BANTWAL
ನೇರಳೆಕಟ್ಟೆ ಮಹಿಳೆಗೆ ಚೂರಿ ಇರಿದು ಪರಾರಿಯಾದ ಆರೋಪಿ ಶ್ರೀಧರ ಪೊಲೀಸ್ ಬಲೆಗೆ..
ಮಂಗಳೂರು : ಬಂಟ್ವಾಳ ಮಾಣಿ ನೇರಳೆಕಟ್ಟೆಯಲ್ಲಿ ವಿವಾಹಿತ ಮಹಿಳೆ ಶಕುಂತಲಾಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಅಟೋ ಡ್ರೈವರನನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಬಂಧಿಸಲು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಶ್ರೀಧರ ಎಂದು ಗುರುತ್ತಿಸಲಾಗಿದೆ. ನಡುರಸ್ತೆಯಲ್ಲೇ ಆಟೋ ಚಾಲಕ ಶ್ರೀಧರ ಮಾರಕಾಸ್ತ್ರಗಳಿಂದ ಧಾಳಿ ನಡೆಸಿದ ಪರಿಣಾಮ ಮಹಿಳೆ ಶಕುಂತಲಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದರು.
ಶಕುಂತಲಾ ಮಾಣಿ ನಿವಾಸಿ ದಿವಂಗತ ತ್ಯಾಂಪ ಪೂಜಾರಿಯವರ ಮಗಳು, ಈಗ ಮದುವೆಯಾಗಿ ಅನಂತಾಡಿಯ ದೇವಿನಗರದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಶಕುಂತಲಾ ಅವರನ್ನು ಚೂರಿಯಿಂದ ಇರಿದು ಬಳಿಕ ಪರಾರಿಯಾಗಿದ್ದ ಚಾರ್ಮಾಡಿಯಲ್ಲಿ ಧರ್ಮಸ್ಥಳ ಪೊಲೀಸರು ವಶಕ್ಕೆ ಪಡೆದಿದ್ದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೊಲೆಯಾದ ಶಕುಂತಲಾ ಪತಿ ಪೊಲೀಸರಿಗೆ ನೀಡಿದ ದೂರಿನ ಸಾರಾಂಶ : ಈ ಪ್ರಕರಣದ ಸಾರಾಂಶವೇನೆಂದರೆ ಫಿರ್ಯಾದಿದಾರರ ಹೆಂಡತಿ ಶಕುಂತಳಳು ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟು ಇನ್ ಲ್ಯಾಂಡ್ ಕಟ್ಟಡದ ಎದುರಿನಲ್ಲಿರುವ ವಿನಾಯಕ ಎಂಬ ಕ್ಯಾಂಟೀನ್ ವ್ಯವಹಾರ ನಡೆಸುತ್ತಿದ್ದು . ಇತ್ತೀಚೆಗೆ 1 ವರ್ಷದಿಂದ ಸ್ಕೂಟರ್ ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದು ಅದಕ್ಕಿಂತ ಮುಂಚೆ ಅನಂತಾಡಿ ಗೋಳಿಕಟ್ಟೆಯ ಲಿಂಗಪ್ಪ ಎಂಬವರ ದೂರದ ಸಂಬಂಧಿಯಾದ ಯಮನಾಜೆಯ ಶ್ರೀಧರ ಎಂಬವನ ಆತನ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದು ಹೀಗಿರುತ್ತಾ ಸುಮಾರು 1 ವರ್ಷದ ಹಿಂದೆ ಶ್ರೀಧರನು ನಮ್ಮ ಮನೆಯ ಬಳಿಗೆ ಬಂದು ತನ್ನ ಹೆಂಡತಿಗೆ ಅವಾಚ್ಯ ಶಬ್ದಗಳಿಂದ ಬೈದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಈತನು ತನ್ನ ಹೆಂಡತಿಯ ಸುದ್ದಿಗೆ ಬಾರದೇ ಇದ್ದು ನಮ್ಮ ಕ್ಯಾಂಟೀನ್ ನ ಬಳಿಯಲ್ಲಿ ಆತನು ಆಟೋ ರಿಕ್ಷಾದಲ್ಲಿ ಹೋಗುವ ಸಮಯ ಗುರಾಯಿಸಿಕೊಂಡು ಹೋಗುತ್ತಿರುವುದಾಗಿಯೂ , ಆತನನ್ನು ಕಂಡರೆ ನನಗೆ ಹದರಿಕೆ ಆಗುತ್ತಿದೆ ಎಂಬುದಾಗಿ ನನ್ನಲ್ಲಿ ಹೇಳುತ್ತಿದ್ದು . ಈ ದಿನ ಮಧ್ಯಾಹ್ನ 3.15 ಗಂಟೆ ಸಮಯವಾದರೂ ಫಿರ್ಯಾದಿದಾರರ ಹೆಂಡತಿ ಕ್ಯಾಂಟೀನ್ ಗೆ ಬಾರದೇ ಇದ್ದು . ಮಧ್ಯಾಹ್ನ ಸುಮಾರು 3.25 ಗಂಟೆ ಸಮಯಕ್ಕೆ ಅನಂತಾಡಿಯ ಸಂತೋಷ್ ಎಂಬಾತನು ಫಿರ್ಯಾದುದಾರರಿಗೆ ಫೋನು ಮಾಡಿ ಹೆಂಡತಿ ಶಕುಂತಳರವರಿಗೆ ಕೊಡಾಜೆಯಲ್ಲಿ ಆಟೋರಿಕ್ಷಾ ಕೆಎ21 ಬಿ 6071 ನೇಯದರ ಚಾಲಕರು ಚೂರಿಯಿಂದ ಹೊಟ್ಟೆಗೆ ಹಾಗೂ ದೇಹದ ಇತರ ಭಾಗಕ್ಕೆ ತಿವಿದು ಗಾಯಗೊಳಿಸಿದ್ದು ಆಕೆಯನ್ನು ಮಾಣಿಯಿಂದ ಅಂಬ್ಯಲೆನ್ಸ್ ನವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಮಾಹಿತಿ ತಿಳಿದು ಫಿರ್ಯಾದುದಾರರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದು ನೋಡಿದಾಗ ಹೆಂಡತಿಯ ಮುಖ, ಕೈಹೊಟ್ಟೆ, ತಲೆಯ ಭಾಗ ಹಾಗೂ ದೇಹದ ಇತರ ಕಡೆಗಳಲ್ಲಿ ರಕ್ತಗಾಯವಾಗಿ ವಿಪರೀತ ರಕ್ತಸ್ರಾವವಾಗಿ ಮಧ್ಯಾಹ್ನ 3.30 ಗಂಟೆ ಸಮಯಕ್ಕೆ ಮೃತಪಟ್ಟಿರುವುದಾಗಿ ವೈಧ್ಯರು ತಿಳಿಸಿದ್ದು ನಂತರದಲ್ಲಿ ತನ್ನ ಸಂಬಂದಿಕರ ಮೊಬೈಲ್ ಗೆ ವಾಟ್ಸಪ್ ಮುಖಾಂತರ ವೀಡಿಯೊ ಒಂದು ಬಂದಿದ್ದು ಇದರಲ್ಲಿ ಆಟೋ ಸಂಖ್ಯೆ ಕೆಎ 21 ಬಿ 6071 ನೇದರ ಚಾಲಕ ಗಣೇಶ್ ನಗರದ ಜನಪ್ರಿಯ ಹಾಲ್ ನ ಎದರು ಹೆದ್ದಾರಿಯ ಬದಿಯಲ್ಲಿ ಸಮಯ ಮಧ್ಯಾಹ್ನ 2.50 ಗಂಟೆಯಿಂದ 3.00 ಗಂಟೆ ಅವಧಿಯಲ್ಲಿ ಫಿರ್ಯಾದಿ ಹೆಂಡತಿಗೆ ತಿವಿದು ಗಾಯಗೊಳಿಸಿರುವುದನ್ನು ಖಾಸಗಿ ಬಸ್ಸು ಚಾಲಕರೊಬ್ಬರು ವಿಡಿಯೋ ಚಿತ್ರೀಕರಣ ಮಾಡಿರುವುದು ತಿಳಿಯಿತು .ಶ್ರೀಧರನು ಸದ್ರಿ ಆಟೋವನ್ನು ಪುತ್ತೂರಿನಲ್ಲಿ ಚಲಾಯಿಸುವುದನ್ನು ಫಿರ್ಯಾದಿದಾರರು ಹೆಚ್ಚಾಗಿ ನೋಡಿದ್ದು ತನ್ನ ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಚೂರಿಯಿಂದ ತಿವಿದು ಕೊಲೆ ಮಾಡಿರುವುದಾಗಿದ್ದು ಶ್ರೀಧರನ ವಿರುದ್ದ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ಎಂಬಿತ್ಯಾದಿಯಾಗಿರುತ್ತದೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BANTWAL
ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು
ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.
ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು
ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- FILM3 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು