Connect with us

BANTWAL

ಬಂಟ್ವಾಳ: ಕೆ.ಜೆ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಬೋಳಂತೂರು ನಿವಾಸಿ ಪೊಲೀಸ್ ವಶಕ್ಕೆ

Published

on

ಬಂಟ್ವಾಳ: ಬೆಂಗಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ರಾಜ್ಯದಲ್ಲಿ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ.


ಬೋಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಅವರ ಪುತ್ರ ಮಹಮ್ಮದ್ ತಪ್ಸೀರ್ ಎಂಬಾತನ್ನು ಪೋಲೀಸರು ದೀರ್ಘಕಾಲದ ವಿಚಾರಣೆ ಬಳಿಕ ಬೆಳಿಗ್ಗೆ 11.45 ರ ಸುಮಾರಿಗೆ ವಶಕ್ಕೆ ಪಡೆದುಕೊಂಡು ಬಂಟ್ವಾಳಕ್ಕೆ ಕರೆತಂದಿದ್ದಾರೆ. ಆ ಬಳಿಕ ರಾಜ್ಯ ಪೋಲೀಸರಿಗೆ ಒಪ್ಪಿಸಿದ್ದಾರೆ.

ಕಳೆದ ವರ್ಷ ಬೆಂಗಳೂರಿನ ಕೆ.ಜೆ. ಡಿ.ಜೆ .ಹಳ್ಳಿಯಲ್ಲಿ ಅಖಂಡ ಶ್ರೀನಿವಾಸ ಅವರ ಮನೆಗೆ ದಾಂಧಲೆ ನಡೆಸಿ ಅ ಬಳಿಕ ಪೋಲಿಸ್ ಠಾಣೆಗೆ ನುಗ್ಗಲು ಪ್ರಯತ್ನಿಸಿ ಸಾಕಷ್ಟು ಹಾನಿ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪೋಲೀಸರ ತಂಡ ತನಿಖೆ ನಡೆಸುತ್ತಿತ್ತು .


ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ತಪ್ಸೀರ್ ಕೂಡ ಭಾಗಿಯಾಗಿದ್ದ ಎಂಬ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿದೆ.

ಈ ಪ್ರಕರಣಕ್ಕೆ ಆರಂಭದಲ್ಲಿ ಪೂರಕವಾದ ಯೋಜನೆ ರೂಪಿಸಿದ ತಂಡದ ಜೊತೆಗೆ ಈತ ನಿರಂತರವಾಗಿ ಸಂಪರ್ಕವನ್ನು ಇರಿಸಿಕೊಂಡಿದ್ದ ಎಂಬ ಆರೋಪದಲ್ಲಿ ಈತನ ಮನೆಗೆ ದಾಳಿ ನಡೆಸಲಾಗಿದೆ.

ತಪ್ಸೀರ್ ಪಿ.ಎಫ್.ಐ‌ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದ. ಈತ ಇತ್ತೀಚಿನ ದಿನಗಳಲ್ಲಿ ಪ್ರಮುಖವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಪ್ರಸ್ತುತ ಈತ ಉದ್ಯಮ ನಡೆಸುತ್ತಿದ್ದು, ಬೋಳಂತರಿನಲ್ಲಿ ವಾಸವಾಗಿದ್ದ.


ಬಂಟ್ವಾಳ ಹಾಗೂ ವಿಟ್ಲ ಪೋಲಿಸರ ತಂಡ ಮುಂಜಾನೆ ಮೂರು ಗಂಟೆಗೆ ರಾಜ್ಯದ ಪೋಲೀಸರು ನೀಡಿದ ವಿಳಾಸದಂತೆ ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದಲ್ಲಿರುವ ಈತನ ದೊಡ್ಡಪ್ಪನ ಮನೆಗೆ ಈತನ ಮನೆ ಎಂದು ತಪ್ಪಾಗಿ ಗ್ರಹಿಸಿ ಮನೆಗೆ ಹೋದಾಗ ಇಲ್ಲಿ ಈತ ಇಲ್ಲ ಬೊಳಂತೂರಿನಲ್ಲಿ ವಾಸವಾಗಿದ್ದಾನೆ ಎಂದು ತಿಳಿಸಿದ್ದಾರೆ.

ಆದರೆ ಈತನ ವಿಳಾಸ ಮಾತ್ರ ದೊಡ್ಡಪ್ಪನ ಮನೆಯದ್ದು ನೀಡಿದ್ದ ಎಂಬುದು ಗೊತ್ತಾದ ಬಳಿಕ ರೈಡ್ ಮಾಡಲಾಯಿತು. ಅಗತ್ಯ ದಾಖಲೆಗಳ ಸಹಿತ ಆರೋಪಿ ಮೊಬೈಲ್ ಜೊತೆ ಮನೆಯವರ ಮೊಬೈಲ್ ಗಳನ್ನು ಪೋಲೀಸರು ‌ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸರ ನಿರ್ದೇಶನದಂತೆ ಬಂಟ್ವಾಳ ಪೋಲೀಸರ ತಂಡ ಮನೆಗೆ ದಾಳಿ ನಡೆಸಿದಾಗ ಸ್ಥಳೀಯ ಸಂಘಟನೆಯ ಪ್ರಮುಖರು ಮನೆ ಮುಂದೆ ಸುಮಾರು 250 ಕ್ಕೂ ಅಧಿಕ ಜನರ ತಂಡ ಎನ್. ಐ.ಎ ಗೋ ಬ್ಯಾಕ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು.

ಆದರೆ ನಾವು ಬಂಟ್ವಾಳ ಪೋಲೀಸರು ಎನ್.ಐ.ಎ.ಅಲ್ಲ ಎಂಬ ವಿಚಾರ ತಿಳಿಸಿ ಬಳಿಕ ಯಾಕೆ ಬಂದಿದ್ದು, ಯಾವ ವಿಚಾರ ನಮಗೆ ತಿಳಿಸಬೇಕು ಎಂದು ಒತ್ತಾಯ ಮಾಡಿದಾಗ ಪೋಲೀಸರ ಭಾಷೆಯಲ್ಲಿ ಸಮಜಾಯಿಷಿ ನೀಡಿದರು.

ಬಂಧಿತನಾದ ತಪ್ಸೀರ್ ಮನೆ ಮದುವೆಯ ಸಂಭ್ರಮದಲ್ಲಿದೆ. ಈತನ ಸಹೋದರನ ಮದುವೆಗಾಗಿ ಎಲ್ಲಾ ಪೂರ್ವ ತಯಾರಿಗಳು ನಡೆಯುತ್ತಿದೆ. ಆದರೆ ಈ ಮಧ್ಯೆ ಈತನ ಬಂಧನವಾಗಿರುವುದು ಕುಟುಂಬದ ಸದಸ್ಯರಿಗೆ ದುಃಖ ತಂದಿದೆ.

ರಾಜ್ಯ ಪೋಲೀಸ್ ನಿರ್ದೇಶನದಂತೆ ಬಂಟ್ವಾಳ ಡಿವೈಎಸ್.ಪಿ. ಪ್ರತಾಪ್ ಸಿಂಗ್ ಥೋರಾಟ್ ಅವರ ಮಾರ್ಗದರ್ಶನದಲ್ಲಿ ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ,

ಗ್ರಾಮಾಂತರ ಇನ್ಸ್ ಪೆಕ್ಟರ್ ಟಿ.ಡಿ‌.ನಾಗರಾಜ್. ಪಿ ಎಸ್.ಐ.ಗಳಾದ ಅವಿನಾಶ್, ಹರೀಶ್, ಕಲೈಮಾರ್, ಸಂದೀಪ್, ಹಾಗೂ ಸಿಬ್ಬಂದಿ ವರ್ಗ,ಕೆ.ಎಸ್.ಆರ್‌ಪಿ ಪೋಲಿಸರ ತಂಡ ಕಾರ್ಯಚರಣೆ ನಡೆಸಿತ್ತು.

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending