LATEST NEWS
ರಾಧಿಕಾ ಮರ್ಚೆಂಟ್ ಗೌನ್ ನಲ್ಲಿತ್ತು ಅನಂತ್ ಅಂಬಾನಿ ಲವ್ ಲೆಟರ್; ಹುಬ್ಬೇರಿಸಿದ ನೆಟ್ಟಿಗರು!
ಮಂಗಳೂರು/ ಮುಂಬೈ : ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ಸುದ್ದಿ ಇಂದು ನಿನ್ನೆಯದಲ್ಲ…ಮದುವೆ ಫಿಕ್ಸ್ ಆದಾಗಿನಿಂದಲೂ ಒಂದಿಲ್ಲೊಂದು ಸುದ್ದಿ ಹರಿದಾಡುತ್ತಲೇ ಇದೆ. ಇತ್ತೀಚೆಗಷ್ಟೇ ಅವರ ಅವರ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಅದ್ಧೂರಿಯಾಗಿ ನಡೆದಿತ್ತು. ಇದರಲ್ಲಿ ಆಪ್ತರು, ಗಣ್ಯರು, ಸೆಲೆಬ್ರಿಟಿಗಳು ಭಾಗಿಯಾಗಿದ್ದರು.
ಈ ಸಮಾರಂಭದಲ್ಲಿ ರಾಧಿಕಾ ಮರ್ಚೆಂಟ್ ಒಂದು ವಿಶೇಷವಾದ ಗೌನ್ ತೊಟ್ಟಿದ್ದರು. ಸಾಮಾನ್ಯವಾಗಿ ಸೆಲೆಬ್ರಿಟಿ ತೊಡುವ ಉಡುಗೆ ಬಗ್ಗೆ ಚರ್ಚೆ ಆಗುತ್ತೆ ಬಿಡಿ. ಅದರ ಬೆಲೆ ಬಗ್ಗೆಯಂತೂ ಹೇಳೋದೇ ಬೇಡ. ಅಷ್ಟು ಬೆಲೆ, ಇಷ್ಟು ಬೆಲೆ ಎಂದು ಹುಬ್ಬೇರಿಸುವಂತೆ ಮಾಡುತ್ತೆ. ಇಲ್ಲೂ ರಾಧಿಕಾ ತೊಟ್ಟಿದ್ದ ಗೌನ್ ಗಮನ ಸೆಳೆದಿದೆ. ಹಾಗಂತ ಇಲ್ಲಿ ಕೋಟಿ ಬೆಲೆ ಬಗ್ಗೆ ಚರ್ಚೆ ಆಗ್ತಿಲ್ಲ. ಬದಲಿಗೆ ಇಲ್ಲಿ ಅದರಲ್ಲಿದ್ದ ಪ್ರಿಂಟ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
ಗೌನ್ ನಲ್ಲಿದ್ದ ಪ್ರಿಂಟ್ ಏನು?
ಬಾಲ್ಯದ ಸ್ನೇಹಿತರಾಗಿದ್ದ ಅನಂತ್ ಹಾಗೂ ರಾಧಿಕಾ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅನಂತ್ ಅಂಬಾನಿ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದರು, ಈ ಎಲ್ಲಾ ಸಂದರ್ಭದಲ್ಲೂ ರಾಧಿಕಾ ಜೊತೆಯಾಗಿದ್ದರು. ಇದೀಗ ರಾಧಿಕಾ ತಮ್ಮ 2ನೇ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅವರಿಬ್ಬರ ನಡುವಿನ ಪ್ರೇಮದ ಸಾಕ್ಷಿಯನ್ನು ಬಿತ್ತರಿಸಿದ್ದಾರೆ. ಹೌದು, ಅವರು ಅನಂತ್ ಅಂಬಾನಿ ನೀಡಿದ್ದ ಲವ್ ಲೆಟರನ್ನೇ ಪ್ರಿಂಟ್ ಮಾಡಿಸಿದ ಗೌನ್ ತೊಟ್ಟು ಮಿಂಚಿದ್ದಾರೆ.
ಸದ್ಯ ಇವರಿಬ್ಬರ ಜೋಡಿಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅನಂತ್ ಹಾಗೂ ರಾಧಿಕಾ ಬಾಲ್ಯದ ಸ್ನೇಹಿತರು. ಇವರಿಬ್ಬರ ಸಂಬಂಧದ ಬಗ್ಗೆ 2018 ರಲ್ಲಿ ಬೆಳಕಿಗೆ ಬಂದಿತ್ತು. ಅಂಬಾನಿ ಕುಟುಂಬದ ಕಾರ್ಯಕ್ರಮದಲ್ಲಿ ರಾಧಿಕಾ ಮರ್ಚೆಂಟ್ ಭಾಗಿಯಾಗುತ್ತಿದ್ದರು.
ಇದನ್ನೂ ಓದಿ : ದರ್ಶನ್ ಕೊಲೆ ಪ್ರಕರಣ ಬೆನ್ನಲ್ಲೇ ‘ಯಶ್’ ವೀಡಿಯೋ ವೈರಲ್..! ಅಭಿಮಾನಿಗಳಿಗೆ ಯಶ್ ಹೇಳಿದ್ದೇನು?
ಮದುವೆ ಯಾವಾಗ?
2023ರ ಜನವರಿ 19 ರಂದು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮುಂಬೈನಲ್ಲಿ ನಿಶ್ಚಿತಾರ್ಥ . ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ ಎಂದು ತಿಳಿದು ಬಂದಿದೆ.
LATEST NEWS
ಕೊತ ಕೊತ ಅಂತ ಕುದಿಯುತ್ತೆ ಈ ನದಿ! ಇದರ ಹಿಂದಿನ ರಹಸ್ಯ ಇಲ್ಲಿದೆ
ಶನಾಯ್-ಟಿಂಪಿಷ್ಕಾ ನದಿ ಇನ್ನಿತರ ನದಿಗಳಿಗಿಂತ ಭಿನ್ನವಾಗಿದ್ದು ಈ ನದಿಯ ನೀರು ಕುದಿಯುತ್ತಿರುತ್ತದೆ. ಏಕೈಕ ಕುದಿಯುವ ನದಿಯಾಗಿರುವ ಶನಾಯ್-ಟಿಂಪಿಷ್ಕಾ ಪೆರುವಿನ ಅಮೆಜಾನ್ನಲ್ಲಿದೆ. ಪೆರುವಿನಲ್ಲಿರುವ ಅಮೆಜಾನ್ ಮಳೆಕಾಡಿನ ಮಧ್ಯಭಾಗದಲ್ಲಿ ಹರಿಯುವ ಶನಾಯ್ ನದಿ, ನೈಸರ್ಗಿಕ ವಿಸ್ಮಯ ಎಂದೆನಿಸಿದ್ದು, ವಿಜ್ಞಾನಿಗಳನ್ನು, ಪರಿಶೋಧಕರನ್ನು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ವಿಶ್ವದ ಏಕೈಕ ಕುದಿಯುವ ನದಿ
ಅಮೆಜಾನ್ ನದಿಯ ಈ ಗಮನಾರ್ಹ ಉಪನದಿಯು 6.4 ಕಿಲೋಮೀಟರ್ (4.0 ಮೈಲುಗಳು) ಉದ್ದವನ್ನು ವ್ಯಾಪಿಸಿದೆ. ಇದು ವಿಶ್ವದ ಏಕೈಕ ಕುದಿಯುವ ನದಿ ಎಂದು ಹೆಸರುವಾಸಿಯಾಗಿದೆ. ನದಿಯ ನೀರು 45 ಡಿಗ್ರಿ ಸೆಲ್ಸಿಯಸ್ನಿಂದ 100 ಡಿಗ್ರಿ ಸೆಲ್ಸಿಯಸ್ವರೆಗೆ ಸುಡುವ ತಾಪಮಾನವನ್ನು ಹೊಂದಿದೆ. ಸೂರ್ಯನ ಶಾಖದಿಂದ ಕುದಿಯುವ ನೀರು ಎಂಬ ಅರ್ಥವನ್ನು ಶನಯ್-ಟಿಂಪಿಷ್ಕಾ ಹೆಸರು ಒಳಗೊಂಡಿದೆ.
ಕೆಲವು ಭಾಗ ಬಿಸಿಯಾಗಿದೆ
ಇನ್ನು ಈ ನೀರಿನಲ್ಲಿ ಇಳಿದು ಸ್ನಾನ ಮಾಡುವುದೇ ಅಸಂಭವ ಎಂಬುದು ನಿಮ್ಮ ಮನಸ್ಸಿನಲ್ಲಿದ್ದರೆ ನಿಮ್ಮ ಅನಿಸಿಕೆ ತಪ್ಪು ಏಕೆಂದರೆ ಸಂಪೂರ್ಣ ನದಿಯ ನೀರು ಕುದಿಯುತ್ತಿಲ್ಲ ಕೆಲವು ಭಾಗ ಮಾತ್ರವೇ ಬಿಸಿ ನೀರನ್ನೊಳಗೊಂಡಿದೆ ಆದರೆ ಮುಳುಗು ಹಾಕಲು ಈ ನದಿಯಲ್ಲಿ ಸಾಕಷ್ಟು ಸ್ಥಳಾವಕಾಶವಿದೆ. ನದಿಯ ಬಿಸಿಯಿಂದ ಬೆಚ್ಚಗಿನ ಬಿಸಿ ನೀರಿನಲ್ಲಿ ಸ್ನಾನ ಮಾಡಿದ ಅನುಭವ ನಿಮಗುಂಟಾಗುತ್ತದೆ. ನೀರು ಕುದಿಯುತ್ತಿರುವ ಅನಿಸಿಕೆ ನಿಮಗುಂಟಾಗುತ್ತದೆ. ಇನ್ನು ಇಲ್ಲಿ ಯಾವುದೇ ಜಲಚರಗಳು ವಾಸಿಸುತ್ತಿಲ್ಲ ಏಕೆಂದರೆ ನದಿಯ ನೀರು ಕುದಿಯುತ್ತಿರುವ ಕಾರಣ ಯಾವುದೇ ಜೀವಿಗಳು ನೀರನಲ್ಲಿ ವಾಸಿಸುತ್ತಿಲ್ಲ.
ವೈಜ್ಞಾನಿಕ ಸತ್ಯವೇನು?
ವೈಜ್ಞಾನಿಕವಾಗಿ, ಮಳೆನೀರು ಅಮೆಜಾನ್ ಮಳೆಕಾಡಿನ ಮೇಲ್ಮೈಗೆ ನುಸುಳಿದಂತೆ, ಅದು ಭೂಮಿಯ ಹೊರಪದರದಲ್ಲಿ ಆಳದಲ್ಲಿ ಅನುಸರಿಸುತ್ತದೆ ಭೂಶಾಖದ ಗ್ರೇಡಿಯಂಟ್ ಕಾರಣದಿಂದಾಗಿ ನೀರನ್ನು ಗಮನಾರ್ಹವಾಗಿ ಬಿಸಿಮಾಡಲಾಗುತ್ತದೆ.
FILM
ದರ್ಶನ್ ಸರ್ ನನಗೆ ಗುರು ಸಮಾನರು…ಧರ್ಮೋ ರಕ್ಷತಿ ರಕ್ಷಿತಃ… ಎಂದ ನಟಿ ರಚಿತಾ ರಾಮ್; ಹೇಳಿದ್ದೇನು?
ಬೆಂಗಳೂರು : ರೇಣುಕಾಸ್ವಾಮಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಬಂಧನವಾಗಿದೆ. ಇತ್ತ ನಟ, ನಟಿಯರು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ. ಇದೀಗ ರಚಿತಾ ರಾಮ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಇನ್ಟಾಗ್ರಾಂ ಖಾತೆಯಲ್ಲಿ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ಧರ್ಮೋ ರಕ್ಷತಿ ರಕ್ಷಿತಃ” ಎಂದು ಅವರು ಪೋಸ್ಟ್ ಹಂಚಿಕೊಂಡಿದ್ದಾರೆ. ನಮಸ್ಕಾರ..ಈ ನೋಟ್ನ ನಾನು ನಟಿಯಾಗಿ ಅಲ್ಲ ಸಾಮನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು..! ಎಂದಿದ್ದಾರೆ.
ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು.
ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ.
ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ನಟ ದರ್ಶನ್ ಮತ್ತೊಬ್ಬ ಮ್ಯಾನೇಜರ್ ಆತ್ಮಹ*ತ್ಯೆ!? ಡೆ*ತ್ ನೋಟ್ ನಲ್ಲಿ ಏನಿದೆ!?
ದರ್ಶನ್ ಹಾಗೂ ರಚಿತಾ ರಾಮ್ ಜೊತೆಯಾಗಿ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಡಿಂಪಲ್ ಕ್ವೀನ್ ತನ್ನ ಸಿನಿ ಜರ್ನಿ ಆರಂಭಿಸಿದ್ದೇ ದರ್ಶನ್ ಜೊತೆಗೆ, ಅದೂ ‘ಬುಲ್ ಬುಲ್’ ಚಿತ್ರದ ಮೂಲಕ. ಅಂಬರೀಶ, ಜಗ್ಗುದಾದಾ, ಕ್ರಾಂತಿ ಚಿತ್ರಗಳಲ್ಲಿ ಇವರಿಬ್ಬರು ಜೊತೆಯಾಗಿ ನಟಿಸಿದ್ದರು.
LATEST NEWS
‘ಜೆಲ್ಲಿ ಮೀನು’ ಕುಟುಕಿ ಮೀನುಗಾರ ಸಾವು..!
ಕಾರವಾರ: ಇಲ್ಲಿನ ದೇವಬಾಗ್ನಲ್ಲಿ ಜೆಲ್ಲಿ ಮೀನು ಕಚ್ಚಿ ಮೀನುಗಾರ ಸಾವನಪ್ಪಿರುವ ಘಟನೆ ನಡೆದಿದೆ. ಮೀನುಗಳಲ್ಲಿ ಜೆಲ್ಲಿ ಮೀನು ನೋಡಲು ಬಲು ಸುಂದರ. ಹೆಚ್ಚಾಗಿ ಮೀನುಗಳು ಯಾರಿಗೂ ಹಾನಿಯುಂಟು ಮಾಡುವುದಿಲ್ಲ. ಆದರೆ ಈ ಮೀನು ಅತ್ಯಂತ ವಿಷಕಾರಿಯಾಗಿದೆ. ಜೆಲ್ಲಿ ಮೀನು ಪ್ರತಿಯೊಂದನ್ನು ತನ್ನ ಕಾಲಿನ ಮೂಲಕ ಗ್ರಹಿಸುತ್ತದೆ. ಅದರ ಮೂಲಕವೇ ಶತ್ರುಗಳಿಗೆ ಕುಟುಕುತ್ತದೆ. ಈಗೇನಾದರೂ ಆದಲ್ಲಿ ಆ ವ್ಯಕ್ತಿ ಬದುಕುಳಿಯುವುದು ಬಹಳ ವಿರಳ.
ಕಾರವಾರ ದೇವಬಾಗ್ನ ಸಮುದ್ರ ತೀರದಲ್ಲಿ ಮೀನುಗಾರನ ಬಲೆಯಲ್ಲಿ ಜೆಲ್ಲಿ ಮೀನು ಕಂಡುಬಂದಿದೆ. ಮೀನುಗಾರ ಕೃಷ್ಣ ಎಂಬಾತ ಮೀನನ್ನು ಬಲೆಯಿಂದ ಬಿಡಿಸಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಇದಾದ ಕೆಲವೇ ಕೆಲವು ಸಮಯದಲ್ಲಿ ಕೃಷ್ಣರವರ ಕಣ್ಣು, ಮೈ ಉರಿಯಲು ಆರಂಭಿಸಿದೆ. ಭಯಭೀತರಾದ ಮೀನುಗಾರ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ವೆಂಟಿಲೇಟರ್ನಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Read More..; ಹಾವು ಕಚ್ಚಿದ್ದರೂ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯೆ..!
ಏನಿದು ಜೆಲ್ಲಿ ಫಿಷ್?
ಈ ಮೀನಿಗೆ ಕನ್ನಡದಲ್ಲಿ ಅಂಬಲಿ ಮೀನು, ಲೋಳೆ ಮೀನು ಎಂದೆಲ್ಲಾ ಕರೀತಾರೆ. ಸಮುದ್ರದಲ್ಲಿ ಆಮೆಗಳು ಮತ್ತು ದೊಡ್ಡ ಮೀನುಗಳು ಜೆಲ್ಲಿ ಮೀನುಗಳನ್ನು ತಿನ್ನುತ್ತವೆ. ಕರಾವಳಿಯಲ್ಲಿ ಅಪರೂಪದ ಹಾಗೂ ಬೃಹತ್ ಗಾತ್ರದ ಜೆಲ್ಲಿ ಫಿಶ್ ಸಮುದ್ರ ಸಂಶೋಧಕಿಯೊಬ್ಬರು ಸಂಶೋಧನೆ ನಡೆಸುವ ವೇಳೆ ಕಣ್ಣಿಗೆ ಬಿದ್ದಿದೆ. ಈ ಮೀನು ಸುಮಾರು 1.5ಮೀ. ಉದ್ದವಿದೆ.
- LATEST NEWS5 days ago
ಅಡುಗೆ ಮನೆಯಿಂದ ಹಲ್ಲಿಗಳನ್ನು ಓಡಿಸಲು ಈ ಟಿಪ್ಸ್ ಅನುಸರಿಸಿ
- LATEST NEWS6 days ago
ಅಡುಗೆಯಲ್ಲಿ ಉಪ್ಪು ಜಾಸ್ತಿ ಆಯ್ತಾ? ಯೋಚನೆ ಬೇಡ, ಈ ಟಿಪ್ಸ್ ಫಾಲೋ ಮಾಡಿ
- FILM5 days ago
ಡ್ರೋನ್ ಪ್ರತಾಪ್ ಹುಟ್ಟು ಹಬ್ಬಕ್ಕೆ ಸಿಕ್ತು ಬ್ಯೂಟಿಫುಲ್ ಗಿಫ್ಟ್
- LATEST NEWS6 days ago
ನಿಲ್ಲಿಸಿದ್ದ ಕಂಟೈನರ್ ಗೆ ಎಕ್ಸ್ ಪ್ರೆಸ್ ಬಸ್ ಡಿಕ್ಕಿ..; ಚಾಲಕ ಸಹಿತ 20ಕ್ಕೂ ಅಧಿಕ ಮಂದಿಗೆ ಗಾಯ
Pingback: ಛತ್ತೀಸ್ ಗಢದಲ್ಲಿ 8 ನಕ್ಸಲರ ಎನ್*ಕೌಂಟರ್ - NAMMAKUDLA NEWS - ನಮ್ಮಕುಡ್ಲ ನ್ಯೂಸ್