Connect with us

BANTWAL

Bantwala: ಅನಾರೋಗ್ಯ ಹಾಗೂ ನಿರುದ್ಯೋಗದಿಂದ ನೊಂದ ಕಲಾವಿದ ಬಾವಿಗೆ ಹಾರಿ ಆತ್ಮಹತ್ಯೆ..!

Published

on

ಅನಾರೋಗ್ಯದಿಂದ ಹಾಗೂ ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡಿರುವ ಘಟನೆ ಆ.14ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.

ಬಂಟ್ವಾಳ: ಅನಾರೋಗ್ಯದಿಂದ ಹಾಗೂ ನಿರುದ್ಯೋಗದ ಸಮಸ್ಯೆಯಿಂದ ಬೇಸತ್ತ ಯುವ ಚಿತ್ರಕಾರನೊಬ್ಬ ಮನೆಯ ಬಾವಿಗೆ ಹಾರಿ ಜೀವಾಂತ್ಯ ಮಾಡಿಕೊಂಡಿರುವ ಘಟನೆ ಆ.14ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.

ಚಿತ್ರಕಾರ ಸಾಗರ್ ಆಚಾರ್ಯ (26) ಎಂಬಾತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.

ಇಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ಮನೆಯಂಗಳದಲ್ಲಿ ಇರುವ ಸುಮಾರು 30ಅಡಿ ಆಳದ ಬಾವಿಗೆ ಹಾರಿ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಾವಿಗೆ ಕಾರಣ..?

ಸಾಗರ್ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ನಿಗೂಢವಾಗಿದೆಯಾದರೂ ಆತನ ಅನಾರೋಗ್ಯದ ಕಾರಣ ಜೀವನದಲ್ಲಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ.

ಆದರೆ ಈತ ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ನೊಂದಿದ್ದಲ್ಲದೆ, ನೆರೆಹೊರೆಯವರ ಸ್ನೇಹಿತರ ಜೊತೆ ಈತನ ನೋವನ್ನು ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.

ಸಾಗರ್ ಒಬ್ಬ ಅತ್ಯದ್ಭುತ ಚಿತ್ರಕಾರ, ಆದರೆ ಆತನ ಕಲೆಗೆ ಜೀವ ತುಂಬಲು ಆ ವಿಧಿ ಬಿಡಲಿಲ್ಲ.

ಕಲಾವಿದನಾಗಿದ್ದ ಸಾಗರ್ ಕಳೆದ ಎರಡು ವರ್ಷಗಳ ಹಿಂದೆ ಬಿಸಿರೋಡಿನ ಸಿ.ಡಿ.ಪಿ.ಒ.ಕಚೇರಿಯಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದ.

ಆದರೆ ಅದಾಗಲೇ ಈತನಿಗೆ ಮೊದಲೇ ಇದ್ದ ಕಿಡ್ನಿ ಸಮಸ್ಯೆ ಉಲ್ಬಣಗೊಂಡಿತು.

ಹಾಗಾಗಿ ಈತ ಕೆಲಸ ಬಿಟ್ಟು ಮನೆಯಲ್ಲೇ ಇದ್ದ.

ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಲೇಬೇಕು ಎಂಬ ಸ್ಥಿತಿ ಒಂದೆಡೆ, ಇನ್ನೊಂದು ಕಡೆ ಎರಡು ಕಿಡ್ನಿ ವೈಫಲ್ಯ ಕಂಡ ಹಿನ್ನೆಲೆಯಲ್ಲಿ ಈತನ ತಂದೆಯ ಒಂದು ಕಿಡ್ನಿಯನ್ನು ನೀಡಲಾಗಿತ್ತು.

ಮರದ ಕೆಲಸ ಮಾಡುತ್ತಿದ್ದ ತಂದೆಯವರು ಕಿಡ್ನಿ ಮಗನಿಗೆ ನೀಡಿದ ಬಳಿಕ ಕೆಲಸ ಮಾಡಲು ಸ್ವಲ್ಪ ಕಷ್ಟದ ಸ್ಥಿತಿ ಉಂಟಾಗಿತ್ತು.

ಈ ನಡುವೆ ಮನೆಯಲ್ಲಿ ತಾಯಿಗೂ ಸ್ವಲ್ಪ ಅನಾರೋಗ್ಯದ ಸಮಸ್ಯೆ ಉಂಟಾಗಿತ್ತು.

ಮನೆಯಲ್ಲಿ ಎಲ್ಲರು ಅನಾರೋಗ್ಯ ಪೀಡಿತರಾಗಿ ದುಡಿಯುವ ಕೈಗಳಿಗೆ ಶಕ್ತಿಯಿಲ್ಲ, ಔಷಧಿಗೆ ಹಣವಿಲ್ಲ, ಸರಿಯಾದ ಉದ್ಯೋಗವು ಇಲ್ಲ ಹೀಗೆ ಅನೇಕ ಬಾರಿ ಮನನೊಂದು ಈ ವಿಚಾರವನ್ನು ಸ್ನೇಹಿತರ ಬಳಿ ಹೇಳಿಕೊಂಡಿದ್ದ ಎಂದು ಹೇಳಲಾಗಿದೆ.

ಈತನಿಗೆ ಕಿಡ್ನಿ ವೈಫಲ್ಯದ ಸಮಸ್ಯೆ ಉಂಟಾದ ಆ ಸಂದರ್ಭದಲ್ಲಿ ಮಾಧ್ಯಮಗಳು ನೆರವಿಗಾಗಿ ವರದಿಗಳನ್ನು ಮಾಡಿತ್ತು.

ಆದರೆ ಅತ್ಯಂತ ಕಷ್ಟಕರ ಜೀವನವನ್ನು ಸಹಿಸಲಾರದೆ ಸಾಗರ್ ಬಾವಿಗೆ ಹಾರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.

ಬಾವಿಯಿಂದ ಸಾಗರ್ ಅವರ ಮೃತದೇಹವನ್ನು ಬಂಟ್ವಾಳ ಅಗ್ನಿಶಾಮಕ ದಳದವರು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರು.

ಮರಣೋತ್ತರ ಪರೀಕ್ಷೆ ಬಳಿಕ ಸಾಗರ್ ಮೃತ ದೇಹವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.

ಬಂಟ್ವಾಳದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

BANTWAL

Bantwala: ಕಾರುಗಳ ನಡುವೆ ಸರಣಿ ಅಪಘಾತ..!

Published

on

ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಸುಮಾರು ಒಂದು ತಾಸಿಗಿಂತಲೂ ಅಧಿಕವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ ಹಿಂಬದಿಯಿಂದ ಬಂದ ಮತ್ತೆ ಎರಡು ವಾಹನಗಳು ಢಿಕ್ಕಿ ಯಾಗಿದೆ.

ಡಿಕ್ಕಿಯ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ.

ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ.

ಇದರ ಜೊತೆಗೆ ಸೇತುವೆ ಸಮೀಪ ನೆಹರು ನಗರ ಎಂಬಲ್ಲಿ ಲಾರಿಯೊಂದರ ಟಯರ್ ಕೆಟ್ಟು ಹೋಗಿ ನಿಂತಿತ್ತು.

ಹೀಗಾಗಿ ತಾಸುಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದವು.

ಸೇತುವೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.

ವಾಹನಗಳನ್ನು ಕ್ಲಿಯರ್ ಮಾಡಲು ಟ್ರಾಫಿಕ್ ಪೋಲೀಸರು ಹರಸಹಾಸ ಪಟ್ಟರು.

ಅಪಘಾತ ನಡೆದು ಕೆಲವೇ ಹೊತ್ತಿನಲ್ಲಿ ವಾಹನಗಳ ಸಾಲು ಸುಮಾರು ಉದ್ದಕ್ಕೆ ತಲುಪಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಹಿನ್ನೆಲೆಯಲ್ಲಿ ವಾಹನ ಸವಾರರು ಪಾಣೆಮಂಗಳೂರು ‌ಪೇಟೆ ಮೂಲಕ ಹಳೆ ಸೇತುವೆ ಮೂಲಕ ಸಂಚಾರಕ್ಕೆ ಪ್ರಯತ್ನ ಮಾಡಿದರಾದರೂ ಅಲ್ಲಿಯೂ ಟ್ರಾಫಿಕ್ ಸಮಸ್ಯೆ ಉಂಟಾಯಿತು.

ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ವಾಹನಗಳು ಹೋಗಿ ಸಾಲು ಸಾಲಾಗಿ ನಿಂತಿರುವ ಪೋಟೋ ವೈರಲ್ ಆಗಿದೆ.

ರಾತ್ರಿ ಹೊತ್ತು ವಾಹನಗಳ ಲೈಟ್ ಮತ್ತು ನೇತ್ರಾವತಿ ನದಿಯ ನೀರು ಕಂಗೊಳಿಸುವ ಚಿತ್ರವನ್ನು ಪಾಣೆಮಂಗಳೂರು ಮಂಗಳೂರು ಹೊಸ ಸೇತುವೆಯಿಂದ ಕ್ಲಿಕ್ ಮಾಡಿದ್ದಾರೆ.

ಪೊಲೀಸ್ ಸಿಬ್ಬಂದಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡಿದರು.

Continue Reading

BANTWAL

Bantwala: ಇಲೆಕ್ಟ್ರಾನಿಕ್ ಅಂಗಡಿಗೆ ಬೆಂಕಿ- ಕರಕಲಾದ ಲಕ್ಷಾಂತರ ರೂ. ವಸ್ತುಗಳು..!

Published

on

ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.

ಬಂಟ್ವಾಳ: ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ನಡೆದಿದೆ.

ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ.

ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಸಫಲರಾದರು.

ಅಂಗಡಿಯಲ್ಲಿದ್ದ ಸುಮಾರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

BANTWAL

ಬಂಟ್ವಾಳದಲ್ಲಿ ಹಗಲಿನ ವೇಳೆ ಮನೆಗೆ ನುಗ್ಗಿ ಕಳವು ಪ್ರಕರಣ: ಲಕ್ಷಾಂತರ ಮೌಲ್ಯದ ಸೊತ್ತು ವಶ-ಇಬ್ಬರ ಬಂಧನ

Published

on

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಠಾಣೆಯ ಪೊಲೀಸರು  ನಿನ್ನೆ ಭರ್ಜರಿ ಬೇಟೆಯಾಡಿದ್ದಾರೆ.

ಇಲ್ಲಿನ ಠಾಣಾ ವ್ಯಾಪ್ತಿಯಲ್ಲಿ ಹಗಲಿನ ವೇಳೆ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಪ್ರಕರಣವನ್ನು ಬೇಧಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು  ಮಂಗಳೂರು  ಬೆಂಗ್ರೆ ಭದ್ರಪಳ್ಳಿ ನಿವಾಸಿ  ಫರಾಜ್ (27)   ಮತ್ತು  ಸುರತ್ಕಲ್ ತಾಲೂಕು  ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನ  ನಿವಾಸಿಯಾಗಿರುವ  ತೌಸಿಫ್ ಅಹಮ್ಮದ್ (34)  ಬಂಧಿತ ಆರೋಪಿಗಳು.

ಬಂಧಿತರಿಂದ 12,23,000 ಮೌಲ್ಯದ 223ಗ್ರಾಂ ಚಿನ್ನಾಭರಣ ಮತ್ತು ರೂ 3,000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

LATEST NEWS

Trending