BANTWAL
Bantwala: ಶಂಕಿತ ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ..!
ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಪೆರುವಾಯಿ ನಿವಾಸಿ ಆಶಾ (25) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ಆಶಾ ಅವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಇದೀಗ ಆಶಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ