BANTWAL
ಬಂಟ್ವಾಳ: ಕೋವಿಡ್ ನಿಂದ ಲಕ್ಷಾಂತರ ಹಣ ಬಂದಿದೆ ಎಂದು ನಂಬಿಸಿ ವೃದ್ಧೆಯ ಬಂಗಾರ ದೋಚಿದ ಅನಾಮಿಕ!
ಬಂಟ್ವಾಳ: ಕೋವಿಡ್ ನಿಂದ ಲಕ್ಷಾಂತರ ಹಣ ಬಂದಿದೆ ಎಂದು ನಂಬಿಸಿ ವೃದ್ಧೆಯ ಬಂಗಾರ ದೋಚಿದ ಅನಾಮಿಕ!
ಬಂಟ್ವಾಳ:’ಕೋವಿಡ್ ನ ಪರಿಹಾರ ಹಣ ಬಂದಿದೆ’ ಎಂದು ವೃದ್ಧ ಮಹಿಳೆಗೆ ನಂಬಿಸಿ ಆಕೆಯ ಬಂಗಾರದ ಒಡವೆ ದೋಚಿದ ಘಟನೆ ಸೋಮವಾರ ಬೆಳಿಗ್ಗೆ ವರದಿಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ ರೋಡ್ ಮಿನಿ ವಿಧಾನಸೌಧದಲ್ಲಿ ಘಟನೆ ನಡೆದಿದೆ. ಅಪರಿಚಿತ ಅಮ್ಟಾಡಿ ನಿವಾಸಿ ಜಯಂತಿ ಎಂಬವರ ಕಿವಿಯಲ್ಲಿದ್ದ ಬೆಂಡೋಲೆಯನ್ನು ಮೋಸದಿಂದ ಎಗರಿಸಿ ಪರಾರಿಯಾಗಿದ್ದಾನೆ.
ಜಯಂತಿ ಅವರು ಇಂದು ಬೆಳಿಗ್ಗೆ ಬಿ.ಸಿ.ರೋಡಿನ ಮೆಸ್ಕಾಂ ಕಚೇರಿಗೆ ವಿದ್ಯುತ್ ಬಿಲ್ ಪಾವತಿ ಮಡಲು ಬಂದಿದ್ದರು. ಬಿಲ್ ಪಾವತಿ ಮಾಡಿ ವಾಪಸು ತೆರಳುವ ವೇಳೆ ಅನಾಮಿಕ ವ್ಯಕ್ತಿಯೋರ್ವ ಮಹಿಳೆಯಲ್ಲಿ ಪರಿಚಯ ಮಾಡಿಕೊಂಡು ತಾನು ಶೀನಪ್ಪ ಅವರ ಮಗ ಸಂತೋಷ ಎಂದು ನಂಬಿಸಿ ನಿಮಗೆ ಕೋವಿಡ್ ನಿಂದಾಗಿ ಒಂದೂವರೆ ಲಕ್ಷ ಹಣ ಪರಿಹಾರವಾಗಿ ಬಂದಿದೆ. ಅದನ್ನು ಪಡೆಯಲು ಕನಿಷ್ಟ ಹತ್ತು ಸಾವಿರ ಹಣ ಕಟ್ಟಬೇಕಾಗುತ್ತದೆ. ನೀವು ಆಧಾರ್ ಕಾರ್ಡ್ ತಂದಿದ್ದೀರಾ ಎಂದು ಪ್ರಶ್ನಿಸಿದ್ದಾನೆ.
ಮಹಿಳೆ ಆಧಾರ್ ಕಾರ್ಡ್ ತಂದಿಲ್ಲ ಎಂದಾಗ ನೀವು ಮಿನಿ ವಿಧಾನಸೌಧಕ್ಕೆ ಬನ್ನಿ, ಅಲ್ಲಿ ಅರ್ಜಿ ನೀಡಬೇಕು ಎಂದು ಅವರನ್ನು ಕರೆದುಕೊಂಡು ಹೋಗಿದ್ದಾನೆ. ಬಳಿಕ ಹತ್ತು ಸಾವಿರ ಕೇಳಿದಾಗ ನನ್ನ ಬಳಿ ಇಲ್ಲ ಮಗನ ಕೇಳಿ ಕೊಡುತ್ತೇನೆ ಎಂದು ಮಹಿಳೆ ಹೇಳಿದಾಗ, “ಮಗನಿಗೆ ನಾನು ಪೋನ್ ಮಾಡಿದ್ದೆ, ಅವನಲ್ಲಿ ಹಣ ಇಲ್ಲವಂತೆ, ನಿಮ್ಮಲ್ಲಿರುವ ಕಿವಿಯ ಬಂಗಾರವನ್ನು ಕೊಡುವಂತೆ ಹೇಳಿದ್ದಾನೆ”
ಆತನ ಮಾತುಗಳನ್ನು ನಂಬಿದ ಆಕೆ ಕೂಡಲೇ ಕಿವಿಯ ಬೆಂಡೋಲೆಯನ್ನು ತೆಗೆದು ಕೊಟ್ಟಿದ್ದಾರೆ. ಆದರೆ ಬಂಗಾರ ಪಡೆದ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.
ಅಪರಿಚಿತ ವ್ಯಕ್ತಿ ಬಂಗಾರ ಪಡೆದು ಹೋದ ಮೇಲೆ ಮಹಿಳೆ ಮಿನಿ ವಿಧಾನಸೌಧದ ಕಚೇರಿಯ ಮಹಿಳಾ ಸಿಬ್ಬಂದಿಯ ಮೂಲಕ ಮಗನಿಗೆ ಪೋನ್ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಮಗ ತಾಯಿಯನ್ನು ಮೋಸಗೊಳಿಸಿ ಬಂಗಾರ ಎಗರಿಸಿರುವ ಬಗ್ಗೆ ತಿಳಿದು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.
ಸಿಸಿ ಕ್ಯಾಮರಾ ಫೂಟೇಜ್ ಆಧರಿಸಿ ಪತ್ತೆ ಕಾರ್ಯ ಮುಂದುವರಿದಿದೆ…
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.