BIG BOSS
ಮತ್ತೆ ಜೈಲು ಸೇರಿದ ಚೈತ್ರಾ ಕುಂದಾಪುರ
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, ನಾಲ್ಕನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಚೈತ್ರಾ ಕುಂದಾಪುರ ಬಿಗ್ಬಾಸ್ ಮನೆಯ ಜೈಲು ಪಾಲಾಗಿದ್ದಾರೆ. ಬಿಗ್ಬಾಸ್ ಮನೆಗೆ ಕಾಲಿಟ್ಟಿದ್ದ ಚೈತ್ರಾ ಕುಂದಾಪುರ ನೇರವಾಗಿ ನರಕಕ್ಕೆ ಎಂಟ್ರಿ ಕೊಟ್ಟಿದ್ದರು.
ಬಿಗ್ ಬಾಸ್ ಸೀಸನ್ 11ರಲ್ಲಿ ಚೈತ್ರಾ ಕುಂದಾಪುರ ಅವರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾರೆ. ಮೂರನೇ ವಾರದಲ್ಲಿ ಮನೆಯಲ್ಲಿದ್ದ 14 ಸ್ಪರ್ಧಿಗಳಿಗೆ ಬಿಗ್ಬಾಸ್ ಟಾಸ್ಕ್ವೊಂದನ್ನು ನೀಡಿದ್ದರು. ಬಿಗ್ಬಾಸ್ ಮನೆಯಲ್ಲಿ ಅಪ್ರಾಮಾ ಣಿಕ ಯಾರು ಹಾಗೂ ಕುತಂತ್ರಿ ಯಾರು ಅಂತ ಹೇಳಿ ಎಂದಿದ್ದರು.
ಬಿಗ್ಬಾಸ್ ಮನೆಯಲ್ಲಿರೋ ಸ್ಪರ್ಧಿಗಳು ಅತಿ ಹೆಚ್ಚಾಗಿ ಹಣೆ ಪಟ್ಟಿಯನ್ನು ಚೈತ್ರಾ ಕುಂದಾಪುರ ಅವರಿಗೆ ಕೊಟ್ಟಿದ್ದಾರೆ. ಹೀಗಾಗಿ ಪ್ರಕ್ರಿಯೆಯ ಅನುಸಾರ ಚೈತ್ರಾ ಕುಂದಾಪುರ ಬಿಗ್ಬಾಸ್ ಜೈಲಿಗೆ ಹೋಗಿದ್ದಾರೆ. ಬಿಗ್ಬಾಸ್ ಅವರ ಮುಂದಿನ ಆದೇಶದವರೆಗೂ ಚೈತ್ರಾ ಜೈಲಿನಲ್ಲೇ ಇರಬೇಕಾಗುತ್ತದೆ.
BIG BOSS
BBK11: ವಾರದ ಕತೆ ಕಿಚ್ಚನ ಜೊತೆ; ಕುತೂಹಲ ಮೂಡಿಸಿದ 5 ವಿಚಾರಗಳು..!
ಬಿಗ್ಬಾಸ್ ಸೀಸನ್-11 ಮೂರು ವಾರ ಪೂರೈಸಿದ್ದು, ಇಂದು ಕಿಚ್ಚ ಸುದೀಪ್ ಎಂಟ್ರಿ ಆಗಲಿದ್ದಾರೆ. ಕಳೆದ ಒಂದು ವಾರದಿಂದ ಬಿಗ್ಬಾಸ್ ಮನೆಯಲ್ಲಿ, ನಡೆದ ಅನೇಕ ವಿಚಾರಗಳು ದೊಡ್ಡ ಮೊಟ್ಟದಲ್ಲಿ ಸದ್ದು ಮಾಡಿವೆ. ಹೀಗಾಗಿ ಇವತ್ತಿನ ಕಿಚ್ಚನ ಎಪಿಸೋಡ್ ತುಂಬಾನೇ ಕುತೂಹಲ ಮೂಡಿಸಿದೆ.
ಭಾರೀ ಹೈಡ್ರಾಮಾ..!
ದಸರಾ ಹಿನ್ನೆಲೆಯಲ್ಲಿ ಕಳೆದ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆದಿರಲಿಲ್ಲ. ಈ ವಾರ ನಡೆದ ಕೆಲವು ಅಹಿತಕರ ಘಟನೆಗಳಿಂದಾಗಿ ಸ್ಪರ್ಧಿಗಳಾದ ಲಾಯರ್ ಜಗದೀಶ್ ಹಾಗೂ ರಂಜಿತ್ ಅವರನ್ನು ಮನೆಯಿಂದ ಆಚೆ ಹಾಕಲಾಗಿದೆ. ಅಂದರೆ ಇಬ್ಬರು ಸ್ಪರ್ಧಿಗಳು ಬ್ಯಾಗ್ ಹಿಡಿದು ಮನೆಗೆ ವಾಪಸ್ ಆಗಿದ್ದಾರೆ. ಈ ವಿಚಾರಗಳಿಗೆ ಸುದೀಪ್ ಪ್ರತಿಕ್ರಿಯೆ ಹೇಗಿರುತ್ತದೆ ಅನ್ನೋ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ.
ಆಕ್ಷೇಪಾರ್ಹ ಪದ ಬಳಕೆ
ಕೆಲವು ಸ್ಪರ್ಧಿಗಳು ಮನೆಯಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡ್ತಿದ್ದಾರೆ. ಇದು ವೀಕ್ಷಕರ ಸಮಾಧಾನಕ್ಕೆ ಕಾರಣವಾಗಿದೆ. ಟಾಸ್ಕ್ ವೇಳೆ, ವಾದ-ಪ್ರತಿವಾದ ವೇಳೆ ಅತಿರೇಕಕ್ಕೆ ಹೋಗುವ ಸ್ಪರ್ಧಿಗಳು ಮನಸೋ ಇಚ್ಛೆ ನಿಂದನೆ ಮಾಡಿಕೊಳ್ತಿದ್ದಾರೆ. ಇಂಥ ವಿಚಾರಗಳ ಬಗ್ಗೆ ಸ್ಪರ್ಧಿಗಳಿಗೆ ಸುದೀಪ್ ಹೇಗೆ ಕ್ಲಾಸ್ ತೆಗೆದುಕೊಳ್ತಾರೆ ಅನ್ನೋ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.
ಎಲಿಮಿನೇಷನ್ ಇರುತ್ತಾ..?
ಈಗಾಗಲೇ ಬಿಗ್ಬಾಸ್ ಮನೆಯಿಂದ ಜಗದೀಶ್ ಹಾಗೂ ರಂಜಿತ್ರನ್ನು ಹೊರಹಾಕಲಾಗಿದೆ. ಹೀಗಾಗಿ, ಈ ವಾರ ಎಲಿಮಿನೇಷನ್ ನಡೆಯೋದು ಡೌಟ್. ಆದರೂ ಸುದೀಪ್ ಯಾರನ್ನೆಲ್ಲಾ ಸೇವ್ ಮಾಡುತ್ತಾರೆ? ಮೊದಲು ಸೇವ್ ಆಗೋದು ಯಾರು ಅನ್ನೋದ್ರ ಬಗ್ಗೆ ವೀಕ್ಷಕರಲ್ಲಿ ಎಕ್ಸೈಟ್ಮೆಂಟ್ ಹೆಚ್ಚಾಗಿದೆ.
ಕನ್ನಡ ಮಾಯ
ಸ್ಪರ್ಧಿಗಳು ಕನ್ನಡ ಪದ ಬಳಕೆಯನ್ನು ಕಡಿಮೆ ಮಾಡಿದ್ದಾರೆ ಅನ್ನೋ ಆರೋಪ ಇದೆ. ಪದೇ ಪದೇ ಇಂಗ್ಲಿಷ್ನಲ್ಲಿ ಮಾತನಾಡುತ್ತಿರುವ ಸಂಬಂಧ ಈಗಾಗಲೇ ಸ್ಪರ್ಧಿಗಳಿಗೆ ಬಿಗ್ಬಾಸ್ ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಿದ್ದೂ ಸ್ಪರ್ಧಿಗಳು ಇಂಗ್ಲಿಷ್ನಲ್ಲಿ ಮಾತನಾಡ್ತಿದ್ದಾರೆ.
ಬಿಗ್ಬಾಸ್ಗೆ ಸುದೀಪ್ ಗುಡ್ಬೈ
ಕಳೆದ ಭಾನುವಾರ ಟ್ವೀಟ್ ಮಾಡುವ ಮೂಲಕ ಕಿಚ್ಚ ಸುದೀಪ್, ಬಿಗ್ಬಾಸ್ಗೆ ಗುಡ್ಬೈ ಹೇಳಿದ್ದಾರೆ. ಮುಂದಿನ ವರ್ಷದಿಂದ ಸುದೀಪ್, ಬಿಗ್ಬಾಸ್ ಶೋನಲ್ಲಿ ಕಾಣಿಸಿಕೊಳ್ಳಲ್ಲ. ಇದು ಅಭಿಮಾನಿಗಳಿಗೆ ಭಾರೀ ಬೇಸರವುಂಟು ಮಾಡಿದೆ. ಸುದೀಪ್ ಈ ನಿರ್ಧಾರ ಪ್ರಕಟಿಸಿದ ಬಳಿಕ ಮೊದಲ ಬಾರಿಗೆ ಬಿಗ್ಬಾಸ್ ವೇದಿಕೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
BIG BOSS
BBK11: ಓಪನ್ ಆಗಿದೆ ಬಿಗ್ಬಾಸ್ ಮನೆಯ ಮುಖ್ಯದ್ವಾರ; ಕ್ಲೈಮ್ಯಾಕ್ಸ್ನಲ್ಲಿ ಇದೆಯಾ ರೋಚಕ ಟ್ವಿಸ್ಟ್..!
ಬಿಗ್ ಬಾಸ್… ಆರಂಭದಲ್ಲೇ ರಣಾಂಗಣವಾಗಿ ಬದಲಾಗಿರೋ ಬಿಗ್ ಮನೆ ಅತಿರೇಕದ ಕದನಕ್ಕೂ ಸಾಕ್ಷಿಯಾಗಿದೆ. ಇದುವರೆಗೂ ಚರ್ಚೆಯಾಗುತ್ತಿದ್ದ ರೀತಿಯೇ ರಂಜಿತ್ ಹಾಗೂ ಲಾಯರ್ ಜಗದೀಶ್ಗೆ ಕಿರುತೆರೆಯ ದೊಡ್ಮನೆಯಿಂದ ಗೇಟ್ ಪಾಸ್ ಸಿಕ್ಕಿದೆ. ಹೊರಹೋಗಲು ಡೋರ್ ಓಪನ್ ಆಗಿದೆ.
ಬಿಗ್ಬಾಸ್ ಅಂದ್ರೆ.. ಟಾಸ್ಕ್, ಎಲಿಮಿನೇಟ್, ಸೇವ್, ಜಗಳ ಎಲ್ಲ ಮಿಕ್ಸ್ ಮಸಾಲ ಇದ್ದೇ ಇರುತ್ತೆ. ಆದ್ರೆ, ಈ ಸಲದ ಬಿಗ್ಬಾಸ್ ಸೀಸನ್ ನೋಡಿದ್ರೆ ಜನಕ್ಕೆ ಇದೇನಪ್ಪ ಬರೀ ಜಗಳ ಅನಿಸುವಂತೆ ಆಗ್ಬಿಟ್ಟಿದೆ. ಆರಂಭದಿಂದ ಬಿಗ್ ಮನೆಯಲ್ಲಿ ಬರೀ ಜಗಳದ್ದೇ ಸದ್ದು. ಅದರ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಭಿಮಾನಿಗಳ ಪಾಲಿನ ಕಿಂಗ್ ಜಗದೀಶ್.
ಆದ್ರೀಗ ಇದೇ ಜಗದೀಶ್, ಜಗಳದ ಜಟಾಪಟಿಯಿಂದ ಬಿಗ್ ಬಾಸ್ ಮನೆಯಿಂದ ಹೊರಹೋಗೋ ಪರಿಸ್ಥಿತಿ ಬಂದಿದೆ. ಎಪಿಸೋಡ್ನಲ್ಲಿ ಬಿಗ್ಬಾಸ್ ಕಂಟೆಸ್ಟ್ಗಳಿಗೆ ಒಂದು ಟಾಸ್ಕ್ ಕೊಟ್ಟಿರುತ್ತೆ. ಟಾಸ್ಕ್ನಲ್ಲಿ ಗೆದ್ದೋರಿಗೆ ಇಬ್ಬರನ್ನ ಸೇವ್ ಮತ್ತು ನಾಮಿನೇಟ್ ಮಾಡೋ ಅವಕಾಶ ಇರುತ್ತೆ. ಆದರೆ ನಾಮಿನೇಟ್ ವೇಳೆ ಜಗಳ ಆಗಿದ್ದೆ ಜಗಳ ಆಗೋಕೆ ಕಾರಣ ಆಗಿದೆ.
ಈ ವಾರದ ನಾಮಿನೇಟ್ ಯಾರು?
ಆಟ ಆದ ಮೇಲೆ.. ನೇರವಾಗಿ ನಾಮಿನೇಟ್ ಆಗಿದ್ದ ಅನುಷಾ.. ಐಶ್ವರ್ಯ, ಮಾನಸ, ಜಗದೀಶ್, ಗೋಲ್ಡ್ ಸುರೇಶ್, ಮೋಕ್ಷಿತಾ, ಧನರಾಜ್ ಹಾಗೂ ಉಗ್ರಂ ಮಂಜು ಈ ವಾರದ ನಾಮಿನೇಟ್ ಅಂತಾ ಬಿಗ್ಬಾಸ್ ಅಂತಿಮ ಪಟ್ಟಿಯನ್ನ ಡಿಸ್ಪ್ಲೇ ಮಾಡಿದೆ ಅಷ್ಟೇ.. ಅಷ್ಟೋತ್ತು ಆಟ ಆಡಿದವ್ರು ಈಗ ಗುಂಪು ಗುಂಪಾಗಿ ಸಮಜಾಯಿಷಿ ಕೋಡೋಕೆ ಶುರು ಮಾಡಿದರು.
ಇಷ್ಟೇ ಆಗಿದ್ರೆ ಬಿಗ್ಬಾಸ್ ಮನೆ ರಣರಂಗ ಆಗುತ್ತಿರಲಿಲ್ಲ. ಆದ್ರೆ ಈ ಗ್ಯಾಪಲ್ಲಿ ಮಹಿಳಾ ಸ್ಪರ್ಧಿಯೊಬ್ಬರ ಬಗ್ಗೆ ಜಗದೀಶ್ ಹೇಳಿದ ಅದೊಂದು ಮಾತು ದೊಡ್ಡ ರಾದ್ದಾಂತ ಸೃಷ್ಟಿಸಿಬಿಟ್ಟಿತು. ಜಗದೀಶ್ ಆ ವರ್ಡ್ ಯೂಸ್ ಮಾಡ್ತಿದ್ದಂತೆ ಬಿಗ್ಬಾಸ್ ಮಹಿಳಾ ಮಣಿಗಳು ಲಾಯರ್ಗೆ ಪ್ರಶ್ನೆ ಮಾಡೋಕೆ ಶುರು ಮಾಡಿದರು.
ಜಗದೀಶ್ ತಪ್ಪಾಗಿ ಮಾತನಾಡಿದ್ರಾ..?
ಮಾಸನ ಹಾಗೂ ಜಗದೀಶ್ ಮಾತಿನ ಚಕಮಕಿ ವೇಳೇ ರಂಜಿತ್ ಬಂದು ಜಗದೀಶ್ರನ್ನ ತಳ್ಳಿದ್ದಾರೆ. ಅತ್ತ ಮಹಿಳೆಯರ ಬಗ್ಗೆ ಜಗದೀಶ್ ತಪ್ಪಾಗಿ ಮಾತಾಡಿದ್ದಾರೆ. ಹೀಗಾಗಿ ಈ ಇಬ್ಬರನ್ನ ಮನೆಯಿಂದ ಹೊರಬರಲು ಬಿಗ್ಬಾಸ್ ಸೂಚಿಸಿದ್ದು, ಮನೆಯ ಮುಖ್ಯದ್ವಾರ ಓಪನ್ ಆಗಿದೆ. ಡೋರ್ ಏನೋ ಓಪನ್ ಆಗಿದೆ. ಆದ್ರೆ, ಯಾರೂ ಹೊರಗೆ ಹೋಗಿರುವುದು ಎನ್ನುವುದು ತೋರಿಸಿಲ್ಲ. ಹೀಗಾಗಿ ಕ್ಲೈಮ್ಯಾಕ್ಸ್ ಇವತ್ತಿನ ಸಂಚಿಕೆಯಲ್ಲಿ ಕಾಣಸಿಗಲಿದೆ.
BIG BOSS
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
ಬೆಂಗಳೂರು: ಬಿಗ್ಬಾಸ್ ಕನ್ನಡ ಸೀಸನ್ 11ರಿಂದ ಲಾಯರ್ ಜಗದೀಶ್ ಹೊರ ಹಾಕಲ್ಪಟ್ಟಿದ್ದಾರೆ. ಮನೆಯಲ್ಲಿ ಅಶಿಸ್ತು ತೋರಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ. ಹೊರಗಡೆ ಬಂದ ಬಳಿಕ ಅವರು, ಸಾಮಾಜಿಕ ಜಾಲತಾಣದ ಮೂಲಕ ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ ಎಂದು ಅವರು ತಿಳಿಸಿದ್ದಾರೆ.
ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ವಿಶ್ಲೇಷಣೆ ಮಾಡಲು ನನ್ನ ಬಳಿ ಪದಗಳು ಕಡಿಮೆ ಎಂದು ತಿಳಿಸಿದ್ದಾರೆ. ನೂರಾರು ಕ್ಯಾಮೆರಾ, ಸಾವಿರಾರು ಬಿಗ್ಬಾಸ್ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದು ಹೇಳಿದ್ದಾರೆ.
ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ. ರಂಜಿತ್, ಮಾನಸ ಮತ್ತು ಎಲ್ಲರೂ ನನ್ನನ್ನು ಕ್ಷಮಿಸಿ, ನೀವೆಲ್ಲ ತುಂಬಾ ಚಿಕ್ಕ ವಯಸ್ಸಿನಲ್ಲೇ ಅಧ್ಭುತ ಕಲಾವಿದರು, ನಾನು ನಿಮ್ಮ ಜೊತೆಯಲ್ಲಿ ಒಬ್ಬನಾಗಿ ನಗಲು ಪ್ರಯತ್ನ ಪಟ್ಟೆ ಅಷ್ಟೆ, ಈ ನಿಟ್ಟಿನಲ್ಲಿ ಕೆಲವು ತಪ್ಪುಗಳು ನನ್ನಿಂದ ಆಗಿದೆ. ಅದು ನಟನೆ ಅಥವಾ ಮನರಂಜನೆಯ ಒಂದು ಭಾಗವಷ್ಟೆ. ವೈಯಕ್ತಿಕ ದ್ವೇಷ ಯಾವುದೂ ಇಲ್ಲ’ ಎಂದಿದ್ದಾರೆ ಜಗದೀಶ್. ಮಾಧ್ಯಮಗಳನ್ನು ಭೇಟಿ ಆಗಲು ಕಾಯುತ್ತಿದ್ದೇನೆ ಎಂದಿರುವ ಜಗದೀಶ್, ಭಾನುವಾರದಂದು ಜಕ್ಕೂರು ಏರೋಸ್ಪೇಸ್ ಬಳಿ ಸುದ್ದಿಗೋಷ್ಠಿ ನಡೆಸಲಿದ್ದೇನೆ ಎಂದು ತಿಳಿಸಿದರು.
- LATEST NEWS6 days ago
‘ಸೆಕ್ಸ್’ ಗೆ ಅಡ್ಡಿಯಾದ ಇಬ್ಬರು ಮಕ್ಕಳನ್ನೇ ಹತ್ಯೆ ಮಾಡಿದ ಪಾಪಿ ತಾಯಿ.!
- BIG BOSS6 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು
- LATEST NEWS6 days ago
ಹಿರಿಯಡ್ಕ: ಉದ್ಯಮಿ ಪ್ರಸನ್ನ ಶೆಟ್ಟಿ ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಆತ್ಮಹ*ತ್ಯೆ
- FILM4 days ago
ಖ್ಯಾತ ಹಾಸ್ಯ ನಟ ಇನ್ನಿಲ್ಲ: ಅತುಲ್ ಪರ್ಚುರೆ ವಿಧಿವಶ