ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯ ಪೋಲೀಸ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ.
ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊದದಂತೆ ಶಾಂತಿ ನೆಲೆಸುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದವರಲ್ಲಿ ಇವರು ಓರ್ವ ಅಧಿಕಾರಿ.
ವಿಟ್ಲದಲ್ಲಿ ಎರಡು ಸಮುದಾಯಗಳ ಮಧ್ಯೆ ನಡೆದ ಗಲಾಟೆಯ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದ ಕೀರ್ತಿ ಹಾಗೂ ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯ ಕರ್ತರಿಗೆ ಮಾತಿನ ಮೂಲಕ ಎಚ್ಚರಿಕೆ ನೀಡಿದ ವಿಡಿಯೋ ಒಂದು ಸಖತ್ ವೈರಲ್ ಆಗಿತ್ತು.
ಹಿಂದೂ ಸಂಘಟನೆಯ ಪ್ರಮುಖ ಸುರೇಂದ್ರ ಬಂಟ್ವಾಳ ಅವರ ಕೊಲೆ ಪ್ರಕರಣದ ನೈಜ ಆರೋಪಿಗಳ ಬಂಧನ ಸಹಿತ, ಅನೇಕ ಕ್ಲಿಷ್ಟಕರವಾದ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ ಅನುಭವಿ ಪೋಲೀಸ್ ಅಧಿಕಾರಿ.
ಇತ್ತೀಚಿಗೆ ಉಪ್ಪಿನಂಗಡಿಯಲ್ಲಿ ನಡೆದ ಗಲಭೆ ನಿಯಂತ್ರಣದಲ್ಲೂ ಇವರ ಪಾತ್ರ ಪ್ರಮುಖವಾಗಿತ್ತು. ಆ ಬಳಿಕ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಂಧನದಲ್ಲಿ ಇವರ ಪಾತ್ರ ಹೆಚ್ಚಿತ್ತು.
ಈ ರೀತಿಯಲ್ಲಿ ಜಿಲ್ಲೆ ಅಲ್ಲದೆ ಹೊರಜಿಲ್ಲೆಯಲ್ಲೂ ಕೆಲಸ ಮಾಡಿ ಹೆಸರುಗಳಿಸಿದ ಓರ್ವ ಖಡಕ್ ಪೋಲೀಸ್ ಅಧಿಕಾರಿಯಾಗಿದ್ದಾರೆ.