BANTWAL
Bantwala: ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಲ್ಲಿ ಕಳವು..!
ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಸಾವಿರಾರು ರೂ. ಮೌಲ್ಯದ ಇತರ ಸ್ವತ್ತುಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ತಾಲೂಕಿನ ಬೆಂಜನಪದವು ಎಂಬಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ದಿನಸಿ, ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ನಗದು ಸಹಿತ ಸಾವಿರಾರು ರೂ. ಮೌಲ್ಯದ ಇತರ ಸ್ವತ್ತುಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ತಾಲೂಕಿನ ಬೆಂಜನಪದವು ಎಂಬಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳದ ಅಲ್ಬರ್ಟ್ ಫೆರ್ನಾಂಡೀಸ್ ಬಿಲ್ಡಿಂಗ್ ನಲ್ಲಿದ್ದ ನಮಿತಾ ಎಂಬವರ ರಾಜೇಶ್ವರಿ ದಿನಸಿ ಅಂಗಡಿ ಮತ್ತು ರಾಜರಾಜೇಶ್ವರಿ ಡ್ರೆಸ್ ಮತ್ತು ಫ್ಯಾನ್ಸಿ ಅಂಗಡಿಯಲ್ಲಿ ಜು. 22 ರಂದು ಕಳ್ಳತನ ನಡೆದಿದೆ.
ಜು. 23 ರ ಅದಿತ್ಯವಾರ ಬೆಳಿಗ್ಗೆ 6 ಗಂಟೆಗೆ ಪರಿಚಯದ ವಸಂತ ಎಂಬವರು ಕರೆ ಮಾಡಿ ಮಾಲೀಕರಿಗೆ ಅಂಗಡಿಯ ಶಟರ್ ಅರ್ಧ ತೆರೆದಿರುವ ಬಗ್ಗೆ ಮಾಹಿತಿ ನೀಡಿದ್ದರು.
ಕೂಡಲೇ ಅಂಗಡಿಗೆ ಬಂದು ನೋಡಿದಾಗ ಅಂಗಡಿಯಲ್ಲಿ ಕಳವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ರಾಜರಾಜೇಶ್ವರಿ ದಿನಸಿ ಅಂಗಡಿಯ ಶಟರ್ ನ್ನು ಕಬ್ಬಿಣದ ಸಾಧನದಿಂದ ಮೇಲಕ್ಕೆತ್ತಿ ಅಂಗಡಿಯ ಒಳಗಿದ್ದ ಬಿಸ್ಕಿಟ್ ಪ್ಯಾಕೇಟ್, ಸಿಗರೇಟ್ ಪ್ಯಾಕೇಟ್, ಕ್ಯಾಶ್ ಡ್ರಾವರ್ ನ ಬೀಗವನ್ನು ಮುರಿದು ಅದರಲ್ಲಿದ್ದ ನಗದು 1, 500ರೂ ಕಳವು ಆಗಿದೆ.
ಅಲ್ಲದೆ ರಾಜರಾಜೇಶ್ವರಿ ಡ್ರೆಸ್ ಮತ್ತು ಫ್ಯಾನ್ಸಿ ಸ್ಟೋರ್ ನ ಶಟರ್ ನ ಬೀಗ ಮುರಿದು ಅದರೊಳಗಿದ್ದ ಸುಮಾರು 10,000 ರೂಪಾಯಿ ಮೌಲ್ಯದ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್, 5, 000ರೂಪಾಯಿ ಮೌಲ್ಯದ ಚಪ್ಪಲಿ ಹಾಗೂ ಕ್ಯಾಶ್ ಡ್ರಾವರ್ ನಲ್ಲಿದ್ದ ನಗದು 3, 500 ರೂಪಾಯಿ, ಸ್ಟೀಲ್ ಕಾಣಿಕೆ ಡಬ್ಬದಲ್ಲಿದ್ದ ನಗದು 10,000 ರೂಪಾಯಿಗಳನ್ನು ಕಳವು ಆಗಿದೆ.
ಬಳಿಕ ಬಿಲ್ಡಿಂಗ್ ನ ಸ್ಟಾಕ್ ರೂಮ್ ನ ಅಂಗಡಿಯ ಶಟರಿನ ಬೀಗ ಮುರಿದು ಒಂದು ಪೈಂಟ್ ಡಬ್ಬಿಯನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.
ಒಟ್ಟು ನಗದು 15,000 ರೂ. ಹಾಗೂ ಇತರ ಸಾಮಾಗ್ರಿಗಳ ಅಂದಾಜು ಮೊತ್ತ 18,500 ರೂಪಾಯಿ ಕಳವು ಮಾಡಿದ್ದು, ಕಳವಾದ ಎಲ್ಲಾ ಸ್ವತ್ತುಗಳ ಅಂದಾಜು 33,500 ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ