Connect with us

    LATEST NEWS

    ಬಜ್ಪೆ: ಮರವೂರಿನಲ್ಲಿ ನದಿಪಾಲಾಗಿದ್ದ ಮತ್ತೋರ್ವ ಯುವಕನ ಮೃ*ತದೇಹ ಪತ್ತೆ

    Published

    on

    ಬಜ್ಪೆ: ಇಲ್ಲಿನ ಮರವೂರಿನ ಫಲ್ಗುಣಿ ನದಿಯಲ್ಲಿ ಎರಡು ದಿನಗಳ ಹಿಂದೆ ಈಜಲು ತೆರಳಿ ನಾಪತ್ತೆಯಾಗಿದ್ದ ಕೊಟ್ಟಾರ ಚೌಕಿ ನಿವಾಸಿ ಸುಮಿತ್ (20) ಅವರ ಮೃ*ತದೇಹ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.

    ನಾಲ್ವರು ಸ್ನೇಹಿತರು ರವಿವಾರ ಸಂಜೆ ಮರವೂರಿನ ಫಲ್ಗುಣಿ ನದಿಯಲ್ಲಿ ಈಜಾಡಲೆಂದು ಬಂದಿದ್ದರು. ಈ ಪೈಕಿ ಕೊಟ್ಟಾರ ಚೌಕಿ ನಿವಾಸಿ ಸುಮಿತ್, ಉರ್ವ ಅಂಗಡಿ ನಿವಾಸಿ ಅನೀಶ್ ನದಿಯಲ್ಲಿ ನಾಪತ್ತೆಯಾಗಿದ್ದರು. ಈ ಪೈಕಿ ಉರ್ವ ಅಂಗಡಿ ನಿವಾಸಿ ಅನೀಶ್ ಅವರ ಮೃ*ತದೇಹ ಸೋಮವಾರ ಪತ್ತೆಯಾಗಿತ್ತು. ಸುಮಿತ್ ರಿಗಾಗಿ ಎನ್ ಡಿ ಆರ್ ಎಫ್ ಮತ್ತು ಎಸ್ ಟಿ ಆರ್ ಎಫ್ ತಂಡಗಳು ಕಾರ್ಯಾಚರಣೆ ಮುಂದುವರಿಸಿದ್ದವು. ಇಂದು ಅವರ ಮೃ*ತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ನದಿಯಲ್ಲಿ ಈಜಲು ತೆರಳಿದ್ದ ನಾಲ್ವರ ಪೈಕಿ ಕೋಡಿಕಲ್ ನಿವಾಸಿ ಅರುಣ್ ಮತ್ತು ಕೋಡಿಕಲ್ ಮಾಳೂರು ನಿವಾಸಿ ದೀಕ್ಷಿತ್ ಪ್ರಾಣಾಪಾಯದಿಂದ ಪಾರಾಗಿದ್ದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಆಯ್ಕೆ

    Published

    on

    ಮಂಗಳೂರು: ಅಕ್ಟೋಬರ್ 24 ರಂದು ನಡೆಯಲಿರುವ ಪರಿಷತ್ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ ಗೊಳಿಸಿದೆ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

    ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ್ದರು. ಬಳಿಕ ಪಕ್ಷದಲ್ಲಿ ವಿವಿಧ ಜವಾಬ್ದಾರಿ ವಹಿಸಿಕೊಂಡಿದ್ದ ಕಿಶೋರ್ ಕುಮಾರ್ ಪಕ್ಷ ಕಟ್ಟುವಲ್ಲಿ ಶ್ರಮ ವಹಿಸಿದ್ದರು.

    ಇತ್ತೀಚೆಗೆ ವಿಧಾನಸಭಾ ಚುನಾವಣಾ ಸಮಯದಲ್ಲೂ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕಿಶೋರ್ ಕುಮಾರ್‌ಗೆ ಸಿಗಲಿದೆ ಎಂಬ ಸುದ್ದಿ ಹರಡಿತ್ತು. ಆದ್ರೆ ಇದೀಗ ಇವರ ಪರಿಶ್ರಮವನ್ನು ಗುರುತಿಸಿದ ಪಕ್ಷ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಹೆಸರು ಘೋಷಣೆ ಮಾಡಿದೆ.

    Continue Reading

    LATEST NEWS

    ಐಫೋನ್​ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್​ನನ್ನೇ ಕೊಂ*ದ ವ್ಯಕ್ತಿ

    Published

    on

    ಉತ್ತರ ಪ್ರದೇಶ: ಐಫೋನ್​ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್​ನನ್ನೇ ಹ*ತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


    ವ್ಯಕ್ತಿ ಫ್ಲಿಪ್​ಕಾರ್ಟ್​ ಮೂಲಕ 1.5 ಲಕ್ಷ ರೂಪಾಯಿ ಬೆಲೆ ಬಾಳುವ ಐಫೋನ್​ನ್ನು ಕ್ಯಾಶ್​ ಆನ್ ಡೆಲಿವರಿಯಲ್ಲಿ ಆರ್ಡರ್ ಮಾಡಿದ್ದ, ಡೆಲಿವರಿ ಏಜೆಂಟ್​ ಅವರ ಮನೆಗೆ ಬಂದು ಐಫೋನ್ ಕೊಟ್ಟಿದ್ದಾರೆ ಆದರೆ ಆತನಿಗೆ ಹಣಕೊಡಬೇಕಲ್ಲಾ ಎಂದು ಚಿಂತಿಸಿ ಡೆಲಿವರಿ ಏಜೆಂಟ್​ನನ್ನೇ ಹ*ತ್ಯೆ ಮಾಡಿ ಕಾಲುವೆಗೆ ಎಸೆದಿದ್ದಾನೆ.

    ನಿಶಾತ್‌ಗಂಜ್ ನಿವಾಸಿಯಾದ ಡೆಲಿವರಿ ಬಾಯ್ ಭರತ್ ಸಾಹು ಫೋನ್ ಡೆಲಿವರಿ ಮಾಡಲು ಅವರ ಮನೆಗೆ ಹೋಗಿದ್ದರು. ಅಲ್ಲಿ ಗಜಾನನ ಮತ್ತು ಅವನ ಸಹಚರರು ಅವರನ್ನು ಕೊ*ಲೆ ಮಾಡಿದ್ದಾರೆ. ಸಾಹುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಮೃ*ತದೇಹವನ್ನು ಗೋಣಿಚೀಲದಲ್ಲಿ ತುಂಬಿ ಇಂದಿರಾ ಕಾಲುವೆಗೆ ಎಸೆದಿದ್ದಾರೆ.

    ಎರಡು ದಿನಗಳ ಕಾಲ ಸಾಹು ಮನೆಗೆ ಬಾರದಿದ್ದಾಗ, ಆತನ ಕುಟುಂಬದವರು ಚಿನ್ಹಾಟ್ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಸಾಹುವಿನ ಕಾಲ್ ಡಿಟೇಲ್ಸ್ ಸ್ಕ್ಯಾನ್ ಮಾಡಿ ಆತನ ಲೊಕೇಶನ್ ಹುಡುಕಿ ಪೊಲೀಸರು ಗಜಾನನ ನಂಬರ್ ಪತ್ತೆ ಮಾಡಿ ಆತನ ಸ್ನೇಹಿತ ಆಕಾಶ್​ನನ್ನು ತಲುಪಿದ್ದಾರೆ.

    ವಿಚಾರಣೆ ವೇಳೆ ಆಕಾಶ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ಅಧಿಕಾರಿ ತಿಳಿಸಿದ್ದಾರೆ. ಹತ್ಯೆಯ ನಂತರ ಆಕಾಶ್ ಕೂಡ ಮುಂಬೈಗೆ ಪರಾರಿಯಾಗಿದ್ದ. ಆದರೆ, ಪೊಲೀಸರಿಗೆ ಇನ್ನೂ ಶ*ವ ಪತ್ತೆಯಾಗಿಲ್ಲ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡವು ಕಾಲುವೆಯಲ್ಲಿ ದೇಹವನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ.

    Continue Reading

    LATEST NEWS

    ರಾಯರ ದರ್ಶನಕ್ಕೆ ಹೋದವರ ಮನೆಗೆ ಕನ್ನ; ಮಂಜುನಾಥನ ಸನ್ನಿಧಿಯಲ್ಲಿ ಅರೆಸ್ಟ್​

    Published

    on

    ಮಂಗಳೂರು/ಬೆಂಗಳೂರು : ಆ ಐನಾತಿ ಕಳ್ಳರು ಪ್ರವಾಸಕ್ಕೆ ತೆರಳುವ ಮಂದಿಯ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದರು.  ಆದರೆ, ಈ ಬಾರಿ ಕೆಲಸ ಕೈ ಕೊಟ್ಟಿದೆ. ರಾಯರ ದರ್ಶನಕ್ಕೆ ಹೋದವರ ಮನೆಯಲ್ಲಿ ಕದ್ದು ಮಂಜುನಾಥನ ದರ್ಶನಕ್ಕೆ ಹೋದವರು ತಗಲಾಕ್ಕೊಂಡಿದ್ದಾರೆ.

    ಆರೋಪಿ ಸನ್ಯಾಸಿಮಠ ನಂದೀಶ್ ಮತ್ತು ನಂದೀಶ್ ಪ್ರತಾಪ್ ಬಂಧಿತ ಆರೋಪಿಗಳು. ಹನುಮೇಗೌಡ ಎಂಬಾತ  ಪರಾರಿಯಾಗಿದ್ದಾನೆ. ಕಳ್ಳತನ ಮಾಡಿದ 12 ಗಂಟೆಯಲ್ಲೇ ಸುಬ್ರಮಣ್ಯ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಸುಬ್ರಮಣ್ಯ ನಗರದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದವರಿಗೆ ಆರೋಪಿ ಸನ್ಯಾಸಿಮಠ ನಂದೀಶ್​​ ಸಂಬಂಧಿಕನಾಗಿದ್ದ. “ತಮ್ಮ ಮನೆಯ ಮಾಲೀಕರು ಮಂತ್ರಾಲಯಕ್ಕೆ ಹೋಗುತ್ತಿದ್ದಾರೆ” ಎಂದು ಮನೆ ಕೆಲಸದವರು ಮಾತನಾಡಿಕೊಳ್ಳುತ್ತಿದ್ದರು. ಇವರ ಮಾತನ್ನು ಪಕ್ಕದಲ್ಲೇ ನಿಂತು ಸನ್ಯಾಸಿಮಠ ನಂದೀಶ್​ ಕದ್ದು ಕೇಳಿಸಿಕೊಂಡಿದ್ದ. ಈ ವಿಚಾರವನ್ನ ಸನ್ಯಾಸಿಮಠ ನಂದೀಶ್​ ತನ್ನ ಸ್ನೇಹಿತರಿಗೆ ಹೇಳಿ, ಕನ್ನ ಹಾಕಲು ಯೋಜನೆ ರೂಪಿಸಿದ್ದರು.

    ಚಿನ್ನ ಎಗರಿಸಿ ಪರಾರಿ :

    ಮನೆಯವರು ಮಂತ್ರಾಲಯಕ್ಕೆ ಯಾವಾಗ ಹೋಗುತ್ತಾರೆ ಅಂತ ಮನೆ ಬಳಿ ನಿತ್ಯ ಪರೇಡ್​ ಮಾಡಿದ್ದಾನೆ. ಒಂದು ದಿನ ಮನೆಯವರು ಮಂತ್ರಾಲಯಕ್ಕೆ ಹೋಗಿದ್ದಾರೆ.  ಇತ್ತ ಖದೀಮರು ಮನೆಯ ಹಿಂಬದಿ ಕಿಟಕಿಯನ್ನು ಗ್ಯಾಸ್ ಕಟರ್​ನಿಂದ ಕಟ್ ಮಾಡಿ ಮನೆಯೊಳಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ 1 ಕೆಜಿ 800 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. ಕದ್ದ ಎಲ್ಲ ಚಿನ್ನವನ್ನು ಸನ್ಯಾಸಿಮಠ ನಂದೀಶ್​ ತನ್ನ ರೂಂನಲ್ಲಿ ಇಟ್ಟಿದ್ದ. ಬಳಿಕ, ಚಿನ್ನ ಕದ್ದ ಖುಷಿಯಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದಾನೆ.

    ಇದನ್ನೂ ಓದಿ : ದೇಗುಲ ಆಗಿರಲಿ, ದರ್ಗಾ ಆಗಿರಲಿ ಅಕ್ರಮವಾಗಿ ಕಟ್ಟಿದ್ದರೆ ತೆರವು : ಸುಪ್ರೀಂ ಕೋರ್ಟ್

    ಮನೆ ಮಾಲೀಕರು ಮಂತ್ರಾಲಯದಿಂದ ವಾಪಸು ಬಂದು ನೋಡಿದಾಗ, ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಾಲೀಕರು ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರಿಸಿ ಪೊಲೀಸರು ಆರೋಪಿಗಳ ಬೆನ್ನು ಹತ್ತಿದ್ದಾರೆ. ಸನ್ಯಾಸಿಮಠ ನಂದೀಶ್​ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ಬಳಿಕ, ಇನ್ನೋರ್ವ ಆರೋಪಿ ನಂದೀಶ್​ ಪ್ರತಾಪ್​ನನ್ನು ಬಂಧಿಸಿದ್ದಾರೆ. ಬಂಧಿತರಿಂದ ಪೊಲೀಸರು 1ಕೆಜಿ 800 ಗ್ರಾಂ ಚಿನ್ನ ಸೇರಿದಂತೆ 18 ಸಾವಿರ ರೂ. ನಗದು ವಶಕ್ಕೆ ಪಡೆದಿದ್ದಾರೆ.

    Continue Reading

    LATEST NEWS

    Trending