Connect with us

BANTWAL

ಬಂಟ್ವಾಳದಲ್ಲಿ ಮದುವೆಯ ಸ್ಪೆಷಲ್ ಇನ್ವಿಟೇಶನ್: ಆಹ್ವಾನ ಪತ್ರದ ಜತೆ ಗಿಡ ಬೆಳೆಸಲು ತರಕಾರಿ ಬೀಜದ ಪ್ಯಾಕೆಟ್‌ ಫ್ರೀ..

Published

on

ಬಂಟ್ವಾಳ: ಪ್ರತಿ ಉಸಿರಿನಲ್ಲಿಯೂ ಪರಿಸರ ಸಂರಕ್ಷಣೆ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿರುವ ನಿವೃತ್ತ ಪ್ರಾಧ್ಯಾಪಕರೋರ್ವರು ಇದೀಗ ತಮ್ಮ ಪುತ್ರಿಯ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಪರಿಸರ ಪ್ರೇಮದ ಕಾಣಿಕೆ ನೀಡಿ ಸುದ್ದಿಯಾಗಿದ್ದಾರೆ.

ರಾಜಮಣಿ ರಾಮಕುಂಜ ಅವರ ಪುತ್ರಿ ಮೇಧಾರಾಮಕುಂಜ ಅವರ ವಿವಾಹ ರಂಜನ್ ಆಚಾರ್ಯ ಅವರ ಜತೆ ಡಿಸೆಂಬರ್‌ 14 ರಂದು ಬಿಸಿ ರೋಡಿನ ಮಹಾಲಿಂಗೇಶ್ವರ ದೇವಸ್ಥಾನದ ಮಾಂಗಲ್ಯ ಮಂಟಪದಲ್ಲಿ ನಡೆಯಲಿದೆ. ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ವಿಶೇಷತೆ ಇದೆ.


ಹೌದು. ಇದರ ಮುಖಪುಟದಲ್ಲಿ ಮದುಮಗ ಮತ್ತು ಮದುಮಗಳ ಚಿತ್ರವನ್ನು ಮಂಗಳೂರಿನ ಖ್ಯಾತ ಚಿತ್ರ ಕಲಾವಿದ ಭುವನ್ ಮಂಗಳೂರು ಅವರು ಬಿಡಿಸಿದ್ದಾರೆ.

ಒಳಗಿನ ಪುಟದಲ್ಲಿ ಹೋಮ ಕುಂಡಲಿಯಿದೆ, ಅದರ ಜತೆಗೆ ನಿಮ್ಮಿಂದ ಗಿಡವಾಗಲಿ ಎಂಬ ಬರಹದ ಅಡಿಯಲ್ಲಿ ಬೆಂಡೆಕಾಯಿ, ಬದನೆ, ಹರಿವೆ ಹಲಸಂಡೆ ಬೀಜಗಳ ಪ್ಯಾಕೆಟ್ ಇಟ್ಟಿದ್ದಾರೆ.

ಉದ್ದೇಶ ಇಷ್ಟೇ…ಇವರ ಕಾಗದ ಪರಿಸರವನ್ನು ಉಳಿಸುವ ಮತ್ತು ಬೆಳೆಸುವ ವಸ್ತುವಾಗಬೇಕು…ಕಾಗದ ಸಿಕ್ಕಿದ ಪ್ರತಿ ಮನೆಯಲ್ಲಿಯೂ ಗಿಡವೊಂದು ಮೊಳಕೆಯೊಡೆಯ ಬೇಕು..ಅ ಮೂಲಕ ಮನಪರಿವರ್ತನೆಯಾಗಿ ನಾವು ಪರಿಸರವನ್ನು ಉಳಿಸುವ ಪಣತೊಡ ಬೇಕು ಎಂಬುದೇ ಆಶಯವಾಗಿದೆ.

ಆಮಂತ್ರಣ ಪತ್ರಿಕೆ ನಾಲ್ಕು ಪುಟಗಳನ್ನು ಹೊಂದಿದ್ದು, ಕೊನೆಯ ಪುಟದಲ್ಲಿ ಪರಿಸರ ಸಂರಕ್ಷಣೆಯ ಬರಹಗಳು ಗಮನ ಸೆಳೆಯುತ್ತವೆ.

” ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ” ಎಂಬ ತಲೆಬರಹದಡಿಯಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಬೇಡಿ,ಕಸ ಎಸಯಬೇಡಿ ಹೀಗೆ ಅನೇಕ ಪರಿಸರ ಸಂರಕ್ಷಣಾ ವಿಚಾರಗಳನ್ನು ಹೊಂದಿದ ಬರಹ ಇಲ್ಲಿವೆ.


ಇದರ ಜತೆಗೆ ಮದುವೆ ಕಾರ್ಯಕ್ರಮದ ಪೌರೋಹಿತ್ಯ ಹಾಗೂ ಪಾಕಶಾಲೆಯ ನೇತೃತ್ವ ವಹಿಸಿದವರ ಹೆಸರು ಕೂಡಾ ಉಲ್ಲೇಖಿಸಲಾಗಿದೆ. ಇಷ್ಟೇ ಅಲ್ಲದೆ ಪ್ಲಾಸ್ಟಿಕ್ ಬಳಕೆ ಮಾಡಬೇಡಿ ಎಂಬ ಮಾಹಿತಿಗಾಗಿ ಮದುವೆಗೆ ಆಗಮಿಸುವ ಸರ್ವರಿಗೂ ಬಟ್ಟೆಯ ಕೈ ಚೀಲವೊಂದನ್ನು ನೀಡಲಾಗುತ್ತದೆ.

ಇದರಲ್ಲಿ ರಾಷ್ಟ್ರ ದೇವೋಭವ, ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರಿಯಸಿ. ಶ್ರೀರಸ್ತು ಶುಭ ಮಸ್ತು ಎಂಬ ಬರಹವನ್ನು ಪ್ರಿಂಟ್ ಮಾಡಿದ್ದಾರೆ.


‌‌ಈ ರೀತಿಯ ವೈವಿಧ್ಯಮಯ ಹಾಗೂ ಪರಿಸರ ಸಂರಕ್ಷಣಾ ಮಾಹಿತಿಯನ್ನು ಒದಗಿಸುವ ಆಮಂತ್ರಣ ಪತ್ರಿಕೆ ಈಗ ಬಹಳಷ್ಟು ಸುದ್ದಿಯಾಗಿದೆ. ಯಾವುದೇ ಪ್ರಚಾರದ ಹುಚ್ಚಿನಲ್ಲಿ ಈ ಪ್ರಯೋಗ ಮಾಡಿಲ್ಲ. ಪರಿಸರದ ಸಂರಕ್ಷಣೆ ಈ ನಾಡಿನ ಪ್ರತಿಯೊಬ್ಬರ ಕರ್ತವ್ಯ ವಾಗಬೇಕು , ಅದಕ್ಕೆ ಪ್ರೇರಣೆ ಯಾಗಬೇಕು , ಮನಪರಿವರ್ತನೆಯಾಗಬೇಕು ಎಂಬ ನಿಟ್ಟಿನಲ್ಲಿ ಸಣ್ಣ ಪ್ರಯತ್ನ ಮಾಡಿದ್ದೇನೆ ಎನ್ನುತ್ತಾರೆ ರಾಜಮಣಿ ರಾಮಕುಂಜ.

 

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending