Connect with us

FILM

ಕಥೆಯೆ ಮುಗಿದೇ ಹೋದರೂ ಮುಗಿಯದಿರಲಿ ಬಂಧನ…. SPB ಹಾಡು ನಿಲ್ಲಿಸಿ ಒಂದು ವರುಷ

Published

on

ಬೆಂಗಳೂರು: ಭಾರತೀಯ ಚಿತ್ರರಂಗದ ಮೇರು ಗಾಯಕ ಡಾ. ಎಸ್​.ಪಿ. ಬಾಲಸುಬ್ರಹ್ಮಣ್ಯಂ ನಿಧನರಾಗಿ ಇಂದಿಗೆ ಒಂದು ವರ್ಷವಾಗಿದ್ದು, ಇಂದು ಅವರ ಪ್ರಥಮ ಪುಣ್ಯಸ್ಮರಣೆ ಆಚರಿಸಲಾಗುತ್ತಿದೆ.


ಎಸ್​​ಪಿಬಿ ತಮ್ಮ 74 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಕಳೆದ ವರ್ಷ ಆಗಸ್ಟ್ 5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಅವರಿಗೆ ಗರಿಷ್ಠ ಲೈಫ್ ಸಪೋರ್ಟ್ ನೀಡಲಾಗಿತ್ತು.

ಆದರೂ ಗಾನ ಗಂಧರ್ವನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಇಹಲೋಕದ ಯಾತ್ರೆ ಮುಗಿಸಿದರು.

ದಕ್ಷಿಣ ಭಾರತ ಮಾತ್ರವಲ್ಲದೇ ಬಾಲಿವುಡ್ ಸೇರಿದಂತೆ ದೇಶದ ವಿವಿಧ ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಎಸ್​ಪಿಬಿ ಹಾಡಿದ್ದಾರೆ.

ನಾಲ್ಕು ಭಾಷೆಗಳಲ್ಲಿ ಒಟ್ಟು 6 ರಾಷ್ಟ್ರ ಪ್ರಶಸ್ತಿಗಳು, ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ, ಸುಮಾರು 25 ಬಾರಿ ಆಂಧ್ರ ಪ್ರದೇಶದ ಪ್ರತಿಷ್ಠಿತ ನಂದಿ ಪ್ರಶಸ್ತಿ, ಹಲವು ವಿಶ್ವ ವಿದ್ಯಾಲಯಗಳಿಂದ ಡಾಕ್ಟರೇಟ್, ನಟ, ಕಂಠದಾನ ಕಲಾವಿದ, ನಿರ್ಮಾಪಕ ಹೀಗೆ ಎಸ್.ಪಿ. ಬಾಲಸ್ರುಬ್ರಹ್ಮಣ್ಯಂ ಮಾಡಿರುವ ಸಾಧನೆಗಳಿಗೆ ಲಭಿಸಿರುವ ಗೌರವಗಳು ಅನೇಕ.

FILM

ಯಶ್ ಅಭಿನಯದ “ಟಾಕ್ಸಿಕ್” ಗೆ ಹಿರೋಯಿನ್‌ ಫಿಕ್ಸ್..!!

Published

on

ಕೆಜಿಎಫ್ ಹಿಟ್ ಬಳಿಕ ಯಶ್ ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ತನಕ ಫ್ಯಾನ್ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಯಶ್ ಜೊತೆ ತೆರೆ ಹಂಚಿಕೊಳ್ಳಲು ಹೀರೋಯಿನ್‌ಗಳು ತುದಿಗಾಲಿನಲ್ಲಿದ್ದಾರೆ. ಯಶ್ ಅಭಿನಯದ ಕೆಜಿಎಫ್-1, ಕೆಜಿಎಫ್-2 ಭಾರೀ ಮಟ್ಟದಲ್ಲಿ ಸದ್ದು ಮಾಡಿತ್ತು. ಘಟಾನುಘಟಿ ಆ್ಯಕ್ಟರ್ಸ್ ಗಳನ್ನು ಹೊಂದಿದ್ದ ಸಿನೆಮಾ ದಾಖಲೆಯನ್ನೇ ನಿರ್ಮಿಸಿತ್ತು.

ಕೆಜಿಎಫ್‌ನಲ್ಲಿ ಯಶ್ ಗೆ ಕರಾವಳಿ ಬೆಡಗಿ ಶ್ರೀನಿಧಿ ಶೆಟ್ಟಿ ಹಿರೋಯಿನ್‌ ಆಗಿದ್ದರು. ಬಳಿಕ ಅವರ ಸ್ಟಾರ್ ಬದಲಾಗಿದ್ದು, ಅನೇಕ ಸಿನೆಮಾ ಆಫರ್‌ಗಳು ಕೂಡಾ ಒಲಿದು ಬಂತು. ಇದೀಗ ಯಶ್ ರವರ ‘ಟಾಕ್ಸಿಕ್’ ಸಿನಿಮಾಕ್ಕೆ ಹೀರೋಯಿನ್ ಯಾರಾಗಲಿದ್ದಾರೆ..? ಎಂಬುದು ಚಂದನವನದಲ್ಲಿ ಭಾರೀ ಕುತೂಹಲ ಉಂಟುಮಾಡಿದೆ.

ಯಶ್ ಗೆ ಜೋಡಿಯಾಗಲಿದ್ದಾರ ಸೌತ್ ಸಿನೆಮಾ ನಟಿ..!!

ಟಾಕ್ಸಿಕ್ ಸಿನೆಮಾ ಸಿನಿ ಪ್ರಿಯರಲ್ಲಿ ಭಾರಿ ನಿರೀಕ್ಷೆಯನ್ನುಂಟು ಮಾಡಿದೆ.ಯಶ್ ಸಿನೆಮಾ ಅಂದ್ರೆ ಹಾಗೆನೆ.. ಇವರು ಅಭಿನಯಿಸಿರುವ ಎಲ್ಲಾ ಸಿನೆಮಾಗಳು ಸೂಪರ್ ಹಿಟ್. ಟಾಕ್ಸಿಕ್ ನಲ್ಲಿ ಬಾಲಿವುಡ್ ಹಿರೋಯಿನ್‌ ಗಳ ಹೆಸರು ಕೇಳಿಬರುತ್ತಿದೆ. ಹೌದು, ಟಾಕ್ಸಿಕ್ ಸಿನೆಮಾದಲ್ಲಿ ನಾನಿರುವುದಾಗಿ ಸಂದರ್ಶನವೊಂದರಲ್ಲಿ  ಕರೀನಾ ಕಪೂರ್ ರವರು ಖುದ್ದಾಗಿ ಮಾಹಿತಿ ನೀಡಿದ್ದಾರೆ. ಆದ್ರೆ ಹಿರೋಯಿನ್ ಆಗಿ ಅಲ್ಲ. ಸಿನೆಮಾದಲ್ಲಿ ಯಶ್ ರವರ ತಂಗಿಯಾಗಿ ನಟನೆ ಮಾಡಲಿದ್ದಾರೆ.

ಹಿರೋಯಿನ್ ಆಗಿ ಒಂದೆರಡು ಹೆಸರು ಚಂದನವನದಲ್ಲಿ ಓಡಾಡ್ತ ಇದೆ. ಸೌತ್ ಸಿನಿಮಾದ ನ್ಯಾಚುರಲ್ ಬ್ಯೂಟಿ ಕ್ವೀನ್, ಪಡ್ಡೆ ಹೈಕಳ ಮನಕದ್ದ ಮಲರ್ ಯಶ್ ಗೆ ಜೋಡಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡ್ತಾ ಇದೆ. ಹೌದು, ಟಾಕ್ಸಿಕ್‌ ಸಿನೆಮಾದ ರಾಣಿಯಾಗಲಿದ್ದಾರಂತೆ ಸಾಯಿ ಪಲ್ಲವಿ. ಯಶ್ 19ನೇ ಸಿನಿಮಾ ಟಾಕ್ಸಿಕ್​. ಮಲಯಾಳಂ ಡೈರೆಕ್ಟರ್ ಗೀತು ಮೋಹನ​ ದಾಸ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಸದ್ಯ ಸಿನಿ ಅಂಗಳದಲ್ಲಿ ಬಿಸಿ ಬಿಸಿ ಚರ್ಚೆಯಲ್ಲಿರುವ ಸಿನಿಮಾವಾಗಿದೆ.

 

Continue Reading

DAKSHINA KANNADA

ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ…! ಯಾವ ಕ್ಷೇತ್ರದಿಂದ ಸ್ಪರ್ಧೆ..!?

Published

on

ಕ್ಷಿಣ ಕನ್ನಡ ಜಿಲ್ಲೆಯ ಚೆಲುವೆ…ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ರಾಜಕೀಯ ವಲಯದಲ್ಲಿ ಸುದ್ದಿಯಾಗಿದ್ದಾರೆ. ಟಾಲಿವುಡ್‌ನ ಬ್ಯೂಟಿ ಕ್ವೀನ್‌ ಆಗಿ ಮೆರೆದಿದ್ದ ಅನುಷ್ಕಾ ಶೆಟ್ಟಿಗೆ ಇರುವ ದೊಡ್ಡ ಅಭಿಮಾನಿ ಬಳಗ ಕೂಡಾ ಇಂತಹ ಒಂದು ಚರ್ಚೆ ನಡೆಸ್ತಾ ಇದೆ. ಆಂಧ್ರ ಹಾಗೂ ತೆಲಂಗಾಣದಲ್ಲಿ ಅನುಷ್ಕಾ ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಬಾರಿ ಅನುಷ್ಕಾ ಶೆಟ್ಟಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಅನ್ನೋ ದೊಡ್ಡ ಚರ್ಚೆ ಆರಂಭವಾಗಿದೆ.

ಲೋಕಸಭೆ ಚುನಾವಣೆಯ ಜೊತೆಯಲ್ಲೇ ಆಂಧ್ರ ವಿಧಾನಸಭೆಗೂ ಚುನಾವಣೆ ನಡೆಯುತ್ತಿರುವುದೇ ಈ ಚರ್ಚೆಗೆ ಕಾರಣವಾಗಿದೆ. ಅನುಷ್ಕಾ ಶೆಟ್ಟಿ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಅಭಿಮಾನಿಗಳು ಮಾತ್ರವಲ್ಲದೆ, ರಾಜಕೀಯ ವಲಯದಲ್ಲೂ ಚರ್ಚೆ ನಡೆದಿದೆ.

ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷದಿಂದ ಅನುಷ್ಕಾ ಶೆಟ್ಟಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಅನ್ನೋ ಸುದ್ದಿ ಹರಡಿದೆ. ಬಿಜೆಪಿ ಹಾಗೂ ಟಿಡಿಪಿ ಪಕ್ಷದ ಬೆಂಬಲ ಹೊಂದಿರುವ ಜನಸೇನಾ ಪಕ್ಷದ ಪ್ರಮುಖ ನಾಯಕರ ಜೊತೆ ಅನುಷ್ಕಾ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಆದ್ರೆ ಅನುಷ್ಕಾ ಜನಸೇನಾ ಪಕ್ಷಕ್ಕೆ ಸ್ಟಾರ್ ಪ್ರಚಾರಕಿಯಾಗಿ ಹೋಗಲಿದ್ದಾರೆ. ಚುನಾವಣೆಗೆ ನಿಲ್ಲೋದು ಸುಳ್ಳು ಸುದ್ದಿ ಎಂದು ಕೆಲ ಅಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡ್ತಾರೆ ಅನ್ನೋದೊಂದು ನಕಲಿ ಸುದ್ದಿ ಎಂದು ಕೆಲ ಸುದ್ದಿ ವಾಹಿನಿಗಳು ಕೂಡಾ ವರದಿ ಮಾಡಿದೆ. ಅನುಷ್ಕಾ ಶೆಟ್ಟಿ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದು, ರಾಜಕೀಯದಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನು ಓದಿ ಹಿಂದಿಗೆ ರಿಮೇಕ್ ಆಗುತ್ತಿದೆ ಝೀ ಕನ್ನಡದ ಫೇಮಸ್‌ ಸೀರಿಯಲ್‌…! ಪ್ರೋಮೋ ರಿಲೀಸ್‌..! 

ಮಲಯಾಳಂ ಸಿನಿಮಾದಲ್ಲಿ ಬಿಝಿ :

‘ಬಾಹುಬಲಿ’ ಸಿನಿಮಾದ ಬಳಿಕ ಅನುಷ್ಕಾ ಶೆಟ್ಟಿ ಭಾರಿ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಬಾಹುಬಲಿ 2’ ಸಿನಿಮಾದ ಬಳಿಕ ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರವೇ ಅನುಷ್ಕಾ ನಟಿಸಿದ್ದಾರೆ. ಅನುಷ್ಕಾ ಶೆಟ್ಟಿ ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಕಾಮಿಡಿ ಹಾಗೂ ಡ್ರಾಮಾ ಕಥೆಯಾಗಿದ್ದ ಇದು ಪ್ರೇಕ್ಷಕರನ್ನು ರಂಜಿಸಿದೆ.ಇದೀಗ ಅನುಷ್ಕಾ ಶೆಟ್ಟಿ ಮಲಯಾಳಂ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ.

ಮಲಯಾಳಂನಲ್ಲಿ RIAL 5- ಹಾರ‌ರ್ ಸಿನಿಮಾ ಒಂದರಲ್ಲಿ ಅನುಷ್ಕಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅನುಷ್ಕಾ ಶೆಟ್ಟಿ ರಾಜಕೀಯ ಪ್ರವೇಶ ಮಾಡುವ ಬದಲಿಗೆ ಹೆಚ್ಚು ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರಲಿ ಎಂಬುದು ಅಭಿಮಾನಿಗಳ ಆಶಯ. ಆದ್ರೆ, ಅನುಷ್ಕಾ ರಾಜಕೀಯ ಎಂಟ್ರಿಯನ್ನೂ ತಳ್ಳಿ ಹಾಕಲು ಸಾದ್ಯವಿಲ್ಲ ಅನ್ನೋದು ಸದ್ಯ ಚಾಲ್ತಿಯಲ್ಲಿರುವ ಚರ್ಚಾ ವಿಷಯ.

Continue Reading

FILM

ಕೊನೆಗೂ ಸಿಕ್ಕೇ ಬಿಡ್ತು “ಸಮಂತಾ-ನಾಗಚೈತನ್ಯ” ಡಿವೋರ್ಸ್ ಗುಟ್ಟು..!! ಇದೇ ಕಾರಣನಾ?

Published

on

ಟಾಲಿವುಡ್ ಟಾಪ್ ನಟಿ ಸಮಂತಾ ಮತ್ತು ನಾಗ ಚೈತನ್ಯ ಡಿವೋರ್ಸ್ ದೇಶದೆಲ್ಲೆಡೆ ಸದ್ದುಮಾಡಿತ್ತು.  ಇದೀಗ ಇವರಿಬ್ಬರ ವಿಚ್ಚೇದನಕ್ಕೆ ಸ್ಪಷ್ಟ ಕಾರಣವೊಂದು ಹೊರಬಿದ್ದಿದೆ. ಹೌದು,  ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ.. “ಕೊನೆಗೂ ಈಡೇರಿದ ನನ್ನ ಪುಟ್ಟ ಆಸೆ” ಎಂದ ನಟಿ ಅದಿತಿ ಪ್ರಭುದೇವ; ಏನದು ಗೊತ್ತಾ!?

ಹಲವು ವರ್ಷಗಳ ಹಿಂದೆ ಬಹಳ ಅದ್ಧೂರಿಯಾಗಿ ಕುಟುಂಬ ಸಮ್ಮುಖದಲ್ಲಿ ಮದುವೆಯಾಗಿದ್ದರು. ಸಿನಿ ಇಂಡಸ್ಟ್ರಿಯಲ್ಲಿ ಇರುವ ಅನೇಕರ ಫೇವರೆಟ್ ಕಪಲ್‌ಗಳಲ್ಲಿ ಇವರೂ ಕೂಡಾ ಆಗಿದ್ದರು. ಆದರೆ ವರ್ಷ ಕಳೆದರೂ ಅವರಿಬ್ಬರು ಪ್ರತ್ಯೇಕಗೊಳ್ಳಲು ಕಾರಣ ತಿಳಿದು ಬಂದಿರಲಿಲ್ಲ. ಸಮಂತಾ – ನಾಗಚೈತನ್ಯ ಸ್ಟಾರ್ ನಟರಾಗಿದ್ದು, ಇವರಿಬ್ಬರ ವಿಚ್ಚೇದನಕ್ಕೆ ಹಲವು ಊಹಾಪೋಹಗಳು ಹರಿದಾಡುತ್ತಿತ್ತು. ಸೋಶಿಯಲ್ ಮೀಡಿಯಾದಲ್ಲಂತೂ ಈ ಮುದ್ದಾದ ಜೋಡಿ ಮತ್ತೆ ಒಂದಾಗಬೇಕು ಎಂದು ಬೇಡಿಕೊಂಡವರೆಷ್ಟೋ.

ಫೋನ್ ಟ್ಯಾಪಿಂಗ್ ಇವರಿಬ್ಬರಿಗೆ ಮುಳುವಾಯಿತಾ..!

ಆದರೆ ಇದೀಗ ಮೂರು ವರ್ಷಗಳ ಬಳಿಕ ಇವರಿಬ್ಬರ ವಿಚ್ಚೇದನಕ್ಕೆ ಕಾರಣ ತಿಳಿದು ಬಂದಿದೆ. ತೆಲಂಗಾಣ ರಾಜಕೀಯದಲ್ಲಿ ಭಾರಿ ಅಲೆಗಳನ್ನು ಎಬ್ಬಿಸಿರುವ ಫೋನ್ ಟ್ಯಾಪಿಂಗ್​ನಿಂದಲೇ ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಫೋನ್ ಟ್ಯಾಪಿಂಗ್ ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ತೆಲುಗು ಚಿತ್ರರಂಗದ ತಾರಾ ಜೋಡಿಯೊಂದರ ವಿಚ್ಛೇದನಕ್ಕೆ ಫೋನ್ ಟ್ಯಾಪಿಂಗ್ ಕಾರಣವಾಗಿದೆ ಎಂಬ ಅಂಶ ಹರಿದಾಡುತ್ತಲೇ ಇತ್ತು. ಆದರೆ ಆ ತಾರಾ ಜೋಡಿ ಯಾರೆಂಬುದು ಬೆಳಕಿಗೆ ಬಂದಿರಲಿಲ್ಲ. ಆ ತಾರಾ ಜೋಡಿ ಸಮಂತಾ ಮತ್ತು ನಾಗ ಚೈತನ್ಯ ಎಂಬ ಮಾತುಗಳು ಈಗ ಕೇಳಿ ಬರುತ್ತಿವೆ.

 

 

 

Continue Reading

LATEST NEWS

Trending