Connect with us

LATEST NEWS

ಸಿಎಂಗೆ ಎಸ್ಕಾರ್ಟ್‌ ಬೇಕೆಂದು ನಡುಬೀದಿಯಲ್ಲಿ ಕುಟುಂಬವನ್ನು ಇಳಿಸಿ ಕಾರೊಯ್ದ ಪೊಲೀಸರು

Published

on

ಅಮರಾವತಿ: ಸಿಎಂಗೆ ಎಸ್ಕಾರ್ಟ್‌ ವಾಹನ ಬೇಕೆಂದು ತಿರುಪತಿಗೆ ಹೋಗುತ್ತಿದ್ದ ಪ್ರವಾಸಿಗರನ್ನು ದಾರಿ ಮಧ್ಯೆ ಬಿಟ್ಟು ಬಲವಂತವಾಗಿ ಕಾರು ಕೊಂಡೊಯ್ದ ಘಟನೆ ಆಂಧ್ರಪ್ರದೇಶದ ಓಂಗೋಲ್ ಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದಿದೆ.


ಶುಕ್ರವಾರ ಒಂಗೋಲ್‌ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​. ಜಗನ್​ ಮೋಹನ್ ರೆಡ್ಡಿ ಭೇಟಿ ನೀಡಲಿದ್ದಾರೆ. ಇದೇ ವೇಳೆ ಪಲ್ನಾಡು ಜಿಲ್ಲೆಯ ವಿನುಕೊಂಡದ ವೇಮುಲ ಶ್ರೀನಿವಾಸ್ ಮತ್ತು ಇಬ್ಬರು ಮಹಿಳೆಯರು,

ಇಬ್ಬರು ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ಇನ್ನೋವಾ ಕಾರಿನಲ್ಲಿ ತಿರುಪತಿಗೆ ಹೊರಟಿದ್ದರು. ಬುಧವಾರ ರಾತ್ರಿ ಒಂಗೋಲ್‌ನ ಸಮೀಪದ ಹೋಟೆಲ್‌ನಲ್ಲಿ ಊಟಕ್ಕೆಂದು ಇವರ ಕುಟುಂಬ ನಿಂತಿತ್ತು. ಆದರೆ, ಆಗ ಸ್ಥಳಕ್ಕೆ ಬಂದ ಕಾನ್‌ಸ್ಟೇಬಲ್​ ಒಬ್ಬ ಸಿಎಂ ಬರುತ್ತಿದ್ದಾರೆ, ಕಾರು ಬೇಕೆಂದು ಹೇಳಿದ್ದಾನೆ.

ಆಗ ನಾವು ತಿರುಪತಿಗೆ ತೀರ್ಥಯಾತ್ರೆಗೆಂದು ಬಂದಿದ್ದೇವೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ. ಆದರೂ, ಕಾನ್‌ಸ್ಟೇಬಲ್ ಕ್ಷಮಿಸಿ ಎಂದು ಹೇಳುತ್ತ, ಇಡೀ ಕುಟುಂಬವನ್ನು ರಸ್ತೆಯಲ್ಲೇ ನಿಲ್ಲಿಸಿ ಚಾಲಕನ ಸಮೇತವಾಗಿ ಇನ್ನೋವಾ ತೆಗೆದುಕೊಂಡು ಹೋಗಿದ್ದಾರಂತೆ.

ಇದರಿಂದ ಮಹಿಳೆಯರು ಮತ್ತು ಮಕ್ಕಳ ಸಮೇತವಾಗಿ ಇಡೀ ಕುಟುಂಬ ಬಸ್​ ನಿಲ್ದಾಣದಲ್ಲಿ ರಾತ್ರಿ ಕಳೆಯುವಂತೆ ಆಗಿದೆ.
ಈ ಘಟನೆ ಸುದ್ದಿಯಾಗುತ್ತಿದ್ದಂತೆ ಟಿಡಿಪಿ ಅಧ್ಯಕ್ಷ, ಮಾಜಿ ಸಿಎಂ ಎನ್.ಚಂದ್ರಬಾಬು ನಾಯ್ಡು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ದುಷ್ಕೃತ್ಯ ಎಂದು ಕರೆದಿರುವ ನಾಯ್ಡು,

ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಅರಾಜಕತೆ ನಡೆಯುತ್ತಿದೆ. ಇವರ ಆಡಳಿತ ರಾಜ್ಯದ ಜನರನ್ನು ಹೇಗೆ ಬಾಧಿಸುತ್ತಿದೆ ಎಂಬುದನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ.

ಅಧಿಕಾರಿಗಳಿಗೆ ಇಂತಹ ಹಕ್ಕು ನೀಡಿದ್ದು ಯಾರು?. ಸಿಎಂ ಬೆಂಗಾವಲು ಪಡೆಗೆ ತನ್ನ ಸ್ವಂತ ಕಾರಿನ ವ್ಯವಸ್ಥೆ ಮಾಡಲು ಸಾಧ್ಯವಾಗದಂತಹ ದಯನೀಯ ಸ್ಥಿತಿಗೆ ರಾಜ್ಯದ ಆರ್ಥಿಕತೆ ತಲುಪಿದೆಯೇ ಎಂದು ಜಗನ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಘಟನೆಯ ಬಗ್ಗೆ ಸ್ವತಃ ಸಿಎಂ ಜಗತ್​ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನ ಸಾಮಾನ್ಯರಿಗೆ ತೊಂದರೆ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಕ್ಷಣವೇ ಆ ಕುಟುಂಬ ಕಾರು ಮರಳಿ ತಲುಪಿಸುವಂತೆ ಸೂಚಿಸಿದ್ದು,

ಮುಂದೆ ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಘಟನೆ ಕಾರಣವಾದ ಹೋಂಗಾರ್ಡ್​​​ ತಿರುಪತಿ ರೆಡ್ಡಿ ಹಾಗೂ ಸಹಾಯಕ ವಾಹನ ಇನ್​​ಸ್ಪೆಕ್ಟರ್​ ಸಂಧ್ಯಾ ಎಂಬುವವರನ್ನು ಅಮಾನತು ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

LATEST NEWS

Trending