LATEST NEWS
ಬೆಂಗಳೂರಿನಲ್ಲಿ ದರೋಡೆಗೆ ಹೋದ ಮನೆಯಲ್ಲಿ ಸೇಬು ತಿಂದು ಸಿಕ್ಕಿಬಿತ್ತು ಕಳ್ಳರ ಗ್ಯಾಂಗ್..!
ಬೆಂಗಳೂರಿನಲ್ಲಿ ದರೋಡೆಗೆ ಹೋದ ಮನೆಯಲ್ಲಿ ಸೇಬು ತಿಂದು ಸಿಕ್ಕಿಬಿತ್ತು ಕಳ್ಳರ ಗ್ಯಾಂಗ್..!
ಬೆಂಗಳೂರು: ಥೇಟ್ ಸಿನಿಮಾ ಶೈಲಿಯಲ್ಲಿ ಸ್ಕೆಚ್ ಹಾಕಿ ದೊಡ್ಡ ದೊಡ್ಡ ಮನೆಗಳನ್ನು ನೋಡಿ ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದ ಗ್ಯಾಂಗನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬರೋಬ್ಬರಿ 50ಕ್ಕೂ ಹೆಚ್ಚು ದರೋಡೆ ಪ್ಲ್ಯಾನ್ ಗಳನ್ನು ಈ ಗ್ಯಾಂಗ್ ಮಾಡಿದ್ದು ಇದೀಗ ಕಂಬಿಯ ಹಿಂದೆ ಹೋಗಿದೆ. ಆ ಕಳ್ಳರ ಗ್ಯಾಂಗನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಲಾಗಿದೆ.
ಕದಿಯಲು ಹೋದ ಮನೆಯ ಅಡುಗೆ ಮನೆಯಲ್ಲಿ ಸೇಬು ಹಣ್ಣು ತಿನ್ನುತ್ತಾ ಕುಳಿತಿದ್ದ ಕಳ್ಳಿಯನ್ನು ಮನೆಯ ಮಾಲೀಕರೇ ಪೊಲೀಸರಿಗೆ ಹಿಡಿದುಕೊಟ್ಟಿದ್ದಾರೆ.
ಹೂ ಬೇಕಾ ಹೂವ ಎಂದು ಕೂಗುತ್ತಾ ಬೆಂಗಳೂರಿನ ರಸ್ತೆ ರಸ್ತೆಗಳಲ್ಲಿ ಓಡಾಡುತ್ತಿದ್ದ ಮಹಿಳೆಯೊಬ್ಬಳು ಒಂದು ಬಿಗ್ ಸ್ಕೆಚ್ ಹಾಕುತ್ತಿದ್ದಳು.
ಹೂ ಮಾರೋ ನೆಪದಲ್ಲಿ ಮನೆಗಳ್ಳತನ ಮಾಡಲು ಈ ಲೇಡಿ ಖದೀಮರಿಗೆ ಸಹಾಯ ಮಾಡುತ್ತಿದ್ದಳು.
ಇದೇ ತಿಂಗಳ 14ನೇ ತಾರೀಕಿನಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದ ಅರಿಶಿನಕುಂಟೆಯ ಬಡಾವಣೆಯಲ್ಲಿ ಉದ್ಯಮಿ ರವಿ ಎನ್ನುವವರ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದ ವೇಳೆ ಈ ಗ್ಯಾಂಗ್ ಸಿಕ್ಕಿಬಿದ್ದಿದೆ.
ಕಲಬುರ್ಗಿ ಜಿಲ್ಲೆ ಚಿತ್ತಾಪುರ ಮೂಲದ ಕಲ್ಯಾಣಿ ಹಾಗೂ ಬಸವರಾಜು, ಬೆಂಗಳೂರಿನ ಬನಶಂಕರಿ ಮೂಲದ ಶಿವಾನಂದ ಹಾಗೂ ಉಷಾ ಬಂಧಿತ ಆರೋಪಿಗಳು.
ನೆಲಮಂಗಲದಲ್ಲಿ ಕಳ್ಳತನದಲ್ಲಿ ತೊಡಗಿದ್ದಾಗ ಹಠಾತ್ತನೆ ಮನೆ ಮಾಲೀಕ ಬಂದಾಗ ಮನೆಯ ಹೊರಗಿದ್ದ ಶಿವಾನಂದ ಪರಾರಿಯಾಗುತ್ತಾನೆ.
ಮಾಲೀಕ ರವಿ ಮನೆ ಒಳಗೆ ಎಂಟ್ರಿ ಕೊಡುತ್ತಲೇ ಕಳ್ಳತನ ಮಾಡುತ್ತಿದ್ದ ಬಸವರಾಜು ಕೈಗೆ ಸಿಕ್ಕಿದ್ದನ್ನು ದೋಚಿಕೊಂಡು ಮನೆಯಿಂದ ಪರಾರಿಯಾಗಿದ್ದ.
ಆದರೆ, ಕುಡಿತದ ಮತ್ತಿನಲ್ಲಿದ್ದ ಕಲ್ಯಾಣಿ ಮನೆಯ ಫ್ರಿಡ್ಜ್ನಲ್ಲಿದ್ದ ಸೇಬು ಹಣ್ಣನ್ನು ತಿನ್ನುತ್ತಾ ಕುಳಿತಿದ್ದನ್ನು ಕಂಡು ಆರೋಪಿ ಕಲ್ಯಾಣಿಯನ್ನು ಮನೆ ಮಾಲೀಕ ರವಿ ನೆಲಮಂಗಲ ನಗರ ಪೊಲೀಸರಿಗೆ ಒಪ್ಪಿಸಿದ್ದ.
ಪ್ರಕರಣ ದಾಖಲಿಸಿಕೊಂಡ ನೆಲಮಂಗಲ ನಗರ ಪೊಲೀಸರು ಪರಾರಿಯಾಗಿದ್ದ ಆರೋಪಿಗಳಾದ ಕಲ್ಯಾಣಿ, ಶಿವಾನಂದ, ಉಷಾಳನ್ನು ಬಂಧಿಸಿ 17 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ವಶಕ್ಕೆ ಪಡೆದಿದ್ದಾರೆ.
ಹೆಚ್ಚಿನ ತನಿಖೆ ನಡೆಸಿದಾಗ ಆರೋಪಿ ಕಲ್ಯಾಣ್ ಮೇಲೆ ರಾಜ್ಯದ ಉದ್ದಗಲಕ್ಕೂ 50ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ ಎಂದು ತಿಳಿದುಬಂದಿದೆ.
ಒಟ್ಟಾರೆ ಹೂ ಮಾರೋ ನೆಪದಲ್ಲಿ ಒಂಟಿ ಮನೆಗಳ ನಿವಾಸಿಗಳಿಗೆ ಹೂ ಮುಡಿಸಲು ಹೋಗಿ ಕಳ್ಳರು ಸರಿಯಾಗಿ ಸಿಕ್ಕಿಹಾಕಿಕೊಂಡಿದ್ದಾರೆ.
ಕಳ್ಳತನವನ್ನೇ ಫುಲ್ ಟೈಂ ಬ್ಯುಸಿನೆಸ್ ಮಾಡಿಕೊಂಡಿದ್ದ ಆರೋಪಿ ಕಲ್ಯಾಣ್ ಜೊತೆಗೆ ಮೂರು ಜನ ಆರೋಪಿಗಳು ಜೈಲಿಗಟ್ಟಿದ್ದಾರೆ.
FILM
ಮೊದಲ ಬಾರಿ ಮದುವೆ ರಹಸ್ಯ ಬಿಚ್ಚಿಟ್ಟ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್
ಬೆಂಗಳೂರು : ಬಿಗ್ಬಾಸ್ ಕನ್ನಡ ಸೀಸನ್ 10ರಲ್ಲಿ ಹಲವು ಸ್ಪರ್ಧಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದಾರೆ. ಇದರಲ್ಲಿ ಹುಲಿ ಉಗುರು ಧರಿಸಿದ ಕಾರಣಕ್ಕೆ ಪೊಲೀಸರಿಂದ ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ ಅವರ ಬಂಧನವಾಗಿತ್ತು. ಈಗ ಮದುವೆ ವಿಚಾರ ಮತ್ತೆ ಮುನ್ನೆಲೆಗೆ ಬಂದು ನಿಂತಿದೆ.
ಬಿಗ್ ಬಾಸ್ ಮನೆಯಲ್ಲಿಯೇ ತಮ್ಮ ಮದುವೆ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ವರ್ತೂರು ಸಂತೋಷ್ ಅವರಿಗೆ ಮದುವೆ ಆಗಿದೆ. ಒಬ್ಬಳು ಹೆಣ್ಣು ಮಗು ಕೂಡ ಇದೆ. ಆದರೆ ಅವರು ಮದುವೆ ಆಗಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕೆಲದಿನಗಳ ಹಿಂದೆ ಸೋಷಿಯಲ್ಮೀಡಿಯಾದಲ್ಲಿ ಗುಲ್ಲೆದ್ದಿತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಸ್ವತಃ ವರ್ತೂರ್ ಅವರೇ ತಮ್ಮ ಮದುವೆ, ಪತ್ನಿ ಜೊತೆಗಿನ ಭಿನ್ನಾಭಿಪ್ರಾಯಗಳ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.
ಬಿಗ್ಬಾಸ್ ಮನೆ ಸೇರಿದಾಗಿನಿಂದ ಈ ವರೆಗೂ ತನಗೆ ಮದುವೆ ಆಗಿದೆ ಎಂಬ ಒಂದೇ ಒಂದು ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿರಲಿಲ್ಲ ವರ್ತೂರು ಸಂತೋಷ್. ಈಗ ಗುಟ್ಟು ರಟ್ಟಾಗಿದೆ.
‘ವರ್ತೂರ ಸಂತೋಷ್ ಒಳಗಡೇ ಏನೈತೆ ಅನ್ನೋದನ್ನು ಹೇಳ್ತಿದ್ದೇನೆ. ನೋಡು ದೊಡ್ಡಪ್ಪ ನೀನು ಹೀಗು ತಾಳಿಕಟ್ಟು ಅಂದ್ರೆ ಕಟ್ಟಿಬಿಡ್ತಿನಿ. ನಾನು ಅವರಿಗೆ ಮಾತು ಕೊಟ್ಟು ಒಪ್ಪಿಕೊಂಡು ಬಿಟ್ಟೆ. ಮದುವೆಯೂ ಆಯ್ತು, ದಿನ ಕಳೆದಂತೆ, ಅಮ್ಮನನ್ನು ಇಗ್ನೋರ್ ಮಾಡೋಕೆ ಶುರು ಮಾಡಿದ್ರು. ನಾನು ಸಂಪಾದನೆ ಮಾಡಿದ ಜನರನ್ನು ತೊರೆದು ಇವರ ಹಿಂದೆ ಹೋಗಬೇಕು ಎಂದರೆ ಅದು ಸಾಧ್ಯವಾಗದ ಮಾತು. ಆಗ ಹೆಂಡತಿ ಮನೆ ಹತ್ತಿರ ಹೋಗ್ತಿನಿ. ನನ್ನ ಮಾತಿನ ಪ್ರಕಾರ ಬಂದ್ರೆ, ನೀನು ರಾಣಿನೇ ಎಂದು ಕರೆದೆ. ಮೊದಲು ನೀನು ಗೇಟಿಂದ ಆಚೆ ಹೋಗು ಎನ್ನುತ್ತಾರೆ. ಆವತ್ತು ನಾನು ಮಾತು ಕೊಟ್ಟು ಬಂದಿದ್ದೀನಿ ಇವತ್ತು ಆ ಮಾತಿನ ಮೇಲೆ ನಿಂತಿದ್ದೀನಿ’ ಎಂದಿದ್ದಾರೆ ವರ್ತೂರು.
ಮುಂದೇನಾಗುತ್ತೆ ಅನ್ನುವುದನ್ನ ಇವತ್ತಿನ ಎಪಿಸೋಡ್ ನಲ್ಲಿ ನೋಡ್ಬೇಕಷ್ಟೆ..
Ancient Mangaluru
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.
ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು. ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.
ಪ್ರೀತಮ್ ಅವರು ಬೈಕ್ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್ ಪಂಪ್ ಕಡೆಯಿಂದ ಸರ್ವಿಸ್ ರೋಡ್ನಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್ ಕೆಟರಿಂಗ್ ಉದ್ಯಮ ನಡೆಸುತ್ತಿದ್ದರು. ಪ್ರೀತಮ್ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
- bengaluru6 days ago
ಸಿಂಪಲ್ ಆಗಿ ಮದುವೆಯಾದ ಒಳ್ಳೆ ಹುಡುಗ ಪ್ರಥಮ್
- bangalore6 days ago
ವಿನಯ್ ತರ ದುಷ್ಮಾನ್ ಆದ್ರೂ ಓಕೆ, ಆದ್ರೆ ಸಂಗೀತಾ ತರ ಪ್ರೆಂಡ್ಸ್ ಬೇಡ..!
- bangalore3 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!