KADABA
Kadaba: ಬಡ ವ್ಯಕ್ತಿಯ ಗೂಡಂಗಡಿ ತೆರವಿಗೆ ಯತ್ನ-ನ್ಯಾಯ ಒದಗಿಸಿಕೊಡುವಂತೆ ಸ್ಥಳೀಯರ ಆಗ್ರಹ..!
ಕಡಬ: ಕಡಬ ತಾಲೂಕಿನ ಪೆರಾಬೆ ಗ್ರಾ.ಪಂ. ವ್ಯಾಪ್ತಿಯ ಕುಂತೂರು ಎಂಬಲ್ಲಿ ಸರಕಾರಿ ಜಾಗದಲ್ಲಿ ತಳ್ಳುಗಾಡಿ ಇಟ್ಟುಕೊಂಡು ವ್ಯಾಪಾರ ಮಾಡಿ, ಪಕ್ಕದಲ್ಲೇ ಸಣ್ಣದೊಂದು ಗುಡಿಸಲು ಮನೆಮಾಡಿ ಪತ್ನಿ ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಕುಂಟ್ಯಾನ ನಿವಾಸಿ ಕುಶಾಲಪ್ಪ ಗೌಡ ಅವರ ಅಂಗಡಿಯನ್ನು ರಾಜಕೀಯ ದುರುದ್ದೇಶದಿಂದ ತೆರವುಗೊಳಿಸಲು ಪ್ರಯತ್ನಿಸಲಾಗುತ್ತಿದ್ದು, ಅದನ್ನು ತಡೆದು ಕುಶಾಲಪ್ಪ ಗೌಡ ಅವರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಬಗ್ಗೆ ಈಗಾಗಲೇ ಕಡಬದಲ್ಲಿ ಪತ್ರಿಕಾಗೋಷ್ಠಿಯನ್ನೂ ನಡೆಸಲಾಗಿತ್ತು. ಕುಶಾಲಪ್ಪ ಗೌಡ ಅವರು ಕಳೆದ 10 ವರ್ಷಗಳಿಂದ ಕುಂತೂರಿನಲ್ಲಿ ಸರಕಾರಿ ಜಾಗದಲ್ಲಿ ಗ್ರಾ.ಪಂ.ನಿಂದ ತಳ್ಳುಗಾಡಿಗೆ ಪರವಾನಿಗೆಯೊಂದಿಗೆ ವಿದ್ಯುತ್ ಸಂಪರ್ಕವನ್ನೂ ಪಡೆದು ವ್ಯಾಪಾರ ನಡೆಸಿಕೊಂಡು ಜೀವನ ನಡೆಸುತ್ತಿದ್ದಾರೆ.ಇಲ್ಲೇ ಅವರು ಸಣ್ಣದೊಂದು ಗುಡಿಸಲು ಮನೆಯನ್ನೂ ಕಟ್ಟಿ ಪತ್ನಿ ಮಕ್ಕಳೊಂದಿಗೆ ವಾಸವಾಗಿದ್ದೂ, ಇದಕ್ಕೆ 94c ಅಡಿಯಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯರೋರ್ವರು ಕುಶಾಲಪ್ಪ ಗೌಡರ ಗೂಡಂಗಡಿಯನ್ನು ತೆರವುಗೊಳಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು ಎಂಟು ವರ್ಷಗಳ ಹಿಂದೆ ತನ್ನ ಅಂಗಡಿಗೆ ಪಂಚಾಯತ್ ಅನುಮತಿಯೊಂದಿಗೆ ಪಡೆದ ವಿದ್ಯುತ್ ಸಂಪರ್ಕವನ್ನು ಯಾವುದೇ ನೋಟೀಸ್ ನೀಡದೇ ಕಡಿತಗೊಳಿಸಲಾಗಿದೆ ಮತ್ತು ಪೊಲೀಸ್ ಸುರಕ್ಷತೆಯಲ್ಲಿ ಬಂದ ಪಂಚಾಯತ್ ಆಡಳಿತ ಮಂಡಳಿ ಇವರಿಗೆ ನೀಡಲಾಗಿದ್ದ ಕುಡಿಯುವ ನೀರಿನ ಸಂಪರ್ಕವನ್ನು ಕಡಿತ ಮಾಡಲು ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಮಾತ್ರವಲ್ಲದೇ ಕುಶಾಲಪ್ಪ ಗೌಡರು ತನ್ನ ಹೆಂಡತಿ ಮಕ್ಕಳೊಂದಿಗೆ ವಾಸ್ತವ್ಯ ಮಾಡುತ್ತಿರುವ ಗುಡಿಸಲು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಡಿತ ಮಾಡಲು ಮುಂದಾಗುವ ಪಂಚಾಯತ್ ಆಡಳಿತ ಹಾಗೂ ಇದನ್ನು ಸ್ಥಳೀಯರು ಸೇರಿ ತಡೆಯುವ ವೀಡಿಯೋ ವೈರಲ್ ಆಗುತ್ತಿದೆ. ಈ ಪ್ರಕರಣದ ಕುರಿತು ಈಗಾಗಲೇ ಕಡಬ ತಹಶೀಲ್ದಾರರಿಗೆ,ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ. ಬಡ ವ್ಯಕ್ತಿಯ ಅಂಗಡಿ ಮತ್ತು ಗುಡಿಸಲು ತೆರವುಗೊಳಿಸಲು ಕುಮ್ಮಕ್ಕು ನೀಡುವ ಪೆರಾಬೆ ಗ್ರಾ.ಪಂ. ಸದಸ್ಯರು, ಕೊಟಿಗಟ್ಟಲೆ ಸರಕಾರಿ ಜಾಗವನ್ನು ಕಬಳಿಸಿದ್ದರೂ ಹಾಗೂ ಈಗಾಗಲೇ ಪಂಚಾಯತ್ ವಶಕ್ಕೆ ಪಡೆಯಲು ಆದೇಶವಾಗಿರುವ ಸರಕಾರಿ ಜಾಗಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಲು ಮುಂದಾಗದೇ, ಜೀವನೋಪಾಯಕ್ಕಾಗಿ ವ್ಯಾಪಾರ ನಡೆಸುತ್ತಿರುವ ಬಡ ವ್ಯಕ್ತಿಗೆ ಅನ್ಯಾಯ ಮಾಡುತ್ತಿದ್ದಾರೆ. ಬಡವರಿಗೆ ನ್ಯಾಯ ದೊರಕಬೇಕು, ಬಡ ವ್ಯಕ್ತಿಯ ಮೇಲೆ ಇದೇ ತರಹ ದೌರ್ಜನ್ಯ ಮುಂದುವರೆದರೆ ಗ್ರಾಮಸ್ಥರ ನೆರವಿನೊಂದಿಗೆ ಗ್ರಾ.ಪಂ.ಕಚೇರಿ ಹಾಗೂ ಕಡಬ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ಈ ಜಾಗವು ಪಂಚಾಯತ್ಗೆ ಯಾವುದೇ ರೀತಿಯ ಹಕ್ಕು ಇಲ್ಲದ ಸರಕಾರಿ ಜಾಗವಾಗಿದ್ದೂ, ಮತ್ತು ಯಾವುದೇ ನೋಟೀಸ್ ನೀಡದೇ ಪುಟ್ಟ ಮಕ್ಕಳೊಂದಿಗೆ ವಾಸವಿರುವ ಕುಶಾಲಪ್ಪ ಗೌಡರ ಮನೆಯ,ವಿದ್ಯುತ್ ಸಂಪರ್ಕ, ಕುಡಿಯುವ ನೀರು ಮತ್ತು ಮನೆಯನ್ನು ಕೆಡವಲು ಆಗಮಿಸಿದ ಅಧಿಕಾರಿಗಳಿಗೆ ಬೆಂಬಲ ನೀಡಿದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಪಂಚಾಯತ್ ಪಿಡಿಓ ಅವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕೆನ್ನುವ ಆರೋಪವೂ ಕೇಳಿಬಂದಿದೆ
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ
ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!