Connect with us

    DAKSHINA KANNADA

    ಇಂಡಿಯಾನ ಆಸ್ಪತ್ರೆಯಿಂದ ಸಾಧನೆಯ ಮತ್ತೊಂದು ಮೈಲಿಗಲ್ಲು : ಬೈಪಾಸ್ ಸರ್ಜರಿ ಇಲ್ಲದೇ ಹೃದಯ ಕವಾಟು ಬದಲಿಸಿದ ವೈದ್ಯರು..!

    Published

    on

    ಮಂಗಳೂರಿನ ಇಂಡಿಯಾನ ಹಾಸ್ಟಿಟಲ್ ಆ್ಯಂಡ್ ಹಾರ್ಟ್ ಇನ್ ಸ್ಟಿಟ್ಯೂಟ್ ಅಪರೂಪದ ಚಿಕಿತ್ಸೆಯ ಮೂಲಕ ಮತ್ತೂಂದು ಸಾಧನೆಯನ್ನು ಮೆರೆದಿದೆ.

    ಮಂಗಳೂರು : ಮಂಗಳೂರಿನ ಇಂಡಿಯಾನ ಹಾಸ್ಟಿಟಲ್ ಆ್ಯಂಡ್ ಹಾರ್ಟ್ ಇನ್ ಸ್ಟಿಟ್ಯೂಟ್ ಅಪರೂಪದ ಚಿಕಿತ್ಸೆಯ ಮೂಲಕ ಮತ್ತೂಂದು ಸಾಧನೆಯನ್ನು ಮೆರೆದಿದೆ.

     

    ಬೈಪಾಸ್ ಸರ್ಜರಿ ಇಲ್ಲದೆಯೇ ರೋಗಿಯೊಬ್ಬರ ಹೃದಯದ ಕವಾಟು ಬದಲಿಸುವ ಚಿಕಿತ್ಸೆಯನ್ನು ಯಶಸ್ವಿಯಾಗಿ ನೀಡಲಾಗಿದೆ. ಆಸ್ಪತ್ರೆಯ ಮುಖ್ಯಸ್ಥ ಡಾ.ಯೂಸುಫ್ ಎ. ಕುಂಬ್ಳೆ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

    ಜನವರಿ 8ರಂದು ಇಂಡಿಯಾನ ಆಸ್ಪತ್ರೆಗೆ ಹೃದಯ ಸಂಬಂಧಿ ಚಿಕಿತ್ಸೆಗಾಗಿ ದಾಖಲಾಗಿದ್ದ ದೂರದ ಕೀನ್ಯಾದ ರೋಗಿಯೊಬ್ಬರಿಗೆ ಬೈ ಪಾಸ್ ಸರ್ಜರಿ ಇಲ್ಲದೆಯೇ ಯಶಸ್ವಿಯಾಗಿ ಹೃದಯದ ಕವಾಟವನ್ನು ಬದಲಿಸಲಾಯಿತು.

    ಆಕೆಗೆ ಟ್ರಾನ್ಸ್‌ಕ್ಯಾಥೆಟರ್ ಎಂಬ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು, ಕನಿಷ್ಠ ಅಪಾಯದ ಕಾರ್ಯವಿಧಾನದ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಯಿತು.

    ಕೇವಲ ಒಂದು ಗಂಟೆಯ ಅವಧಿಯಲ್ಲಿ ಈ ಅತ್ಯಾಧುನಿಕ ಚಿಕಿತ್ಸೆಯನ್ನು ನಮ್ಮ ವೈದ್ಯರ ತಂಡ ಯಶಸ್ವಿಯಾಗಿ ಮಾಡಿ ಮುಗಿಸಿದೆ. ಇನ್ನೊಂದು ಹೊಸ ಸಾಧನೆ ಮಾಡಿದ ಶ್ರೇಯಸ್ಸಿಗೆ ಪಾತ್ರವಾಯಿತು.

    ಇಂಡಿಯಾನ ಆಸ್ಪತ್ರೆಯ ಎರಡನೇ ಸಾಧನೆ. ಈ ಅತ್ಯಾಧುನಿಕ ಚಿಕಿತ್ಸೆಯನ್ನು ಭಾರತದಲ್ಲೇ ಮೊದಲ ಬಾರಿ 2019ರಲ್ಲಿ ಇಂಡಿಯಾನ ಆಸ್ಪತ್ರೆಯಲ್ಲಿ ಮಾಡಲಾಗಿತ್ತು ಎಂಬುದೂ ಇಲ್ಲಿ ಉಲ್ಲೇಖನೀಯ ಎಂದರು.

    ವೈದ್ಯಕೀಯ ಭಾಷೆಯಲ್ಲಿ ಮೈಟ್ರಲ್ ವಾಲ್ವ್’ ಎಂದು ಕರೆಯಲಾಗುವ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೀನ್ಯಾದ 65 ವರ್ಷದ ಮಹಿಳಾ ರೋಗಿಯು ಈ ಮೊದಲು 2014ರಲ್ಲಿ ಅಹ್ಮದಾಬಾದ್ ನಲ್ಲಿ ಬೈಪಾಸ್ ಹಾರ್ಟ್ ಸರ್ಜರಿಗೆ ಒಳಗಾಗಿ, ಹೃದಯಕ್ಕೆ ಕೃತಕ ಕವಾಟನ್ನು ಅಳವಡಿಸಿಕೊಂಡಿದ್ದರು.

    8 ವರ್ಷಗಳ ಬಳಿಕ ಆಕೆಯ ಹೃದಯದ ಕೃತಕ ಕವಾಟು ಕಾರ್ಯನಿರ್ವಹಿಸುವಲ್ಲಿ ಸಮಸ್ಯೆ ಕಾಣಿಸಿಕೊಂಡಿತು.

    ಇದರಿಂದಾಗಿ ಆಕೆಗಿದ್ದ ಹೃದಯ ಸಂಬಂಧಿ ಕಾಯಿಲೆ ಮತ್ತಷ್ಟು ಉಲ್ಬಣಗೊಂಡು, ತೀವ್ರತರದ ಉಸಿರಾಟದ ಸಮಸ್ಯೆ, ಮತ್ತು ತೀವ್ರ ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಳ್ಳತೊಡಗಿತ್ತು.

    ಈ ಹಿನ್ನೆಲೆಯಲ್ಲಿ ರೋಗಿ ಈ ಮೊದಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅಹ್ಮದಾಬಾದ್‌ನ ಅದೇ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಅಲ್ಲಿನ ವೈದ್ಯರು ಪುನಃ ಓಪನ್ ಹಾರ್ಟ್ ಬೈಪಾಸ್ ಸರ್ಜರಿ (ತೆರೆದ ಹೃದಯ ಶಸ್ತ್ರಚಿಕಿತ್ಸೆ) ಮಾಡಬೇಕು.

    ಇದರ ಹೊರತು ಬೇರೆ ಯಾವುದೇ ದಾರಿ ಇಲ್ಲ ಎಂದಾಗ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯ ಮುಖ್ಯಸ್ಥ ಡಾ.ಯೂಸುಫ್ ಕುಂಬ್ಳೆಯನ್ನು ಸಂಪರ್ಕಿಸಿ, ರೋಗಿಯ ಗಂಭೀರ ಸ್ಥಿತಿಯ ಕುರಿತು ಮಾಹಿತಿ ನೀಡಿದೆವು.

    ಆಗ, ಡಾ.ಯೂಸುಫ್ ಕುಂಬ್ಳೆ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗದೆ, ಇಂಟರ್ ವೆನ್ಷನಲ್ ಟೆಕ್ನಿಕ್ ನ ಮೂಲಕ (ಹಳೆಯ ಕವಾಟನ್ನು ತೆಗೆಯದ ಬೇರೆ ಕವಾಟನ್ನು ಅಳವಡಿಸುವ ಮಧ್ಯಂತರ ಪರ್ಯಾಯ ಚಿಕಿತ್ಸೆ) ವಾಲ್ಟ್ ಅನ್ನು ಬದಲಾಯಿಸಬಹುದು ಎಂಬುದಾಗಿ ನಮಗೆ ಭರವಸೆ ನೀಡಿದ್ದರು ಮತ್ತು ಅದು ಇಂದು ಯಶಸ್ವಿಯೂ ಆಗಿದೆ ಎಂದು ಕೀನ್ಯಾದ ಮಹಿಳೆಯ ಪುತ್ರ ಮಾಹಿತಿ ನೀಡಿದರು.

    ಸುದ್ದಿಗೋಷ್ಠಿಯಲ್ಲಿ ಇಂಡಿಯಾನ ಆಸ್ಪತ್ರೆಯ ಡಾ.ಅಲಿ ಕುಂಬ್ಳೆ, ತಜ್ಞರಾದ ಡಾ.ಅಪೂರ್ವ ಜಯದೇವ್ ಮತ್ತು ಡಾ.ಸಂಧ್ಯಾರಾಣಿ ಉಪಸ್ಥಿತರಿದ್ದರು.

    DAKSHINA KANNADA

    ಭ್ರೂಣ ಲಿಂಗ ಕಾಯ್ದೆ ಉಲ್ಲಂಘಿಸಿದರೆ ಕಠಿಣ ಕ್ರಮ

    Published

    on

    ಮಂಗಳೂರು : ಆರೋಗ್ಯ ಇಲಾಖೆಯ ಜಿಲ್ಲಾ ಸಲಹಾ ಸಮಿತಿ ಮತ್ತು ಜಿಲ್ಲಾ ಮೇಲ್ವಿಚಾರಣಾ ಹಾಗೂ ತಪಾಸಣಾ ಸಮಿತಿಯ ಸಭೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷೆ ಡಾ. ಅಮೃತ ಭಂಡಾರಿಯ ಅಧ್ಯಕ್ಷತೆಯಲ್ಲಿ ನಡೆಯಿತು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸಂಸ್ಥೆಗಳಿಗೆ ಮೂರು ತಿಂಗಳಿಗೊಮ್ಮೆ ಭೇಟಿ ನೀಡಿ ಪರಿಶೀಲಿಸಬೇಕು. ಪಿಸಿ ಪಿಎನ್‌ಡಿಟಿ ಕಾಯ್ದೆ ಮತ್ತು ಕಾನೂನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

    ಇದನ್ನೂ ಓದಿ: ಕಳ್ಳತನ ನಡೆದ 7 ಗಂಟೆಯೊಳಗೆ ಆರೋಪಿ ದಂಪತಿ ಅಂದರ್ 

    ಸರಕಾರಿ/ಖಾಸಗಿ ಆಸ್ಪತ್ರೆಗೆ ಸ್ಕ್ಯಾನಿಂಗ್ ಮಾಡಿಸಲು ಬರುವ ಪ್ರತಿ ಗರ್ಭಿಣಿಯರು ಕಡ್ಡಾಯವಾಗಿ ತಾಯಿ ಕಾರ್ಡ್ ತರಲು ಮಾಹಿತಿ ನೀಡಬೇಕು. ಹೆಣ್ಣು ಭ್ರೂಣ ಮತ್ತು ಶಿಶು ಹತ್ಯೆ ತಡೆಯುವ ನಿಟ್ಟಿನಲ್ಲಿ ಜ.24ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಎಲ್ಲಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಪಿಂಕ್ ಲೈಟ್ ಹಾಕಿ ಆಚರಿಸಬೇಕು.

    ಪೂರ್ವಲಿಂಗ ಪತ್ತೆ ಮತ್ತು ಹತ್ಯೆಯನ್ನು ತಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಡಾ. ತಿಮ್ಮಯ್ಯ ಸೂಚಿಸಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ದೀಪಾ ಪ್ರಭು ಕಾರ್ಯಸೂಚಿಯನ್ನು ಸಭೆಯ ಗಮನಕ್ಕೆ ತಂದರು. ಜಿಲ್ಲಾ ಸಲಹಾ ಸಮಿತಿಯ ಸದಸ್ಯರು ಮತ್ತು ಜಿಲ್ಲಾ ಮೇಲ್ವಿಚಾರಣಾ ಮತ್ತು ತಪಾಸಣಾ ಸಮಿತಿಯ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಮಹಾಕುಂಭ ಮೇಳದಲ್ಲಿ ಭಾಗಿಯಾದ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್

    Published

    on

    ಮಂಗಳೂರು/ಪ್ರಯಾಗ್‌ರಾಜ್ : ಮಂಗಳೂರು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿದ್ದಾರೆ.

    144  ವರ್ಷಗಳ ನಂತ್ರ ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. 45 ದಿನಗಳ ಕಾಲ ನಡೆಯುವ ಮಹಾಕುಂಭ ಮೇಳ ಈಗಾಗಲೇ 9ನೇ ದಿನಕ್ಕೆ ಕಾಲಿಟ್ಟಿದೆ. ದೇಶ, ವಿದೇಶದಿಂದ ಭಕ್ತರು ಮಹಾಕುಂಭ ಮೇಳಕ್ಕೆ ಬಂದು ಪುಣ್ಯ ಸ್ನಾನ ಮಾಡ್ತಿದ್ದಾರೆ. ರಾಜಕರಣಿ, ಸೆಲೆಬ್ರಿಟಿಗಳಿಂದ ಹಿಡಿದು ಕೋಟಿ ಲೆಕ್ಕದಲ್ಲಿ ಜನರು ಪ್ರಯಾಗರಾಜ್ ಗೆ ಬರುತ್ತಿದ್ದಾರೆ.

     

    ಇದನ್ನೂ ಓದಿ : ಮಹಾಕುಂಭ ಮೇಳ : ಪುಣ್ಯಸ್ನಾನದಲ್ಲಿ ಭಾಗಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್

     

    ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ ಅವರ ಆಹ್ವಾನದ ಮೇರೆಗೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಅದ್ದೂರಿಯಾಗಿ ಆಯೋಜನೆಗೊಂಡಿರುವ ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಖಾದರ್ ಭಾಗವಹಿಸಿದ್ದಾರೆ. ಸಹಾಯಕ ಆಯುಕ್ತ ದಶರಥ ಕುಮಾರ್ ಅವರನ್ನು ಆತ್ಮೀಯವಾಗಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

    Continue Reading

    DAKSHINA KANNADA

    ಶ್ವೇತಾ ಜ್ಯುವೆಲರ್ಸ್‌ನ ಮಾಲಿಕ ಅಶೋಕ್ ಶೇಟ್‌ ನಿ*ಧನ

    Published

    on

    ಮಂಗಳೂರು : ಶ್ವೇತಾ ಜ್ಯುವೆಲರ್ಸ್‌ನ ಮಾಲಿಕರಾಗಿರುವ ಎಂ. ಅಶೋಕ್ ಶೇಟ್ ಇಂದು ಬೆಳಿಗ್ಗೆ (ಜ,22) ಸುಮಾರು 10 ಗಂಟೆಗೆ ಸ್ವ ಗೃಹದಲ್ಲಿ ನಿ*ಧನರಾಗಿದ್ದಾರೆ.

    ಪಡೀಲ್ ಕಂಕನಾಡಿ ಲಯನ್ಸ್ ಕ್ಲಬ್‌ನ ಕ್ರಿಯಾಶೀಲ ವ್ಯಕ್ತಿ, ಸದಾ ಮುಖದಲ್ಲಿ ಮುಗುಳ್ನಗು ಹೊಂದಿದ್ದ ಮಂಗಳೂರಿನ ವಿ.ಟಿ. ರೋಡ್ ನಿವಾಸಿ 64 ವರ್ಷದ ಅಶೋಕ್ ಶೇಟ್ ಹೃ*ದಯಾಘಾತದಿಂದ ಮೃತಪಟ್ಟಿದ್ದಾರೆ.

     

    ಇದನ್ನೂ ಓದಿ : ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಬಿಗ್ ಬಾಸ್ ಸ್ಪರ್ಧಿ ಕೀರ್ತಿ ಮತ್ತು ಜೈತ್ರಾ ಕುಂದಾಪುರ: ಆಶೀಶ್‌ ಮೈಕಾಲ

     

    ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದ ಅಶೋಕ್ ಶೇಟ್ ಈ ಹಿಂದೆ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಅವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿ ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ.

    ಮೃ*ತರು ಪತ್ನಿ ಸಂಧ್ಯಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ

    Continue Reading

    LATEST NEWS

    Trending