ಬಂಟ್ವಾಳ: ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಗ್ರಾಮದ ಮಹಾಲಿಂಗ ನಾಯ್ಕ ಮನೆಗೆ ಬಂಟ್ವಾಳ ತಹಶೀಲ್ದಾರರ ಭೇಟಿ ನೀಡಿ ಸನ್ಮಾನಿಸಿದರು.
ಇಂದು ಮಧ್ಯಾಹ್ನದ ವೇಳೆಗೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಮಹಾಲಿಂಗ ನಾಯ್ಕರವರ ಮನೆಗೆ ಭೇಟಿ ನೀಡಿ, ಅವರು ಕೊರೆದ ಸುರಂಗ ಮತ್ತು ತೋಟಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಮಹಾಲಿಂಗ ನಾಯ್ಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.
p
ಈ ಸಂದರ್ಭ ಉಪತಹಶೀಲ್ದಾರ್ ದಿವಾಕರ ಮುಗುಳ್ಯ, ನವೀನ್ ಕುಮಾರ್, ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮ ಕರಣಿಕ ವಿನುತಾ, ಗ್ರಾಮ ಸಹಾಯಕ ಗಣೇಶ, ತಾಲೂಕ ಕಚೇರಿಯ ಸುಂದರ, ಶಿವಪ್ರಸಾದ್, ಮಹಮ್ಮದ್ ಆಸೀಪ್ ಭಾಗವಹಿಸಿದ್ದರು.