BANTWAL
ಬಂಟ್ವಾಳ: ನಾವೂರು ಪಂಚಾಯತ್ ಗಲಾಟೆ ಪ್ರಕರಣ-ಪ್ರತಿದೂರು ದಾಖಲು
ಬಂಟ್ವಾಳ: ನಾವೂರ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಗ್ರಾಮ ಸಭೆಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ದೂರಿಗೆ ಪ್ರತಿ ದೂರು ದಾಖಲಾಗಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಕುಲಾಲ್ ಅವರಿಗೆ ಸದಸ್ಯ ಜನಾರ್ದನ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾವೂರ ಗ್ರಾ.ಪಂ. ನ ಒಂದನೇ ವಾರ್ಡ್ ನಲ್ಲಿ ರಸ್ತೆ ಚರಂಡಿ ಕಾಮಗಾರಿಯನ್ನು ರಿಯಾಜ್ ಎಂಬಾತ ಮಾಡಿದ್ದು, ಈತನಿಗೆ ಕಾಮಗಾರಿಯ ಹಣ ಪಾವತಿಸಲು ಬಾಕಿ ಇರುವ ವಿಚಾರದಲ್ಲಿ ಗ್ರಾಮ ಸಭೆಯಲ್ಲಿ ಗಲಾಟೆ ನಡೆದಿದೆ.
ಈ ಕಾಮಗಾರಿಯನ್ನು ಪರಿಶೀಲನೆ ನಡೆಸಿ ಬಳಿಕ ಹಣ ನೀಡುವಂತೆ ಗ್ರಾಮಪಂಚಾಯತ್ ಅಧ್ಯಕ್ಷರು ಟಿಪ್ಪಣಿ ಬರೆದಿದ್ದರು, ಈ ವಿಚಾರಕ್ಕೆ ಹಾಗೂ ಹಣ ಯಾಕೆ ಪಾವತಿಸುತ್ತಿಲ್ಲ ಎಂದು ಸದಸ್ಯ ಪ್ರಶ್ನೆ ಮಾಡಿದ್ದಲ್ಲದೆ ವೇದಿಕೆಯತ್ತ ಆಗಮಿಸಿ ಅಧ್ಯಕ್ಷ ನ ಮೇಲೆ ಹಲ್ಲೆ ನಡೆಸಿ ದ್ದಾನೆ ಎಂದು ದೂರು ನೀಡಿದ್ದಾನೆ.
ದೂರಿಗೆ ಪ್ರತಿ ದೂರು
ಗ್ರಾಮ ಪಂಚಾಯತ್ ಅಧ್ಯಕ್ಷ ಸದಸ್ಯನೋರ್ವನಿಗೆ ಹಲ್ಲೆ ನಡೆಸಿದ್ದಾನೆ ಎಂದು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಗ್ರಾಮಸಭೆಯಲ್ಲಿ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ್ದಕ್ಕೆ ಅಧ್ಯಕ್ಷ ಹಲ್ಲೆ ನಡೆಸಿದ್ದಾನೆ ಎಂದು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದ.
ಅ ಬಳಿಕ ದೂರಿಗೆ ಪ್ರತಿಯಾಗಿ ಅಧ್ಯಕ್ಷ ಸದಸ್ಯ ಹಲ್ಲೆ ನಡೆಸಿದ್ದಾನೆ ಎಂದು ದೂರು ನೀಡಿದ್ದಲ್ಲದೇ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ದಾಖಲಾಗಿದ್ದಾನೆ.
ಬಂಟ್ವಾಳ: ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನ ಮೇಲೆ ಗ್ರಾ.ಪಂ ಅಧ್ಯಕ್ಷನಿಂದ ಹಲ್ಲೆ, ಚೂರಿ ಇರಿಯಲು ಯತ್ನ
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.