್ ಬಿಹಾರಿ ವಾಜಪೇಯಿ, ನರೇಂದ್ರ ಮೋದಿ, ರಾಹುಲ್ ಗಾಂಧಿ ಹೀಗೆ ಅನೇಕರ ವಿರುದ್ಧ ಇವರು ಸ್ಪರ್ಧೆ ಮಾಡಿ ಸೋತಿದ್ದಾರೆ. ಹೀಗಾಗಿ ಇವರಿಗೆ ಕಿಂಗ್ ಆಪ್ ದಿ ಎಲೆಕ್ಷನ್ ಅಂತಾನೂ ಬಿರುದು ಸಿಕ್ಕಿದೆ.
ಸೋತರೂ ಗೆಲುವು :
ನಿರಂತರ ಚುನಾವಣೆಯಲ್ಲಿ ಸೋತಿರುವ ಪದ್ಮರಾಜನ್ ಅವರು ಒಂದು ವಿಚಾರದಲ್ಲಿ ಗೆಲುವು ಸಾಧಿಸಿದ್ದಾರೆ. ಕಳೆದ ಮೂವತ್ತೈದು ವರ್ಷಗಳಿಂದ ಸೋಲುವ ಮೂಲಕ ಈ ಗೆಲುವು ತಂದುಕೊಂಡಿದ್ದಾರೆ. ಸೋಲಿನ ಮೂಲಕವೇ ಲಿಮ್ಕಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ಸೇರಿಸಿಕೊಳ್ಳುವ ಮೂಲಕ ಆ ಗೆಲುವು ಇವರಿಗೆ ಸಿಕ್ಕಿದೆ.
ಈ ಬಾರಿ ಮತ್ತೆ ಲೊಕಸಭಾ ಚುನಾವಣೆಯ ಕಣಕ್ಕಿಳಿದಿರುವ ಪದ್ಮರಾಜನ್ ಅವರು ನನಗೆ ಸೋಲಿನಲ್ಲೇ ಖುಷಿ ಇದೆ. ಹಾಗೊಂದು ವೇಳೆ ಎಲ್ಲಿಯಾದ್ರೂ ಜನ ನನ್ನನ್ನು ಗೆಲ್ಲಿಸಿದ್ರೆ ಹೃದಯಾಘಾತವಾಗಿ ಉಸಿರೇ ನಿಂತು ಹೋಗಬಹುದು ಎಂದು ತಮಾಷೆಯಾಗಿ ಹೇಳುತ್ತಾರೆ. ಹೀಗಾಗಿ ನನ್ನ ಉಸಿರು ಇರಬೇಕು ಅಂದ್ರೆ ನಾನು ಸದಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಹಾಗೂ ಸೋಲಬೇಕು ಅಂತಾರೆ.
LATEST NEWS
ಪ್ರಧಾನಿ ಕಾರಿನ ನೋಂದಣಿಯನ್ನು ವಿಸ್ತರಿಸಲು ಅಸಾಧ್ಯ ಎಂದ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ; ಕಾರಣ ಏನು?
ನವದೆಹಲಿ : ಪ್ರಧಾನಿ ಕಾರಿನ ನೋಂದಣಿಯನ್ನು ವಿಸ್ತರಿಸಲು ಅಸಾಧ್ಯ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ( NGT ) ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದ ಮೂರು ಡಿಸೇಲ್ ಕಾರುಗಳ ನೋಂದಣಿ ವಿಸ್ತರಿಸುವಂತೆ ಎಸ್ಪಿಜಿ (SPG) ಮನವಿ ಸಲ್ಲಿಸಿತ್ತು.
ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಹೇಳಿದ್ದೇನು?
“ಈ ಮೂರು ಕಾರುಗಳು ಸಾಮಾನ್ಯವಾಗಿ ಬಳಸಲ್ಪಡದ ವಿಶೇಷ ಉದ್ದೇಶದ ವಾಹನಗಳಾಗಿವೆ. ಈ ವಾಹನಗಳು ಹತ್ತು ವರ್ಷಗಳಲ್ಲಿ ಬಹಳ ಕಡಿಮೆ ಚಲಿಸಿವೆ ಮತ್ತು ಪ್ರಧಾನಿ ಅವರ ಭದ್ರತೆಯ ನಿರ್ದಿಷ್ಟ ಉದ್ದೇಶಕ್ಕಾಗಿ ಅಗತ್ಯವಾಗಿವೆ. ಆದರೆ ಸುಪ್ರೀಂ ಕೋರ್ಟ್ 2018ರ ಅಕ್ಟೋಬರ್ 29ರಂದು ನೀಡಿದ ಆದೇಶದಂತೆ ಆ ವಾಹನಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನವಿಯನ್ನು ತಿರಸ್ಕರಿಸಲಾಗಿದೆ” ಎಂದು ಎನ್ಜಿಟಿ ಹೇಳಿದೆ.
ಎಸ್ಪಿಜಿ ಈ ಕಾರುಗಳಿಗೆ ಅನುಮತಿ ಕೇಳಿದ್ಯಾಕೆ?
ಈ ವಾಹನಗಳ ವಿನ್ಯಾಸ ಮತ್ತು ತಾಂತ್ರಿಕ ಹಾಗೂ ಕಾರ್ಯತಂತ್ರಗಳು ಬಹಳಷ್ಟು ವಿಶೇಷವಾಗಿದೆ. ಇಂತಹ ವಾಹನಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಾಗುವುದಿಲ್ಲ. ಭದ್ರತೆಯ ದೃಷ್ಟಿಯಲ್ಲಿ ವಿಶೇಷವಾಗಿ ವಿನ್ಯಾಸ ಮಾಡಿರುವ ಕಾರಣ ಈ ಕಾರುಗಳಿಗೆ ಇನ್ನೂ ಐದು ವರ್ಷಗಳ ಕಾಲ ನೊಂದಣಿಯನ್ನು ವಿಸ್ತರಿಸಿ ಎಂದು ಎಸ್ಪಿಜಿ ಕೋರಿಕೆ ಸಲ್ಲಿಸಿತ್ತು.
ದೆಹಲಿ ಎನ್ಸಿಆರ್ನಲ್ಲಿನ ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಕ್ರಮವಾಗಿ ಎನ್ಜಿಟಿ ಮತ್ತು ಸುಪ್ರೀಂ ಕೋರ್ಟ್ ಈ ಆದೇಶಗಳನ್ನು ಹೊರಡಿಸಿದ್ದವು. ಎನ್ಜಿಟಿ 2015ರ ಏಪ್ರಿಲ್ನಲ್ಲಿ ದೆಹಲಿ ಎನ್ಸಿಆರ್ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಎಲ್ಲ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. 10 ವರ್ಷಕ್ಕಿಂತ ಹಳೆಯದಾದ ಯಾವುದೇ ಡೀಸೆಲ್ ವಾಹನವನ್ನು ನೋಂದಾಯಿಸದಂತೆ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಇದನ್ನೂ ಓದಿ…238 ಬಾರಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಮತ್ತೆ ಲೋಕಸಭಾ ಅಖಾಡಕ್ಕೆ…!
2013ರಲ್ಲಿ ತಯಾರಿಸಿದ ಮತ್ತು 2014ರ ಡಿಸೆಂಬರ್ನಲ್ಲಿ ನೋಂದಾಯಿಸಲಾದ ಮೂರು ರೆನಾಲ್ಟ್ ಎಂಡಿ -5 (Renault MD-5) ವಿಶೇಷ ಶಸ್ತ್ರಸಜ್ಜಿತ ವಾಹನಗಳು 9 ವರ್ಷಗಳಲ್ಲಿ ಕ್ರಮವಾಗಿ ಸುಮಾರು 6,000 ಕಿ.ಮೀ., 9,500 ಕಿ.ಮೀ. ಮತ್ತು 15,000 ಕಿ.ಮೀ. ಕ್ರಮಿಸಿವೆ.
bengaluru
ಚುನಾವಣೆ ಗೆಲ್ಲೋಕೆ ನನ್ನ ಹೆ*ಣ ಬೀಳಿಸೋಕು ಬಿಜೆಪಿಯವ್ರು ಸಿದ್ಧರಿದ್ದಾರೆ; ಜೀವ ಬೆದರಿಕೆ ಪತ್ರ ಹಿಡಿದು ಕಿಡಿಕಾರಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು : ಸದ್ಯ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆ*ದರಿಕೆ ಪತ್ರ ಬಂದಿದೆ. ಸ್ವತ: ಈ ಬಗ್ಗೆ ಪ್ರಿಯಾಂಕ ಖರ್ಗೆ ಅವರೇ ಹೇಳಿದ್ದಾರೆ.
ಎನ್ ಕೌಂಟರ್ ಬೆ*ದರಿಕೆ:
ಭಾರತೀಯ ಜನತಾ ಪಾರ್ಟಿಯವರು ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆ*ಣ ಬೀಳಿಸಿಯಾದರೂ ಚುನಾವಣೆ ಗೆಲ್ಲುವ ಯೋಜನೆಯಲ್ಲಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆ*ದರಿಕೆ ಪತ್ರ ಬಂದಿದೆ. ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆ*ದರಿಕೆ ಹಾಕಲಾಗಿದೆ. ಫಿನ್ಲ್ಯಾಂಡ್ನಿಂದ ಪತ್ರ ಬಂದಿದೆ ಎಂದು ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಗೆ ಬಂದಿರುವ ಜೀವ ಬೆದರಿಕೆ ಪತ್ರ ಓದಿದರು.
“ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತ ವೇಷ ಭೂಷಣ ಹಾಕಿದರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗೂ, ನಿನ್ನ ಸೊಕ್ಕು ಹೊಲೆಯ-ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ. ಖಾಕಿಯಾದರೂ, ಖಾದಿಯಾದರೂ, ಯಾರಿಂದಲಾದರೂ ನಿನ್ನನ್ನು ಎನ್ಕೌಂ*ಟರ್ ಮಾಡುವುದು ಸತ್ಯ ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದರು.
ಬೆದರಿಕೆ ಸಂಬಂಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ಅದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಅವರು ಕಿಡಿಕಾರಿದ್ದಾರೆ.