Connect with us

    DAKSHINA KANNADA

    ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು

    Published

    on

    ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬ*ಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.


    ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃ*ತ ದುರ್ದೈವಿ. ಯುವತಿ ಕಲ್ಲಡ್ಕದ ಮೆಡಿಕಲೊಂದರಲ್ಲಿ ಕೆಲಸ ಮಾಡುತ್ತಿದ್ದಳು.

    ಪ್ರತೀಕ್ಷಾ ಶೆಟ್ಟಿ ಮನೆಯ ಬಳಿ ಪಾರ್ಸೆಲ್ ಬಂದಿದೆ ಎಂದು ತೆಗೆದುಕೊಂಡು ಹೋಗಲು ಮನೆ ಸಮೀಪದ ರಸ್ತೆಗೆ ಬಂದಿದ್ದಾಳೆ. ರಸ್ತೆಯಲ್ಲಿ ವಿದ್ಯುತ್ ತಂತಿ ಮುರಿದು ಬಿದ್ದಿದ್ದು, ನೀರಿಗೆ ವಿದ್ಯುತ್‌ ಪ್ರವಹಿಸಿದೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಯುವತಿ ಮೃ*ತಪಟ್ಟಿದ್ದಾಳೆ.

    ಇದನ್ನೂ ಓದಿ : ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂ*ತ ಅಂ*ತ್ಯ

    ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಯುವತಿಯ ಮೃ*ತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

    DAKSHINA KANNADA

    ವೀರಪ್ಪ ಮೊಯ್ಲಿ ಪುತ್ರಿ ವಿಧಿವಶ..!

    Published

    on

    ಬೆಂಗಳೂರು : ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ.


    ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಹಲವಾರು ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ವೇದಿಕೆಯಲ್ಲಿ ತಮ್ಮ ನೃತ್ಯ ಪ್ರದರ್ಶನ ನೀಡಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು. ಇತ್ತೀಚೆಗೆ ಮಕ್ಕಳಿಗಾಗಿ ಹಿಂದಿ ನಾಟಕ, ಕ್ಯುನ್ ಕ್ಯುನ್ ಲಡ್ಕಿ, ಅದೇ ಹೆಸರಿನ ಮಹಾಶ್ವೇತಾ ದೇವಿಯವರ ಪುಸ್ತಕದಿಂದ ಸ್ಫೂರ್ತಿ ಪಡೆದಿದ್ದಾರೆ ಮತ್ತು ರವೀಂದ್ರನಾಥ ಟ್ಯಾಗೋರ್ ಅವರು ಮಕ್ಕಳಿಗಾಗಿ ಬರೆದ ಇಂಗ್ಲಿಷ್ ನಾಟಕಕ್ಕೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಮಾಜ ಸೇವೆಯಲ್ಲೂ ಮುಂಚೂಣಿಯಲ್ಲಿದ್ದ ಅವರು ಜನಾನುರಾಗಿ ಎಂದು ಹೆಸರು ಪಡೆದುಕೊಂಡಿದ್ದರು. 46 ವರ್ಷ ಪ್ರಾಯದ ಹಂಸ ಮೊಯ್ಲಿ ಅವರಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡು ನಿನ್ನೆ ಸಂಜೆ ತೀವೃ ಅಸ್ವಸ್ಥರಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

    Continue Reading

    DAKSHINA KANNADA

    3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ

    Published

    on

    ಇಲ್ಲೊಬ್ಬ ಮಹಿಳೆ ಮದುವೆಯ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಲೇ ಒಬ್ಬರನ್ನು ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳುವುದನ್ನು ನೋಡಿ ಬೇಸತ್ತಿದ್ದಾಳೆ. ಇದರಿಂದ ತಾನು ಮದುವೆ ವಿಚಾರದಲ್ಲಿ ಏನಾದರೂ ಭಿನ್ನವಾಗಿರುವುದನ್ನು ಮಾಡಬೇಕೆಂದು 3 ದಿನ ಮದುವೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಬರೋಬ್ಬರಿ 60 ಜನರನ್ನು ಮದುವೆ ಮಾಡಿಕೊಂಡಿದ್ದಾಳೆ.

    ಹೌದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದುವೆ ಛಾಯಾಗ್ರಾಹಕಿ ಆಗಿರುವ ಈ ಮಹಿಳೆ ಮದುವೆ ಸಮಾರಂಭಗಳಲ್ಲಿ ಎಲ್ಲರೂ ಒಟ್ಟಿಗೆ ಸೇರುವುದು, ಹಾಡು, ಕುಣಿತ, ಪಾರ್ಟಿ ಮಾಡುವುದನ್ನು ಕಂಡಿದ್ದಾಳೆ. ಇದರಿಂದ ತಾನು ಅದ್ಧೂರಿಯಾಗಿ ಮದುವೆ ಮಾಡಿಕೊಳ್ಳಬೇಕು ಎಂದು ಉದ್ದೇಶ ಹೊಂದಿದ್ದಳು. ಮುಂದುವರೆದು ಮದುವೆ ಆಗುವುದನ್ನು ಇನ್ನೂ ವಿಶೇಷವಾಗಿ ಆಚರಣೆ ಮಾಡಬೇಕು ಎಂದು ತನಗೆ ಗೊತ್ತಿರುವ ಎಲ್ಲ ಸ್ನೇಹಿತರಿಗೂ ಮದುವೆ ಆಮಂತ್ರಣ ಪತ್ರವನ್ನು ನೀಡಿದ್ದಾಳೆ.

    ಆದರೆ, ಮದುವೆ ಗಂಡು ಯಾರೆಂದು ಯಾರಿಗೂ ಹೇಳಿಲ್ಲ. ಆದರೆ, ತಾನು ಮದುವೆ ಮಾಡಿಕೊಳ್ಳುವವರಿಗೆ ಮಾತ್ರ ನಮ್ಮಿಬ್ಬರ ಮದುವೆಗೆ ಸಿದ್ಧವಾಗಿ ಬನ್ನಿ ಎಂದು ಹೇಳಿದ್ದಾಳೆ. ಹೀಗೆ, ಒಂದು ಮದುವೆ ಹೆಣ್ಣನ್ನು ಮದುವೆಯಾಗಲು ಬರೋಬ್ಬರಿ 60 ಜನರು ವೇದಿಕೆಯ ಬಳಿ ಬಂದಿದ್ದಾರೆ. ಆದರೆ, ಯಾರನ್ನೂ ನಿರಾಕರಿಸದೇ ಮೂರು ದಿನಗಳಲ್ಲಿ ಎಲ್ಲರನ್ನೂ ಮದುವೆ ಆಗಿದ್ದಾಳೆ. ಈ ಮೂಲಕ ತಾನು ‘ಒಬ್ಬ ವ್ಯಕ್ತಿಯನ್ನು ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಲು ಇಷ್ಟವಿಲ್ಲ, ನನ್ನ ಇಡೀ ಜೀವನವನ್ನು ಒಬ್ಬ ವ್ಯಕ್ತಿಗೆ ಮೀಸಲಿಡಲು ಇಷ್ಟ ಪಡುವುದಿಲ್ಲ’ ಹೀಗಾಗಿ, 60 ಜನರನ್ನು ಮದುವೆ ಮಾಡಿಕೊಂಡಿದ್ದಾಳೆ. ಈಗ ಈಕೆಯ ಮದುವೆಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

    ಕೇವಲ ಮೂರು ದಿನದಲ್ಲಿ ಬರೋಬ್ಬರಿ 60 ಜನರನ್ನು ಮದುವೆಯಾದ ಮಹಿಳೆ ಆಸ್ಟ್ರೇಲಿಯಾದ ಕಾರ್ಲಿ ಸಾರೆ (40). ತನ್ನ ಮದುವೆಯ ಬಗ್ಗೆ ಮಾತನಾಡಿದ ಕಾರ್ಲಿ ಸಾರೆ ಅವರು, ‘ನನಗೆ ನನ್ನ ನಿರ್ಧಾರದ ಬಗ್ಗೆ ಹೆಮ್ಮೆಯಿದೆ. ನನ್ನ ಜೀವನದಲ್ಲಿ ಇವರೆಲ್ಲರೂ ಬಹಳ ಮುಖ್ಯ. ಆದ್ದರಿಂದ ನನಗೆ ಬೇಕು ಎನಿಸಿದ ಎಲ್ಲ ಆಪ್ತರನ್ನೂ ಒಟ್ಟಿಗೆ ಮದುವೆಯಾಗಿದ್ದೇನೆ’ ಎಂದು ಹೇಳಿಕೊಂಡಿದ್ದಾಳೆ.

    Continue Reading

    DAKSHINA KANNADA

    ಪರಿಯಾರಂನಲ್ಲಿ ಇಂಡಿಯಾನಾ ಆಸ್ಪತ್ರೆಯ ಮೊದಲ ಮಾಹಿತಿ ಕೇಂದ್ರ ಪ್ರಾರಂಭ

    Published

    on

    ಪರಿಯಾರಂ (ಕಣ್ಣೂರು) : ಗುಣಮಟ್ಟದ ವೈದ್ಯಕೀಯ ಸೇವೆಯ ಕ್ಷೇತ್ರದಲ್ಲಿ ಹದಿಮೂರು ವರ್ಷಗಳ ಸೇವೆಯೊಂದಿಗೆ ಮಂಗಳೂರಿನ ಅತ್ಯಂತ ಜನಪ್ರಿಯ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾದ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯು ತನ್ನ ಮೊದಲ ಮಾಹಿತಿ ಕೇಂದ್ರವನ್ನು ಪರಿಯಾರಂನಲ್ಲಿ ಪ್ರಾರಂಭಿಸಿದೆ.


    ಕಲ್ಯಾಸ್ಸೆರಿ ಕ್ಷೇತ್ರದ ಶಾಸಕ ವಿಜಿನ್ ಎಂ, ಶ್ರೀಗಳ ಉಪಸ್ಥಿತಿಯಲ್ಲಿ ಇಂಡಿಯಾನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿದರು.
    ಚುರುಜಾಮ್ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಉನ್ನಿಕೃಷ್ಣನ್ ಟಿ.ವಿ, ಸಾಮಾಜಿಕ ಕಾರ್ಯಕರ್ತ ನಜೀಮುದ್ದೀನ್, ಮಾಜಿ ಪಂಚಾಯತ್ ಕಾರ್ಯದರ್ಶಿ ಶಶಿಧರನ್, ರೋಟರಿ ಕ್ಲಬ್ ಪರಿಯಾರಂ ಆಡಳಿತ ಮಂಡಳಿ ಸದಸ್ಯ ಸುಗತನ್ ಪರಿಯಾರಂ, ನಿವೃತ್ತ ನೌಕಾಪಡೆ ಅಧಿಕಾರಿ ಸೂರಜ್ ಪಿಲಾತಾರ, ರೋಟರಿ ಕ್ಲಬ್ ಸದಸ್ಯ ಪ್ರಸನ್ನನ್ ಕೇದಾರಾಂ ಉಪಸ್ಥಿತರಿದ್ದರು.


    ಇಂಡಿಯಾನಾ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಶಾ ಕೋಟ್ಯಾನ್ ಗಣ್ಯರಿಗೆ ಉಡುಗೊರೆಗಳನ್ನು ನೀಡಿದರು.
    ಆಪರೇಷನ್ಸ್ ಜನರಲ್ ಮ್ಯಾನೇಜರ್ ನಿಖಿಲ್ ಥಾಮಸ್, ಮಾರ್ಕೆಟಿಂಗ್ ಉಪ ವ್ಯವಸ್ಥಾಪಕ ವೈಶಾಖ್ ಸುರೇಶ್, ಡ್ಯೂಟಿ ಮ್ಯಾನೇಜರ್ ಶಾಮಲ್ ಭಾಸ್ಕರ್, ಜಿತಿನ್ ಲೂಕೋಸ್, ರವೀಂದ್ರನ್ ಕೆ, ಸರಿನ್ ಮತ್ತು ಅಬ್ದುಲ್ ಹಕೀಮ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಇದನ್ನೂ ಓದಿ  : ಬ್ಯಾಂಕ್ ಎಸಿಯೊಳಗೆ ಹೆಬ್ಬಾವಿನ ಮರಿ ಪ್ರತ್ಯಕ್ಷ!


    ಇಂಡಿಯಾನಾ ಮಾಹಿತಿ ಕೇಂದ್ರವು ರೋಗಿಗಳಿಗೆ ಎಲ್ಲಾ ಚಿಕಿತ್ಸೆಗಳು ಮತ್ತು ಶಸ್ತ್ರಚಿಕಿತ್ಸೆಗಳ ಬಗ್ಗೆ ನಿಖರವಾದ ಮಾಹಿತಿ ಮತ್ತು ಮಾರ್ಗದರ್ಶನ, ಇಂಡಿಯಾನಾ ಆಸ್ಪತ್ರೆಗಳಲ್ಲಿ ಲಭ್ಯವಿರುವ ವಿಮಾ ರಕ್ಷಣೆಯ ಮಾಹಿತಿ, ಕಾಯಿದೆ OP ಸಮಾಲೋಚನೆ (ಫಾಸ್ಟ್ ಟ್ರ್ಯಾಕ್ ಬುಕಿಂಗ್ ಸೌಲಭ್ಯ), ಸೂಪರ್ ಸ್ಪೆಷಾಲಿಟಿ ವಿಭಾಗಗಳಲ್ಲಿನ ವೈದ್ಯಕೀಯ ಶಿಬಿರಗಳು ಮುಂತಾದ ಉಪಯುಕ್ತ ಸೇವೆಗಳನ್ನು ಒದಗಿಸುತ್ತದೆ.
    24X7 ಸಹಾಯವಾಣಿ ಸಂಖ್ಯೆ : 9019021910

    Continue Reading

    LATEST NEWS

    Trending