BANTWAL
ಬಂಟ್ವಾಳ ಕಕ್ಯಪದವು ಸತ್ಯ ಧರ್ಮ ಜೋಡುಕರೆ ಕಂಬಳಕೂಟ ಸಂಪನ್ನ-ಭಾಗಿಯಾದ 214 ಜತೆ ಕೋಣಗಳು
ಬಂಟ್ವಾಳ: ಶನಿವಾರ ಮತ್ತು ರವಿವಾರ ನಡೆದ ಬಂಟ್ವಾಳದ ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ದಶಮಾನೋತ್ಸವದ ಹೊನಲು ಬೆಳಕಿನ ಸತ್ಯ- ಧರ್ಮ ಜೋಡುಕರೆ ಬಯಲು ಕಂಬಳ ಕೂಟದಲ್ಲಿ ದಾಖಲೆಯ 214 ಜತೆ ಕೋಣಗಳು ಭಾಗವಹಿಸಿದ್ದವು.
ಕನೆಹಲಗೆ ವಿಭಾಗದಲ್ಲಿ 2 ಜತೆ, ಅಡ್ಡಹಲಗೆ ವಿಭಾಗದಲ್ಲಿ 9 ಜತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜತೆ, ನೇಗಿಲು ಹಿರಿಯ ವಿಭಾಗದಲ್ಲಿ 31 ಜತೆ, ಹಗ್ಗ ಕಿರಿಯ ವಿಭಾಗದಲ್ಲಿ 26 ಜತೆ, ನೇಗಿಲು ಕಿರಿಯ ವಿಭಾಗದಲ್ಲಿ 75 ಜತೆ ಮತ್ತು ನೇಗಿಲು ಸಬ್ ಜೂನಿಯರ್ ವಿಭಾಗದಲ್ಲಿ 52 ಜತೆ ಕೋಣಗಳು ಭಾಗವಹಿಸಿದ್ದವು.
ಕಂಬಳದ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಮಾತನಾಡಿ ನಮ್ಮ ಮೂಲ ಸಂಸ್ಕೃತಿಯ ಜತೆ ರೈತರ ಜಾನಪದ ಕ್ರೀಡೆ ಕಂಬಳವನ್ನು ಉಳಿಸಿ ಬೆಳಸಬೇಕು ಎಂದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ। ಪಿ.ಎಸ್. ಹರ್ಷ, ಪ್ರಮುಖರಾದ ಜಗನ್ನಾಥ ನಿರ್ಮಲ್ ನರಿಕೊಂಬು, ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳ್, ಪ್ರಧಾನ ತೀರ್ಪುಗಾರ ಗುಣಪಾಲ ಕಡಂಬ, ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಅಧ್ಯಕ್ಷ ಲಕ್ಷ್ಮಣ ಪೂಜಾರಿ ನೇರಳ ಪಲ್ಕೆ, ಶಿವಾನಂದ ಮೈರಾ, ಪುರಂದರ ಕುಕ್ಕಾಜೆ ಮುಂತಾದವರು ಉಪಸ್ಥಿತರಿದ್ದರು.
ಸಾಧಕರಾದ ಸಂಜೀವ ಶೆಟ್ಟಿ ಕಿಂಜಾಲು, ಶಿವಪ್ಪ ಪೂಜಾರಿ ಜೇಡರ ಬೆಟ್ಟು, ಬಾಲಕೃಷ್ಣ ಬಂಗಾಡಿ, ವಜ್ರ ಪೂಜಾರಿ, ಮೋನಪ್ಪ ಸಾಲಿಯಾನ್, ವೈಭವ್ ಕೆ. ಅರ್ಮುಡ್ತಾಯ ಅವರನ್ನು ಸನ್ಮಾನಿಸಲಾಯಿತು.
ಕಂಬಳದ ಫಲಿತಾಂಶ:
ಕನೆಹಲಗೆ ವಿಭಾಗದಲ್ಲಿ ಬೇಲಾಡಿ ಬಾವ ಅಶೋಕ್ ಶೆಟ್ಟಿ ಮತ್ತು ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರು ಸಮಾನ ಬಹುಮಾನ ಪಡೆದರು. ಇಲ್ಲಿ ಹಲಗೆ ಮುಟ್ಟಿದವರು ತೆಕ್ಕಟ್ಟೆ ಸುಧೀರ್ ದೇವಾಡಿಗ ಮತ್ತು ಬೈಂದೂರು ಭಾಸ್ಕರ ದೇವಾಡಿಗ ಅವರು.
ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಪೆರಿಯಾವು ಗುತ್ತು ಸತೀಶ್ ಗಟ್ಟಿಯಾಳ್ ದ್ವಿತೀಯ ಸ್ಥಾನ ಗಳಿಸಿದರು. ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ಮತ್ತು ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ. ಹಗ್ಗ ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಎ” ಮತ್ತು ದ್ವಿತೀಯ ಸ್ಥಾನ ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ “ಎ” ಅವರು ಪಡೆದರು.
ಓಡಿಸಿದವರು ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ ಮತ್ತು ಬೈಂದೂರ್ ಹರೀಶ್. ಹಗ್ಗ ಕಿರಿಯ ವಿಭಾಗದಲ್ಲಿ ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್ ಪ್ರಥಮ ಹಾಗೂ ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ತಾನಾಜಿ ಬಿ ಶೆಟ್ಟಿ ದ್ವಿತೀಯ ಸ್ಥಾನ ಗಳಿಸಿದರು. ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್ ಮತ್ತು ಮರೋಡಿ ಶ್ರೀಧರ್ ಕೋಣ ಓಡಿಸಿದ್ದರು.
ನೇಗಿಲು ಹಿರಿಯ ವಿಭಾಗದಲ್ಲಿ ಬೆಳ್ಳಿಪ್ಪಾಡಿ ಕೈಪ ಕೇಶವ ಮಂಕು ಭಂಡಾರಿ “ಬಿ” ಪ್ರಥಮ ಹಾಗೂ ಕನಡ್ತ್ಯಾರ್ ಕೃಷ್ಣ ಶೆಟ್ಟಿ ದ್ವಿತೀಯ ಸ್ಥಾನ ಪಡೆದರು. ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಮತ್ತು ಕಾವೂರ್ ತೋಟ ಸುದರ್ಶನ್ ಕೋಣ ಓಡಿಸಿದರು.
ನೇಗಿಲು ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಜೈ ತುಳುನಾಡ್ ಕಕ್ಯಪದವು ಪುನ್ಕೆದಡಿ ರಾಮಯ್ಯ ಭಂಡಾರಿ ಮತ್ತು ದ್ವಿತೀಯ ಸ್ಥಾನ ಪಣೋಲಿಬೈಲು ಭಂಡಾರಮನೆ ಶಿವಾನಂದ ಕುಲಾಲ್ ಪಡೆದರು. ಕೋಣ ಓಡಿಸಿದವರು ಕಕ್ಯಪದವು ಪೆಂರ್ಗಾಲು ಕೃತಿಕ್ ಮತ್ತು ಪೆರಿಂಜೆ ಪ್ರಮೋದ್.
ನೇಗಿಲು ಸಬ್ ಜೂನಿಯರ್ ವಿಭಾಗದಲ್ಲಿ ಮರೋಡಿ ಕೆಳಗಿನಮನೆ ಕೃತೇಶ್ ಅಣ್ಣಿ ಪೂಜಾರಿ ಪ್ರಥಮ ಹಾಗೂ ದ್ವಿತೀಯ: ಭಟ್ಕಳ ಎಚ್.ಎನ್. ನಿವಾಸ ಪಿನ್ನುಪಾಲ್ ದ್ವಿತೀಯ ಸ್ಥಾನ ಗಳಿಸಿದರು. ಬೈಂದೂರು ವಿಶ್ವನಾಥ ದೇವಾಡಿಗ ಮತ್ತು ಭಟ್ಕಳ ವಿನೋದ್ ಕೋಣ ಓಡಿಸಿದ್ದರು.
BANTWAL
ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!
ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.
BANTWAL
ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ
ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.
ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
BANTWAL
ಬಂಟ್ವಾಳ: ಮಾರ್ಗ ನಡುವೆ ಹೊ*ತ್ತಿ ಉರಿದ ಡಸ್ಟರ್ ಕಾರ್
ಬಂಟ್ವಾಳ: ಡಸ್ಟರ್ ಕಾರೊಂದು ಮಾರ್ಗದ ನಡುವೆ ಹೊ*ತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.
ಕಾರಿನಲ್ಲಿ ಏಕಾಏಕಿ ಬೆಂ*ಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಬೆಂ*ಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮತ್ತು ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂ8ಕಿ ನಂದಿಸುವ ಕಾರ್ಯ ನಿರ್ವಹಿಸಿದರು. ಸುಮಾರು ಒಂದು ಗಂಟೆಯ ಕಾಲ ಬಂಟ್ವಾಳ-ಮೂಡಬಿದ್ರೆ ರೋಡ್ ಬ್ಲಾಕ್ ಆಗಿತ್ತು.
ಕಾರಿನ ಬ್ಯಾಟರಿ ಶಾರ್ಟ್ ಸಕ್ಯೂರ್ಟ್ನಿಂದಾಗಿ ಬೆಂ*ಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಇದ್ದರು. ಆದರೆ ಯಾರಿಗೂ ಹಾನಿಯಾಗಲಿಲ್ಲ.
- LATEST NEWS7 days ago
‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
- DAKSHINA KANNADA7 days ago
ಬತ್ತೇರಿ ಹೆಸರು ‘ಗಣಪತಿ ವೆಟ್ಟಂ’… ಟೀಕೆಗೆ ಗುರಿಯಾದ ಸುರೇಂದ್ರನ್ ಹೇಳಿಕೆ.
- LATEST NEWS7 days ago
ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ ಸೂಪರ್ ಹಿಟ್ ಧಾರಾವಾಹಿ ‘ಕೃಷ್ಣ ರುಕ್ಮಿಣಿ’ ನಟಿ
- chikkamagaluru6 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!