LATEST NEWS
ಅತ್ತ ತಾಯಿ ನೇಣು ಕುಣಿಕೆಯಲ್ಲಿ: ಇತ್ತ ಹಸಿವಿನಿಂದ ನರಳಿ ಪ್ರಾಣ ಬಿಟ್ಟ 9 ತಿಂಗಳ ಹಸುಗೂಸು
ಬೆಂಗಳೂರು: ಕುಟುಂಬ ಕಲಹದಿಂದ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಕಾರಣವಾಗಿದ್ದ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು,
9 ತಿಂಗಳ ಹಸುಗೂಸು ಹಾಲಿಲ್ಲದೆ ಅತ್ತು ಅತ್ತು ಪ್ರಾಣ ಬಿಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಯಾವ ವಿಚಾರಕ್ಕೆ ಗಲಾಟೆ
ಇಬ್ಬರು ಹೆಣ್ಣು ಮಕ್ಕಳು ಗಂಡನ ಮನೆ ತೊರೆದು ತವರು ಮನೆ ಸೇರಿದ್ದರು. ಇದೇ ವಿಚಾರಕ್ಕೆ ಮನೆಯಲ್ಲಿ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು.
ಹೆಣ್ಣು ಮಕ್ಕಳನ್ನು ಗಂಡನ ಮನೆಗೆ ಕಳುಹಿಸೋಕೆ ತಂದೆ ಶಂಕರ್ ತುಂಬಾ ಪ್ರಯತ್ನ ಮಾಡಿದ್ದ.
ಆತ್ಮಹತ್ಯೆ ಮಾಡಿಕೊಂಡ ದಿನವೂ ಮನೆಯಲ್ಲಿ ಗಲಾಟೆ ನಡೆದಿತ್ತು. ಈ ಹಿಂದೆ ಮಗುವಿಗೆ ಕಿವಿ ಚುಚ್ಚುವ ವಿಚಾರವಾಗಿ ಕುಟುಂಬದ ನಡುವೆ ಜಗಳ ನಡೆದಿತ್ತು.
ಸಿಂಧೂರಾಣಿ 9 ತಿಂಗಳ ಮಗುವಿನ ಕಿವಿ ಚುಚ್ಚುವ ಶಾಸ್ತ್ರ ಮತ್ತು ನಾಮಕರಣ ವಿಚಾರವಾಗಿ ಜಗಳ ಆಗಿತ್ತು.
ಇನ್ನು, ಹಿರಿಯ ಮಗಳು ಸಿಂಚನ ಕೂಡ ಗಂಡನ ಜೊತೆ ಮುನಿಸಿಕೊಂಡು ತವರು ಮನೆ ಸೇರಿದ್ದಳು. ಕಳೆದ ಒಂದೂವರೆ ವರ್ಷದಿಂದ ತವರು ಮನೆಯಲ್ಲೇ ಇದ್ದಳು.
ಇದೆಲ್ಲದರ ವಿಚಾರವಾಗಿ ಮನೆಯಲ್ಲಿ ಆಗ್ಗಾಗ್ಗೆ ಗಲಾಟೆಯಾಗ್ತಿತ್ತು ಎಂದು ತಿಳಿದು ಬಂದಿದೆ.
3 ವರ್ಷದ ಮಗು ಬದುಕುಳಿದಿದ್ದು ಹೇಗೆ?
ಪವಾಡದ ರೀತಿ 3 ವರ್ಷದ ಮಗು ಪ್ರೇಕ್ಷಾ ಬದುಕುಳಿಯಲು ಕಾರಣ ಏನು ಗೊತ್ತಾ? ಮಗು ಪ್ರೇಕ್ಷಾ ಬದುಕುಳಿಯಲು ಕಾರಣವಾಗಿದ್ದೇ ಮಾವ ಮಧು ಸಾಗರ್.
ನಾಲ್ವರ ಸಾವಿನ ಬಳಿಕ ಮಧುಸಾಗರ್ ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ.
ಅಮ್ಮ ಹಾಗೂ ಅಕ್ಕಂದಿರ ಸಾವಿನ ಬಳಿಕ ಮಧು ಸಾಗರ್ ನೇಣು ಹಾಕಿಕೊಂಡಿದ್ದಾನೆ. ನಾಲ್ವರ ಮೃತದೇಹಕ್ಕಿಂತ ಮಧುಸಾಗರ್ ಮೃತದೇಹ ಕಡಿಮೆ ಕೊಳೆತಿದೆ.
ಮೃತ ದೇಹಗಳನ್ನ ರವಾನೆ ಮಾಡುವ ವೇಳೆ ಈ ಅಂಶವನ್ನು ಪೊಲೀಸರು ಗಮನಿಸಿದ್ದಾರೆ. ಅಮ್ಮ, ಅಕ್ಕಂದಿರ ಸಾವಿನ ಎರಡು ದಿನದ ಬಳಿಕ ಮಧುಸಾಗರ್ ನೇಣಿಗೆ ಶರಣಾಗಿರುವ ಸಾಧ್ಯತೆ ಇದೆ.
ಹೀಗಾಗಿ ಮಗು ಪ್ರೇಕ್ಷಾಳಿಗೆ ಮಧುಸಾಗರ್ ತಿಂಡಿ ತಿನಿಸು ನೀಡಿದ್ದಾನೆ ಎನ್ನಲಾಗಿದೆ. ಈ ಕಾರಣದಿಂದಾಗಿಯೇ 3 ವರ್ಷದ ಪ್ರೇಕ್ಷಾ ಬದುಕುಳಿದಿದ್ದಾಳೆ ಎನ್ನಲಾಗ್ತಿದೆ.
ಶಂಕರ್ ಮನೆ ಬಿಟ್ಟು ಹೋಗಲು ಕಾರಣವೇನು?
ಹಣದ ವ್ಯವಹಾರದ ವಿಚಾರವಾಗಿ ಮಗನ ಜೊತೆಗೆ ಕೂಡ ಶಂಕರ್ಗೆ ಭಿನ್ನಾಭಿಪ್ರಾಯ ಇತ್ತು. ಮಗ ಮಧುಸಾಗರ್ ಬಾರ್ ಓಪನ್ ಮಾಡಲು 20 ಲಕ್ಷ ಕೊಟ್ಟು ರಿಜಿಸ್ಟರ್ ಮಾಡಿಸಲು ರೆಡಿ ಮಾಡಿಕೊಂಡಿದ್ದ.
ರಿಜಿಸ್ಟರ್ ಮಾಡಲು ಶಂಕರ್ ಸಹಿ ಬೇಕಾಗಿತ್ತು. ಆದರೆ ಸಹಿ ಮಾಡಲು ಶಂಕರ್ ನಿರಾಕರಿಸಿದ್ದ. ಈ ವಿಚಾರವಾಗಿ ಕೂಡ ಭಾನುವಾರ ಮನೆಯಲ್ಲಿ ಜಗಳ ಆಗಿತ್ತು.
‘‘ನನ್ನ ಎಲ್ಲಾ ಆಸ್ತಿ, ಹಣವನ್ನು ಹೆಂಡತಿ ಹಾಗೂ ಮಗನಿಗೆ ನೀಡಿದ್ದೆ.
ನನಗೆ ಹಣ ಬೇಕಾದಾಗ ಅವರನ್ನೇ ಕೇಳಿ ಪಡೆಯಬೇಕಾಗಿತ್ತು‘‘ ಎಂದು ಶಂಕರ್ ಪೊಲೀಸರ ಬಳಿ ಹೇಳಿದ್ದಾನೆ.
ಆಶ್ರಮ ಕಟ್ಟಿಸಲು ಶಂಕರ್ ತನ್ನ ಹೆಂಡತಿ ಮಕ್ಕಳ ಬಳಿ 10 ಲಕ್ಷ ಹಣ ಕೇಳಿದ್ದ.
ಈ ವೇಳೆ ಹಣ ನೀಡೋದಕ್ಕೆ ಪತ್ನಿ-ಮಗ ನಿರಾಕರಿಸಿದ್ದರು. ಈ ವಿಚಾರ ಕೂಡ ಭಾನುವಾರ ಜಗಳವಾಗಲು ಕಾರಣವಾಯಿತು.
ಈ ಎಲ್ಲಾ ವಿಚಾರದಿಂದ ಜಗಳ ಮಾಡಿಕೊಂಡು ಶಂಕರ್ ಮನೆ ಬಿಟ್ಟುಹೋಗಿದ್ದ.
ಆಶ್ರಮ ಕಟ್ಟಿಸಲು ಶಂಕರ್ ಮುಂದಾಗಿದ್ದೇಕೆ?
ಮನೆ ಯಜಮಾನ ಶಂಕರ್ ಕೌಟುಂಬಿಕ ಕಲಹದಿಂದ ಬೇಸತ್ತಿದ್ದ. ಪದೇ ಪದೇ ಕುಟಂಬದಲ್ಲಿ ನಡೆಯುತ್ತಿದ್ದ ಜಗಳದಿಂದ ಬಹಳ ಬೇಸರದಲ್ಲಿದ್ದ.
ಮಕ್ಕಳ ಭವಿಷ್ಯಕ್ಕೆ ದಾರಿ ಮಾಡಿಕೊಟ್ಟಿದ್ದರೂ ಕಲಹಗಳು ನಿಂತಿರಲಿಲ್ಲ.
ಹೀಗಾಗಿ ಸಾಂಸಾರಿಕ ಸಮಸ್ಯೆಗಳಿಂದ ಹೊರ ಬರಲು ಆಶ್ರಮ ಕಟ್ಟಲು ಶಂಕರ್ ತೀರ್ಮಾನಿಸಿದ್ದ. ಆಶ್ರಮಕ್ಕಾಗಿ 5 ಎಕರೆ ಜಮೀನು ಖರೀದಿ ಮಾಡಲು ಮುಂದಾಗಿದ್ದ.
ತಮ್ಮ ಸ್ವಂತ ಊರಿನ ಬಳಿಯೇ 5 ಎಕರೆ ಜಮೀನು ಖರೀದಿಗೆ ಅಗ್ರಿಮೆಂಟ್ ಮಾಡಿಕೊಂಡಿದ್ದ. ಜಾಗದ ರಿಜಿಸ್ಟ್ರೇಷನ್ ಕೆಲಸ ಮಾತ್ರ ಬಾಕಿ ಉಳಿದಿತ್ತು.
ಹೆಣ್ಣು ಮಕ್ಕಳನ್ನ ಗಂಡನ ಮನೆಗೆ ಸೇರಿಸಿ, ಮಗನ ಮದುವೆ ಮಾಡಿ ಆಶ್ರಮ ಸೇರೋ ಆಲೋಚನೆ ಮಾಡಿಕೊಂಡಿದ್ದ. ಆದರೆ ಈಗ ಮನೆ ಮಂದಿಯೆಲ್ಲಾ ಯಮಲೋಕ ಸೇರಿದ್ದಾರೆ.
ಮಲಗಿದ್ದ ಮಂಚದ ಮೇಲೆಯೇ ಏನೂ ಅರಿಯದ 9 ತಿಂಗಳ ಗಂಡು ಮಗು ಪ್ರಾಣ ಬಿಟ್ಟಿದೆ. ಸಾಯುವ ಮೊದಲು ಸಿಂಧೂರಾಣಿ ಮಗುವಿಗೆ ಹಾಲುಣಿಸಿದ್ದಾರೆ.
ಹಾಲುಣಿಸಿ ಮಗುವನ್ನ ಮಂಚದ ಮೇಲೆ ಮಲಗಿಸಿದ್ದರು. ಮತ್ತೊಂದು ಮಗು ಪ್ರೇಕ್ಷಾಳಿಗೆ (ಬದುಕುಳಿದಿರುವ ಮಗು) ಊಟ ತಿನ್ನಿಸಿ ಮಲಗಿಸಿದ್ದಾರೆ.
ಮಕ್ಕಳು ಮಲಗಿದ ಮೇಲೆ ಅಮ್ಮ ಭಾರತಿ , ಮಕ್ಕಳಾದ ಸಿಂಚನ, ಸಿಂಧೂರಾಣಿ ಹಾಗೂ ಮಧು ಸಾಗರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಲ್ಲರೂ ಪ್ರತ್ಯೇಕ ರೂಮ್ ಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿದ್ದೆಯಿಂದ ಎದ್ದ ಒಂಭತ್ತು ತಿಂಗಳ ಗಂಡುಮಗು ಅಳುವುದಕ್ಕೆ ಶುರು ಮಾಡಿದೆ.
ಹಸಿವಿನಿಂದ ಸಾಕಷ್ಟು ಹೊತ್ತು ಅತ್ತಿದೆ. ಮತ್ತೊಂದು ಮಗು ಪ್ರೇಕ್ಷ ಕೂಡ ನಿದ್ದೆಯಿಂದ ಎದ್ದು ಅಳುವುದಕ್ಕೆ ಶುರು ಮಾಡಿದೆ.
ಬಂಗಲೆ ಸೌಂಡ್ ಫ್ರೂಫ್ ಇದ್ದ ಕಾರಣ ಮಕ್ಕಳ ಆಕ್ರಂದನ ಯಾರಿಗೂ ಕೇಳಿಸಿಲ್ಲ. 9 ತಿಂಗಳ ಹಸುಗೂಸು ಹಾಲಿಲ್ಲದೆ ಅತ್ತು ಅತ್ತು ಪ್ರಾಣ ಬಿಟ್ಟಿದೆ.
bangalore
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.
ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.
ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಶೋಭಾಳಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.
ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್ಗೆ ಸೆಕ್ಸ್ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್ ಬೆಡ್ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.
48ರ ಮಹಿಳೆಗೆ ಯುವಕರ ಮೇಲೆ ಹುಚ್ಚು
48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.
ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?
ಕೊಲೆಯಾದ ದಿನವೂ ನವೀನ್ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊ*ಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
LATEST NEWS
ನ್ಯೂಡಲ್ಸ್ ಪ್ಯಾಕೇಟ್ ನಲ್ಲಿ ಸಿಕ್ಕಿತು 6 ಕೋಟಿ ರೂ. ಮೌಲ್ಯದ ಡೈಮಂಡ್!
ಮುಂಬೈ : ಹಣ, ಚಿನ್ನವನ್ನು ಖದೀಮರು ಎಲ್ಲೆಲ್ಲೋ ಅಡಗಿಸಿಟ್ಟುಕೊಂಡು ಸಾಗಿಸುವ ಸುದ್ದಿಗಳನ್ನು ಕೇಳುತ್ತಿರುತ್ತೇವೆ. ಆದರೆ, ಇಲ್ಲೊಬ್ಬ ನೂಡಲ್ಸ್ ಪ್ಯಾಕೇಟ್ ನಲ್ಲಿ ಡೈಮಂಡ್ಸ್ ಸಾಗಿಸಲು ಯತ್ನಿಸಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ನೂಡಲ್ಸ್ ಪ್ಯಾಕೆಟ್ಗಳಲ್ಲಿ ಹುದುಗಿಸಿಟ್ಟಿದ್ದ ವಜ್ರಗಳ ಹರಳುಗಳು ಪತ್ತೆಯಾಗಿವೆ. 6.48 ಕೋಟಿ ರೂಪಾಯಿ ಎಂದು ಮೌಲ್ಯದ ಹರಳನ್ನು ವಶಕ್ಕೆ ಪಡೆಯಲಾಗಿದೆ.
ಮುಂಬೈನಿಂದ ಬ್ಯಾಂಕಾಕ್ ಪ್ರಯಾಣಿಸುತ್ತಿದ್ದ ಭಾರತೀಯ ಪ್ರಜೆಯನ್ನು ವಶಕ್ಕೆ ಪಡೆಯಲಾಯಿತು. ಈ ವೇಳೆ ಆತನ ಟ್ರಾಲಿ ಬ್ಯಾಗ್ನಲ್ಲಿ ನೂಡಲ್ಸ್ ಪ್ಯಾಕೆಟ್ಗಳಿದ್ದವು. ಅದರಲ್ಲಿ ಅಡಗಿಸಿಟ್ಟಿದ್ದ ವಜ್ರಗಳಿದ್ದು ಅವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಹಲವರು ವಶಕ್ಕೆ
ಕೊಲಂಬೋದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ವಿದೇಶಿ ಪ್ರಜೆಯೊಬ್ಬರು ಚಿನ್ನದ ಗಟ್ಟಿಗಳು ಮತ್ತು ಕತ್ತರಿಸಿದ ತುಂಡನ್ನು ಸಾಗಿಸುತ್ತಿರುವುದು ಕಂಡುಬಂದಿದೆ. 321 ಗ್ರಾಂ ತೂಕದ ಚಿನ್ನವನ್ನು ತನ್ನ ಒಳ ಉಡುಪುಗಳಲ್ಲಿ ಅಡಗಿಸಿಟ್ಟಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ.
ದುಬೈ ಮತ್ತು ಅಬುಧಾಬಿಯಿಂದ ತಲಾ ಇಬ್ಬರು, ಬಹ್ರೇನ್, ದೋಹಾ, ರಿಯಾದ್, ಮಸ್ಕತ್, ಬ್ಯಾಂಕಾಕ್ ಮತ್ತು ಸಿಂಗಾಪುರದಿಂದ ತಲಾ ಒಬ್ಬರು ಸೇರಿದಂತೆ ಕನಿಷ್ಠ 10 ಭಾರತೀಯ ಪ್ರಜೆಗಳನ್ನು ತಡೆಹಿಡಿಯಲಾಯಿತು. ಈ ವೇಳೆ 4.04 ಕೋಟಿ ಮೌಲ್ಯದ 6.199 ಕೆ.ಜಿ ಚಿನ್ನ ಸಾಗಿಸುತ್ತಿರುವುದು ಕಂಡುಬಂದಿದೆ. ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : ರಜೆಯಿದೆ ಎಂದು ಪ್ರವಾಸಕ್ಕೆ ಹೊರಟಿದ್ದೀರಾ? ಗಮನಿಸಿ, ಈ ಪ್ರವಾಸಿ ತಾಣಗಳಿಗಿದೆ ನಿರ್ಬಂಧ
ಮುಂಬೈ ವಿಮಾನ ನಿಲ್ದಾಣದಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಹೊರತರಲು ಸಹಾಯ ಮಾಡಿದ್ದ ಆರೋಪದ ಮೇಲೆ ಅಲ್ಲಿನ ಫಾಸ್ಟ್ ಫುಡ್ ರೆಸ್ಟೋರೆಂಟ್ 38 ವರ್ಷದ ಉದ್ಯೋಗಿಯನ್ನು ಮುಂಬೈ ಕಸ್ಟಮ್ಸ್ನ ಏರ್ ಇಂಟೆಲಿಜೆನ್ಸ್ ಯುನಿಟ್ ಬಂಧಿಸಿದೆ. ಸುಮಾರು 1.86 ಕೋಟಿ ಮೌಲ್ಯದ 6 ಅಂಡಾಕಾರದ ಚಿನ್ನದ ಕ್ಯಾಪ್ಸೂಲ್ಸ್ನಲ್ಲಿ ತನ್ನ ಬೆಲ್ಟ್ನಲ್ಲಿ ಅಡಗಿಸಿಟ್ಟಿದ್ದ ಬಗ್ಗೆ ವರದಿಯಾಗಿದೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
-
DAKSHINA KANNADA7 days ago
ಮಂಗಳೂರು : ಬೈಕ್ಗೆ ಕಾರು ಡಿಕ್ಕಿ; ಇಹಲೋಕ ತ್ಯಜಿಸಿದ ವಿದ್ಯಾರ್ಥಿ
-
DAKSHINA KANNADA7 days ago
ಸೀರೆ ಉಟ್ರೆ ಕ್ಯಾನ್ಸರ್ ಬರುತ್ತಂತೆ..! ಏನಿದು ಸೀರೆ ಕ್ಯಾನ್ಸರ್?
-
DAKSHINA KANNADA5 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
-
FILM7 days ago
ದೀಪಿಕಾ ಪಡುಕೋಣೆ ಜೊತೆ ಒಪ್ಪಂದ ಮಾಡಿಕೊಂಡ ನಿಶಾ ಅಂಬಾನಿ..! ಏನು ಗೊತ್ತಾ?