BANTWAL
Bantwala: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು..!
ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಔಷಧಿಗೆಂದು ಆಸ್ಪತ್ರೆಗೆ ಬಂದಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.
ಬಿಜೆಪಿಯ ಸಕ್ರೀಯ ಯುವ ಕಾರ್ಯಕರ್ತನಾಗಿರುವ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಅಮ್ಟಾಡಿಯ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಔಷಧಿಗೆಂದು ಅವರು ಇಂದು ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ.
ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದು ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.