BANTWAL
ಬಂಟ್ವಾಳ: ಮೃತ ಹಿಂದೂ ಕಾರ್ಯಕರ್ತನ ಕುಟುಂಬಕ್ಕೆ ಮಿಡಿದ ಕಾವಿ ಹೃದಯ..!
ಬಂಟ್ವಾಳ: ಮಂಗಳೂರಿನಲ್ಲಿ ನಡೆದ ಅವಘಡದಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್-ಬಜರಂಗ ದಳದ ಕಾರ್ಯಕರ್ತ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮ ನಿವಾಸಿ ದಿ. ವಿಜಯ ಪುಣ್ಕೆದಡಿ ಅವರ ಕುಟುಂಬಕ್ಕೆ ದಾನಿಗಳ ನೆರವಿನಿಂದ ನೂತನ ಮನೆ ನಿರ್ಮಾಣಕ್ಕೆ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಶಿಲಾನ್ಯಾಸ ನೆರವೇರಿಸಿದರು.
ಸ್ವಾಮೀಜಿಯವರು ಆಶೀರ್ವಚನ ನೀಡಿ, ಸಂಘಟನೆ ಹಾಗೂ ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರೀಯನಾಗಿದ್ದ ವಿಜಯ್ ಅವರ ಅಗಲುವಿಕೆ ಸಮಾಜ, ಅವರ ಕುಟುಂಬ ದೊಡ್ಡ ನಷ್ಟವನ್ನೇ ತಂದಿದ್ದು, ಅವರಿಗೊಂದು ಸೂರು ಕಲ್ಪಿಸುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಿ ಮನೆ ನಿರ್ಮಾಣಕ್ಕೆ ಮುಂದಾಗಿದ್ದೇವೆ.
ಜತೆಗೆ ಅವರ ಸಹೋದರಿಗೆ ಮಾಣಿಲ ಕ್ಷೇತ್ರದಲ್ಲೇ ಎಲ್ಲಾ ವ್ಯವಸ್ಥೆಗಳನ್ನು ಕೈಗೊಂಡು ವಿವಾಹ ಮಾಡಿಸಲು ಬದ್ಧವಾಗಿದ್ದು, ಯಾವುದೇ ದುಶ್ಚಟವಿಲ್ಲದ ವರನನ್ನು ಹುಡುಕುವ ಕಾರ್ಯ ಮಾಡಬೇಕು ಎಂದರು.
ಪುರೋಹಿತ ಸಾಯಿ ಶಾಂತಿ ಕೋಕಲ ಅವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಮನೆ ನಿರ್ಮಾಣಕ್ಕೆ ತಿಂಗಳಾಡಿಗುತ್ತಿನವರು 10 ಸೆಂಟ್ಸ್ ಜಾಗ ನೀಡಿದ್ದು, ವಿಹಿಂಪ-ಬಜರಂಗ ದಳ ಜೈ ಹನುಮಾನ್ ಶಾಖೆ ಅಜಿಲಮೊಗರಿನ ಮನವಿಯಂತೆ ಉದ್ಯಮಿ ಸತೀಶ್ ಶೆಟ್ಟಿ ಪಡೀಲು ಅವರು ಪೂರ್ತಿ ಮನೆಯನ್ನು ನಿರ್ಮಿಸಿಕೊಡಲಿದ್ದಾರೆ.
ಈ ಸಂದರ್ಭದಲ್ಲಿ ದಿ.ವಿಜಯ ಪುಣ್ಕೆದಡಿ ಅವರ ತಂದೆ-ತಾಯಿಯರಾದ ಗುರುವ- ವಿಮಲ ದಂಪತಿ, ವಿಹಿಂಪ ತಾಲೂಕು ಅಧ್ಯಕ್ಷ ಪ್ರಸಾದ್ಕುಮಾರ್ ರೈ ತಿಂಗಳಾಡಿಗುತ್ತಿನ ಸೀತಾರಾಮ ಪೂಜಾರಿ ತಿಂಗಳಾಡಿ, ಸಂಜೀವ ಪೂಜಾರಿ ತಿಂಗಳಾಡಿ, ಕೇಶವ ಪೂಜಾರಿ ತಿಂಗಳಾಡಿ, ಗುತ್ತಿಗೆದಾರ ಮುರಳೀಧರ್, ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ನಾಗವೇಣಿ,
ಸದಸ್ಯರಾದ ಸಾಂತಪ್ಪ ಪೂಜಾರಿ ಹಟ್ಟದಡ್ಕ, ಪುರುಷೋತ್ತಮ ಪೂಜಾರಿ ಮಜಲು, ದಯಾನಂದ ಸುಳ್ಯ, ಬಜರಂಗ ದಳದ ಪ್ರಮುಖರಾದ ಗುರುಪ್ರಸಾದ್ ಬಂಟ್ವಾಳ, ಸಂತೋಷ್ ನೇಲ್ಯಪಲ್ಕೆ, ಬೆಂಗಳೂರಿನ ಉದ್ಯಮಿ ಕೆ.ಟಿ.ಪೂಜಾರಿ, ನಾರಾಯಣ ಪೂಜಾರಿ ತಿಂಗಳಾಡಿ, ವಸಂತ ಪೂಜಾರಿ ಡೆಚ್ಚಾರ್, ನಟರಾಜ್ ಕುಟ್ಟಿಕಳ, ಪ್ರಕಾಶ್ ಅಂಚನ್, ದಯಾನಂದ ಮುಂಡ್ರೇಲ್ ಮೊದಲಾದವರು ಉಪಸ್ಥಿತರಿದ್ದರು.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.