Connect with us

    LATEST NEWS

    ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ..! ನಾಳೆ ಪ್ರಮಾಣ ವಚನ ಸ್ವೀಕಾರ

    Published

    on

    ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

    ಮಂಗಳವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

    ನಾಳೆ ಬುಧವಾರವೇ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

    ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗನಾದ ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ರಾಜಕಾರಣ ಆರಂಭಿಸಿ ಬಿಜೆಪಿಗೆ ಬಂದವರು.

    ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಬೊಮ್ಮಾಯಿ, ಮೂರು ಬಾರಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

    ಇಂದು ಮಹತ್ವದ ಬಿಜೆಪಿ ಸಂಸದೀಯ ಮಂಡಳಿಯ ಸಭೆಯು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಕೇಂದ್ರ ಸಚಿವರಾದಂತ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿಯವರು ವೀಕ್ಷಕರಾಗಿ ನೇಮಕಗೊಂಡಿದ್ದರು. ಹೀಗೆ ವೀಕ್ಷಕರಾಗಿ ನೇಮಕಗೊಂಡಿದ್ದಂತ ಇವರ ಮುಂದಾಳತ್ವದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ( Karnataka News Chief Minister ) ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಮತ್ತೆ ರಾಜ್ಯದ ಸಿಎಂ ( Karnataka CM ) ಆಗಿ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಅಂದಹಾಗೇ, ಬಸವರಾಜ್ ಸೋಮಪ್ಪ ಬೊಮ್ಮಾಯಿಯವರು ( Basavaraj Bommai ) ಜನವರಿ 28, 1960ರಲ್ಲಿ ಜನಿಸಿದ್ದಾರೆ. ಕರ್ನಾಟಕದ ರಾಜಕಾರಣಿಯಾಗಿದ್ದು, ಅವರು ಕರ್ನಾಟಕದ ಗೃಹ ವ್ಯವಹಾರಗಳು, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸಕಾಂಗದ ಪ್ರಸ್ತುತ ರಾಜ್ಯ ಸಚಿವರಾಗಿದ್ದಾರೆ. ಹಾವೇರಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ಈ ಹಿಂದೆ ಕರ್ನಾಟಕ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಸಹಕಾರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗ. ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಪಡೆದ ಅವರು ಜನತಾ ದಳದಿಂದ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು.

    ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ, ಎರಡು ಬಾರಿ (1998 ಮತ್ತು 2004ರಲ್ಲಿ) ಧಾರವಾಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದಿಂದ ಆಯ್ಕೆಯಾದರು. ಅವರು ಜನತಾದಳ (ಯುನೈಟೆಡ್) ತೊರೆದು ಫೆಬ್ರವರಿ, 2008ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದರು. 2008ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಅವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಕ್ಷೇತ್ರದಿಂದ ಕರ್ನಾಟಕ ವಿಧಾನಸಭೆಗೆ ಆಯ್ಕೆಯಾದರು.ಪದವೀಧರ ಎಂಜಿನಿಯರ್ ಮತ್ತು ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ, ಅವರು ಅಸಂಖ್ಯಾತ ನೀರಾವರಿ ಯೋಜನೆಗಳಿಗೆ ನೀಡಿದ ಕೊಡುಗೆಗಳು ಮತ್ತು ಕರ್ನಾಟಕದ ನೀರಾವರಿ ವಿಷಯಗಳಿಗೆ ಸಂಬಂಧಿಸಿದಂತೆ ಆಳವಾದ ಜ್ಞಾನಕ್ಕಾಗಿ ವ್ಯಾಪಕವಾಗಿ ಮೆಚ್ಚುಗೆ ಪಡೆದರು. ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದ ಮೊದಲ 100% ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೊಳಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.ಹೀಗೆ ರಾಜಕೀಯ ಹಿನ್ನಲೆ, ಉತ್ತಮ ನಡೆ, ವಿದ್ಯಾರ್ಹತೆ ಹೊಂದಿರುವವರು, ರಾಜಕೀಯ ಅನುಭವ ಹೊಂದಿರುವಂತ ಬಸವರಾಜ ಬೊಮ್ಮಾಯಿಯವರನ್ನು ಬಿಎಸ್ ಯಡಿಯೂರಪ್ಪ ನಂತ್ರ, ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಆಯ್ಕೆಯಾಗಿದ್ದಾರೆ. ಆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

     

     

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    LATEST NEWS

    ಲಿಫ್ಟ್ ಕೊಡುವ ಮುನ್ನ ಎಚ್ಚರ: ಡ್ರಾಪ್ ಕೇಳಿ ಚಾಕು ಇರಿದ ದು*ಷ್ಕರ್ಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೊ*ಲೆ ಮಾಡೋದಕ್ಕಂತೂ ಕಾರಣವೇ ಬೇಡ. ಕ್ಷುಲ್ಲಕ ಕಾರಣಕ್ಕಾಗಿ ಒಬ್ಬ ವ್ಯಕ್ತಿಯನ್ನು ಹ*ತ್ಯೆ ಮಾಡಲು ಹೇಸುವುದಿಲ್ಲ. ಅಂತಹುದೇ ಕೃ*ತ್ಯ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.

    ಖಾಸಗಿ ಬ್ಯಾಂಕ್ ಉದ್ಯೋಗಿ ಪಿ.ಈಶ್ವರಗೌಡ(38) ಚೂ*ರಿ ಇರಿತಕ್ಕೊಳಗಾದವರು. ರೋಹಿತ್ ಗೌಡ (24) ಚೂ*ರಿ ಇರಿದಾತ. ಈಶ್ವರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೋಹಿತ್ ಗೌಡನನ್ನು ಬಂಧಿಸಲಾಗಿದೆ.

    ಅವಮಾನಕ್ಕೆ ಪ್ರತೀಕಾರ :

    ಸಾಲ ವಸೂಲಾತಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಈಶ್ವರಗೌಡ ಕ್ರಿಕೆಟ್ ಟೂರ್ನಮೆಂಟ್ ವೇಳೆ ರೋಹಿತ್ ಗೌಡನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಆರೋಪಿ ಆತನನ್ನು ಕೊ*ಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಈಶ್ವರಗೌಡ ತನ್ನ ಸ್ನೇಹಿತನೊಂದಿಗೆ ಢಾಬಾವೊಂದಕ್ಕೆ ಊಟಕ್ಕೆ ಹೋಗಿದ್ದರು. ಅವರು ಢಾಬಾದಿಂದ ಹೊರಬಂದ ನಂತರ, ಗೇಟ್‌ನಲ್ಲಿದ್ದ ಆರೋಪಿ ಡ್ರಾಪ್ ನೀಡುವಂತೆ ವಿನಂತಿಸಿದ್ದ. ಈಶ್ವರ್ ಕೂಡ ಅದೇ ದಾರಿಯಲ್ಲಿ ಹೋಗುತ್ತಿದ್ದರಿಂದ ಅವನು ಡ್ರಾಪ್ ನೀಡಲು ಒಪ್ಪಿದರು. ಸ್ವಲ್ಪ ಹೊತ್ತು ಬೈಕ್ ಹಿಂದೆ ಕುಳಿತು ಸವಾರಿ ಮಾಡಿದ ರೋಹಿತ್, ಸ್ಮಶಾನದ ಬಳಿ ನಿರ್ಜನ ಪ್ರದೇಶದಲ್ಲಿ ತಾನು ತಂದಿದ್ದ ಚಾಕುವಿನಿಂದ ಈಶ್ವರ್ ಗೆ ಇ*ರಿದಿದ್ದಾನೆ.

    ಈ ವೇಳೆ ಬೈಕ್ ಚಲಾಯಿಸುತ್ತಿದ್ದ ಈಶ್ವರ್ ರ ನಿಯಂತ್ರಣ ತಪ್ಪಿದ್ದು,  ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಚಾಕು ಇ*ರಿತದಿಂದ ಈಶ್ವರ್ ಗೆ ಗಾ*ಯವಾಗಿದೆ. ಆದರೂ ರೋಹಿತ್‌ನಿಂದ ಹರಸಾಹಸ ಮಾಡಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೂ ಬಿಡದ ರೋಹಿತ್ ಬೆನ್ನತ್ತಿ ಇ*ರಿದಿದ್ದಾನೆ.

    ಇದನ್ನೂ ಓದಿ : ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾ*ವು

    ಈ ವೇಳೆ ಈಶ್ವರ್ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸಹಾಯಕ್ಕಾಗಿ ತನ್ನ ಸಹೋದರನನ್ನು ಕರೆದಿದ್ದು, ಆತನ ಸಹೋದರ ಆತನನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದರು. ಅಷ್ಟು ಹೊತ್ತಿಗಾಗಲೇ ಆರೋಪಿ ರೋಹಿತ್ ಬೈಕ್ ನಲ್ಲಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಉಡುಪಿ : ಲಲಿತಾ ಕಲ್ಕೂರ ವಿಧಿವಶ

    Published

    on

    ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ.  ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು.

    ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

    Continue Reading

    LATEST NEWS

    Trending