BANTWAL
ಬಂಟ್ವಾಳ ಗ್ಯಾಂಗ್ ರೇಪ್ ಪ್ರಕರಣ: ಅಪ್ರಾಪ್ತೆಯನ್ನು ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ-ನಾಲ್ವರ ಬಂಧನ
ಬಂಟ್ವಾಳ: ಇಲ್ಲಿನ ನಗರ ಠಾಣೆಯಲ್ಲಿ ಶನಿವಾರ ದಾಖಲಾದ ಅಪ್ರಾಪ್ತ ಬಾಲಕಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ರೋಚಕ ತಿರುವು ಪಡೆದುಕೊಂಡಿದೆ. ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿ ಗಳನ್ನು ಬಂಧಿಸಿದ್ದು,
ಸಾಮೂಹಿಕ ಅತ್ಯಾಚಾರ ನಡೆದಿರುವುದು ಮಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಎನ್ನುವುದು ಧೃಡಪಟ್ಟಿದೆ.
ಈ ಹಿನ್ನೆಲೆಯಲ್ಲಿ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಾದ ಕಾಪು ನಿವಾಸಿ ಕೆ. ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್, ಹಾಗೂ ಇದಾಯತ್ತುಲ್ಲ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ.
ಘಟನೆ ವಿವರ
ಅಪ್ರಾಪ್ತ ವಯಸ್ಸಿನ ಸಂತಸ್ತ ಬಾಲಕಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಆಕೆಯ ಪರಿಚಿತ ಎನ್ನಲಾದ ಮೂಲತಃ ಮಡಿಕೇರಿಯವನಾದ ಪ್ರಸ್ತುತ ಉಡುಪಿ ಕಾಪು ನಿವಾಸಿ ಕೆ.ಎಸ್ ಶರತ್ ಶೆಟ್ಟಿ, ಮಾರುತಿ ಮಂಜುನಾಥ್, ಲಾಡ್ಜ್ ಸತೀಶ್, ಹಾಗೂ ಉತ್ತರ ಕನ್ನಡ ಮೂಲದ ಇದಾಯತ್ತುಲ್ಲ ರವರುಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದ್ದು,
ಇಡೀ ಪ್ರಕರಣ ಹೊಸತಿರುವು ಪಡೆದುಕೊಂಡಿದೆ.
ಕೆ. ಎಸ್ ಶರತ್ ಶೆಟ್ಟಿ ಎಂಬ ಆರೋಪಿ ನೊಂದ ಬಾಲಕಿ ಯೊಂದಿಗೆ ಫೇಸ್ಬುಕ್ ನಲ್ಲಿ ಪರಿಚಯವಾಗಿ ಮೊಬೈಲ್ ನಲ್ಲಿ ಸಂಪರ್ಕದಲ್ಲಿದ್ದು,
ನೊಂದ ಬಾಲಕಿಯನ್ನು ಆರೋಪಿ ಶರತ್ ಶೆಟ್ಟಿ ತನ್ನ ಸಂಬಂಧಿ ಮಾರುತಿ ಮಂಜುನಾಥ್ ಗೆ ಪರಿಚಯ ಮಾಡಿಸಿದ್ದು ಆರೋಪಿ ಮಂಜುನಾಥ್ ನೊಂದ ಬಾಲಕಿ ಯೊಂದಿಗೆ ಸಲುಗೆಯಿಂದ ಇದ್ದು ವಾಟ್ಸ್ಆಪ್ ನಲ್ಲಿ ಅಶ್ಲೀಲ ವಿಡಿಯೋ ಚಾಟ್ ಮಾಡಿಕೊಂಡಿದ್ದ.
ಇಂದು ಆರೋಪಿ ಶರತ್ ಶೆಟ್ಟಿ ಬಾಲಕಿಗೆ ಮಂಗಳೂರಿಗೆ ಬರುವಂತೆ ತಿಳಿಸಿದಂತೆ ನೊಂದ ಬಾಲಕಿ ಬಸ್ ನಲ್ಲಿ ಮಂಗಳೂರಿಗೆ ತೆರಳಿ ಸಿಟಿ ಮಹಲ್ ಬಳಿ ಆರೋಪಿಯಾದ ಶರತ್ ಶೆಟ್ಟಿ ಯನ್ನು ಭೇಟಿಯಾಗಿದ್ದು,
ಬಾಲಕಿಯನ್ನು ಲಾಡ್ಜ್ ನಲ್ಲಿ ವಿಶ್ರಾಂತಿ ಮಾಡೋಣ ಎಂದು ಪುಸಲಾಯಿಸಿ ಮಂಗಳೂರಿನ ಲಾಡ್ಜ್ ಒಂದಕ್ಕೆ ಕರೆದು ಕೊಂಡು ಹೋಗಿ ನೊಂದ ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾನೆ.
ನಂತರ ತನ್ನ ಸ್ನೇಹಿತ ಇದಾಯತ್ತುಲ್ಲ ನಿಗೆ ಒಂದು ಹುಡುಗಿ ಇದೆ ಲಾಡ್ಜ್ ಗೆ ಬರುವಂತೆ ತಿಳಿಸಿದ್ದು ಆರೋಪಿ ಇದಾಯತ್ತುಲ್ಲೂ ಲಾಡ್ಜ್ ಗೆ ತೆರಳಿ ನೊಂದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ತನಿಖೆ ಸಂದರ್ಭ ತಿಳಿದುಬಂದಿದೆ.
ಆರೋಪಿ ಲಾಡ್ಜ್ ಸತೀಶ್ ಆರೋಪಿಗಳು ಅತ್ಯಾಚಾರ ಎಸಗಲು ಲಾಡ್ಜ್ ನಲ್ಲಿ ಅವಕಾಶ ಮಾಡಿಕೊಟ್ಟಿದ್ದಲ್ಲದೇ,
ನೊಂದ ಬಾಲಕಿ ತಂಗಿದ್ದ ರೂಂಗೆ ತೆರಳಿ ನೊಂದ ಬಾಲಕಿಯ ಖಾಸಗಿ ಅಂಗಗಳನ್ನು ಮುಟ್ಟಿ ಲೈಂಗಿಕ ಶೋಷಣೆ ಮಾಡಿರುವುದು ತನಿಖೆಯಲ್ಲಿ ಗೊತ್ತಾಗಿದೆ.
ಈ ಕೃತ್ಯ ನಡೆದ ಬಳಿಕ ನೊಂದ ಬಾಲಕಿ ಬಸ್ ಮೂಲಕ ಬಂಟ್ವಾಳಕ್ಕೆ ಬಂದಿರುವ ಬಗ್ಗೆ ಪೊಲೀಸರು ಸಾಕ್ಷ್ಯ ಸಂಗ್ರಹಿಸಿದ್ದಾರೆ.
ಆರಂಭದಲ್ಲಿ ಕಾರಿನಲ್ಲಿ ಅಪಹರಿಸಿ, ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗಿದ್ದು, ಬಂಟ್ವಾಳ ಪೊಲೀಸರ ಮಿಂಚಿನ ಕಾರ್ಯಾಚರಣೆ, ತನಿಖೆಯಿಂದ ಪ್ರಕರಣದ ನಿಜಾಂಶ ಬಯಲಾಗಿದೆ.
ಸಂತ್ರಸ್ತ ಬಾಲಕಿ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಘಟನೆಯ ಹಿಂದಿರುವ ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾರ್ಗದರ್ಶನದಲ್ಲಿ,
ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯನ್ನು ಬಂಟ್ವಾಳ ವೃತ್ತ ನಿರೀಕ್ಷಕ ಟಿಡಿ ನಾಗರಾಜ್ ಅವರ ನೇತೃತ್ವದ ಉಪನಿರೀಕ್ಷಕರಾದ ಅವಿನಾಶ್, ಪ್ರಸನ್ನ ಮತ್ತವರ ತಂಡ ಆರೋಪಿಗಳ ಬಂಧನ ಮಾಡಿದೆ.
ಘಟನೆ ನಡೆದು ಬಳಿಕ ಬಂಟ್ವಾಳ ನಗರ ಪೋಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಟಿ.ಡಿ.ನಾಗರಾಜ್ ನೇತ್ರತ್ವದ ಪೋಲೀಸ್ ತಂಡ ಆರೋಪಿಗಳನ್ನು ಪತ್ತೆ ಹಚ್ಚಿ ಪ್ರಕರಣ ನಿಜಾಂಶ ತಿಳಿಯುವಲ್ಲಿ ಯಶಸ್ವಿಯಾಗಿದೆ ಈ ಬಗ್ಗೆ ಬಂಟ್ವಾಳ ಜನತೆ ಪೊಲೀಸ್ ತಂಡ ಹ್ಯಾಟ್ಸಪ್ ಎಂದಿದೆ.
ಕಾಪು ನಿವಾಸಿ ಕೆ. ಎಸ್ ಶರತ್ ಶೆಟ್ಟಿ ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯನ್ನು ಪರಿಚಯಿಸಿಕೊಂಡಿದ್ದು, ಔಷಧಿ ನೀಡುವ ನೆಪದಲ್ಲಿ ಸಲುಗೆ ಬೆಳೆಸಿಕೊಂಡಿದ್ದ,
ಮಾರುತಿ ಮಂಜುನಾಥ್ ಎಂಬಾತ ಮರದ ಕೆಲಸ ಮಾಡುತ್ತಿದ್ದು ಸಂತ್ರಸ್ತ ಬಾಲಕಿ ಜೊತೆ ಅಶ್ಲೀಲ ಚಾಟ್ ಮಾಡಿಕೊಂಡಿದ್ದು ಬಾಲಕಿಯ ಮುಗ್ಧತೆಯನ್ನು ಪಡಿಸಿಕೊಳ್ಳುತ್ತಿದ್ದುದು ತನಿಖೆಯಲ್ಲಿ ಧೃಡಪಟ್ಟಿದೆ.
ಉಳಿದಂತೆ ಇದಾಯುತುಲ್ಲಾ ಮಂಗಳೂರಿನಲ್ಲಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಎಂದು ತಿಳಿದು ಬಂದಿದೆ.
BANTWAL
ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಪಲ್ಟಿ ; ಇಬ್ಬರಿಗೆ ಗಾಯ
ಪುಂಜಾಲಕಟ್ಟೆ; ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಮುಗುಚಿ ಕೆಳಗೆ ಬಿದ್ದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಆರ್ಎಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್ ಗೆ ಬರುತ್ತಿರುವಾಗ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಹಾಗೂ ಮತ್ತೋರ್ವ ಸಿಬ್ಬಂದಿ ಸಾಂತಪ್ಪ ನಾಯಕ್ರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
BANTWAL
ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆಯಲ್ಲಿ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂ ಬಾಂಧವರು.!
ಬಂಟ್ವಾಳ: ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದು ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.
ಸೋಮವಾರ ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಅದ್ದೂರಿಯಾಗಿ ಆಚರಿಸಿದರು. ಪ್ರಚೋದನಕಾರಿ ಹೇಳಿಕೆಯಿಂದ ಸಂಘಪರಿವಾರದ ಕಾರ್ಯಕರ್ತರು ಬಿಸಿ ರೋಡಿನಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. ಕೆಲಕಾಲ ಬಿಗುವಿನ ವಾತಾವರಣ ಕಂಡುಬಂತು.
ಇದೆಲ್ಲದರ ನಡುವೆ ಮಾಣಿಯಲ್ಲಿ ಹಿಂದೂ ಬಾಂಧವರು ಮೆರವಣಿಗೆಯಲ್ಲಿ ಸಾಗಿ ಬಂದ ಮಸ್ಲಿಮರಿಗೆ ಸಿಹಿತಿಂಡಿ ವಿತರಿಸಿ ಸೌಹಾರ್ದತೆಗೆ ಪಾತ್ರರಾದರು.
ಅಲ್ಲದೆ ಅಂತ್ಯದಿನದವರೆಗೂ ನಮ್ಮ ಊರಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಲ್ಲಲಿ ಎಂದು ಹಾರೈಸಿದರು.
BANTWAL
ಬಿ.ಸಿ.ರೋಡ್ನಲ್ಲಿ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು: ಸದ್ಯ ಪರಿಸ್ಥಿತಿ ಶಾಂತ
ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ.
ಪೊಲೀಸರು ಬಿ.ಸಿ.ರೋಡ್ನಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಿಗದಿಕ್ಕಿಂತ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದೆ.
ಬಿ.ಸಿ.ರೋಡ್ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಂಘ ಪರಿವಾರದ ನೂರಾರು ಕಾರ್ಯಕರ್ತರು ಜಮಾಯಿಸಿದ್ದಾರೆ. ಗುಂಪು ಜಮಾಯಿಸಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕಲ್ಪಿಸಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ.