Connect with us

    BELTHANGADY

    ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ – ಭಕ್ತಿಯ ಆರಾಧನೆ ದೇವರಿಗೆ ಪ್ರಿಯ: ಸತೀಶ್ ಶೆಟ್ಟಿ

    Published

    on

    ಶುದ್ಧ ಮನಸ್ಸಿನಿಂದ ದೇವರಿಗೆ ಶರಣಾದರೆ ಮಾನಸಿಕ ನೆಮ್ಮದಿಯ ಜತೆಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಆಡಂಬರದ ಆರಾಧನೆಗಿಂತ ಭಕ್ತಿಯ ಆರಾಧನೆ ದೇವರಿಗೆ ಪ್ರಿಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.

    ಬೆಳ್ತಂಗಡಿ: ಶುದ್ಧ ಮನಸ್ಸಿನಿಂದ ದೇವರಿಗೆ ಶರಣಾದರೆ ಮಾನಸಿಕ ನೆಮ್ಮದಿಯ ಜತೆಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಆಡಂಬರದ ಆರಾಧನೆಗಿಂತ ಭಕ್ತಿಯ ಆರಾಧನೆ ದೇವರಿಗೆ ಪ್ರಿಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.

    ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾರಾವಿ ವಿಭಾಗದ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ಉಮಾಮಹೇಶ್ವರ ದೇವಸ್ಥಾನ ಹಾಗೂ ಸ್ಥಳೀಯ ಸಂಘಸಂಸ್ಥೆಗಳ ಸಹಕಾರದೊಂದಿಗೆ ಮಂಗಳವಾರ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಜನರಲ್ಲಿ ಧಾರ್ಮಿಕಪ್ರಜ್ಞೆ ಜಾಗೃತಗೊಂಡಿದೆ. ಊರಿನ ಶ್ರದ್ಧಾಕೇಂದ್ರಗಳು ಬೆಳಗಿದಾಗ ಗ್ರಾಮ ಸುಬೀಕ್ಷೆಯಾಗುತ್ತದೆ ಎಂದರು.

    ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅಧ್ಯಕ್ಷತೆ ವಹಿಸಿ, 2024ರಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಆರಂಭವಾಗಲಿದೆ. ಭಕ್ತರ ಸಹಕಾರದಲ್ಲಿ ಸುಸಜ್ಜಿತ ಸಭಾಭವನ, ಸುರಕ್ಷತಾ ಕೊಠಡಿ, ಮುಖಮಂಟಪ ನಿರ್ಮಾಣಕ್ಕೆ ಯೋಜನೆ ಹಾಕಲಾಗಿದೆ. ಭಕ್ತರು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡಬೇಕು ಎಂದರು.

    ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್ ಮಾತನಾಡಿ, ಶ್ರದ್ಧಾಕೇಂದ್ರಗಳು ಗ್ರಾಮದ ಅಭಿವೃದ್ಧಿಯ ಸಂಕೇತ. ಶಾಸಕ ಹರೀಶ್ ಪೂಂಜ ಅವರ ವಿಶೇಷ ಪ್ರಯತ್ನದಿಂದ ದೇವಸ್ಥಾನದ ಅಭಿವೃದ್ಧಿಗೆ ₹35 ಲಕ್ಷ ಅನುದಾನ ಮಂಜೂರಾಗಿದೆ ಎಂದರು.

    ಮರೋಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪದ್ಮಶ್ರೀ ಜೈನ್, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಮುಂಬೈ ಘಟಕದ ಅಧ್ಯಕ್ಷ ನಾರಾಯಣ ಸುವರ್ಣ ಕನರೊಟ್ಟು, ದೇವಸ್ಥಾನದ ಮೊಕ್ತೇಸರ ವಿಜಯ ಆರಿಗ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಸಂತೋಷಪೂಜಾರಿ, ಶುಭರಾಜ ಹೆಗ್ಡೆ, ಯೋಜನೆಯ ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ಶಶಿಕಲಾ ಇದ್ದರು.

    ಯೋಜನೆಯ ನಾರಾವಿ ವಲಯದ ಮೇಲ್ವಿಚಾರಕಿ ದಮಯಂತಿ ಸ್ವಾಗತಿಸಿದರು. ಪೂಜಾ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

    ಸನ್ಮಾನ: ದಾನಿಗಳಾದ ಎಂ.ಕೆ. ಆರಿಗ ಗಾಳಿವನ, ಚಿಕ್ಕಮೇಳದ ಜವಾಬ್ದಾರಿ ವಹಿಸಿದ್ದ ಸುರೇಶ್ ಜೈನ್ ಕೊಕ್ರಾಡಿ, ರಮೇಶ್ ಹೆಗ್ಡೆ ಶಾಶ್ವತ ನಿಲಯ, ಸ್ವಯಂ ಸೇವಕರಾದ ಸೋಮನಾಥ ಪೂಜಾರಿ ಹಿಮರಡ್ಡ, ವಸಂತ ಕುಮಾರ್ ಅಮ್ಮ ನಿವಾಸ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಶ್ರೀಧರ ಕುಲಾಲ್ ಮರೋಡಿ ಅವರನ್ನು ಸನ್ಮಾನಿಸಲಾಯಿತು.

    ‘ಕುಮಾರ ಪಾತ್ರಿಗಳಿಗೆ ವೀಳ್ಯ’

    ಮರೋಡಿ ದೇವಸ್ಥಾನಕ್ಕೆ ಬರುತ್ತಿದ್ದ ಕುಮಾರ ಪಾತ್ರಿ ಕೃಷ್ಣಪ್ಪ ಮಡಿವಾಳ ಕಳೆದ ವರ್ಷ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ದರಗುಡ್ಡೆ ನಾಗರಾಜ ಭಟ್ ಮಾರ್ಗದರ್ಶನದಲ್ಲಿ ನಡೆದ ಪ್ರಶ್ನಾಚಿಂತನೆ ಪ್ರಕಾರ ದೇವಸ್ಥಾನಕ್ಕೆ ಪೂರ್ಣಕಾಲಿಕ ಕುಮಾರ ಪಾತ್ರಿಗಳಾಗಿ ರಾಜೇಶ್ ಪೂಜಾರಿ ಸಾವ್ಯ ಮತ್ತು ಸಂತೋಷ್ ಇರುವೈಲು ಅವರಿಗೆ ವೀಳ್ಯ ನೀಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹೇಳಿದರು.

    ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಗೆ ಚಾಲನೆ

    ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಸಂಪ್ರದಾಯವಾಗಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಭಾನುವಾರ ಆರಂಭವಾಗಿದ್ದು, ಗುರುವಾರ ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

    ಸೋಮವಾರ ತೋರಣ ಮುಹೂರ್ತ, ಧ್ವಜಾರೋಹಣ, ಅನ್ನಸಂತರ್ಪಣೆ, ಸಂಜೆ ದೊಡ್ಡ ರಂಗಪೂಜೆ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ, ಕುಣಿತ ಭಜನೆ ನಡೆಯಿತು. ನಂತರ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಬೆದ್ರ ಪಿಂಗಾರ ಕಲಾವಿದರಿಂದ ಭರಣಿ ಕೃತಿಕೆ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

    Click to comment

    Leave a Reply

    Your email address will not be published. Required fields are marked *

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending