Connect with us

BANTWAL

Bantwala: ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಚಡ್ಡಿ- ಲಂಗ ಒಣಗಲು ಹಾಕಿದ ಪ್ರಯಾಣಿಕರು..!!

Published

on

ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಲ್ಲಿ ಬಟ್ಟೆ ಒಣಗಲು ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದ್ದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 

ಬಂಟ್ವಾಳ: ವಾಯುವ್ಯ ಕರ್ನಾಟಕ ಸಾರಿಗೆ ಬಸ್ ನಲ್ಲಿ ಬಟ್ಟೆ ಒಣಗಲು ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಾ ಇದೆ.

ಬಸ್ಸಿನಲ್ಲಿ ಪ್ರಯಾಣಿಕರಿಗೆ ಅಸಹ್ಯ ಹುಟ್ಟಿಸುವ ಬಟ್ಟೆಗಳು ನೇತಾಡುತ್ತಿದ್ದು, ಇದು ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ.

ಸುಬ್ರಹ್ಮಣ್ಯದಿಂದ ಕಾರವಾರ ಕ್ಕೆ ಪ್ರಯಾಣಿಸುವ ಬಸ್ ನಲ್ಲಿ ಈ ದೃಶ್ಯ ಕಂಡು ಬಂದಿದ್ದು, ಬಸ್ ನ ಕಿಟಕಿಯಲ್ಲಿ ಬಟ್ಟೆಗಳನ್ನು ಒಣಗಲು ಹಾಕಿದ್ದಾರೆ.

ಇದೀಗ ಸಾಮಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗ್ತಾ ಇದೆ.

 

Click to comment

Leave a Reply

Your email address will not be published. Required fields are marked *

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending