Connect with us

DAKSHINA KANNADA

ಅಮಾನ್ಯ ನೋಟು ಬದಲಾವಣೆಗೆ ಕಮಿಷನ್‌: 13 ಲಕ್ಷ ನಗದಿಗೆ ಕಾಗದದ ಕಟ್ಟಿನ ಪಂಗನಾಮ

Published

on

ಪುತ್ತೂರು: ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30% ಕಮಿಷನ್​ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು

ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಡಿ ಐವರನ್ನು ಬಂಧಿಸಿದ್ದಾರೆ.


ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು ಹಾಕಿದ್ದ 100 ರೂ. ಮುಖ ಬೆಲೆಯ ರೂ.10 ಲಕ್ಷ ಮೌಲ್ಯದ ನೋಟುಗಳಿದ್ದು, ಅವುಗಳನ್ನು ವಿಲೇವಾರಿ ಮಾಡಲು ತೊಂದರೆ ಆಗಿದೆ.

ಈ ನೋಟುಗಳನ್ನು ಪಡೆದು 500 ರೂ ಹಾಗೂ 2000 ಮುಖಬೆಲೆಯ ನೋಟುಗಳನ್ನು ಕೊಡುವವರಿಗೆ ಶೇ.30ರಷ್ಟು ಕಮಿಷನ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ.

ಉಜಿರೆಯ ಕೃಪಾ ಎಂಬವರಿಂದ 10 ಲಕ್ಷ ಪಡೆದು ವಂಚಿಸಿದ್ದರು ಎಂದು ಆರೋಪಿಸಲಾಗಿದೆ.

ಈ ಸಂಬಂಧ ತಿಂಗಳಾಡಿಯ ಕೊರಗಪ್ಪ ಎಂಬವರು ನೀಡಿದ್ದ ದೂರಿನ ಜಾಡು ಹಿಡಿದ ಕಡೂರು ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಆರೋಪಿಗಳ ದೂರವಾಣಿ ಸಂಖ್ಯೆ, ವಿಳಾಸ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.
ನ.20 ರಂದು ಕಡೂರು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಡೂರು ನಿವಾಸಿ ಮಹೇಶ್(40) ಮತ್ತು ಬೆಟ್ಟಂಪಾಡಿ ರೆಂಜ ಅರಂತನಡ್ಕದ ನಾರಾಯಣ ರೈ(52)ಎಂಬವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

ಈ ವೇಳೆ ಬಂಧಿತ ಆರೋಪಿಗಳು, ಸ್ವಾಮೀಜಿ ವೇಷ ಧರಿಸಿ ವಂಚಿಸುತ್ತಿದ್ದ ಖಾವಿ ಬಟ್ಟೆ, ರುದ್ರಾಕ್ಷಿ ಸರ, 100 ರೂ.ಮುಖ ಬೆಲೆಯ ಹಳೆಯ ನೋಟ್‌ಗಳಿದ್ದ ಬ್ಯಾಗ್ ಮತ್ತು ಆ್ಯಕ್ಟಿವಾ ಸ್ಕೂಟರನ್ನು ಪೊಲೀಸರು ವಶ ಪಡಿಸಿಕೊಂಡಿದ್ದರು.
ಇಲಿಯಾಜ್(49), ಗಂಗಾಧರ (33) ಮತ್ತು ವಿನಯ್ ಕುಮಾರ್(33) ಎಂಬವರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಮಾರುತಿ ಒಮ್ನಿ ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಿಂದ ಒಟ್ಟು 5,10,000 ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಏನು ಮಾಡುತ್ತಿದ್ದರು
ತಮ್ಮಲ್ಲಿ ಕೆಲವರಿಗೆ ಪರಿಚಿತರಾಗಿರುವ ತಿಂಗಳಾಡಿಯ ಕೊರಗಪ್ಪ ಪೂಜಾರಿ ಎಂಬವರನ್ನು ಸಂಪರ್ಕಿಸಿದ್ದ ಆರೋಪಿಗಳು ಕಮಿಷನ್ ಹಣದ ವಿಷಯ ಪ್ರಸ್ತಾಪಿಸಿ ಈ ವಿಚಾರವನ್ನು ಬೇರೆಯವರಿಗೂ ತಿಳಿಸಲು ಹೇಳಿದ್ದರು.

ಅದರಂತೆ ಕೊರಗಪ್ಪ ಅವರು ತಮಗೆ ಪರಿಚಯದ ಉಜಿರೆಯ ಕೃಪಾ ಅವರಿಗೆ ವಿಷಯ ತಿಳಿಸಿದ್ದರು. 30% ಕಮಿಷನ್ ಆಸೆಯಿಂದ ಕೃಪಾ ಅವರು ತಮ್ಮ ಸ್ನೇಹಿತರಾದ ಭುವನೇಂದ್ರ ಮತ್ತು ಜನಾರ್ದನ ಎಂಬವರೊಂದಿಗೆ ಆಗಮಿಸಿ 10 ಲಕ್ಷ ರೂ ನಗದನ್ನು ಕಡೂರಿನ ಕೋಟೆ ಭಾಗದ ಚಂದ್ರಮೌಳೇಶ್ವರ ದೇವಸ್ಥಾನದ ಆವರಣದಲ್ಲಿ ಆರೋಪಿಗಳಿಗೆ ನೀಡಿದ್ದರು.

ಈ ವೇಳೆ ಆರೋಪಿಗಳು, ಇದರಲ್ಲಿ ರೂ.13 ಲಕ್ಷ ರೂ. ಇದೆ, ಮತ್ತೆ ಎಣಿಸಿಕೊಳ್ಳಿ’ ಎಂದು ಹೇಳಿ, ನೋಟುಗಳಿಂದ ತುಂಬಿದಂತಿದ್ದ ಬ್ಯಾಗೊಂದನ್ನು ಕೃಪಾ ಅವರಿಗೆ ನೀಡಿ ಅಲ್ಲಿಂದ ಪರಾರಿಯಾಗಿದ್ದರು.

ಬಳಿಕ ಕೃಪಾ ಹಾಗೂ ಜೊತೆಗಿದ್ದ ಭುವನೇಂದ್ರ ಮತ್ತು ಜನಾರ್ದನ ಅವರು, 13 ಲಕ್ಷ ರೂ.ಇರುವುದಾಗಿ ಹೇಳಿ ಆರೋಪಿಗಳು ನೀಡಿದ್ದ ಬ್ಯಾಗ್‌ನ್ನು ತೆರೆದು ನೋಡಿದಾಗ

ಅದರಲ್ಲಿ ನೋಟಿನ ಗಾತ್ರದ ಬಿಳಿ ಕಾಗದದ ತುಂಡುಗಳ ಕಟ್ಟಿನ ಮೇಲ್ಭಾಗದಲ್ಲಿ ಮಾತ್ರ 100 ನೋಟ್‌ಗಳನ್ನಿಟ್ಟಿರುವುದು ಕಂಡು ಬಂದಿದ್ದು,

ಕಮಿಷನ್‌ನ ಆಸೆಯಿಂದಾಗಿ ತಾವು ಮೋಸ ಹೋಗಿರುವುದು ಅವರ ಅರಿವಿಗೆ ಬಂದಿದೆ. ಕೂಡಲೇ ಕೃಪಾ ಅವರು ಆರೋಪಿಗಳಿಗೆ ಕರೆ ಮಾಡಿದರು.

ಆದರೆ ಅವರೆಲ್ಲರ ಮೊಬೈಲ್‌ಗಳು ಸ್ವಿಚ್ಡ್​ ಆಫ್ ಆಗಿದ್ದವು. ವಂಚನೆಗೊಳಗಾದ ಕೃಪಾ ಅವರು ನ.18ರಂದು ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ವೇಳೆ ಪೊಲೀಸರು ಕೃಪಾ ಅವರಿಗೆ ಮಾಹಿತಿ ನೀಡಿದ್ದ ಕೊರಗಪ್ಪ ಅವರನ್ನು ವಿಚಾರಿಸಿದರು.
ಬಳಿಕ ಕೊರಗಪ್ಪ ಅವರು ನೀಡಿದ ದೂರು,

ಮಾಹಿತಿ ಆಧರಿಸಿ ತನಿಖೆ ನಡೆಸಿದ ಕಡೂರು ಪೊಲೀಸರು 48 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದಲ್ಲಿ ಭಾಗಿಯಾಗಿದ್ದ ಭಟ್ಕಳದ ತಯ್ಯುಬ್ ಎಂಬಾತ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಅರಂತನಡ್ಕ ನಿವಾಸಿ ನಾರಾಯಣ ರೈ ಅವರನ್ನು ಕಡೂರು ಪೊಲೀಸರು ಬಂಧಿಸಿರುವ ವಿಚಾರ ಅವರ ಮನೆಯವರಿಗೆ ತಿಳಿದಿರಲಿಲ್ಲವಾದ್ದರಿಂದ

ನಾರಾಯಣ ರೈ ಅವರು ಮನೆಗೆ ಬಂದಿಲ್ಲ ಎಂದು ಅವರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಾರಾಯಣ ರೈ ಅವರನ್ನು ಕಡೂರು ಪೊಲೀಸರು ಪ್ರಕರಣವೊಂದರ ಬಗ್ಗೆ ಬಂಧಿಸಿದ್ದ ವಿಚಾರ ಆಗಸ್ಟೇ ಅವರಿಗೆ ತಿಳಿದಿದೆ ಎನ್ನಲಾಗಿದೆ.

ಕಾರ್ಯಾಚರಣೆಯಲ್ಲಿ ಕಡೂರು ಪೊಲೀಸ್ ಠಾಣೆಯ ಪೊಲೀಸ್‌ ಇನ್ಸ್ಪೆಕ್ಟರ್‌ ರಮ್ಯಾ,

ಎಸ್‌ಐಗಳಾದ ಆದರ್ಶ್, ನವೀನ್, ಎಎಸ್ಸೈ ವೇದಮೂರ್ತಿ, ಸಿಬ್ಬಂದಿ ಕೃಷ್ಣಮೂರ್ತಿ,

ಉಮೇಶ್, ರಾಜಪ್ಪ, ಮಧುಕುಮಾರ್, ಓಂಕಾರ್ ಮತ್ತು ಶಿವರಾಜ್ ಪಾಲ್ಗೊಂಡಿದ್ದರು.

DAKSHINA KANNADA

ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?

Published

on

ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?

ಅಶ್ವಿನಿ ದೇವತೆಗಳು ಯಾರು.?

ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್‌ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.

ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?

ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.

ಅಶ್ವಿನಿ ದೇವತೆಗಳ ಮಹತ್ವ:

ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.

ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.

Continue Reading

DAKSHINA KANNADA

ವೋಟ್ ಮಾಡಿ, ಊಟ ಮಾಡಿ: ಹೋಟೆಲ್‌ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!

Published

on

ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್‌ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

ವೋಟ್ ಮಾಡಿ, ಊಟ ಮಾಡಿ:

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್‌ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.

SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

LATEST NEWS

Trending