Connect with us

    BANTWAL

    ಬಂಟ್ವಾಳ: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂ*ಗಿಕ ಕಿರು*ಕುಳ; ಆರೋಪಿ ಅರೆಸ್ಟ್

    Published

    on

    ಬಂಟ್ವಾಳ: ಹಾಸನ ಮೂಲದ ವ್ಯಕ್ತಿಯೋರ್ವನಿಂದ ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂ*ಗಿಕ ಕಿರು*ಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಜೂನ್ 11 ರಂದು ಕಲ್ಲಡ್ಕದಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಲ್ಲಡ್ಕ ಸಮೀಪದ ಬೊಂಡಾಲ ಎಂಬಲ್ಲಿನ ಸಂತ್ರಸ್ತ ಮಹಿಳೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಮಹಿಳೆಯ ಸ್ವಂತ ಊರು ಹಾಸನ ತಾಲೂಕಿನ ಬೇಲೂರು ಆಗಿದ್ದು, ಕಲ್ಲಡ್ಕದ ಅಮ್ಟೂರು ಎಂಬಲ್ಲಿಗೆ ಮದುವೆ ಮಾಡಿ ಕೊಡಲಾಗಿದೆ. ಒಂದೆರೆಡು ಬಾರಿ ತಾಯಿ ಮನೆಗೆ ಈತನ ರಿಕ್ಷಾದಲ್ಲಿ ಬಾಡಿಗೆ ಮಾಡಿಕೊಂಡು ಹೋಗಿರುವಾಗ ಸಂತ್ರಸ್ತ ಮಹಿಳೆಗೆ ಈತ ಪರಿಚಯಸ್ಥನಾಗಿದ್ದು, ಮೊಬೈಲ್ ನಂಬರ್‌ ಅನ್ನು ಆತ ಪಡೆದುಕೊಂಡಿದ್ದ ಎನ್ನಲಾಗಿದೆ.

    ಮೊಬೈಲ್ ಮೂಲಕ ಈತನ ಸಂಪರ್ಕ ಅತಿಯಾಗಿ ಕಳೆದ ಕೆಲ ಸಮಯದ ಹಿಂದೆ ಗಂಡನ ಮನೆ ಕಲ್ಲಡ್ಕಕ್ಕೆ ಬಂದಿದ್ದ. ಮನೆಗೆ ಬಂದ ಈತ ಮಹಿಳೆಗೆ ಕಿರು*ಕುಳ ನೀಡಿದ್ದಲ್ಲದೇ, ಮನೆಯೊಳಗೆ ಇದ್ದ ಅನೇಕ ಬೆಲೆ ಬಾಳುವ ವಸ್ತುಗಳನ್ನು ಹಾಳು ಮಾಡಿ ಹೋಗಿದ್ದ. ಈ ವೇಳೆ ಆತನಿಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತು ಎಂದು ಹೇಳಲಾಗಿದೆ.

    ಇದೀಗ ಮತ್ತೆ ಹಾಸನದಿಂದ ಬಂಟ್ವಾಳಕ್ಕೆ ಬಂದಿಳಿದ ಆರೋಪಿ ಪ್ರಮೋದ್ ಮತ್ತೆ ಗಂಡನಿಲ್ಲದ ಸಮಯ ನೋಡಿಕೊಂಡು ಮಹಿಳೆಯ ಮನೆಗೆ ನುಗ್ಗಿದ್ದಾನೆ. ಈ ವೇಳೆ ಮಹಿಳೆಗೆ ಲೈಂ*ಗಿಕ ಕಿರು*ಕುಳ ನೀಡಲು ಪ್ರಯತ್ನಿಸಿದ್ದಾನೆ.

    ಮಹಿಳೆ ಜೋರಾಗಿ ಬೊಬ್ಬೆ ಹೊಡೆದಾಗ ಮನೆಯ ಸಮೀಪದ ದೇವಾಲದೊಳಗೆ ಇದ್ದ ಗಂಡ ಬಂದು ರಕ್ಷಣೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭ ಮಹಿಳೆಗೆ ಅವ್ಯಾಚ್ಚ ಶಬ್ದಗಳಿಂದ ನಿಂದಿಸಿ, ಗಂಡ ಮಗುವಿನ ಜೊತೆ ಸೇರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದಾನೆ ಎಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

    ಇದೀಗ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಠಾಣಾ ಪೋಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    BANTWAL

    ಬಂಟ್ವಾಳ: ಅಣೇಜ ತಿರುವಿನಲ್ಲಿ ಸಿಲುಕಿಕೊಂಡ ಕಂಟೈನರ್ ಲಾರಿ

    Published

    on

    ಬಂಟ್ವಾಳ: ಬೆಂಗಳೂರು ಭಾಗದಿಂದ ಆಗಮಿಸುವ ಕಂಟೈನರ್ ಲಾರಿಯೊಂದು, ಉಪ್ಪಿನಂಗಡಿಯಿಂದ ಸರಪಾಡಿ ಮಣಿಹಳ್ಳ ರಸ್ತೆಯಲ್ಲಿ ಆಗಮಿಸಿ, ಅಲ್ಲಿಪಾದೆ ಸಮೀಪದ ಅಣೇಜ ತಿರುವಿನಲ್ಲಿ ಸಿಲುಕಿ ಹಾಕಿಕೊಂಡ ಘಟನೆ ನಡೆದಿದೆ.

    ಬಿಜಾಪುರ ಮೂಲದ ಲಾರಿಯು ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಆಗಮಿಸಿ,ಉಪ್ಪಿನಂಗಡಿಯಲ್ಲಿ ಮಂಗಳೂರು ತೆರಳಲು ಚಾಲಕ ಗೂಗಲ್ ಮ್ಯಾಪ್ ಹಾಕಿದ ಸಂದರ್ಭ ಆತನಿಗೆ ಉಪ್ಪಿನಂಗಡಿ ಅಜಿಲಮೊಗರು ಮಣಿಹಳ್ಳ ರಸ್ತೆಯ ಮೂಲಕ ಸಾಗಿ,ಮಂಗಳೂರಿಗೆ ತೆರಳಲು ಸೂಚಿಸಿದೆ.

    ಪ್ರಸ್ತುತ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ಗೂಗಲ್ ಮ್ಯಾಪ್ ಈ ರಸ್ತೆಯನ್ನು ಸೂಚಿಸುತ್ತಿದೆ.ಆದರೆ ಈ ರಸ್ತೆಯು ಘನವಾಹನ ಸಾಗಾಟಕ್ಕೆ ಸೂಕ್ತವಾಗಿಲ್ಲ. ಅಣೇಜದಲ್ಲಿ ಅಪಾಯಕಾರಿ ತಿರುವು ಇರುವುದರಿಂದ ಒಂದೇ ಬಾರಿಗೆ ವಾಹನ ತಿರುವು ಪಡೆದು ಕೊಳ್ಳುವುದಿಲ್ಲ.ಎರಡು ಮೂರು ಬಾರಿ ಹಿಂದೆ ಮುಂದೆ ಚಲಿಸಿ ತಿರುಗಿಸಬೇಕಿದೆ.ಪ್ರಸ್ತುತ ಈ ಲಾರಿಯು ಮುಂದೆ ಹೋಗಿದ್ದು,ಆದರೆ ಹಿಂದೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಸರಪಾಡಿ ಬಿ.ಸಿ ರೋಡು ಸಂಚರಿಸುವ ಬಸ್ ಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸಿದ್ದು, ಈಗಾಗಿ ಸರಪಾಡಿ ಮಣಿನಾಲ್ಕೂರು ಗ್ರಾಮದ ಗ್ರಾಮಸ್ಥರು ತೊಂದರೆ ಅನುಭವಿಸಬೇಕಾಯಿತು.

    Continue Reading

    BANTWAL

    ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.

    Published

    on

    ವಿಟ್ಲ:  ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳಾದ ಸಂಜನಾ ರಜಪೂತ ಹಾಗೂ ಪಿ ಕೆ ವಿಕಾಸ್ ಯೋಗ ಮಾರ್ಗದರ್ಶಕರಾಗಿ ಆಗಮಿಸಿ, ಹಲವಾರು ಯೋಗದ ಆಸನಗಳನ್ನು ಪ್ರದರ್ಶಿಸಿ ಅದರ ಮಹತ್ವವನ್ನು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ,ಶಾಲಾ ಪ್ರಾಂಶುಪಾಲರಾದ ರವೀಂದ್ರ ದರ್ಬೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಹ ಶಿಕ್ಷಕಿಯರಾದ ಶೋಭಾ ಎಂ ಶೆಟ್ಟಿ ಹಾಗೂ ಜಯಶೀಲ ಕಾರ್ಯಕ್ರಮ ನಿರ್ವಹಿಸಿದರು.

    Continue Reading

    BANTWAL

    ಮುಖ್ಯ ಶಿಕ್ಷಕನಿಂದ ಕರ್ತವ್ಯ ಲೋಪ..! ವರ್ಗಾವಣೆಗೆ ಸ್ಥಳೀಯರಿಂದ ಆಗ್ರಹ

    Published

    on

    ಬಂಟ್ವಾಳ:  ಕರ್ತವ್ಯ ಲೋಪದ ಆರೋಪ, ವಿದ್ಯಾರ್ಥಿಗಳ ಮೇಲೆ ದಂಡಪ್ರಹಾರ,ಸಹಶಿಕ್ಷಕರಿಗೆ ಕಿರುಕುಳ ನೀಡಿ ಸರಕಾರಿ ಅಂಗ್ಲ ಮಾಧ್ಯಮ ಶಾಲೆಯ ಹೆಸರು ಕೆಡಿಸುವ ಪ್ರಭಾರ ಶಾಲಾ ಮುಖ್ಯ ಶಿಕ್ಷಕನೋರ್ವನನ್ನು ಕೂಡಲೇ ವರ್ಗಾವಣೆ ಮಾಡುವಂತೆ ಎಸ್‌.ಡಿ.ಎಂ.ಸಿ ಹಾಗೂ ದುರ್ಗಾ ಚಾರಿಟೇಬಲ್ ಟ್ರಸ್ಟ್ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಮಾಡಿದ ಘಟನೆ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಡೆದಿದೆ.

    ಸರಕಾರಿ ಶಾಲೆ ಉಳಿಸಿ, ಬೆಳೆಸಿ ಹೋರಾಟದ ಮೂಲಕ ಶಿಕ್ಷಣ ಕ್ರಾಂತಿಯನ್ನು ಮಾಡಿ ಬಂಟ್ವಾಳ ತಾಲೂಕಿನಲ್ಲಿ ಹೆಸರುವಾಸಿಯಾಗಿರುವ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇದೀಗ ಮುಖ್ಯ ಶಿಕ್ಷಕನ ಎಡವಟ್ಟಿನಿಂದಾಗಿ , ಮಕ್ಕಳ ಸಂಖ್ಯೆಯಲ್ಲಿ ಕೊರತೆ ಉಂಟಾಗುವ ಭಯ ಸಮಿತಿಗೆ ಉಂಟು ಮಾಡಿದೆ. ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕನಿಂದ ಕೀಟಲೆ ಆರಂಭವಾಗಿದ್ದು. ವಿನಾಕಾರಣ ಮಕ್ಕಳ ಮೇಲೆ ಬಲಪ್ರಯೋಗ ಮಾಡುವುದರ ಜೊತೆ ಅಶ್ಲೀಲ ಪದಗಳನ್ನು ಬಳಸಿ ಬೈಯುವುದು ಕಂಡುಬಂದಿದ್ದು, ಮಕ್ಕಳ ಪೋಷಕರು ಶಾಲಾಭಿವೃದ್ದಿ ಸಮಿತಿಗೆ ದೂರು ನೀಡಿದ್ದು, ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂಬುದಾಗಿ ಸಮಿತಿಗೆ ತಿಳಿಸಿದ್ದಾರೆ.

    ಮುಂದೆ ಓದಿ..;  ಹೆಣ್ಮಕ್ಕಳು ಪದೇ ಪದೇ ತವರು ಮನೆಗೆ ಬರುತ್ತಿದ್ದರೆ ಈ ಸಮಸ್ಯೆಗಳು ಖಂಡಿತ!

    ಶಾಲಾ ಸಹಶಿಕ್ಷರಲ್ಲಿ ಪ್ರಭಾರ ಮುಖ್ಯಶಿಕ್ಷಕ ಅಸಭ್ಯವಾದ ವರ್ತನೆ, ಮಾನಸಿಕ ಕಿರುಕುಳ ನೀಡುವುದಾಗಿಯೂ ದೂರನ್ನು ನೀಡಲಾಗಿದೆ. ತಮ್ಮ ಖಾಸಗಿ ಕಾರ್ಯಕ್ರಮಗಳಿಗೆ ಹೆಚ್ಚು ಗಮನ ಹಸರಿಸುತ್ತಾರೆ. ಪಾಠದ ಕಡೆ ಗಮನ ನೀಡದೆ ವಿದ್ಯಾರ್ಥಿಗಳು ಕಡಿಮೆ ಅಂಕ ಪಡೆಯಲು ಕಾರಣವಾಗಿದೆ ಎಂದು ಆರೋಪ ಕೇಳಿಬಂದಿದೆ. ಸರಿಯಾಗಿ ಪಾಠ ಮಾಡದೆ ಇರುವ ಕಾರಣಕ್ಕಾಗಿ ನಿರೀಕ್ಷಿತ ಅಂಕಗಳನ್ನು ಪಡೆಯಲು ಸಾಧ್ಯವಾಗಿಲ್ಲ ಎಂಬುದನ್ನು ಹಾಗೂ ಶಿಕ್ಷಕನ ವರ್ತನೆಯ ಬಗ್ಗೆ ಅನೇಕ ವಿದ್ಯಾರ್ಥಿಗಳು ಶಾಲಾ ದೂರು ಪೆಟ್ಟಿಗೆಯಲ್ಲಿ ಲಿಖಿತ ರೂಪದಲ್ಲಿ ನೀಡಿದ್ದಾರೆ.

    ಶಿಕ್ಷಣಾಧಿಕಾರಿಗೆ ದೂರು

    ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಪ್ರೌಡ ಶಾಲೆಯಲ್ಲಿರುವ ಪ್ರಭಾರ ಮುಖ್ಯ ಶಿಕ್ಷಕನ ಕರ್ತವ್ಯ ಲೋಪದ ಬಗ್ಗೆ ದಡ್ಡಲಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಶಾಲಾಭಿವೃದ್ದಿ ಸಮಿತಿ ಹಾಗೂ ದಡ್ಡಲಕಾಡು ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ (ರಿ.) ನ ವತಿಯಿಂದ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಶಾಲಾ ಮುಖ್ಯ ಶಿಕ್ಷಕ ರಮಾನಂದ ಎಂಬವರು ಕರ್ತವ್ಯ ಲೋಪ ಎಸಗಿದ್ದಲ್ಲದೆ, ವಿದ್ಯಾರ್ಥಿಗಳಿಗೆ ದೈಹಿಕ ದಂಡನೆ ಮತ್ತು ಸಹಶಿಕ್ಷಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದು ಶಿಕ್ಷಕನನ್ನು ಕೂಡಲೇ ವರ್ಗಾವಣೆಗೊಳಿಸಿ ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.  ಈ ಕುರಿತು ಯಾವುದೇ ಕ್ರಮಕೈಗೊಳ್ಳದೇ ಇದ್ದರೆ ಮುಂದಿನ ವಾರ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು  ಆಗ್ರಹಿಸಿದ್ದಾರೆ.

     

     

    Continue Reading

    LATEST NEWS

    Trending