DAKSHINA KANNADA
ಲೇಖಕ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರಿಗೆ ಹುಟ್ಟೂರಿನ ಸನ್ಮಾನ ಮತ್ತು ಕೃತಿ ಬಿಡುಗಡೆ..!
ಲೇಖಕ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆಯವರಿಗೆ ಹುಟ್ಟೂರಿನ ಸನ್ಮಾನ ಮತ್ತು ಕೃತಿ ಬಿಡುಗಡೆ..!
ಮಂಗಳೂರು: ಜೋಕಟ್ಟೆಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಿರುವ ಸಾಹಿತಿ,ಲೇಖಕ,ಕವಿ, ಪತ್ರಕರ್ತ ಶ್ರೀ ಶ್ರೀನಿವಾಸ ಜೋಕಟ್ಟೆ ಯವರಿಗೆ ಜೋಕಟ್ಟೆಯ ಸರ್ವ ಅಭಿಮಾನೀ ನಾಗರಿಕರಿಂದ ಹುಟ್ಟೂರಿನ ಸನ್ಮಾನ ಮತ್ತು ” ಆಯುರ್ವೇದ ಭೂಷಣ , ಸಮಾಜ ಬಂಧು ಡಾ.ಐ.ವಿ.ರಾವ್ ” ಎಂಬ ಶ್ರೀನಿವಾಸ ಜೋಕಟ್ಟೆ ಯವರ 38 ನೇ ಕೃತಿ ಬಿಡುಗಡೆ ಸಮಾರಂಭ ಜೋಕಟ್ಟೆಯ ದ.ಕ.ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಹುಟ್ಟೂರಿನ ಬಾಲ್ಯದ ನೆನಪುಗಳು,ಒಡನಾಟ,ಉದ್ಯೋಗ ನಿಮಿತ್ತ ಮುಂಬೈಗೆ ತೆರಳಿ ಪತ್ರಕರ್ತನಾಗಿ ಪರಿವರ್ತನೆಗೊಂಡ ಅಲ್ಲಿನ ಅನುಭವಗಳನ್ನು ನೆರೆದ ಅಭಿಮಾನಿಗಳಲ್ಲಿ ಹಂಚಿಕೊಂಡರು.
ತನ್ನ ತಂದೆಯವರಾದ ಡಾ.ಐ.ವಿ.ರಾವ್ ರವರ ಬಗ್ಗೆ ಬರೆದ ತನ್ನ 38 ನೇ ಕೃತಿಯನ್ನು ಬಿಡುಗಡೆಗೊಳಿಸಿ ಡಾ.ಐ.ವಿ.ರಾವ್ ರವರ ವೈದ್ಯವ್ರತ್ತಿ, ಜೀವನಶೈಲಿ ಮತ್ತು ಸಮಾಜ ಸೇವೆಯ ಹಲವಾರು ಮಜಲುಗಳನ್ನು ಸಭಿಕರಿಗೆ ಮನವರಿಕೆ ಮಾಡಿ ಕೊಟ್ಟರು.
ಲೇಖಕರನ್ನು ಜೋಕಟ್ಟೆಯ ಹಿರಿಯ ನಾಗರಿಕ,ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಹಾಜಿ.ಟಿ.ಎ.ಆಲಿಯಬ್ಬರವರು ಶಾಲು ಹೊದಿಸಿ ಫಲಪುಷ್ಪ ನೀಡಿ “ಜೋಕಟ್ಟೆ ಸುಪುತ್ರ” ಎಂಬ ಸ್ಮರಣಿಕೆ ನೀಡಿ ಸನ್ಮಾನಿಸಿದರು.ಬಳಿಕ ಲೇಖಕ,ಅಂಚೆ ಇಲಾಖೆಯ ನಿವೃತ್ತ ಪೋಸ್ಟ್ ಮಾಸ್ಟರ್ ವಿಲಿಯಮ್ ಲೋಬೊರವರು ಶ್ರೀನಿವಾಸರ 38 ನೇ ಕೃತಿಯನ್ನು ಬಿಡುಗಡೆಗೊಳಿಸಿದರು.
ಸಭೆಯ ಅಧ್ಯಕ್ಷತೆಯನ್ನು ಜೋಕಟ್ಟೆಯ ಶ್ರೀ ವಿಜಯ ವಿಠಲ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಪುಷ್ಪರಾಜ್ ರವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ತಾಲೂಕು ಪಂಚಾಯತ್ ಸದಸ್ಯ ಶ್ರೀ ಬಿ.ಎಸ್.ಬಶೀರ್, ಜೋಕಟ್ಟೆಯ ಅಂಜುಮನ್ ಖುವ್ವತುಲ್ ಇಸ್ಲಾಮ್ ಸಂಸ್ಥೆಯ ಅಧ್ಯಕ್ಷ ಹಾಜಿ.ಟಿ.ಅಬೂಬಕ್ಕರ್,ಅಥಾವುಲ್ಲಾ ಜೋಕಟ್ಟೆ,ಅಂಜುಮನ್ ವಿದ್ಯಾಸಂಸ್ಥೆಯ ಸಂಚಾಲಕರಾದ ಸಿರಾಜ್ ಮನೆಗಾರ,ಗ್ರಾಮ ಪಂಚಾಯತ್ ಸದಸ್ಯ ಶಿಹಾಬುದ್ದೀನ್,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀ ಮಯ್ಯದ್ದಿ,ಶ್ರೀನಿವಾಸ್ ರ ಸಹೋದರ ಶ್ರೀಧರ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಸನ್ಮಾನಿತರಿಗೆ ಶುಭ ಹಾರೈಸಿದರು.
ಕವಿ,ಉದ್ಯಮಿ ಹಾಗೂ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಶ್ರೀ ಮುಹಮ್ಮದ್ ಶರೀಫ್ ನಿರ್ಮುಂಜೆಯವರು ಕಾರ್ಯಕ್ರಮ ನಿರೂಪಿಸಿದರು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.