FILM
ನಂದಿನಿ ಧಾರಾವಾಹಿ ನಟನ ವಿರುದ್ಧ ಅರೆಸ್ಟ್ ವಾರೆಂಟ್-ಪತ್ನಿಯಿಂದ ದೂರು
ತಮಿಳು ನಂದಿನಿ ಧಾರಾವಾಹಿಯಲ್ಲಿ ನಾಯಕ ನಟನಾಗಿ ಜನಪ್ರಿಯತೆ ಪಡೆದಿದ್ದ ರಾಹುಲ್ ರವಿ ವಿರುದ್ಧ ಪತ್ನಿಗೆ ಕಿರುಕುಳ ನೀಡರುವ ಆರೋಪ ಕೇಳಿ ಬಂದಿದೆ. ಚೆನ್ನೈ ಪೊಲೀಸರು ಬಂಧನ ವಾರೆಂಟ್ ಜಾರಿ ಮಾಡಿದ್ದು ನಟ ಕಾಣೆಯಾಗಿದ್ದಾರೆ. ರಾಹುಲ್ ರವಿ ವಿರುದ್ಧ ಅವರ ಪತ್ನಿ ಕಿರುಕುಳ ದೂರು ದಾಖಲಿಸಿದ್ದರು. ದೂರಿನ ಬಳಿಕ ಬಂಧನ ಭೀತಿಯಿಂದ ರಾಹುಲ್ ತಲೆಮರೆಸಿಕೊಂಡಿದ್ದರು.
ರಾಹುಲ್ ರವಿ ಅವರು ತಮಿಳು ಕಿರುತೆರೆಯ ಜನಪ್ರಿಯ ನಟ.ತಮಿಳು ಭಾಷೆಯಲ್ಲಿ ನಂದಿನಿ ಧಾರಾವಾಹಿಯಲ್ಲಿ ನಟಿಸಿ ಅದನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ಪ್ರಸಾರ ಮಾಡಲಾಗುತ್ತಿತ್ತು. ಈ ಮೂಲಕ ಕನ್ನಡ ಟಿವಿ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ರಾಹುಲ್ ರವಿ ಅದಾದ ಬಳಿಕ ಹಲವು ಟಿವಿ ಕಾರ್ಯಕ್ರಮಗಳು, ಸಿನಿಮಾಗಳಲ್ಲಿ ಅವಕಾಶ ಪಡೆದಿದ್ದರು. ಇವರು 2020ರಲ್ಲಿ ಲಕ್ಷ್ಮಿಯನ್ನು ಮದುವೆಯಾಗಿದ್ದರು.
ಕೆಲವು ದಿನಗಳ ಹಿಂದೆ ಲಕ್ಷ್ಮಿ ಅವರು ರಾಹುಲ್ ವಿರುದ್ಧ ಚೆನ್ನೈ ಪೊಲೀಸರಿಗೆ ಕಿರುಕುಳದ ದೂರು ನೀಡಿದ್ದರು.ಲಕ್ಷ್ಮೀಯವರನ್ನು ವಿವಾಹವಾದ ಮೂರೇ ವರ್ಷಗಳಲ್ಲಿ ಇವರಿಬ್ಬರ ನಡುವೆ ಜಗಳ ಆರಂಭವಾಗಿತ್ತು. ರಾಹುಲ್ ರವಿ ಅವರು ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.
ಇದೇ ಕಾರಣಕ್ಕೆ ಇವರಿಬ್ಬರ ನಡುವೆ ಜಗಳವಾಗಿದೆ ಎಂದು ವರದಿಗಳು ತಿಳಿಸಿವೆ.ರಾಹುಲ್ ರವಿ ಅವರು ಮದುವೆಯಾದ ಬಳಿಕವೂ ಬೇರೆ ಯುವತಿ ಜತೆ ಆತ್ಮೀಯತೆ, ಸಂಬಂಧ ಹೊಂದಿದ್ದರು ಎಂದು ಪತ್ನಿ ಆರೋಪಿಸಿದ್ದರು. ತನ್ನ ಪತಿಗೆ ಬೇರೆ ಯುವತಿ ಜತೆ ಸಂಬಂಧ ಇರುವ ವಿಚಾರ ತಿಳಿದ ಬಳಿಕ ಲಕ್ಷ್ಮೀ ಅವರು ನೇರವಾಗಿ ಪೊಲೀಸರ ಜತೆ ಯುವತಿ ಇರುವ ಅಪಾರ್ಟ್ಮೆಂಟ್ಗೆ ಮಧ್ಯರಾತ್ರಿ ಹೋಗಿದ್ದರು. ಈ ಸಂದರ್ಭದಲ್ಲಿ ತನ್ನ ಪತಿ ಬೇರೊಬ್ಬ ಯುವತಿ ಜತೆ ಬೆಡ್ರೂಂನಲ್ಲಿರುವುದನ್ನು ತಿಳಿದುಬಂದಿತ್ತು. ನಂದಿನಿ ಧಾರಾವಾಹಿ ನಟನ ವಿರುದ್ಧ ಲಕ್ಷ್ಮೀ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
FILM
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’
ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಮ್ಮ ಸ್ನೇಹಿತರೊಂದಿಗೆ ದುನಿಯಾ ವಿಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಅವರ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡರು.
ಕಾಲ್ನಡಿಗೆಯಲ್ಲಿ ನಂಜನಗೂಡು ಕ್ಷೇತ್ರಕ್ಕೆ ಹೋಗಿದ್ದ ನಟ:
ದುನಿಯಾ ವಿಜಿ ಇತ್ತೀಚೆಗೆ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದರು. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದರು. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದರು.
ಸಿನಿಮಾಗಳಲ್ಲಿ ಬ್ಯುಸಿ :
ದುನಿಯಾ ವಿಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶಕನ ಕ್ಯಾಪ್ ಕೂಡ ಅವರು ಹಾಕಿದ್ದಾರೆ.’ಸಲಗ’ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ಅವರು, ‘ಭೀಮ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
ಚಿತ್ರರಂಗಕ್ಕೆ ವಿಜಿ ಮಗಳು ಎಂಟ್ರಿ :
ದುನಿಯಾ ವಿಜಯ್ ತಮ್ಮ ಮಗ ಸಾಮ್ರಾಟ್ ನನ್ನು ಈಗಾಗಲೇ ಭೀಮ ಚಿತ್ರದ ಮೂಲಕ ಪರಿಚಯಿಸುವ ತಯಾರಿಯಲ್ಲಿದ್ದಾರೆ. ಇದೀಗ ಮಗಳನ್ನೂ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ತಂದೆ – ಮಗಳು ಇಬ್ಬರೂ ಕಾಣಿಸಿಕೊಳ್ಳುತ್ತಿದ್ದಾರೆ.
‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಚಿತ್ರದಲ್ಲಿ ಜೊತೆಯಾಗಿದ್ದ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಮತ್ತೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಇದರಲ್ಲಿ ವಿಜಿ ಮಗಳು ಮೋನಿಕಾ/ರಿತನ್ಯಾ ನಟಿಸುತ್ತಿದ್ದಾರೆ. ಇದು ದುನಿಯಾ ವಿಜಯ್ ಅವರ 29 ನೇ ಸಿನಿಮಾ.
FILM
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
ಬೆಂಗಳೂರು : ಬಿಗ್ ಬಾಸ್ ಕನ್ನಡ ಕಿರುತೆರೆಯಲ್ಲಿ ಬಹಳ ಸದ್ದು ಮಾಡುವ ಅತಿದೊಡ್ಡ ರಿಯಾಲಿಟಿ ಶೋ. ಹಿರಿತೆರೆ, ಕಿರುತೆರೆ, ಸಾಮಾನ್ಯ ವ್ಯಕ್ತಿ, ಸಾಧಕ ಶೋನಲ್ಲಿ ಭಾಗಿಯಾಗ್ತಾನೆ. ಈ ಶೋ ಯಾವಾಗಲೂ ಸದ್ದು ಮಾಡುತ್ತಿರುತ್ತದೆ. ಸ್ಪರ್ಧಿಗಳೂ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ, ನಟಿ ನಮ್ರತಾ ಗೌಡ ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ.
ಪ್ಲ್ಯಾನ್ ಪ್ರಕಾರ ನಡೆಯುತ್ತಿಲ್ಲ:
ನಮ್ರತಾ ಗೌಡ ಯಾರಿಗೆ ತಾನೇ ಗೊತ್ತಿಲ್ಲ. ನಾಗಿಣಿ ಎಂದಾಕ್ಷಣ ತಟ್ಟನೆ ನೆನಪಾಗುವ ಹೆಸರು. ಕನ್ನಡ ಕಿರುತೆರೆಯಲ್ಲಿ ಖ್ಯಾತರಾದವರು. ನಾಗಿಣಿ ಮುಗಿಯುತ್ತಿದ್ದಂತೆ ಬಿಗ್ ಬಾಸ್ ನತ್ತ ಲಗ್ಗೆ ಇಟ್ಟರು. ಬಿಗ್ ಬಾಸ್ ನಲ್ಲಿ ಇದ್ದಾಗ ವಿನಯ್ ಗೌಡ, ನಮ್ರತಾ, ರಕ್ಷಕ್ ಬುಲೆಟ್, ಈಶಾನಿ, ಮೈಕಲ್ ಅಜಯ್ ಜೊತೆಯಾಗಿ ಇರುತ್ತಿದ್ದರು.
ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಹೊರಗೆ ಪ್ರತಿ ವಾರ ಸಿಗೋಣ, ಪಾರ್ಟಿ ಮಾಡೋಣ ಎಂದೆಲ್ಲ ಪ್ಲ್ಯಾನ್ ಮಾಡಿದ್ದರು. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಆರಂಭದಲ್ಲಿ ಕೆಲವು ಬಾರಿ ಇವರು ಭೇಟಿ ಆಗಿದ್ದು ಇದೆ. ಈಗ ಆ ರೀತಿಯ ಭೇಟಿಗಳು ನಿರಂತರವಾಗಿ ನಡೆಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?
ದಿನವೂ ಸಿಗಬೇಕು ಇಲ್ಲವಾದರೆ ವಾರಕ್ಕೆ ಒಮ್ಮೆ ಆದರೂ ಸಿಗಬೇಕು ಎಂದು ಬಿಗ್ ಬಾಸ್ನಲ್ಲಿ ಪ್ಲ್ಯಾನ್ ಮಾಡಿದ್ದೀವಿ. ಆದರೆ, ಅದೆಲ್ಲ ನಡೆಯುತ್ತಿಲ್ಲ. ನನ್ನ ಸರ್ಕಲ್ನಲ್ಲಿ ಇರುವವರನ್ನು ನನ್ನ ಬರ್ತ್ ಡೇ ಕರೆದಿದ್ದೆ. ನಾನು ರೆಗ್ಯುಲರ್ ಆಗಿ ಯಾರ ಜೊತೆಗೂ ಕಂಟ್ಯಾಕ್ಟ್ ಇಲ್ಲ. ವಿನಯ್, ಈಶಾನಿ ಜೊತೆ ಆಗಾಗ ಕಾಲ್ನಲ್ಲಿ ಮಾತನಾಡುತ್ತೇನೆ. ರಕ್ಷಕ್, ಕಾರ್ತಿಕ್ ಹಾಗೂ ಇತರರು ಈವೆಂಟ್ನಲ್ಲಿ ಮಾತಾಡ್ತೀನಿ ಎಂದಿದ್ದಾರೆ.
ಕಾರು ಖರೀದಿಸಿದ ನಟಿ :
ಇತ್ತೀಚೆಗಷ್ಟೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಮ್ರತಾ ಗೌಡ, ಅಂದು ನಮ್ರತಾ ಗೌಡ ಅವರು ಹೊಸ ಕಾರೊಂದನ್ನು ಖರೀದಿಸಿದ್ದರು. ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರನ್ನು ನಮ್ರತಾ ಗೌಡ ಖರೀದಿಸಿದ್ದರು. ಈ ಕಾರಿನ ಬೆಲೆ 8 ರಿಂದ 9 ಲಕ್ಷ ರೂ. ಆಗಿದೆ. ಕಾರು ಕೊಂಡ ಸಂಭ್ರಮವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅವರ ಅಭಿಮಾನಿಗಳು ಶುಭಹಾರೈಸಿದ್ದರು.
FILM
ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್ಗೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್ ಆಗಿದ್ದು ಹಿಟ್ ಲಿಸ್ಟ್ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್ಗೆ ತಯಾರಾಗಿದೆ.
ರಿ ರಿಲೀಸ್ ಯಾವಾಗ?
ಪುನೀತ್ ರಾಜ್ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್ಎಮ್ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು. 2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್ಎನ್ ಕುಮಾರ್ ತಿಳಿಸಿದ್ದಾರೆ.
ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್ನಲ್ಲಿ ಬರೆದಿದ್ದೇನು..!
ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್ ಸಾಂಗ್ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ