DAKSHINA KANNADA
ಅತ್ತಾವರ: ಮಳೆಗೆ ಧರೆಗುರುಳಿದ ಬೃಹತ್ ಮರ
ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಅತ್ತಾವರ ಕಾಪ್ರಿಗುಡ್ಡದ ಬ್ರಿಟ್ಟೋಲೇನ್ ಬಳಿ ವಾಣಿಜ್ಯ ಸಂಕೀರ್ಣದ ತಳಪಾಯದ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಮೇಲ್ಭಾಗದಲ್ಲಿದ್ದ ಬೃಹತ್ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ.
ಮಳೆಯ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕಾಮಗಾರಿ ನಿಲ್ಲಿಸಲಾಗಿದ್ದ ಕಾರಣ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
DAKSHINA KANNADA
ಉಜಿರೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾ*ತ; ಡಿವೈಡರ್ ಗೆ ಕಾರು ಡಿ*ಕ್ಕಿ ಹೊಡೆದು ಚಾಲಕ ಸಾ*ವು
ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಉಜಿರೆಯಲ್ಲಿ ಭೀಕರ ಅಪಘಾ*ತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿ*ಕ್ಕಿ ಹೊಡೆದು ಚಾಲಕ ಮೃ*ತಪಟ್ಟಿರುವ ಘಟನೆ ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಈ ಭೀಕರ ಅಪಘಾ*ತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃ*ತಪಟ್ಟಿದ್ದಾರೆ.
ಇಂದು(ಜೂ.29) ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಡಿ*ಕ್ಕಿ ಹೊಡೆದಿದೆ. ಡಿ*ಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾ*ತದ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀ*ರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ.
ಇದನ್ನೂ ಓದಿ : ಸೈಬರ್ ಕ್ರೈಂ ನಲ್ಲಿ ಭಾಗಿ ಆರೋಪ : ಶ್ರೀಲಂಕಾದಲ್ಲಿ 60 ಭಾರತೀಯರ ಬಂಧನ
ಅಪಘಾತ*ದಲ್ಲಿ ನಿಧ*ನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.
ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು.
DAKSHINA KANNADA
ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬ*ಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಗಣೇಶ್ ಶೆಟ್ಟಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃ*ತ ದುರ್ದೈವಿ. ಯುವತಿ ಕಲ್ಲಡ್ಕದ ಮೆಡಿಕಲೊಂದರಲ್ಲಿ ಕೆಲಸ ಮಾಡುತ್ತಿದ್ದಳು.
ಪ್ರತೀಕ್ಷಾ ಶೆಟ್ಟಿ ಮನೆಯ ಬಳಿ ಪಾರ್ಸೆಲ್ ಬಂದಿದೆ ಎಂದು ತೆಗೆದುಕೊಂಡು ಹೋಗಲು ಮನೆ ಸಮೀಪದ ರಸ್ತೆಗೆ ಬಂದಿದ್ದಾಳೆ. ರಸ್ತೆಯಲ್ಲಿ ವಿದ್ಯುತ್ ತಂತಿ ಮುರಿದು ಬಿದ್ದಿದ್ದು, ನೀರಿಗೆ ವಿದ್ಯುತ್ ಪ್ರವಹಿಸಿದೆ. ಈ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಯುವತಿ ಮೃ*ತಪಟ್ಟಿದ್ದಾಳೆ.
ಇದನ್ನೂ ಓದಿ : ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರ ದುರಂ*ತ ಅಂ*ತ್ಯ
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಯುವತಿಯ ಮೃ*ತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
DAKSHINA KANNADA
ಮಂಗಳೂರು : ಸೂರಜ್ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆ
ಮಂಗಳೂರು : ಸೂರಜ್ ಪದವಿಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ನಡೆಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಶ್ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಾದ ಕೃ ತಿಕ್ ಮತ್ತು ಪೃತ್ವಿಕ್ 6 ರಿಂದ 10ನೇ ತರಗತಿಯ ಮಕ್ಕಳಿಗೆ ಯೋಗವನ್ನು ಹೇಳಿಕೊಟ್ಟರು.
ಶಾಲೆಯ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ಪಾಲ್ಗೊಂಡಿದ್ದರು.
- LATEST NEWS7 days ago
ಮುಂದಿನ ಐದು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಎಚ್ಚರಿಕೆ
- LATEST NEWS4 days ago
ಪ್ರೀತಂ ಗೌಡ ಸೇರಿ ನಾಲ್ವರ ಮೇಲೆ ಎಫ್ಐಆರ್..! ಪ್ರಜ್ವಲ್ ಗೆ ಮತ್ತೊಂದು ಸಂಕಷ್ಟ
- DAKSHINA KANNADA5 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- DAKSHINA KANNADA5 days ago
ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ