DAKSHINA KANNADA
ಮಂಗಳೂರು: ಯಕ್ಷಗಾನ ಕಲೆಗೆ ಸಂಘಗಳ ಕೊಡುಗೆ ಅಪಾರ-ಸೇರಾಜೆ
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಕಾರ್ಯಕ್ರಮದ 22 ಸರಣಿಯ ಕಾರ್ಯಕ್ರಮ ಇತ್ತೀಚೆಗೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಜರಗಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊಫೆಸರ್ ಜಿ.ಕೆ.ಭಟ್ ಸೇರಾಜೆ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಯಕ್ಷಗಾನ ಸಂಘಗಳ ಕೊಡುಗೆಯನ್ನು ವಿವರಿಸಿದರು.
“ತಾಳಮದ್ದಳೆಯ ಸಂಘಗಳಲ್ಲಿ ಅರ್ಥವನ್ನು ಹೇಳುವಂತಹ ಅಥವಾ ಹಿಮ್ಮೇಳವನ್ನು ನುಡಿಸುವಂತಹ ಕಲಾವಿದರು ಯಕ್ಷಗಾನ ಕ್ಷೇತ್ರದಲ್ಲಿ ಸಂಪೂರ್ಣ ಯಶಸ್ಸು ಪಡೆಯುತ್ತಾರೆ.ಹಾಗಾಗಿ ಯಕ್ಷಗಾನ ತಾಳಮದ್ದಳೆಯ ಸಂಘಗಳು ಈ ಕಲೆಯ ಉಳಿಯುವಿಕೆಯಲ್ಲಿ ಅತ್ಯಂತ ಸಹಕಾರಿ ಎಂದು ಹೇಳಿದರೂ ತಪ್ಪಾಗದು ಎಂದರು.
ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘ ಕಲೆಯನ್ನು ಬೆಳೆ ಸುವಂತಹ ಕೆಲಸದ ಜೊತೆ ಕಲಾವಿದರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಕಾರ್ಯವನ್ನು ಮಾಡುತ್ತಾ ಬರುತ್ತಿದೆ.22 ವಾರಗಳ ಕಾರ್ಯಕ್ರಮದಲ್ಲಿ 22 ಅರ್ಹ ಕಲಾವಿದರನ್ನು ಗುರುತಿಸಿ ಅಂತಹ ಕಲಾವಿದರಿಗೆ ಸನ್ಮಾನವನ್ನು ಮಾಡಿರುವುದು ನಿಜಕ್ಕೂ ಸ್ತುತ್ಯರ್ಹವಾದದ್ದು.
ಎಲೆಯ ಮರೆಯ ಕಾಯಿಯಂತೆ ಇದ್ದಂತಹ ಕಲಾವಿದರನ್ನು ಗುರುತಿಸಿ ಮಾಡಿದಂತಹ ಸನ್ಮಾನ ನಿಜಕ್ಕೂ ಅದ್ಭುತ “ಎಂದರು.
ಸನ್ಮಾನಿಸಲ್ಪಟ್ಟ ಪೆರ್ಲ ಗಣಪತಿ ಭಟ್ ಇವರ ಅಭಿನಂದನೆಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ಸಂಜಯ ಕುಮಾರ್ ರಾವ್ ಮಾಡಿದರು.
ಪೆರ್ಲ ಗಣಪತಿ ಭಟ್ಟರು ಎಳವೆಯಲ್ಲಿಯೇ ಯಕ್ಷಗಾನದತ್ತ ಆಕರ್ಷಿತರಾದವರು. ಮುಂದೆ ಶೇಣಿ ಸುಬ್ರಮಣ್ಯ ಭಟ್ಟರಲ್ಲಿ ಶಾಸ್ತ್ರೀಯವಾಗಿ ಹಿಮ್ಮೇಳ ವಾದನವನ್ನು ಕಲಿತರು ಮಂಗಳೂರಿನಲ್ಲಿ ಉದ್ಯೋಗನಿಮಿತ್ತ ನೆಲೆಸಿದ ಸಂದರ್ಭದಲ್ಲಿ ಶ್ರೀ ಮಾಂಬಾಡಿ ಸುಬ್ರಹ್ಮಣ್ಯ ಭಟ್,ಕೃಷ್ಣ ರಾಜ ಭಟ್,ನಂದಳಿಕೆ ಇವರಿಂದ ಹಿಮ್ಮೇಳವನ್ನು ಅಭ್ಯಸಿಸಿ ಸುತ್ತ ಮುತ್ತಲಿನ ಎಲ್ಲಾ ಸಂಘಗಳಲ್ಲಿ ತಮ್ಮ ಕಲಾಸೇವೆಯನ್ನು ಗೈದಿದ್ದಾರೆ.
1990 ರಲ್ಲಿ ಕೃಷ್ಣರಾಜ ಮತ್ತು ಬಳಗ ಎನ್ನುವಂತಹ ಸಂಘಟನೆಯ ಮೂಲಕ ಆಕಾಶವಾಣಿಯಲ್ಲಿಯೂ ತಾಳಮದ್ದಳೆಯನ್ನು ನೀಡುತ್ತಾ ಬರುತ್ತಿದ್ದಾರೆ. ಅತ್ಯಂತ ವಿನೀತ ಸ್ವಭಾವದ ಗಣಪತಿ ಭಟ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದಾರೆ ಎಂದರು.
ಕೀರ್ತಿಶೇಷ ನಾಗೇಶ ಸಾಲಿಯಾನರ ಸಂಸ್ಮರಣೆಯನ್ನು ಸಂಜಯ ಕುಮಾರ್ ಗೈದರು.
ಅನೇಕ ವಿಶಿಷ್ಟ ಯಕ್ಷಗಾನ ಪ್ರದರ್ಶನಗಳನ್ನು ಆಯೋಜಿಸುತ್ತಿದ್ದ ನಾಗೇಶ್ ಸಾಲಿಯಾನರು ಒಬ್ಬ ಅದ್ಭುತ ಸಂಘಟಕರಾಗಿದ್ದರು.
ಹವ್ಯಾಸಿಗಳನ್ನು ಯಕ್ಷಗಾನದತ್ತ ಆಕರ್ಷಿಸುವಲ್ಲಿ ಅವರಿಗಿದ್ದ ಆಸಕ್ತಿ ಇಂದು ಅನೇಕ ಕಲಾವಿದರನ್ನು ಯಕ್ಷಗಾನಕ್ಕೆ ಒದಗಿಸಿಕೊಟ್ಟಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಒಂದು ಭಾಗವನ್ನು ಮೀಸಲಿರಿ ಸುವಲ್ಲಿ ಅವರ ಹೋರಾಟ ಅವಿಸ್ಮರಣೀಯ ಎಂದರು.
ಇನ್ನೊಬ್ಬ ಅತಿಥಿ ಬೆಟ್ಟಂಪಾಡಿ ಸುಂದರ ಶೆಟ್ಟಿ, ಯಕ್ಷಗಾನಕ್ಕಾಗಿ ತನ್ನ ಪ್ರಯತ್ನಗಳನ್ನು ವಿವರಿಸಿದರು.
ವಿವಿಧ ರಾಜ್ಯಗಳಲ್ಲಿ ಉದ್ಯೋಗ ನಿಮಿತ್ತ ವಾಸ್ತವ್ಯವಿದ್ದಾಗ ಅಲ್ಲಿನ ಕನ್ನಡ ಸಂಘಗಳ ಮೂಲಕ ತಾಳಮದ್ದಳೆ ಕಾರ್ಯಕ್ರಮ ಆಯೋಜಿಸುತ್ತಿದ್ದೆ.
ತಂದೆ ಬೆಟ್ಟಂಪಾಡಿ ಬಾಳಪ್ಪ ಶೆಟ್ಟರ ನೆನಪಿಗಾಗಿ, ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷಗಾನ ಪ್ರತಿಷ್ಟಾನದ ಮೂಲಕ ತಾಳಮದ್ದಳೆ, ಸಂಮಾನ ಕಾರ್ಯಕ್ರಮವನ್ನು ನಡೆಸುತ್ತಾ ಕಲಾ ಸೇವೆಯನ್ನು ಮಾಡುತ್ತಿದ್ದೇನೆ.
ನೂರು ವರುಷ ಪೂರೈಸಿದ ಈ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದರು. ಅಶೋಕ ಬೊಳೂರು ಸಂಮಾನ ಪತ್ರವನ್ನು ವಾಚಿಸಿದರು. ಶಿವಪ್ರಸಾದ್ ಪ್ರಭು,ಪ್ರಫುಲ್ಲಾ ನಾಯಕ್, ಶಿವಾನಂದ ಪೆರ್ಲಗುರಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ “ಅಂಗದ ಸಂಧಾನ” ತಾಳಮದ್ದಳೆ ಸಂಘದ ಕಲಾವಿದರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಜರಗಿತು.
DAKSHINA KANNADA
ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!
ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿರುವ ಘಟನೆ ನಡೆದಿದೆ.
ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ. ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!
ಕೋಮಾಗೆ ಜಾರಿದ ಮಗು:
ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
DAKSHINA KANNADA
ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ
ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.
ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
DAKSHINA KANNADA
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.
ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್ ಕೈ..!! ವೀಡಿಯೋ ವೈರಲ್
- DAKSHINA KANNADA2 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM4 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- BELTHANGADY3 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
- BANTWAL6 days ago
ಮೇ 3 ರಂದು ಕುದ್ರೆಬೆಟ್ಟು ಕಾರಣಿಕದ ಕಲ್ಲುರ್ಟಿ ದೈವಸ್ಥಾನದ ಪುನ: ಪ್ರತಿಷ್ಠಾ ಮಹೋತ್ಸವ; ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ!