Connect with us

    LATEST NEWS

    18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ನೇಮಕ..! INDIA ನಲ್ಲಿ ಅಸಮಾಧಾನ..!

    Published

    on

    ಮಂಗಳೂರು / ನವದೆಹಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಆರಂಭಗೊಂಡಿದ್ದು, ಪ್ರೋಟೆಮ್ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರನ್ನು ಆಯ್ಕೆ ಮಾಡಲಾಗಿದೆ. 2 ದಿನಗಳ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಅವರು ಕಾರ್ಯನಿರ್ವಹಿಸಲಿದ್ದು, ಮೂರನೇ ದಿನ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ.


    ಹಂಗಾಮಿ ಸ್ಪೀಕರ್ ಆಗಿ 8 ಬಾರಿ ಸಂಸದರಾಗಿ ಆಯ್ಕೆಯಾಗಿರುವ ಕೇರಳದ ಮಾವಿಲಕೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಕೆ .ಸುರೇಶ್ ಅವರಿಗೆ ನೀಡಬೇಕಾಗಿತ್ತು. ಆದ್ರೆ, ಭರ್ತೃಹರಿ ಮಹತಾಬ್ ಅವರಿಗೆ ಈ ಅವಕಾಶ ನೀಡಲಾಗಿದೆ. ಈ ಬಗ್ಗೆ ಇಂಡಿ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದ್ದು, ಕೆ. ಸುರೇಶ್ ಸೇರಿದಂತೆ ಒಕ್ಕೂಟದ ಮೂವರನ್ನು ಪ್ಯಾನೆಲ್ ಮೆಂಬರ್ ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಿದೆ. ಹೀಗಾಗಿ ಕೆ. ಸುರೇಶ್ ಹಾಗೂ ಇತರ ಮೂವರು ಹಿರಿಯ ಸಂಸದರು ಹಂಗಾಮಿ ಸ್ಪೀಕರ್ ಅವರಿಗೆ ಸಹಕರಿಸದೆ ಪ್ರಮಾಣವಚನದಿಂದ ದೂರು ಉಳಿದಿದ್ದಾರೆ.

    ಹದಿನೆಂಟನೇ ಲೋಕಸಭೆಯ ಸ್ಪೀಕರ್ ಆಗಿ ಮತ್ತೆ ಓಂ ಬಿರ್ಲಾ ಅವರು ನೇಮಕವಾಗುವ ಸಾಧ್ಯತೆ ಇದೆ. ಇದೇ ವೇಳೆ ಡೆಪ್ಯುಟಿ ಸ್ಪೀಕರ್ ಸ್ಥಾನ ಲೋಕಸಭೆಯ ಸಂಪ್ರದಾಯದಂತೆ ವಿರೋಧ ಪಕ್ಷಕ್ಕೆ ನೀಡುವುದು ವಾಡಿಕೆ. ಹೀಗಾದಲ್ಲಿ ಡೆಪ್ಯುಟಿ ಸ್ಪೀಕರ್ ಆಗಿ ಕಾಂಗ್ರೆಸ್ ಸಂಸದ ಕೆ.ಸುರೇಶ್ ಅವರಿಗೆ ಡೆಪ್ಯುಟಿ ಸ್ಪೀಕರ್ ಸಿಗುವ ಸಂಭವ ನಿಚ್ಚಳವಾಗಿದೆ.

    ಇದನ್ನೂ ಓದಿ : WATCH : ಅಬ್ಬಬ್ಬಾ…! ಚಲಿಸುತ್ತಿರುವ ಬಸ್ಸಿನ ಕೆಳಗೆ ಮಲಗಿ ಯುವಕನ ರೀಲ್ಸ್; ಅಸಲಿ ಕಥೆ ಏನು?

    ಆದ್ರೆ, ಎನ್‌ಡಿಎ ಅಂಗ ಪಕ್ಷ ಟಿಡಿಪಿ ಸ್ಪೀಕರ್ ಹುದ್ದೆಗೆ ಪಟ್ಟು ಹಿಡಿದಿದ್ದು, ಅದಕ್ಕೆ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ನೀಡುವ ಬಗ್ಗೆ ಬಿಜೆಪಿ ನಾಯಕರು ಚಿಂತಿಸಿದ್ದಾರೆ. ಹೀಗಾಗಿ ಈ ಬಾರಿ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನೂ ವಿರೋಧ ಪಕ್ಷಕ್ಕೆ ಬಿಟ್ಟು ಕೊಡದೆ, ಮತದಾನದ ಮೂಲಕ ಡೆಪ್ಯುಟಿ ಸ್ಪೀಕರ್ ಆಯ್ಕೆ ನಡೆಯುವ ಸಾಧ್ಯತೆ ಕೂಡಾ ಇದೆ.

    LATEST NEWS

    WATCH : ಟ್ರಾಫಿಕ್ ಜಾಮ್ ನಿಂದ ಬೇಸತ್ತು ‘ಬಾಹುಬಲಿ’ಯಾದ ಬೈಕ್ ಸವಾರ; ವೀಡಿಯೋ ವೈರಲ್

    Published

    on

    ಮಂಗಳೂರು : ಸದ್ಯ ದೊಡ್ಡ ದೊಡ್ಡ ನಗರಗಳು ಎದುರಿಸುತ್ತಿರೋ ಸಮಸ್ಯೆ ಎಂದರೆ ಟ್ರಾಫಿಕ್ ಜಾಮ್. ವಾಹನ ದಟ್ಟಣೆಗಳ ಕಿರಿ ಕಿರಿ ಹೇಳತೀರದು. ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಿಂದ ಜನರು ಬೇಸತ್ತು ಹೋಗೋದು ನಗರಗಳ ದಿನನಿತ್ಯದ ಸಮಸ್ಯೆ.
    ಇದೀಗ ಇಂತಹುದೇ ಟ್ರಾಫಿಕ್ ಜಾಮ್ ನಿಂದ ವ್ಯಕ್ತಿಯೊಬ್ಬರು ತೀವ್ರ ಅಸಮಾಧಾನಗೊಂಡಿದ್ದಾರೆ. ಈ ವೇಳೆ ಅವರು ಹೆಗಲ ಮೇಲೆ ಬೈಕ್ ಹೊತ್ತು ಸಾಗಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ.


    ವೈರಲ್ ಆಗಿರುವ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ವಾಹನ ದಟ್ಟಣೆಯಿಂದ ಹೈರಾಣಾಗಿದ್ದಾನೆ. ಕೊನೆಗೊಂದು ಉಪಾಯವನ್ನೂ ಹೂಡಿದ್ದಾನೆ. ಹೌದು, ಆತ ತನ್ನ ಹೆಗಲ ಮೇಲೆ ಬೈಕ್ ಅನ್ನು ಹೊತ್ತೊಯ್ದಿದ್ದಾನೆ. ಈ ದೃಶ್ಯ ನೋಡಿದ ಮಂದಿ ಬಿಟ್ಟ ಕಂಗಳಲ್ಲೇ ಆತನನ್ನು ನೋಡಿದ್ದಾರೆ. ಈ ದೃಶ್ಯ ‘ಬಾಹುಬಲಿ’ ಸಿನಿಮಾ ನೆನಪಿಸಿದ್ದು ಸುಳ್ಳಲ್ಲ. ಇದನ್ನು ವ್ಯಕ್ತಿಯೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸದ್ಯ ವೀಡಿಯೋ ವೈರಲ್ ಆಗಿದೆ.

    @basit_ki_memes ಎಂಬ ಹೆಸರಿನ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಜೂನ್​​ 18ರಂದು ಹಂಚಿಕೊಂಡಿರುವ ಈ ವಿಡಿಯೋ ಮಿಲಿಯನ್ ಗಟ್ಟಲೆ ವೀವ್ಸ್ ಪಡೆದುಕೊಂಡಿದೆ. ನೆಟ್ಟಿಗರು ವ್ಯಕ್ತಿಯ ನಡೆಗೆ ಹುಬ್ಬೇರಿಸಿದ್ದಾರೆ.

    Continue Reading

    LATEST NEWS

    ದೆಹಲಿ ವಿಮಾನ ನಿಲ್ದಾಣದಲ್ಲಿ ದುರಂ*ತ : ಟರ್ಮಿನಲ್ 1 ರ ಮೇಲ್ಛಾವಣಿ ಕುಸಿದು ಓರ್ವ ಸಾ*ವು; ಹಲವರಿಗೆ ಗಾ*ಯ

    Published

    on

    ದೆಹಲಿ : ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದೆ. ಶುಕ್ರವಾರ(ಜೂ.28) ಬೆಳಿಗ್ಗೆ ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದೆ. ಪರಿಣಾಮ ಒಬ್ಬ ವ್ಯಕ್ತಿ ಸಾ*ವನ್ನಪ್ಪಿದ್ದಾರೆ. ಹಾಗೂ ಆರು ಮಂದಿ ಗಾ*ಯಗೊಂಡಿದ್ದಾರೆ .


    ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಟರ್ಮಿನಲ್ 1 ರಲ್ಲಿ ದುರ್ಘಟನೆ ನಡೆದಿದ್ದು, ಸುರಕ್ಷತಾ ಕ್ರಮಗಳಾಗಿ ಟರ್ಮಿನಲ್‌ನಿಂದ ಎಲ್ಲಾ ಚೆಕ್-ಇನ್‌ ಮತ್ತು ನಿರ್ಗಮನಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ(DIAL) ತಿಳಿಸಿದೆ.

    ಟರ್ಮಿನಲ್ 1 ರಿಂದ ಕಾರ್ಯನಿರ್ವಹಿಸುವ ಎರಡು ವಿಮಾನಯಾನ ಸಂಸ್ಥೆಗಳಾದ ಇಂಡಿಗೋ ಮತ್ತು ಸ್ಪೈಸ್‌ಜೆಟ್‌ಗಳ ವಿಮಾನ ಕಾರ್ಯಾಚರಣೆಗಳನ್ನು ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ ಈಗಾಗಲೇ ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಸ್ಥಳಕ್ಕೆ ಧಾವಿಸಿದ್ದು, ಇನ್ನು ಮಳೆಯಿಂದ ಕ್ಯಾಬ್‌ಗಳು ಸೇರಿದಂತೆ ಹಲವು ವಾಹನಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.
    ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ಮೇಲ್ಛಾವಣಿಯ ಶೀಟ್ ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


    ಗಾಯಗೊಂಡವರಿಗೆ ಎಲ್ಲಾ ತುರ್ತು ನೆರವು ಮತ್ತು ವೈದ್ಯಕೀಯ ನೆರವು ನೀಡಲಾಗುತ್ತಿದೆ. ಇಂದು ಮುಂಜಾನೆ ಭಾರೀ ಮಳೆಯಿಂದಾಗಿ, ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಹಳೆಯ ನಿರ್ಗಮನದ ಮುಂಭಾಗದಲ್ಲಿ ಮೇಲಾವರಣದ ಒಂದು ಭಾಗವು ಕುಸಿದಿದೆ. ತುರ್ತು ಸಿಬ್ಬಂದಿ ಅವರಿಗೆ ಅಗತ್ಯವಿರುವ ಎಲ್ಲಾ ನೆರವು ಮತ್ತು ವೈದ್ಯಕೀಯ ನೆರವು ನೀಡಲು ಕೆಲಸ ಮಾಡುತ್ತಿದ್ದಾರೆ.

    ಇದನ್ನೂ ಓದಿ : ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು

    ಈ ಘಟನೆಯ ಪರಿಣಾಮವಾಗಿ, ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಮತ್ತು ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ ಅನಾನುಕೂಲತೆಗಾಗಿ ನಾವು ಪ್ರಯಾಣಿಕರಲ್ಲಿ ಕ್ಷಮೆಯಾಚಿಸುತ್ತೇವೆ ಎಂದು ದೆಹಲಿ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (DIAL) ವಕ್ತಾರರು ತಿಳಿಸಿದ್ದಾರೆ.

    Continue Reading

    FILM

    ದರ್ಶನ್ ಬೆಂಬಲಕ್ಕೆ ನಿಂತ ಪರಭಾಷಾ ನಟ; ಏನಂದ್ರು ನಾಗಶೌರ್ಯ?

    Published

    on

    ಮಂಗಳೂರು/ ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣ ಆರೋಪ ಎದುರಿಸುತ್ತಿರೋ ದರ್ಶನ್ ಜೈಲು ಪಾಲಾಗಿದ್ದಾರೆ. ಇತ್ತ ಅನೇಕ ನಟ – ನಟಿಯರು ದರ್ಶನ್ ಪರವಾಗಿ ಮಾತನಾಡುತ್ತಿದ್ದಾರೆ. ದರ್ಶನ್ ಕೊ*ಲೆ ಮಾಡುವಂತವರಲ್ಲ ಎಂಬುದಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

    ಇತ್ತೀಚೆಗಷ್ಟೇ ನಟಿ ಭಾವನಾ ರಾಮಣ್ಣ, ಅದೇನೇ ಆಗ್ಲಿ, ಐ ಸ್ಟ್ಯಾಂಡ್ ವಿತ್ ದರ್ಶನ್. ಸಂತೋಷದಲ್ಲಿ ಜೊತೆಗಿದ್ದು ದುಖದಲ್ಲಿ ಇಲ್ಲ ಅನ್ನೋ ರೀತಿ ಅಲ್ಲ. ದರ್ಶನ್ ಅವರು ಹೀರೋ ಆಗೋಕ್ಕಿಂತ ಮುಂಚೆನೆ ನನಗೆ ಗೊತ್ತು. ಅವರು ನನಗೆ ಗೊತ್ತಿರೋರು…ಸಾಕಷ್ಟು ವರ್ಷದಿಂದ ಜೊತೇಲಿ ಇರೋರು ನಾವು ಎಂದಿದ್ದಾರೆ.


    ಈಗ ಪರಭಾಷಾ ನಟ ನಾಗ ಶೌರ್ಯ ದರ್ಶನ್ ಪರವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ದರ್ಶನ್ ಅಣ್ಣ ತಮ್ಮ ಕೆಟ್ಟ ದುಃಸ್ವಪ್ನದಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ ಎಂದಿದ್ದಾರೆ.

    ಏನಂದ್ರು ನಾಗ ಶೌರ್ಯ ?

    ನನ್ನ ಹೃದಯವು ಮೃ*ತರ ಕುಟುಂಬಕ್ಕೆ ಮರುಗುತ್ತದೆ ಮತ್ತು ಈ ಕಷ್ಟದ ಸಮಯದಲ್ಲಿ ಅವರಿಗೆ ಶಕ್ತಿಯನ್ನು ನೀಡಬೇಕೆಂದು ನಾನು ಪ್ರಾಮಾಣಿಕವಾಗಿ ಬಯಸುತ್ತೇನೆ.

    ಆದಾಗ್ಯೂ, ಜನರು ಈ ವಿಷಯದ ಬಗ್ಗೆ ತೀರ್ಮಾನಗಳಿಗೆ ಬರುತ್ತಿರುವುದನ್ನು ನೋಡುವುದು ನಂಬಲಾಗದಷ್ಟು ನಿರಾಶಾದಾಯಕವಾಗಿದೆ. ದರ್ಶನ್ ಅಣ್ಣ ತಮ್ಮ ಕೆಟ್ಟ ದುಃಸ್ವಪ್ನದಲ್ಲೂ ಯಾರಿಗೂ ತೊಂದರೆ ಕೊಡುವವರಲ್ಲ. ದರ್ಶನ್ ಅವರನ್ನು ಚೆನ್ನಾಗಿ ಬಲ್ಲವರಿಗೆ ಅವರ ಉದಾರತೆ, ಸಹೃದಯ ಸ್ವಭಾವ ಮತ್ತು ಇತರರಿಗೆ ಸಹಾಯ ಮಾಡುವ ಗುಣ ತಿಳಿದಿದೆ. ಅವರು ಯಾವಾಗಲೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಮುಂದಾಗುತ್ತಾರೆ ಮತ್ತು ಅನೇಕರಿಗೆ ಶಕ್ತಿಯ ಆಧಾರಸ್ತಂಭವಾಗಿದ್ದಾರೆ.
    ನನ್ನ ಕರಾಳ ಭಯದಲ್ಲಿಯೂ ನಾನು ಈ ಸುದ್ದಿಯನ್ನು ಒಪ್ಪಿಕೊಳ್ಳಲಾರೆ. ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ನನಗೆ ನಂಬಿಕೆಯಿದೆ ಮತ್ತು ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ ಎಂದು ನಂಬುತ್ತೇನೆ.

    ಇದನ್ನೂ ಓದಿ : ಜೈಲಿನಿಂದಲೇ ದರ್ಶನ್‌ನಿಂದ ಅಭಿಮಾನಿಗಳಿಗೆ ವಿಶೇಷ ಮನವಿ

    ಇನ್ನೊಂದು ಕುಟುಂಬವು ಸಹ ಬಹಳವಾಗಿ ನರಳುತ್ತಿದೆ ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಈ ಸವಾಲಿನ ಅವಧಿಯಲ್ಲಿ ಅವರು ಗೌಪ್ಯತೆ ಮತ್ತು ಗೌರವಕ್ಕೆ ಅರ್ಹರಾಗಿದ್ದಾರೆ. ತನ್ನ ಸಮಗ್ರತೆ ಮತ್ತು ಸಹಾನುಭೂತಿಗೆ ಹೆಸರುವಾಸಿಯಾದ ಅಣ್ಣ ನಿರಾಪರಾಧಿ ಎಂದು ಸಾಬೀತಾಗುತ್ತಾರೆ. ನಿಜವಾದ ಅಪರಾಧಿಯನ್ನು ನ್ಯಾಯಾಂಗಕ್ಕೆ ತರಲಾಗುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ ಎಂದು ನಾಗಶೌರ್ಯ ಬರೆದುಕೊಂಡಿದ್ದಾರೆ.

    #standbydarshan #justiceforall ಎಂದು ಹ್ಯಾಶ್ ಟ್ಯಾಗ್ ನ್ನೂ ನಟ ಬಳಸಿದ್ದಾರೆ.

    ಪರಪ್ಪನ ಅಗ್ರಹಾರದಲ್ಲಿದ್ದಾರೆ ದರ್ಶನ್:

    ರೇಣುಕಾಸ್ವಾಮಿ ಕೊ*ಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಪ್ರಕರಣದ ಆರೋಪ ಹೊತ್ತಿರುವ ನಟ ದರ್ಶನ್ ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

    Continue Reading

    LATEST NEWS

    Trending