FILM
ಸ್ವಂತ ಜಮೀನಿನಲ್ಲಿ ಅಭಿಮಾನಿ ಕಟ್ಟಿಸಿದ ʻಅಪ್ಪುʼ ದೇವಸ್ಥಾನ ಲೋಕಾರ್ಪಣೆ ಮಾಡಿದ ಅಶ್ವಿನಿ ಪುನೀತ್ರಾಜ್ ಕುಮಾರ್
ಹಾವೇರಿ: ಜಿಲ್ಲೆಯ ಯಲಗಚ್ಚ ಗ್ರಾಮದಲ್ಲಿ ಸ್ಯಾಂಡಲ್ವುಡ್ನ ಸ್ಟಾರ್ ನಟ ಪುನೀತ್ರಾಜ್ ಕುಮಾರ್ ಹೆಸರಿನಲ್ಲಿ ನಿರ್ಮಾಣವಾಗಿರುವ ದೇವಸ್ಥಾನವನ್ನು ಅವರ ಧರ್ಮಪತ್ನಿ ಅಶ್ವಿನಿ ಪುನೀತ್ರಾಜ್ ಕುಮಾರ್ ಉದ್ಘಾಟಸಿದರು.
ಯಲಗಚ್ಚ ಗ್ರಾಮದ ಉಡಚ್ಚಮ್ಮ ದೇವಿಯ ದರ್ಶನ ಪಡೆದ ಅಶ್ವಿನಿಯವರನ್ನು ಗ್ರಾಮದ ಪ್ರಮುಖ ರಸ್ತೆಯಲ್ಲಿ ಕುಂಬಮೇಳದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜಕುಮಾರ್ 6 ಅಡಿ ಎತ್ತರದ ಅಪ್ಪು ಮೂರ್ತಿಯನ್ನು ಲೋಕಾರ್ಪಣೆ ಮಾಡಿದರು.
ಪುನೀತ್ ಅವರ ಅಪ್ಪಟ ಅಭಿಮಾನಿ ಯಲಗಚ್ಚ ಗ್ರಾಮದ ಪ್ರಕಾಶ ಮೊರಬದ ತಮ್ಮ ಮನೆಯ ಸ್ವಂತ ಜಾಗದಲ್ಲಿ ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ್ ಅವರ ದೇವಸ್ಥಾನ ನಿರ್ಮಿಸಿದ್ದಾರೆ. ದೇವಸ್ಥಾನದಲ್ಲಿ ಪುನೀತ್ ರಾಜಕುಮಾರ್ ಮೂರ್ತಿ ಅನಾವರಣ ಮಾಡಿದ ಅಶ್ವಿನಿ, ಪ್ರಕಾಶ ಅವರ ಪುತ್ರಿಗೆ ಅಪೇಕ್ಷಾ ಎಂದು ನಾಮಕರಣ ಮಾಡಿದರು. ಅಪ್ಪು ಮೂರ್ತಿಯನ್ನು ನೋಡಿದ ಅಶ್ವಿನಿ ಭಾವುಕರಾದರು.
ಅಭಿಮಾನಿ ಮನೆಯಲ್ಲಿ ಮಾತನಾಡಿದ ಅವರು, ಅದಕ್ಕೇ ಅಭಿಮಾನಿಗಳೇ ದೇವರು ಅನ್ನೋದು, ಇಂತಹ ಅಭಿಮಾನಿ ಸಿಕ್ಕಿರುವುದು ನಮ್ಮ ಪುಣ್ಯ. ಸ್ವಂತ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಿದ್ದು ನಮ್ಮ ಪುಣ್ಯ ಎಂದರು.
ಎಂಟು ತಿಂಗಳ ಹಿಂದೆ ಪ್ರಕಾಶ ಪಾದರಕ್ಷೆ ಧರಿಸದೇ ಕೆಲಸ ಆರಂಭಿಸಿದ್ದೆ. ದೇವಸ್ಥಾನ ಪೂರ್ಣಗೊಂಡ ಇಂದು ಆತ ಪಾದರಕ್ಷೆ ಹಾಕಿದ್ದೇನೆ. ಅಭಿಮಾನಿಗಳು ಪ್ರೀತಿಯಿಂದ ಕರೆದಿದ್ದಕ್ಕೆ ಬಂದು ದೇವಸ್ಥಾನ ಉದ್ಘಾಟನೆ ಮಾಡಿದ್ದೀರಿ. ನಮ್ಮ ಪಾಲಿನ ದೇವರು ನೀವು ಎಂದು ಅಭಿಮಾನಿ ಪ್ರಕಾಶ ಮತ್ತು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
FILM
ಒಟಿಟಿಗೆ ಎಂಟ್ರಿ ಕೊಟ್ಟ ‘ಸ್ತ್ರೀ 2’; ಕಲೆಕ್ಷನ್ ಹೇಗಿದೆ ಗೊತ್ತಾ!?
ಮಂಗಳೂರು/ಮುಂಬೈ: ಶ್ರದ್ಧಾ ಕಪೂರ್, ರಾಜ್ಕುಮಾರ್ ರಾವ್, ಪಂಕಜ್ ತ್ರಿಪಾಠಿ ನಟಿಸಿರುವಂತಹ ‘ಸ್ತ್ರೀ 2’ ಸಿನಿಮಾ ಈಗಾಗಲೇ ಗಲ್ಲಾ ಪೆಟ್ಟಿಗೆಯಲ್ಲಿ ಸಕತ್ ಸೌಂಡ್ ಮಾಡಿದೆ. ಕೋಟಿಗಟ್ಟಲೆ ದೋಚಿರುವ ಈ ಚಿತ್ರ ಕಳೆದ ಆಗಸ್ಟ್ನಲ್ಲಿ ಟೆಲಿ ಪರದೆಗೆ ಬಂದಿದ್ದು, ಇಲ್ಲೂ ಬರೋಬ್ಬರಿ 600 ಕೋಟಿಗಳಿಸಿದೆ.
‘ಸ್ತ್ರೀ 2’ ಸಿನಿಮಾ ಅಮೇಜಾನ್ ಪ್ರೈಮ್ ವೀಡಿಯೋದಲ್ಲಿ 349 ರೂಪಾಯಿ ಪಾವತಿಸಿ ವೀಕ್ಷಿಸಬಹುದು. ಅಮೇಜಾನ್ ಪ್ರೈಮ್ ವೀಡಿಯೋ ಮೂಲಕ ಸಿನಿಮಾ ನೋಡುವುದಾದರೂ ಪಾವತಿಸಿಯೇ ವೀಕ್ಷಿಸಬೇಕು.
ಹಿಂದಿ ಭಾಷೆಯಲ್ಲಿ ಮಾತ್ರ ಸಿನಿಮಾನ ನೋಡಬಹುದು. ಚಂದಾದಾರರು ಇದನ್ನು ಉಚಿತವಾಗಿ ವೀಕ್ಷಿಸಬೇಕು ಎಂದರೆ ಮತ್ತಷ್ಟು ದಿನ ಕಾಯಬೇಕು. ಅಲ್ಲಿಯವರೆಗೆ ಹಣ ಪಾವತಿ ಮಾಡಿಯೇ ನೋಡಬೇಕಾಗಿದೆ.
ಸ್ತ್ರೀ 2 ಸಿನಿಮಾವು ಹಾರರ್ ಕಾಮಿಡಿ ಪ್ರಕಾರದ ಚಿತ್ರವಾಗಿದೆ. ಚಿತ್ರದಲ್ಲಿ ಬರುವ ಪ್ರತೀ ಪಾತ್ರಗಳು ಜನರ ಮನಸೂರೆಗೊಳ್ಳುತ್ತವೆ. ಚಿತ್ರದ ಕಥೆ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.. ಪಾವತಿ ಮಾಡಿ ನೋಡಿದಕ್ಕೂ ಸಾರ್ಥಕವಾಯಿತು ಎಂದು ಹಲವರು ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
FILM
ಸೆನ್ಸಾರ್ ಆದೇಶ; ಬಾಲಿವುಡ್ನ ಹೊಸ ಚಿತ್ರಕ್ಕೆ 120 ಕಡೆ ಕತ್ತರಿ
ಮಂಗಳೂರು/ಪಂಜಾಬ್: ಜಾಬಿ ’95’ ಚಿತ್ರಕ್ಕೆ ಹನಿ ಟ್ರೆಹಾನ್ ನಿರ್ದೇಶನ ಮಾಡಿದ್ದು, ಸೆನ್ಸಾರ್ ಮಂಡಳಿಯವರು 85 ಕಡೆ ಕಟ್ ಮಾಡುವಂತೆ ಹೇಳಿದ್ದರು. ಈಗ ಪರಿಷ್ಕರಣಾ ಸಮಿತಿ ಕೂಡ ಸಿನಿಮಾ ವೀಕ್ಷಣೆ ಮಾಡಿದ್ದು, 120 ದೃಶ್ಯಗಳ ಬಗ್ಗೆ ಅಪಸ್ವರ ತೆಗೆದಿದೆ.
ಸಿನಿಮಾ ನೋಡಿದ ಬಳಿಕ ಸೆನ್ಸಾರ್ ಮಂಡಳಿಯವರು 10 ಕಡೆ ಕತ್ತರಿ ಹಾಕಲು ಹೇಳಿರುವುದು ಸಾಕಷ್ಟು ಚರ್ಚೆ ಆಗುತ್ತಿದೆ. ದಿಲ್ಜಿತ್ ದೋಸಾಂಜ್ ನಟನೆಯ ‘ಪಂಜಾಬ್ ’95’ ಚಿತ್ರದ ಬಗ್ಗೆ ಸೆನ್ಸಾರ್ ಮಂಡಳಿಯವರು ವಿರೋಧ ವ್ಯಕ್ತ ಪಡಿಸಿದ್ದಾರೆ.
‘ಪಂಜಾಬಿ ’95’ ಚಿತ್ರಕ್ಕೆ ಹನಿ ಟ್ರೆಹಾನ್ ನಿರ್ದೇಶನ ಮಾಡಿದ್ದಾರೆ. ರೋನಿ ಸ್ಕ್ರೂವಾಲಾ ನಿರ್ಮಿಸಿದ್ದಾರೆ. ನೈಜ ಘಟನೆಗಳನ್ನು ಇದು ಆಧರಿಸಿದ್ದು, ಮಾನವ ಹಕ್ಕುಗಳ ಕಾರ್ಯಕರ್ತ ಜಸ್ವಂತ್ ಸಿಂಗ್ ಖಲ್ರಾ ಅವರ ಕಥೆಯಾಧರಿತ ಸಿನಿಮಾವಾಗಿದೆ. ಪಂಜಾಬ್ನ ದಂಗೆಯ ಅವಧಿಯಲ್ಲಿ ನಡೆದ ಕೊಲೆ ಹಾಗೂ ಭ್ರಷ್ಟಾಚಾರವನ್ನು ಬಹಿರಂಗಪಡಿಸಲು ಜಸ್ವಂತ್ ಪ್ರಯತ್ನಿಸಿದ್ದರು.
ಜಸ್ವಂತ್ ಸಿಂಗ್ ಖಲ್ರಾ ಎಂದು ಬಿಂಬಿಸಲಾದ ನಾಯಕನ ಮರುನಾಮಕರಣ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಇದು ಸಾಕಷ್ಟು ಚರ್ಚೆ ಹುಟ್ಟು ಹಾಕಿದ್ದು, ಈ ಪಾತ್ರಕ್ಕೆ ಸಟ್ಲೆಜ್ ಎಂದು ಹೆಸರು ಇಡುವಂತೆ ಮಂಡಳಿ ಸೂಚಿಸಿದೆ. ‘ಖಲ್ರಾ ಅವರು ಸಿಖ್ ಸಮುದಾಯದಲ್ಲಿ ಪೂಜ್ಯ ವ್ಯಕ್ತಿಯಾಗಿದ್ದಾರೆ. ಅವರ ಹೆಸರನ್ನು ಮರುನಾಮಕರಣ ಮಾಡುವುದು ಅವರ ಪರಂಪರೆಗೆ ಅಗೌರವವಾಗುತ್ತದೆ’ ಎಂದು ತಂಡದವರು ವಾದಿಸಿದ್ದಾರೆ.
ಪಂಜಾಬ್ ’95’ ಟೈಟಲ್ ತೆಗೆಯುವಂತೆಯೂ ಸೂಚಿಸಲಾಗಿದೆ. ಈ ಟೈಟಲ್ ಸಾರ್ವಜನಿಕರ ಮೇಲೆ ಸಾಕಷ್ಟು ಪ್ರಭಾವ ಬೀರಬಹುದು ಎಂದು ಸೆನ್ಸಾರ್ ಮಂಡಳಿ ಅಭಿಪ್ರಾಯಪಟ್ಟಿದೆ. ಸಿನಿಮಾ ಉದ್ದಕ್ಕೂ ಪಂಜಾಬ್ ಹಾಗೂ ಜಿಲ್ಲೆಗಳ ಹೆಸರನ್ನು ಉಲ್ಲೇಖ ಮಾಡಬಾರದು ಎಂದು ಮಂಡಳಿ ಹೇಳಿದೆ. ಕೆನಡಾ ಮತ್ತು ಯುಕೆ ಉಲ್ಲೇಖಗಳು ಸೂಕ್ತವಲ್ಲವೆಂದು ಪರಿಗಣಿಸಲಾಗಿದ್ದು, ತೆಗೆದುಹಾಕುವಂತೆ ತಿಳಿಸಿದ್ದಾರೆ.
FILM
ಆಸ್ಕರ್ಗೆ ಅಧಿಕೃತ ಪ್ರವೇಶ ಪಡೆದ “ಸ್ವಾತಂತ್ರ್ಯ ವೀರ್ ಸಾವರ್ಕರ್” ಸಿನೆಮಾ
ಮುಂಬೈ/ಮಂಗಳೂರು: ಬಾಲಿವುಡ್ ನಟ ರಣ್ದೀಪ್ ಹೂಡಾ ನಟಿಸಿ ನಿರ್ದೇಶಿಸಿರುವ ಸ್ವಾತಂತ್ರ್ಯ ವೀರ್ ಸಾವರ್ಕರ್ ಸಿನಿಮಾವೂ ಅಧಿಕೃತವಾಗಿ 2025ರ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದ್ದು, ಈ ಸಿನಿಮಾದಲ್ಲಿ ರಣ್ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ ನಟಿಸಿದ್ದಾರೆ.
ಸಂದೀಪ್ ಸಿಂಗ್ ಅವರು ಈ ಸಿನಿಮಾದ ನಿರ್ಮಾಣ ಮಾಡಿದ್ದು, ಈ ಸಿನಿಮಾವೀಗ ಆಸ್ಕರ್ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಈ ಖುಷಿಯ ವಿಚಾರವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
2025ರ ಆಸ್ಕರ್ಗೆ ನಾಮ ನಿರ್ದೇಶನಗೊಂಡ ‘ಲಾಪತಾ ಲೇಡಿಸ್’ ಚಿತ್ರ
ಕೆಲ ವಾರಗಳ ಹಿಂದಷ್ಟೇ ರಣ್ದೀಪ್ ಹೂಡಾ ಅವರಿಗೆ ಮುಂಬೈನಲ್ಲಿ ಪ್ರತಿಷ್ಠಿತ ಸ್ವಾತಂತ್ರ್ಯವೀರ ಸಾವರ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯ್ತು. ಸ್ವಾತಂತ್ರ್ಯ ಹೋರಾಟಗಾರ ಜೀವನಚರಿತ್ರೆಯನ್ನು ಅದ್ಭುತವಾಗಿ ತೆರೆಗೆ ತಂದಿದ್ದಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟದ ವೇಳೆ ಭಾರತದ ಯುವ ಸಮೂಹದಲ್ಲಿ ಸಾಕಷ್ಟು ಪ್ರಭಾವ ಬೀರಿದ್ದ ವಿವಾದಿತ ಹಾಗೂ ಪ್ರಭಾವಶಾಲಿ ನಾಯಕ ವೀರ್ ಸಾವರ್ಕರ್ ಆಗಿದ್ದಾರೆ. ಮಾರ್ಚ್ 22 ರಂದು ಹಿಂದಿ ಹಾಗೂ ಮಾರಾಠಿ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆಯಾಗಿತ್ತು.
- FILM6 days ago
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
- DAKSHINA KANNADA6 days ago
ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!
- LATEST NEWS5 days ago
ವೃಶ್ಚಿಕದಲ್ಲಿ ಬುಧ-ಶುಕ್ರ ಯುತಿ; ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ
- LATEST NEWS3 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?