BANTWAL
ಬಂಟ್ವಾಳ: ಜಯರಾಮ ಆಚಾರ್ಯರ ಅಂತಿಮ ದರ್ಶನ
ಬಂಟ್ವಾಳ: ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಯಕ್ಷಗಾನದ ಖ್ಯಾತ ಹಿರಿಯ ಹಾಸ್ಯ ಕಲಾವಿದ ಜಯರಾಮ ಆಚಾರ್ಯ ಅವರ ಪಾರ್ಥಿವ ಶರೀರ ಬಂಟ್ವಾಳದ ನಿವಾಸಕ್ಕೆ ತರಲಾಗಿದೆ.
ಅಕ್ಟೋಬರ್ 21 ರಿಂದ ಬೆಂಗಳೂರಿನಲ್ಲಿ ನಡೆಯಲಿದ್ದ ಯಕ್ಷಗಾನ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಹೃದಯಾಘಾತವಾಗಿತ್ತು.
67 ವರ್ಷದ ಜಯರಾಮ ಆಚಾರ್ಯ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದರಾಗಿ ವಿವಿಧ ಮೇಳಗಳಲ್ಲೂ ಸೇವೆ ಸಲ್ಲಿಸಿದ್ದರು. ಅವರ ಪಾರ್ಥಿವ ಶರೀರ ಬಂಟ್ವಾಳ ನಿವಾಸಕ್ಕೆ ಆಗಮಿಸಿದ ವೇಳೆ ನೂರಾರು ಅಭಿಮಾನಿಗಳು ಆಗಮಿಸಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಯಕ್ಷಗಾನ ಕಲಾವಿದರು, ಯಕ್ಷಗಾನ ಅಭಿಮಾನಿಗಳು ಹಾಗೂ ಊರ ಗಣ್ಯರು ಆಗಮಿಸಿ ಮೃತರಿಗೆ ಸಂತಾಪ ಸೂಚಿಸಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದ್ದಾರೆ. ನಮ್ಮಕುಡ್ಲ ವಾಹಿನಿ ಯಕ್ಷ ತೆಲಿಕೆ ತಂಡದ ದಿನೇಶ್ ಕೊಡಪದವು ತಂಡ ಕೂಡಾ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡದುಕೊಂಡಿದ್ದಾರೆ. ಒಬ್ಬ ಮೇರು ಮಟ್ಟದ ಯಕ್ಷಗಾನದ ಕಲಾವಿದನನ್ನು ಕಳೆದುಕೊಂಡಿರುವುದಕ್ಕೆ ದಿನೇಶ್ ಕೊಡಪದವು ಅವರು ಸಂತಾಪ ಸೂಚಿಸಿದ್ದಾರೆ
BANTWAL
ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಇನ್ನಿಲ್ಲ; ಬಂಟ್ವಾಳ ಜಯರಾಮ ಆಚಾರ್ಯ ವಿಧಿವಶ
ಬಂಟ್ವಾಳ: ಬೆಂಗಳೂರಿಗೆ ಯಕ್ಷಗಾನ ಪ್ರದರ್ಶನಕ್ಕೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ (ಅ.21) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
1957ರಲ್ಲಿ ಜನಿಸಿದ್ದ ಜಯರಾಮ ಆಚಾರ್ಯರ ತಂದೆ ಬಂಟ್ವಾಳ ಗಣಪತಿ ಆಚಾರ್ಯ ಕೂಡ ಕಲಾವಿದರಾಗಿದ್ದು, ವಿವಿಧ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು. ತಾಳಮದ್ದಳೆಗಳನ್ನು ನೋಡುತ್ತಾ ಬೆಳೆದಿದ್ದ ಜಯರಾಮ ಆಚಾರ್ಯರು ತಂದೆಯವರ ಜತೆ ಯಕ್ಷಗಾನ ಪ್ರದರ್ಶನಗಳಿಗೆ ಹೋಗಿ ಆಸಕ್ತಿ ಬೆಳೆಸಿಕೊಂಡಿದ್ದರು. ನಾಟ್ಯಾಭ್ಯಾಸ ಮಾಡುವ ಮೊದಲೇ ಒಂದಷ್ಟು ಮೇಳಗಳಲ್ಲಿ ಸೇವೆ ಸಲ್ಲಿಸಿರುವುದು ಅವರ ಹೆಗ್ಗಳಿಕೆಯಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಲಲಿತಾ ಕಲಾಕೇಂದ್ರದಲ್ಲಿ ಪಡ್ರೆ ಚಂದು ಅವರಿಂದ ಯಕ್ಷಗಾನ ನಾಟ್ಯವನ್ನು ಕಲಿತಿದ್ದು, ಆ ಸಂದರ್ಭದಲ್ಲಿ ಈಗಿನ ಹಲವು ಪ್ರಸಿದ್ಧ ಕಲಾವಿದರು ಅವರ ಸಹಪಾಠಿಗಳಾಗಿದ್ದರು.
BANTWAL
ಬಂಟ್ವಾಳ: ವೇಷ ಹಾಕಲು ಇದೆ ಎಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ
ಬಂಟ್ವಾಳ: ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್ (55) ನಾಪತ್ತೆಯಾದವರು.ಸುಂದರ ನಾಯ್ಕ್ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ದಸರಾ ಹಬ್ಬದ ಪ್ರಯುಕ್ತ ವೇಷ ಹಾಕುತ್ತಿದ್ದರು. ಅದೇ ರೀತಿ ಅ.1 ರಂದು ಬೆಳಿಗ್ಗೆ ಪತ್ನಿಯಲ್ಲಿ ,ನಾಳೆ ನಾನು ದಸರಾ ಹಬ್ಬದ ವೇಷ ಹಾಕಲು ಇದೆ ನಾನು ವಿಟ್ಲ ಠಾಣೆಗೆ ಹೋಗಿ ಅನುಮತಿ ಪಡೆಯಲು ಇದೆಯಂದು ಹೇಳಿದ್ದರು. ಸುಂದರ ನಾಯ್ಕ ಅವರ ಪತ್ನಿ ಸಂಜೆ ಮನೆಗೆ ಬಂದಾಗ ಪತಿ ಇರಲಿಲ್ಲ.
ದಸರಾ ಹಬ್ಬ ಇರುವುದರಿಂದ ಹಬ್ಬದಲ್ಲಿ ವೇಷ ಹಾಕಿ ಹಬ್ಬ ಮುಗಿದ ನಂತರ ಮನೆಗೆ ಬರಬಹುದೆಂದು ಭಾವಿಸಿದ್ದು ಆದರೆ ಈವರೆಗೂ ಗಂಡ ಮನೆಗೆ ಬಾರದೇ ಇರುವುದರಿಂದ ಸಂಭಂದಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿದ್ದಾರೆ ಎಂದು ಪತ್ನಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
BANTWAL
ಬಂಟ್ವಾಳ : ರೈಲ್ವೇ ಹಳಿ ಬದಿ ರುಂ*ಡ – ಮುಂ*ಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃ*ತದೇಹ ಪ*ತ್ತೆ
ಬಂಟ್ವಾಳ: ರೈಲು ಡಿಕ್ಕಿಯಾಗಿ ಸಾ*ವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೇ ಹಳಿಯಲ್ಲಿ ಪ*ತ್ತೆಯಾಗಿದೆ. ಬಂಟ್ವಾಳ ಕಾಮಾಜೆ ನಿವಾಸಿ ಕರುಣಾಕರ (35) ಸಾ*ವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಳೆದ 2 ವರ್ಷಗಳ ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಒಂದು ವರ್ಷದ ಹೆಣ್ಣು ಮಗುವಿದೆ.
ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿ*ಕ್ಕಿಯಾಗಿದೆ. ಬಿಸಿರೋಡಿನ ರೈಲ್ವೇ ಸ್ಟೇಷನ್ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಮೃ*ತದೇಹ ಪತ್ತೆಯಾಗಿದೆ. ಸಾ*ವಿನ ಕಾರಣ ಇನ್ನೂ ನಿಗೂಢವಾಗಿದ್ದು ನಿಖರ ಮಾಹಿತಿ ಲಭ್ಯಯವಾಗಿಲ್ಲ.
ಕಾಮಾಜೆಯಿಂದ ಬಿಸಿರೋಡಿಗೆ ಕೆಲಸಕ್ಕೆ ಹೋಗುವ ವೇಳೆ ಇದೇ ರೈಲ್ವೇ ಹಳಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಂಬ ವಿಚಾರವನ್ನು ಕುಟುಂಬಿಕರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಹಾಗೂ ರೈಲ್ವೇ ಇಲಾಖೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- BIG BOSS6 days ago
ಲಾಯರ್ ಜಗದೀಶ್ ಹೊರಗೆ, ಪತ್ನಿ ಒಳಗೆ: ಕಲರ್ಸ್ ಶೋನಲ್ಲಿ ಜಗದೀಶ್ ಪತ್ನಿ
- BIG BOSS4 days ago
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
- BIG BOSS5 days ago
ಕೊನೆಗೂ ಸುದೀಪ್ ಹೇಳಿದ ಬದಲಾವಣೆಯನ್ನು ಜಾರಿಗೆ ತಂದ ಬಿಗ್ ಬಾಸ್; ಏನದು ?
- LATEST NEWS5 days ago
ಕೀಬೋರ್ಡ್ನಲ್ಲಿ ಎಫ್ ಮತ್ತು ಜೆ ಅಕ್ಷರಗಳ ಕೆಳಗೆ ಗೆರೆ ಏಕೆ ಇರುತ್ತದೆ ಗೊತ್ತಾ?