Connect with us

    LATEST NEWS

    ಅಫ್ಘಾನಿಸ್ತಾನದಲ್ಲಿ ಅಮೇರಿಕನ್‌ ಯೋಧರ ಕೈಗಿತ್ತ ಮಗು ಎಲ್ಲಿದೆ?

    Published

    on

    ನ್ಯೂಯಾರ್ಕ್‌: ಮೂರು ತಿಂಗಳ ಹಿಂದೆ ಈ ಮೇಲಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

    ಅಪಘಾನಿಸ್ತಾನವನ್ನು ತಾಲಿಬಾನ್‌ ಉಗ್ರರು ವಶಪಡಿಸಿಕೊಳ್ಳುವ ವೇಳೆ ಸ್ಥಳೀಯರು ಜೀವದ ಹಂಗು ತೊರೆದು ದೇಶ ತೊರೆಯಲು ಮುಂದಾಗಿದ್ದರು.

    ಈ ವೇಳೆ ಸುರಕ್ಷತೆಗಾಗಿ ಅಮೆರಿಕದ ಯೋಧರ ಕೈಗೆ ಹಸ್ತಾಂತರಿಸಲಾಗಿತ್ತು. ಎರಡು ತಿಂಗಳ ಮಗು ಇನ್ನೂ ಪತ್ತೆಯಾಗದೆ ಹೆತ್ತವರು ಸಂಕಷ್ಟ ಪಡುತ್ತಿದ್ದಾರೆ.
    ಅದು ಕಾಬೂಲಿನಲ್ಲಿಯ ಅಮೆರಿಕ ರಾಯಭಾರಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ 10 ವರ್ಷಗಳ ಕಾಲ ದುಡಿದಿದ್ದ ಮಿರ್ಝಾ ಅಲಿ ಮತ್ತು ಪತ್ನಿ ಸುರೈಯಾ ಅವರು ಕ್ಷಣಮಾತ್ರದಲ್ಲಿ ಕೈಗೊಂಡ ನಿರ್ಧಾರವಾಗಿತ್ತು.
    ಆ.19ರಂದು ದೇಶ ಬಿಡಲು ವಿಮಾನ ನಿಲ್ದಾಣದ ಪ್ರವೇಶದ್ವಾರದ ಮುಂದೆ ನೆರೆದಿದ್ದ ಜನರ ದೊಡ್ಡ ಗುಂಪಿನ ನಡುವೆ ಅಲಿ ದಂಪತಿ ತಮ್ಮ ಐವರು ಮಕ್ಕಳೊಂದಿಗೆ ಸಿಕ್ಕಿಹಾಕಿಕೊಂಡಿದ್ದರು.

    ಈ ವೇಳೆ ನಿಲ್ದಾಣದ ಎತ್ತರದ ಆವರಣ ಗೋಡೆಯಾಚೆಯಿದ್ದ ಅಮೆರಿಕದ ಯೋಧನೋರ್ವ ಏನಾದರೂ ನೆರವು ಬೇಕೇ ಎಂದು ಅವರನ್ನು ವಿಚಾರಿಸಿದ್ದ.


    ನೂಕುನುಗ್ಗಲಿನಲ್ಲಿ ತಮ್ಮ ಎರಡು ತಿಂಗಳು ಪ್ರಾಯದ ಸುಹೈಲ್‌ ಅನ್ನು ಅಲಿ ದಂಪತಿ ಮಗು ವನ್ನು ಯೋಧನ ಕೈಗೆ ನೀಡಿದ್ದರು.

    ಪ್ರವೇಶದ್ವಾರ ಕೇವಲ ಐದು ಮೀಟರ್ ಅಂತರದಲ್ಲಿದ್ದುದರಿಂದ ಬೇಗನೆ ತಾವು ಒಳಪ್ರವೇಶಿಸುತ್ತೇವೆ ಎಂದವರು ಭಾವಿಸಿದ್ದರು.

    ಇದೇ ವೇಳೆ ತಾಲಿಬಾನಿಗಳು ಜನರನ್ನು ಹಿಂದಕ್ಕೆ ತಳ್ಳಲಾರಂಭಿಸಿದ್ದರು. ಹೀಗಾಗಿ ತಮ್ಮ ಉಳಿದ ಮಕ್ಕಳೊಂದಿಗೆ ನಿಲ್ದಾಣದೊಳಗೆ ಪ್ರವೇಶಿಸಲು ದಂಪತಿಗೆ ಅರ್ಧ ಗಂಟೆ ಹಿಡಿದಿತ್ತು.

    ಆದರೆ ಆ ವೇಳೆಗೆ ಸುಹೈಲ್ ಅಲ್ಲೆಲ್ಲಿಯೂ ಇರಲಿಲ್ಲ. ಹತಾಶ ಅಲಿ ನಿಲ್ದಾಣದೊಳಗೆ ಎದುರಾಗಿದ್ದ ಪ್ರತಿ ಅಧಿಕಾರಿಯನ್ನೂ ತನ್ನ ಮಗುವಿನ ಬಗ್ಗೆ ವಿಚಾರಿಸಿದ್ದರು.

    ವಿಮಾನ ನಿಲ್ದಾಣವು ಮಕ್ಕಳ ಪಾಲಿಗೆ ಅತ್ಯಂತ ಅಪಾಯಕಾರಿಯಾಗಿದ್ದು ಮಗುವನ್ನು ಮಕ್ಕಳಿಗಾಗಿಯೇ ವಿಶೇಷವಾಗಿ ವ್ಯವಸ್ಥೆ ಮಾಡಲಾಗಿದ್ದ ಜಾಗಕ್ಕೆ ಕರೆದೊಯ್ದಿರಬೇಕು ಎಂದು ಅಲಿಗೆ ತಿಳಿಸಿದ್ದ ಅಮೆರಿಕದ ಮಿಲಿಟರಿ ಕಮಾಂಡರ್‌ನೋರ್ವ ದಂಪತಿಯನ್ನು ಅಲ್ಲಿಗೆ ಕರೆದೊಯ್ದಿದ್ದ.

    ಆದರೆ ಆ ಜಾಗ ಖಾಲಿಯಾಗಿತ್ತು. ಕಮಾಂಡರ್ ಕೂಡ ಮಗುವನ್ನು ಹುಡುಕಿಕೊಂಡು ಅಲಿಯೊಂದಿಗೆ ಇಡೀ ವಿಮಾನ ನಿಲ್ದಾಣವನ್ನು ಸುತ್ತಾಡಿದ್ದ ಮೂರು ದಿನಗಳ ಕಾಲ ನಿರಂತರವಾಗಿ ದಂಪತಿ ಮಗುವಿಗಾಗಿ ಹುಡುಕಾಡುತ್ತಿದ್ದರು. ಇಲ್ಲಿ ಮಕ್ಕಳನ್ನು ಇಟ್ಟುಕೊಳ್ಳಲು ವ್ಯವಸ್ಥೆಯಿಲ್ಲ, ಹೀಗಾಗಿ ಮಗುವನ್ನು ವಿಮಾನದಲ್ಲಿ ಸಾಗಿಸಿರಬೇಕು ಎಂದು ಅಧಿಕಾರಿಯೋರ್ವ ಅಲಿಗೆ ತಿಳಿಸಿದ್ದ.

    ಇಷ್ಟಾದ ಬಳಿಕ ಅಲಿ(35), ಸುರೈಯಾ (32) ಮತ್ತು 17, 9, 6 ಹಾಗೂ 3 ವರ್ಷ ಪ್ರಾಯದ ಅವರ ಮಕ್ಕಳನ್ನು ತೆರವು ವಿಮಾನವೊಂದರಲ್ಲಿ ಖತರ್‌ಗೆ ಮತ್ತು ನಂತರ ಜರ್ಮನಿಗೆ, ಅಂತಿಮವಾಗಿ ಅಮೆರಿಕಕ್ಕೆ ಸಾಗಿಸಲಾಗಿತ್ತು.

    ಅಲ್ಲಿ ಕುಟುಂಬವೀಗ ಇತರ ಅಫ್ಘಾನ್ ನಿರಾಶ್ರಿತರೊಂದಿಗೆ ಟೆಕ್ಸಾಸ್‌ನ ಪೋರ್ಟ್ ಬ್ಲಿಸ್‌ನಲ್ಲಿ ಅಮೆರಿಕದಲ್ಲಿ ಎಲ್ಲಾದರೂ ಪುನರ್ವಸತಿಗಾಗಿ ಕಾಯುತ್ತಿದೆ. ಅಲ್ಲಿ ಅವರಿಗೆ ಯಾರೂ ಬಂಧುಗಳಿಲ್ಲ.
    ಏರ್‌ಲಿಫ್ಟ್ ಸಂದರ್ಭದಲ್ಲಿ ಇತರ ಕೆಲವು ಕುಟುಂಬಗಳೂ ಮುಳ್ಳು ಬೇಲಿಯಾಚೆಯಿದ್ದ ಅಮೆರಿಕದ ಯೋಧರಿಗೆ ತಮ್ಮ ಮಕ್ಕಳನ್ನು ಹಸ್ತಾಂತರಿಸಿದ್ದವು.

    ಅವರೆಲ್ಲ ತಮ್ಮ ಮಕ್ಕಳನ್ನು ವಾಪಸ್ ಪಡೆದುಕೊಂಡಿದ್ದಾರೆ. ಅಲಿ ತನಗೆದುರಾಗುವ ನೆರವು ಕಾರ್ಯಕರ್ತರು, ಅಮೆರಿಕದ ಅಧಿಕಾರಿಗಳ ಬಳಿ ಮಗುವಿನ ಬಗ್ಗೆ ವಿಚಾರಿಸುತ್ತಲೇ ಇದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಅಫ್ಘಾನ್ ನಿರಾಶ್ರಿತರ ಗುಂಪೊಂದು ಮಗುವನ್ನು ಯಾರಾದರೂ ಗುರುತಿಸಬಹುದು ಎಂಬ ಆಸೆಯಿಂದ ಸುಹೈಲ್ ಭಾವಚಿತ್ರವನ್ನು ಸಾಮಅಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುತ್ತಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending