BELTHANGADY
ಅಂಗಾಂಗ ದಾನದ ಬಗ್ಗೆ ಜಾಗೃತಿ ಅಭಿಯಾನ-3500ಕಿ.ಮೀ ಸೈಕ್ಲಿಂಗ್ ಯಾತ್ರೆ ಪೂರೈಸಿದ ಕರಾವಳಿ ತರುಣರು
ಬೆಳ್ತಂಗಡಿ: ದ.ಕ ಜಿಲ್ಲೆಯ ತರುಣರಿಬ್ಬರು ಬೆಳ್ತಂಗಡಿಯಿಂದ ಕಾಶ್ಮೀರದ ಗುಲ್ಮಾರ್ಗ್ವರೆಗೆ 3,500 ಕಿ.ಮೀ ದೂರದ ಸೈಕ್ಲಿಂಗ್ ಯಾತ್ರೆ ‘ಸಾರ್ಥಕಂ 2022’ ಅನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.
ಬೆಳ್ತಂಗಡಿಯ ಸೈಕ್ಲಿಸ್ಟ್ ಜಗದೀಶ್ ಕುಲಾಲ್ (24) ಹಾಗೂ ಪಕ್ಷಿಕೆರೆಯ ಶ್ರೀನಿಧಿ ಶೆಟ್ಟಿ (26) ಅವರು ಯಶಸ್ವಿಯಾಗಿ ಸೈಕ್ಲಿಂಗ್ ಯಾತ್ರೆಯನ್ನು ಪೂರೈಸಿದ ಕಾರಣಕ್ಕೆ ಅವರನ್ನು ಇಲ್ಲಿ ಅಂದ್ರೆ ತವರೂರಲ್ಲಿ ಸಿಐಎಲ್ ಸಂಸ್ಥೆಯಿಂದ ಅಭಿನಂದಿಸಲಾಯಿತು.
ಇವರು ಬೆಳ್ತಂಗಡಿಯಿಂದ ಅ.1ರಂದು ಸೈಕಲ್ ಯಾತ್ರೆ ಆರಂಭಿಸಿ ಅ.26ರಂದು ಗುಲ್ಮಾರ್ಗ್ ತಲುಪಿದ್ದರು. 26 ದಿನಗಳಲ್ಲಿ ಒಟ್ಟು 10 ರಾಜ್ಯಗಳನ್ನು ಕ್ರಮಿಸಿದ್ದಾರೆ.
ಪರಿಸರ ಸಂರಕ್ಷಣೆ ಮತ್ತು ಅಂಗಾಂಗ ದಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಯಾತ್ರೆ ಕೈಗೊಂಡಿದ್ದಾರೆ’ ಎಂದು ತಿಳಿಸಿದರು.
ಯಾತ್ರೆಯ ಅನುಭವ ಹಂಚಿಕೊಂಡ ಶ್ರೀನಿಧಿ ಶೆಟ್ಟಿ, ‘ಪ್ರತೀಕೂಲ ಹವಾಮಾನ ನಮಗೆ ಸವಾಲಾಗಿತ್ತು. ಪುಣೆ ತಲುಪಿದಾಗ ಭಾರಿ ಮಳೆಯಾಗುತ್ತಿತ್ತು. ದಾರಿಯೂ ಗೋಚರಿಸುತ್ತಿರಲಿಲ್ಲ.
ಗುಜರಾತ್ ಮತ್ತು ರಾಜಸ್ಥಾನದಲ್ಲಿ ವಾಯುಮಾಲಿನ್ಯವು ಗರಿಷ್ಠ ಮಟ್ಟದಲ್ಲಿದೆ. ಆದರೆ ಅಲ್ಲಿನ ದೃಶ್ಯಗಳು ನಯನ ಮನೋಹರವಾಗಿವೆ. ಹರಿಯಾಣದಲ್ಲಿ ಶೀತಗಾಳಿಯನ್ನು ಎದುರಿಸಬೇಕಾಯಿತು’ ಎಂದರು.
ಗುಲ್ಮಾರ್ಗ್ನಲ್ಲಿ ತುಳುನಾಡಿನ ಧ್ವಜವನ್ನು ಹಾಗೂ ರಾಷ್ಟ್ರಧ್ವಜವನ್ನು ಹಾರಿಸಿದೆವು. ಸಮತಟ್ಟಾದ ಪ್ರದೇಶದಲ್ಲಿ ದಿನದಲ್ಲಿ 150ರಿಂದ 180 ಕಿ.ಮೀ ದೂರವನ್ನು ಸೈಕಲ್ನಲ್ಲಿ ಕ್ರಮಿಸಿದ್ದೇವೆ. ಕೆಲವೊಂದು ದಿನ 200 ಕಿ.ಮೀ ಪ್ರಯಾಣಿಸಿದ್ದೂ ಇದೆ.
ಜಮ್ಮು ಮತ್ತು ಕಾಶ್ಮೀರದ ಕಡಿದಾದ ಪ್ರದೇಶಗಳಲ್ಲಿ ದಿನದಲ್ಲಿ 70 ಕಿ.ಮೀ ಸಾಗುವುದಕ್ಕೂ ಸಾಧ್ಯವಾಗಲಿಲ್ಲ’ ಎಂದು ತಿಳಿಸಿದರು.
ಜಗದೀಶ್ ಕುಲಾಲ್, ‘ಯಾತ್ರೆಯ ಉದ್ದಕ್ಕೂ ಸ್ಥಳೀಯ ಆಹಾರವನ್ನೇ ಸೇವಿಸಿದ್ದೇವೆ. ಈ ಯಾತ್ರೆಗೆ ಮೂರು ವರ್ಷಗಳಿಂದ ಸಿದ್ಧತೆ ಮಾಡಿಕೊಂಡಿದ್ದೇವೆ.
ಮನಾಲಿ ಲಡಾಖ್– ಖಾರ್ದುಂಗ್ ಲಾ ಹೀಗೆ ಎತ್ತರದ ಪ್ರದೇಶಗಳಲ್ಲಿ 500 ಕಿ.ಮೀ ದೂರವನ್ನು 14 ದಿನಗಳಲ್ಲಿ ಕ್ರಮಿಸಿದ್ದೇವೆ’ ಎಂದರು.
ಭವಿಷ್ಯದಲ್ಲಿ ಇನ್ನಷ್ಟು ಸೈಕಲ್ ಯಾತ್ರೆ ಕೈಗೊಳ್ಳುವ ಉದ್ದೇಶ ಹೊಂದಿದ್ದೇವೆ’ ಎಂದರು.
ಈ ತರುಣರು ಮೈಸೂರಿನ ಏಷ್ಯನ್ ಪೇಂಟ್ಸ್ ಲಿಮಿಟೆಡ್ ಕಂಪನಿಯಲ್ಲಿ ಉತ್ಪಾದನಾ ಅಧಿಕಾರಿಗಳಾಗಿದ್ದಾರೆ.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.