DAKSHINA KANNADA
ಸುಳ್ಯ : ಸರಕಾರಿ ಶಾಲೆಯಲ್ಲಿ ಅಪರಿಚಿತ ಮೃ*ತದೇಹ ಪತ್ತೆ
ಸುಳ್ಯ : ಸರಕಾರಿ ಶಾಲೆಯಲ್ಲಿ ಅಪರಿಚಿತ ಮೃತದೇ*ಹ ಪತ್ತೆಯಾಗಿದೆ. ಸುಳ್ಯದ ಕಾಂತಮಂಗಲ ಸರಕಾರಿ ಶಾಲೆಯ ಬಳಿ ಶವ ಪತ್ತೆಯಾಗಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊ*ಲೆಗೈದಿರುವ ಸಾಧ್ಯತೆ ಕಂಡು ಬಂದಿದೆ.
ಸಾ*ವನ್ನಪ್ಪಿದ ವ್ಯಕ್ತಿಯ ಬಗ್ಗೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ತಲೆ ಮತ್ತು ಕೈ ಭಾಗದಲ್ಲಿ ರ*ಕ್ತದ ಕಲೆಗಳು ಕಂಡು ಬಂದಿದ್ದು, ಮೇಲ್ನೋಟಕ್ಕೆ ಕೊ*ಲೆಗೈದಿರುವಂತೆ ಕಂಡು ಬರುತ್ತಿದೆ.
ಇದನ್ನೂ ಓದಿ : ದರ್ಶನ್ – ರೇಣುಕಾಸ್ವಾಮಿ – ಪಾರದರ್ಶಕ ವಿಚಾರಣೆ …..ಎಂದ ನಟ ಉಪೇಂದ್ರ
DAKSHINA KANNADA
ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು?
ಮಂಗಳೂರು: ಪೋಷಕರು ಅಥವಾ ಮನೆಯವರು ಚಹಾ, ಕಾಫಿ ಕುಡಿಯುವುದು ನೋಡಿ ಮಕ್ಕಳು ತಮಗೂ ಕೊಡಿ ಎಂದು ಹಟ ಮಾಡುತ್ತಾರೆ. ಮಕ್ಕಳಿಗೆ ಯಾವ ವಯಸ್ಸಿನಿಂದ ಚಹಾ, ಕಾಫಿ ಕೊಡಬಹುದು ಎಂದು ಸಂದಿಗ್ಧತೆ ಪೋಷಕರಲ್ಲಿ ಇರುವುದು ಸಹಜ. ಮಕ್ಕಳಿಗೆ ಈ ಪಾನೀಯವನ್ನು ಕೊಡುವ ಬಗ್ಗೆ ತಜ್ಞರು ಏನು ಹೇಳುತ್ತಾರೆ ನೋಡೋಣ.
ಅಮೆರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಪ್ರಕಾರ 12 ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಚಹಾ, ಕಾಫಿ ಕೊಡಬಾರದು ಹಾಗೂ ಎನರ್ಜಿ ಡ್ರಿಂಕ್ ಕೂಡ ನೀಡುವಂತಿಲ್ಲ. 12 ರಿಂದ 18 ವರ್ಷ ಮಕ್ಕಳು 100 ಮಿಲಿ ಗ್ರಾಂ ನಷ್ಟು ಕೆಫಿನ್ ಹೊಂದಬಹುದು.
12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಫಿನ್ ನೀಡುವುದರಿಂದ ಅವರ ಹೃದಯ, ಮೆದುಳು, ಮೂತ್ರಪಿಂಡ ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಕೆಫಿನ್ ಅಂಶ ಇರುವ ಚಹಾ ಮತ್ತು ಕಾಫಿ ಮಾತ್ರವಲ್ಲು ಚಾಕೊಲೇಟ್ ಪಾನೀಯಗಳು, ಬೇಕರಿ ಐಟಂಗಳು, ಕುಕ್ಕೀಸ್ ಇತ್ಯಾದಿಗಳು ಕೂಡ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೊಡುವಂತಿಲ್ಲ.
12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಫಿನ್ ನೀಡುವುದರಿಂದ ಇದು ಅವರ ಒಟ್ಟಾರೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
DAKSHINA KANNADA
ಮುಳುಗಿದ ಪಡೀಲ್ ಅಂಡರ್ಪಾಸ್ – ಸಂಚಾರ ಸ್ಥಗಿತ
ಮಂಗಳೂರು: ಕರಾವಳಿಯಾದ್ಯಂತ ಸುರಿಯುತ್ತಿರುವ ಮಳೆ ಜನತೆಯನ್ನು ಚಂಡಿ ಹಿಡಿಸಿ ಬಿಟ್ಟಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಎರಡು ದಿನಗಳಿಂದ ಬಿರುಸು ಪಡೆದುಕೊಂಡಿದ್ದು ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ನಗರದ ಹಲವು ಕಡೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿದ್ದು, ಜನರು ಪರದಾಡುವಂತಾಗಿದೆ. ನಗರದ ಪಡೀಲ್ – ಬಜಾಲ್ ಸಂಪರ್ಕಿಸುವ ರಸ್ತೆಯ ಅಂಡರ್ಪಾಸ್ ನೀರಿನಿಂದ ತುಂಬಿ ಮುಳುಗಿ ಹೋಗಿದೆ. ಇಂದು ಬೆಳಿಗ್ಗೆ ಅಂಡರ್ಪಾಸ್ ಕೆಳಭಾಗದಲ್ಲಿ ನೀರು ತುಂಬಿಕೊಂಡಿದ್ದು ಜನ ಸಂಚರಿಸಲಾಗದೇ ತೊಂದರೆ ಅನುಭವಿಸಿದರು.
ಕಾರೊಂದು ನೀರಿನಲ್ಲಿ ಬರಲಾಗದ ಸ್ಥಿತಿಯಲ್ಲಿದ್ದು ಬಳಿಕ ಸ್ಥಳೀಯರು ವಾಹನವನ್ನು ದೂಡಿಕೊಂಡು ಬಂದು ಮೇಲೆ ತಂದಿದ್ದಾರೆ. ಪಡೀಲ್ – ಬಜಾಲ್ ಸಂಪರ್ಕಿಸುವ ಈ ಅಂಡರ್ಪಾಸ್ ಪ್ರತೀ ಮಳೆಗಾಲದ ಸಂದರ್ಭದಲ್ಲೂ ಜನ ಕಂಗೆಡುತ್ತಿದ್ದಾರೆ.
DAKSHINA KANNADA
ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ
ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್?
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?
ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ