LATEST NEWS
“ಬಲಿಪಜ್ಜ”ರೆಂದೇ ಖ್ಯಾತಿವೆತ್ತ ಬಲಿಪ ನಾರಾಯಣ ಭಾಗವತರು..
ಭಾಗವತ ಭೀಷ್ಮ..ಅಜ್ಜನ ಪ್ರೀತಿಯ ಶಿಷ್ಯ..ಯಕ್ಷಕ್ಷೇತ್ರದ ಬೃಹತ್ ವೃಕ್ಷ ಬಲಿಪ ನಾರಾಯಣ ಭಾಗವತರು..ಹೌದು ಯಕ್ಷಗಾನದ ಹಾಡು ಅಂದ್ರೆನೇ ಹಾಗೆ..ಯಾರನ್ನು ಕೂಡ ಒಮ್ಮೆ ಮೌನ ಮುಗ್ಧರನ್ನಾಗುಸುತ್ತದೆ..
ಬಲಿಪ ನಾರಾಯಣ ಭಾಗವತರು…ಯಕ್ಷಗಾನ ಕ್ಷೇತ್ರದಲ್ಲಿ ಈ ಹೆಸರು ಗೊತ್ತಿಲ್ಲದವರೂ ಯಾರು ಇಲ್ಲ..ಯಕ್ಷಗಾನದ ರಂಗಸ್ಥಳವನ್ನೊಮ್ಮೆ ಏರಿದರೆ ಸಾಕು ಅವರ ಆ ಕಂಠಕ್ಕೆ ಸರಿಸಾಟಿ ಇನ್ನೊಬ್ಬರಿಲ್ಲ…ಹೌದು, ತೆಂಕು ತಿಟ್ಟು ಯಕ್ಷಗಾನದ ಹಿರಿಯ ಹಾಗೂ ಪ್ರಸಿದ್ಧ ಭಾಗವತರು ಬಲಿಪರು..ಪರಂಪರೆಯ ಕಂಠಸಿರಿ ಮೂಲಕ ಜನಮಾನಸದಲ್ಲಿ ತಳವೂರಿರುವವರು ಬಲಿಪ ನಾರಾಯಣ ಭಾಗವತರು. ಸುದೀರ್ಘ ಯಕ್ಷಪಯಣದಲ್ಲಿ ಯಕ್ಷಗಾನೀಯ ಚೌಕಟ್ಟನ್ನು ನೀರಿ ಹೋಗದೆ, ಸಾಂಪ್ರದಾಯಿಕ ಭಾಗವತಿಕೆಗೆ ಪರ್ಯಾಯ ಹೆಸರೇ ಬಲಿಪ ಭಾಗವತರು ಎಂಬ ಖ್ಯಾತಿ ಗಳಿಸಿದವರು. ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮೇಳದಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದವರು ಬಲಿಪ ನಾರಾಯಣ ಭಾಗವತರು..
ಬಲಿಪ ಮಾಧವ ಭಟ್ ಹಾಗೂ ಸರಸ್ವತಿ ದಂಪತಿಗಳ ಮುದ್ದಿನ ಪುತ್ರ ಬಲಿಪರು ಮಾರ್ಚ್ 13, 1938ರಂದು ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ ಜನಿಸಿದರು. ತಮ್ಮ ತಾತ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು 13ನೇ ವರ್ಷದಲ್ಲಿ ರಂಗಪ್ರವೇಶಗೈದರು…ಇವರ ಪತ್ನಿ ಶ್ರೀಮತಿ ಜಯಲಕ್ಷ್ಮೀ .. ಇವರ ನಾಲ್ವರು ಮಕ್ಕಳಲ್ಲಿ ಮಾಧವ ಬಲಿಪರು ಹಿಮ್ಮೇಳವಾದಕರಾಗಿದ್ದು, ಶಿವಶಂಕರ ಬಲಿಪ ಮತ್ತು ಪ್ರಸಾದ ಬಲಿಪರು ಪ್ರಸಿದ್ದ ಭಾಗವತರು.., ಇನ್ನೋರ್ವ ಪುತ್ರ ಶಶಿಧರ್ ಬಲಿಪ ಕೃಷಿಕರು….
ತೆಂಕು ತಿಟ್ಟು ಯಕ್ಷಗಾನದ ಭೀಷ್ಮ ಎಂದು ಕರೆಯಲ್ಪಡುವ ಬಲಿಪ ನಾರಾಯಣ ಭಾಗವತರು 60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡರು. ಪಡ್ರೆ ಜಠಾಧಾರಿ ಮೇಳವನ್ನು ಮೊದಲಿಗೆ ಆರಂಭಿಸಿದರು.. ಸುಮಾರು 50ಕ್ಕೂ ಹೆಚ್ಚು ಯಕ್ಷಗಾನ ಪ್ರಸಂಗಗಳ ಕಂಠಪಾಠ ಬಲಿಪರಿಗಿತ್ತು..
ಭಾಗವತ ಭೀಷ್ಮ ವಿಶೇಷಣಕ್ಕೆ ಇವರಿಗಿಂತ ಸೂಕ್ತ ಇನ್ನೊಬ್ಬರಿಲ್ಲ. ಅಜ್ಜನ ಶಿಷ್ಯನಾಗಿ ಭಾಗವತಿಕೆಯಲ್ಲಿಯೇ ಬದುಕಿದವರು ಇವರು. ಯಕ್ಷಕ್ಷೇತ್ರದ ಬೃಹತ್ ವೃಕ್ಷ. ಇವರ ಗರಡಿಯಲ್ಲಿ ಪಳಗಿದ ಅದೆಷ್ಟೋ ಮರಗಳಿಗೂ ಇವರದೇ ಮಾರ್ಗದರ್ಶನ. ಬಲಿಪ ನಾರಾಯಣ ಭಾಗವತರು.
ಯಕ್ಷಗಾನದ ಸುದೀರ್ಘ ಸೇವೆಗಾಗಿ ಅಭಿಮಾನಿಗಳು” ಬಲಿಪ ಅಮೃತ ಭವನ”ವನ್ನು ಕಟ್ಟಿಸಿಕೊಟ್ಟಿದ್ದಾರೆ. ಬಲಿಪನಾರಾಯಣ ಭಾಗವತರು “ಐದು ದಿನದ ದೇವಿ ಮಹಾತ್ಮೆ”ಎಂಬ ಪ್ರಸಂಗವನ್ನು ರಚಿಸಿದ್ದು, ಯಕ್ಷಗಾನದ ಇತಿಹಾಸದಲ್ಲೇ ಇದು ಮಹತ್ವದ ಕೃತಿಯಾಗಿತ್ತು..
ಅದೆಷ್ಟೋ ಹಿರಿಯ ಯಕ್ಷಗಾನ ಕಲಾವಿದರಲ್ಲಿ ಇವರು ಒಬ್ಬ ಸಮರ್ಥ ಭಾಗವತರು..ಯಾವತ್ತೋ ಇವರ ಮುಡಿಗೆ ಸೇರಬೇಕಾದ ಅತೀ ಎತ್ತರದ ಗೌರವಾನ್ವಿತ ಪ್ರಶಸ್ತಿ ಪಾರ್ತಿಸುಬ್ಬ ಬಲಿಪರ ಮಡಿಲಿಗೆ ಸೇರಿದ್ದು ಬಹಳ ಸಂತೋಷಕರ ವಿಚಾರವೇ ಸರಿ..ಆದರೆ ಈ ಪ್ರಶಸ್ತಿ ಹೆಸರುಗಳನ್ನು ಯಾವತ್ತು ಬಯಸಿದವರಲ್ಲ ಬಲಿಪ ನಾರಾಯಣ ಭಾಗವತರು. ಅವರ ಸರಳ ವ್ಯಕ್ತಿತ್ವ ಇಂದು ಎಲ್ಲರಿಗೂ ಮಾದರಿಯಾಗಿದೆ.
ಹಲವಾರು ಪ್ರಶಸ್ತಿ, ಗೌರವಗಳ ಸರದಾರ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಮಂಡಳಿಯ (ಕಟೀಲು ಮೇಳ) ದ ಪ್ರಧಾನ ಭಾಗವತರಾಗಿದ್ದರು ಬಲಿಪರು. ಎಲ್ಲರ ಅಚ್ಚು ಮೆಚ್ಚಿನ ಬಲಿಪ್ಪಜ್ಜ ಫೆ.18, 2023 ರಂದು ಇಹಲೋಕ ತ್ಯಜಿಸಿದರು..
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
LATEST NEWS
ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!
ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.
ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!