BELTHANGADY
ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡ್ತೇನೆ ಎಂದಿದ್ದ ಪ್ರವೀಣ್ ಶವ ಗುರುವಾಯನಕೆರೆಯಲ್ಲಿ ಪತ್ತೆ…!
ಬೆಳ್ತಂಗಡಿ : ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದೇನೆ ಎಂದು ಗೆಳೆಯರಿಗೆ ಕರೆ ಮಾಡಿ ಹೇಳಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆಯಾಗಿದೆ.
ಮೃತರನ್ನು ಸ್ಥಳೀಯ ಆಟೊ ರಿಕ್ಷಾ ಡ್ರೈವರ್ ಪ್ರವೀಣ್ ಎಂದು ಗುರುತಿಸಲಾಗಿದ್ದು, ಇವರು ಇಂದು ಮುಂಜಾನೆ ತನ್ನ ಸ್ನೇಹಿತರೊಬ್ಬರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು.
ಆ ಕೂಡಲೇ ಸ್ನೇಹಿತರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದಾಗ ಗುರುವಾಯನಕೆರೆಯ ಕೆರೆಯ ಬಳಿ ಪ್ರವೀಣ್ ರಿಗೆ ಸೇರಿದ ಕೆಲವು ದಾಖಲೆಗಳು ಪತ್ತೆಯಾಗಿದ್ದವು.
ಇದರಿಂದಾಗಿ ಕೆರೆಗೆ ಹಾರಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ, ಬೆಳಾಲು ವಿಪತ್ತು ನಿರ್ವಹಣಾ ತಂಡ ಹಾಗೂ ಸ್ಥಳೀಯರು ಕೆರೆಯಲ್ಲಿ ಶೋಧ ಕಾರ್ಯ ನಡೆಸಿದ್ದು, ಮಧ್ಯಾಹ್ನ ವೇಳೆ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಶವಾಗಾರಕ್ಕೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಕಾರಣ ತಿಳಿದುಬಂದಿಲ್ಲ.
ಒಟ್ಟು ಘಟನೆಯ ಬಗ್ಗೆ ಹಲವಾರು ಅನುಮಾನಗಳಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
BELTHANGADY
ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.
ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.
ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ
ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
BELTHANGADY
ಸೌದೆ ಒಡೆಯಲೂ ಬಂತು ಯಂತ್ರ… ಹೇಗಿದೆ ನೋಡಿ..!
ದಕ್ಷಿಣ ಕನ್ನಡ: ಇತ್ತೀಚಿನ ದಿನಗಳಲ್ಲಿ ಎಲ್ಲಾ ಕೆಲಸಗಳೂ ಯಂತ್ರದ ಮೂಲಕವೇ ನಡೆಯುತ್ತಿದೆ. ಮನೆಯಲ್ಲಿ ನೆಲ ಒರಸಲು ಮಿಷಿನ್, ಅಡುಗೆ ಮಾಡಲು ಮಿಷಿನ್ ಹಾಗೆಯೇ ವಾಷಿಂಗ್ ಮಿಷಿನ್ನಲ್ಲಿ ಬಟ್ಟೆ ಒಗೆದರೂ ಅದನ್ನು ಆರಿಸಲೂ ಒಂದು ಮಿಷಿನ್ ಬಂದಿದೆ. ಹೀಗೆ ಪ್ರತಿ ಕೆಲಸಕ್ಕೂ ಜನರು ಯಂತ್ರಗಳನ್ನು ಅವಲಂಭಿಸಿದ್ದಾರೆ. ಹಿಂದೆ ಮರ ಕಡಿಯಲೂ ಜನರೇ ಬೇಕಿತ್ತು. ಆದರೆ ಆ ಜಾಗಕ್ಕೂ ಮಿಷಿನ್ ಬಂತು. ಈಗ ಕಟ್ಟಿಗೆ ಒಡೆಯಲೂ ಮಿಷಿನ್ ಬಂದಿದೆ.
ಹೌದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೇ ಬೇಕಾದ ಸೈಝ್ಗೆ ಕಟ್ಟಿಗೆಯನ್ನು ಒಡೆಯಲು ವಿಶೇಷ ರೀತಿಯ ಯಂತ್ರವೊಂದು ಬಂದಿದೆ. ಈಗ ಬೇಸಿಗೆಯ ಬಿಸಿ ಏರಿದೆ. ಆದರೆ ನಾಳೆಯ ದಿನ ಮಳೆ ಬರಬಹುದು. ಆಗ ಸ್ನಾನ ಮಾಡಲು ನೀರು ಕಾಯಿಸಲು, ಅಡುಗೆಗೆ ಕಟ್ಟಿಗೆಯ ಉಪಯೋಗ ಆಗುತ್ತದೆ ಎಂದು ಜನರು ಈಗಲೇ ಅದನ್ನು ಸಂಗ್ರಹಿಸಿಡುತ್ತಾರೆ. ಇನ್ನು ಬೇಸಿಗೆಯಲ್ಲಿ ಸೋಲಾರ್ ಬಿಸಿ ಆದರೂ ಮಳೆಗಾಲದಲ್ಲಿ ಅದರ ಕೆಲಸ ಕಮ್ಮಿ. ಆಗ ಜನರು ಕಟ್ಟಿಗೆಗಾಗಿಯೇ ಅವಲಂಬಿತರಾಗುತ್ತಾರೆ. ಈಗ ಸೌದೆ ಒಡೆಯುವ ಕೆಲಸ ಯಂತ್ರಗಳೇ ಮಾಡುತ್ತಿದೆ. ಈ ಯಂತ್ರ ಜನರು ಪರಿಶ್ರಮಕ್ಕೆ ಬ್ರೇಕ್ ಹಾಕಿದ್ದು, ಕಷ್ಟದ ಕೆಲಸ ಸುಲಭ ಮಾಡುತ್ತಿದೆ.
ಈ ಮಿಷಿನ್ನ ಬೆಲೆ 2.5 ಲಕ್ಷ ರೂಪಾಯಿ. ಬೆಳ್ತಂಗಡಿ ತಾಲೂಕಿನ ಸವಣಾಲಿನ ಕೇಶವ ಗೌಡ ಎನ್ನುವವರು ಇದನ್ನು ತಮಿಳುನಾಡಿನಿಂದ ತರಿಸಿದ್ದಾರೆ. ಇದು ಪೆಟ್ರೋಲ್ ಚಾಲಿತ ಯಂತ್ರವಾಗಿದ್ದು, ಸಣ್ಣ ಕಟ್ಟಿಗೆಯಿಂದ ಹಿಡಿದು ದೊಡ್ಡ ಕಟ್ಟಿಗೆಯವರೆಗೆ ನಮಗೆ ಬೇಕಾದ ಗಾತ್ರಕ್ಕೆ ಈ ಯಂತ್ರದಲ್ಲಿ ತುಂಡು ಮಾಡಬಹುದು.
ಇದನ್ನೂ ಓದಿ : ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ಮೋದಿ ಭಾಗಿ!?
ಯಂತ್ರ ಚಾಲನೆಗೊಂಡಂತೆ ಚೂಪಾದ ಕೊಡಲಿಯ ಮೊನೆಯೊಂದು ಮೇಲಿನಿಂದ ಕೆಳಗೆ ಬರುತ್ತದೆ. ಇದು ಕಟ್ಟಿಗೆಯನ್ನು ಕ್ಷಣ ಮಾತ್ರದಲ್ಲಿ ಸೀಳಿ ಹಾಕುತ್ತದೆ. ಈ ಕೆಲಸಕ್ಕೆ ಇಬ್ಬರು ಇದ್ದಾರೆ.
ಜನರ ಶ್ರಮದಿಂದ ದಿನಗಟ್ಟಲೇ ಆಗುವ ಕೆಲಸ ಈ ಯಂತ್ರದ ಸಹಾಯದಿಂದ ಒಂದೆರಡು ಗಂಟೆಗಳಲ್ಲಿ ಆಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಕಟ್ಟಿಗೆ ಒಡೆಯಲು ಈಗ ಕಾರ್ಮಿಕರು ಸಿಗುತ್ತಿಲ್ಲ. ಆದ್ದರಿಂದ, ಈ ಯಂತ್ರ ಜನರ ಸಹಕಾರಿಯಾಗಿ ಕಾರ್ಯ ನಿರ್ವಹಿಸಲಿದೆ ಎನ್ನುವುದು ಜನರ ಅಭಿಪ್ರಾಯ.
BELTHANGADY
ಕಾಡಾನೆ ಮುಂದೆ ರೈಡಿಂಗ್..! ಸ್ವಲ್ಪದ್ರಲ್ಲಿ ಉಳಿಯಿತು ಜೀವ..!
ಮಂಗಳೂರು : ಚಾರ್ಮಾಡಿ ಘಾಟ್ನಲ್ಲಿ ಒಂಟಿ ಸಲಗ ಓಡಾಡುತ್ತಿದ್ದು, ಎಪ್ರಿಲ್ 8 ಮದ್ಯಾಹ್ನ 12 ಸುಮಾರಿಗೆ ರಸ್ತೆಯಲ್ಲಿ ಕಾಣ ಸಿಕ್ಕಿದೆ. ಘಾಟ್ನ 9 ನೇ ತಿರುವಿನಲ್ಲಿ ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ಪ್ರಯಾಣಿಕರು ವಾಹನವನ್ನು ನಿಲ್ಲಿಸಿದ್ದಾರೆ. ಇದೇ ವೇಳೆ ಬೈಕ್ ಸವಾರನೊಬ್ಬ ಆನೆಯನ್ನು ಗಮನಿಸದೆ ಆನೆಯ ಎದುರಿನಿಂದಲೇ ಪಾಸ್ ಆಗಿದ್ದಾರೆ. ಅದೃಷ್ಟವಶಾತ್ ಬೈಕ್ ಪಾಸ್ ಆದ ಮೇಲೆ ಆನೆ ರಸ್ತೆಯಲ್ಲಿ ನಡೆದುಕೊಂಡು ಹೋಗಿದೆ.
ಆನೆ ಬಾಂಜಾರು ಮಲೆ ಕಡೆಯಿಂದ ಇಳಿದು ಬಂದಿರುವ ಸಾಧ್ಯತೆ ಇದೆ. ಇತ್ತೀಚೆಗೆ ಇದೇ ಆನೆ ಹಲವೆಡೆ ಓಡಾಡಿದ್ದು, ಕೃಷಿ ಹಾನಿ ಮಾಡಿದ್ದಾಗಿ ಜನರು ಮಾಹಿತಿ ನೀಡಿದ್ದಾರೆ. ನೀರನ್ನು ಹುಡುಕಿಕೊಂಡು ಆನೆ ಅಲೆದಾಡುತ್ತಿದೆ ಅನ್ನೋದು ಇನ್ನೊಂದಷ್ಟು ಜನರ ಅಭಿಪ್ರಾಯ. ಆದ್ರೆ ಈ ಆನೆಯಂತೂ ಕೆಲ ದಿನಗಳಿಂದ ಅಡ್ಡಾಡುತ್ತಿರುವುದಂತೂ ನಿಜ.
ಸದ್ಯ ಚಾರ್ಮಾಡಿ ಘಾಟ್ನ ತಿರುವಿನ ರಸ್ತೆಯಲ್ಲಿ ಎದುರಿನಿಂದ ಬರೋ ವಾಹನಗಳನ್ನ ಗಮನಿಸೋದೇ ಕಷ್ಟ. ಅಂತಹದ್ರಲ್ಲಿ ಆನೆಯೊಂದು ರಸ್ತೆಯ ಸೈಡ್ನಲ್ಲಿ ನಿಂತುಕೊಂಡಿರೋದನ್ನ ಯಾರೂ ಗಮನಿಸಲು ಸಾದ್ಯವಿಲ್ಲ . ಆದರೆ ಮೊದಲು ಆನೆಯನ್ನು ಕಂಡವರು ತಕ್ಷಣ ವಾಹನಗಳನ್ನು ನಿಲ್ಲಿಸಿ ಆನೆ ರಸ್ತೆ ದಾಟುವ ತನಕ ಕಾದಿದ್ದಾರೆ. ಬೈಕ್ ಸವಾರನಿಗೂ ಕೂಗಿ ಹೇಳಿದ್ರೂ ಕೇಳಿಸಿಕೊಳ್ಳದೆ ಆನೆಯ ಮುಂದೆಯೇ ಪಾಸ್ ಆಗಿ ಅಪಾಯದಿಂದ ಪಾರಾಗಿದ್ದಾನೆ. ಈ ವಿಡಿಯೋ ಈಗ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾಕಷ್ಟು ವೈರಲ್ ಆಗುತ್ತಿದೆ.