Connect with us

DAKSHINA KANNADA

ಐಕಳ ಕಂಬಳದಲ್ಲಿ ಮತ್ತೊಂದು ವಿಕ್ರಮ : ಶ್ರೀನಿವಾಸ ಗೌಡ ದಾಖಲೆ ಪುಡಿಗಟ್ಟಿದ ವಿಶ್ವನಾಥ್..!‌

Published

on

ಐಕಳ ಕಂಬಳದಲ್ಲಿ ಮತ್ತೊಂದು ವಿಕ್ರಮ : ಶ್ರೀನಿವಾಸ ಗೌಡ ದಾಖಲೆ ಪುಡಿಗಟ್ಟಿದ ವಿಶ್ವನಾಥ್..!‌

ಮಂಗಳೂರು : ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆ ಕಂಬಳದಲ್ಲಿ ಮತ್ತೊಂದು ದಾಖಲೆ ನಿರ್ಮಾಣವಾಗಿದೆ.

ಐಕಳದಲ್ಲಿ ನಡೆದ ಕಾಂತಾಂಬಾರೆ-ಬೂದಾಬಾರೆ ಕಂಬಳಲ್ಲಿ ಬೈಂದೂರು ವಿಶ್ವನಾಥ್‌ ಎಂಬವರು ಓಡಿಸಿದ ಕೋಣಗಳು 100 ಮೀಟರ್‌ ದೂರವನ್ನು ಕೇವಲ 9.15 ಸೆಕೆಂಡ್‌ನಲ್ಲಿ ತಲುಪುವ ಮೂಲಕ ಹೊಸ ದಾಖಲೆ ಸೃಷ್ಠಿಯಾಗಿದೆ.

ಈ ದಾಖಲೆ ಮೂಲಕ ಕಂಬಳ ಕೆರೆಯ ಹುಸೇನ್‌ ಬೋಲ್ಟ್‌ ಎಂದೇ ಖ್ಯಾತಿ ಪಡೆದಿದ್ದ ಶ್ರೀನಿವಾಸ್‌ ಗೌಡ ಅವರು ಈ ಹಿಂದೆ ಮಾಡಿದ್ದ ದಾಖಲೆ ನುಚ್ಚುನೂರಾಗಿದೆ.

ಆ ಮೂಲಕ ಐಕಳದ ಕಾಂತಾಂಬಾರೆ-ಬೂದಾಬಾರೆ ಕಂಬಳದಲ್ಲಿ ಸತತ ಎರಡನೇ ವರ್ಷ ಮತ್ತೊಂದು ದಾಖಲೆ ನಿರ್ಮಾಣವಾಗಿದೆ.

ಈ ಹಿಂದೆ ಅಕ್ಕೇರಿ ಸುರೇಶ್‌ ಶೆಟ್ಟಿ 100 ಮೀಟರ್‌ ದೂರವನ್ನು 9.37 ಸೆಕೆಂಡ್‌, ಶ್ರೀನಿವಾಸ ಗೌಡ 9.55 ಸೆಕೆಂಡ್‌, ಆನಂದ್‌ 9.57 ಸೆಕೆಂಡ್‌ಗಳಲ್ಲಿ ಕ್ರಮಿಸುವ ಮೂಲಕ ದಾಖಲೆ ಮಾಡಿದ್ದರು.

ಈಗ ಆ ಎಲ್ಲಾ ದಾಖಲೆಗಳನ್ನು ವಿಶ್ವನಾಥ್ ಅವರು ಪುಡಿ ಮಾಡಿದ್ದಾರೆ. ಶ್ರೀನಿವಾಸಗೌಡ ಅವರು ಕಳೆದ ವರ್ಷ ನೇಗಿಲ ಹಿರಿಯ ವಿಭಾಗದಲ್ಲಿ ಓಡಿಸಿದ ಕೋಣಗಳು 100 ಮೀಟರ್ ಓಟವನ್ನು 9.55 ಸೆಕೆಂಡ್ ಳಲ್ಲಿ ಕ್ರಮಿಸಿ ದಾಖಲೆ ಬರೆದಿದ್ದು, ರಾಜ್ಯ ಹಾಗೂ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.

ಬೋಳದಗುತ್ತು ಸತೀಶ್‌ ಶೆಟ್ಟಿ ಅವರ ಬೊಳ್ಳ ಮತ್ತು ದೋನಿ ಕೋಣಗಳನ್ನು ವಿಶ್ವನಾಥ್‌ ಓಡಿಸಿದ್ದು, 125 ಮೀಟರ್‌ ಓಟವನ್ನು 11.44 ಸೆಕೆಂಡ್‌ಗಳಲ್ಲಿ ಓಡಿಸಿದ್ದಾರೆ.

ಇದನ್ನು 100 ಮೀಟರ್‌ಗೆ ತಾಳೆ ಮಾಡಿದರೆ 9.15 ಸೆಕೆಂಡ್‌ ಆಗುತ್ತದೆ. ಅಂದಹಾಗೆ ಬೋಲ್ಟ್‌ 100 ಮೀಟರ್ ದೂರ ಕ್ರಮಿಸಲು ತೆಗೆದುಕೊಂಡಿದ್ದು 9.58 ಸೆಕೆಂಡ್‌. ಇದಕ್ಕಿಂತಲೂ ವೇಗವಾಗಿ ಬೈಂದೂರು ವಿಶ್ವನಾಥ್‌ ಓಡಿ ದಾಖಲೆ ಬರೆದಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending